Breaking News

ಹಳೆಯ ದ್ವೇಷದ ಹಿನ್ನಲೆ ದಲಿತ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ.

ಗೋಕಾಕ್: ಹಳೆಯ ದ್ವೇಷದ ಹಿನ್ನಲೆ ದಲಿತ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ. ಗೋಕಾಕ ಪಟ್ಟಣದ ಆದಿ ಜಾಂಬವ ನಗರದ ನಿವಾಸಿ ಸಿದ್ದು ಅರ್ಜುನ ಕಣಮಡ್ಡಿ (27) ಕೊಲೆಯಾದ ಯುವಕ. ಬುಧವಾರ ರಾತ್ರಿ ಮೂವರು ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದು ಕೊಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಯುವಕನನ್ನು ಗೋಕಾಕ ಆಸ್ಪತ್ರೆಯಲ್ಲಿ ದಾಖಲಿಸಿ ಬಳಿಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ …

Read More »

ಕೋವಿಡ್-19 ಮುಖ್ಯಮಂತ್ರಿ ಪರಿಹಾರ ನಿಧಿಗೆ 35 ಸಾವಿರ ರೂ. ದೇಣಿಗೆ ನೀಡುವ ಮೂಲಕ ಕೂಲಿ ಕಾರ್ಮಿಕರು ಮಾನವೀಯತೆ ಮೆರೆದಿದ್ದಾರೆ.

ಶಿವಮೊಗ್ಗ: ಕೊರೊನಾ ಬಂದ ಕಾರಣ ಕೂಲಿ ಕಾರ್ಮಿಕರಿಗೆ ಒಂದೆಡೆ ಕೂಲಿ ಕೆಲಸವಿಲ್ಲ, ಇನ್ನೊಂದೆಡೆ ಕೂಲಿ ಇಲ್ಲದೆ ಜೀವನ ಸಾಗಿಸುವುದೇ ಕಷ್ಟವಾಗಿದೆ. ಆದರೆ ಇಂತಹ ಸಮಯದಲ್ಲಿಯೂ ಕೋವಿಡ್-19 ಮುಖ್ಯಮಂತ್ರಿ ಪರಿಹಾರ ನಿಧಿಗೆ 35 ಸಾವಿರ ರೂ. ದೇಣಿಗೆ ನೀಡುವ ಮೂಲಕ ಕೂಲಿ ಕಾರ್ಮಿಕರು ಮಾನವೀಯತೆ ಮೆರೆದಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ನರೇಗಾ ಯೋಜನೆಯಡಿಯಲ್ಲಿ ಕಾಮಗಾರಿ ಕೆಲಸಗಳು ಆರಂಭವಾಗಿವೆ. ಅದರಂತೆ ಶಿವಮೊಗ್ಗ ಜಿಲ್ಲೆಯ 271 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯುತ್ತಿವೆ. ಹೀಗಾಗಿ …

Read More »

48 ಸಾವಿರ ಜನರನ್ನು ಗುರುತಿಸಿ ಅವರಿಗೆ ಫುಡ್ ಕಿಟ್ ಕೊಡುವ ಮಹತ್ಕಾರ್ಯಕ್ಕೆ ಶಾಸಕ ಅಭಯ ಪಾಟೀಲ ಇಂದು ಚಾಲನೆ

ಬೆಳಗಾವಿ- ಬೆಳಗಾವಿ ನಗರದ ದಾನಶೂರ ರಿಂದ ಕೇಂದ್ರ ಸರ್ಕಾರಕ್ಕೆ ಕೋಟ್ಯಾಂತರ ರೂ ಅನುದಾನ ಕೊಡಿಸಿರುವ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಈಗ ಮತ್ತೊಂದು ಮಹತ್ಕಾರ್ಯ ಮಾಡುವ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದಾರೆ . ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಸಮೀಕ್ಷೆ ಮಾಡಿ 48 ಸಾವಿರ ಜನರನ್ನು ಗುರುತಿಸಿ ಅವರಿಗೆ ಫುಡ್ ಕಿಟ್ ಕೊಡುವ ಮಹತ್ಕಾರ್ಯಕ್ಕೆ ಶಾಸಕ ಅಭಯ ಪಾಟೀಲ ಇಂದು ಚಾಲನೆ ನೀಡಿದ್ದಾರೆ. ಬೆಳಗಾವಿಯ ಮಹಾವೀರ ಭವನದಲ್ಲಿ ಕಿಟ್ …

Read More »

ಸಹಾಯ ಕೇಳಲು ಹೋದವರ ಬಳಿ ಬೇಜವಾಬ್ದಾರಿತನ ಮೆರೆದ ‘ಕೈ’ ಎಂಎಲ್‌ಎ…….

ಬೆಳಗಾವಿ-ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರದ್ದು ಸಾಧು ಸ್ವಭಾವ ಇದನ್ನು ಎಲ್ಲರೂ ನಂಬುತ್ತಾರೆ.ಆದ್ರೆ ಬಡವರು ಅವರ ಹತ್ತಿರ ಸಹಾಯ ಕೇಳಲು ಹೋದ ಸಂಧರ್ಭದಲ್ಲಿ ಅವರು ಆಡಿದ ಮಾತುಗಳನ್ನು ಕೇಳಿದರೆ ಅದನ್ನು ನಂಬೋಕೆ ಆಗ್ತಾ ಇಲ್ಲ ಕೊರೋನಾ ಸಂಕಷ್ಟದಿಂದ ಎಲ್ಲರೂ ಕಷ್ಟ ಅನುಭವಿಸುತ್ತಿದ್ದಾರೆ.ಟಿವ್ಹಿ ಯಲ್ಲಿ,ಪೇಪರ್ ನಲ್ಲಿ ಎಲ್ಲಾ ಕ್ಷೇತ್ರದ ಶಾಸಕರು ಸಹಾಯ ಮಾಡುತ್ತಿರುವ ಸುದ್ಧಿ ನೋಡಿ,ಬೈಲಹೊಂಗಲದ ಬಡಪಾಯಿಗಳು ಸಹಾಯ ಮಾಡುವಂತೆ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಬಳಿ ಹೋದ ಸಂಧರ್ಭದಲ್ಲಿ ಬಡವರ …

Read More »

DSS ಮುಖಂಡನ ಬರ್ಬರ ಕೊಲೆ, ಭಯದ ವಾತಾವರಣ

ಗೋಕಾಕ: ಇಲ್ಲಿನ ಹರಿಜನ ಕೇರಿಯಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡನ‌ ಬರ್ಬರ ಕೊಲೆ ನಡೆದಿದ್ದು ಗೋಕಾಕನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸಿದ್ದು ಕನಮಡ್ಡಿ (26), ಗೋಕಾಕ ನಗರದ ಹರಿಜನ ಕೇರಿಯ ನಿವಾಸಿ ಬುಧವಾರ ರಾತ್ರಿ ಊಟದ ಬಳಿಕ ಮನೆಯ ಮುಂದೆಯೇ ಕುಳಿತಿದ್ದಾಗ 5 ಜನರು ಗುಂಪೊಂದು ಮಾರಕಸಾಸ್ತ್ರಗಳಿಂದ ಕೊಚ್ಚಿ ಕೊಲೆ‌ ಮಾಡಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಸಿದ್ದು ಕನಮಡ್ಡಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇಂದು ಬೆಳಿಗ್ಗೆ …

Read More »

ತೆರಿಗೆ ಸಂಗ್ರಹಕ್ಕೆ ವರ್ಕೌಟ್ ಆದ ಪಾಲಿಕೆ ಪ್ಲಾನ್- 2 ಕೋಟಿಗೂ ಅಧಿಕ ಆಸ್ತಿ ತೆರಿಗೆ ಸಂಗ್ರಹ

ಹುಬ್ಬಳ್ಳಿ: ಮಹಾಮಾರಿ ಕೊರೊನಾ ವೈರಸ್ ಬಂದ ನಂತರ ವಿಶ್ವದ ಆರ್ಥಿಕ ಪರಿಸ್ಥಿತಿಯೇ ಪಾತಾಳಕ್ಕೋಗಿದೆ. ಭಾರತದಲ್ಲೂ ಆರ್ಥಿಕ ಪರಿಸ್ಥಿತಿ ಕೂಡ ಚೆನ್ನಾಗಿಲ್ಲ. ಇತ್ತ ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗುತ್ತಾ ಬರುತ್ತಿದೆ. ಆದರೆ ಲಾಕ್‍ಡೌನ್ ನಡುವೆಯೂ ಅವಳಿ ನಗರದ ಮಹಾನಗರ ಪಾಲಿಕೆಯ ಖಜಾನೆಗೆ ಕೋಟಿ ಕೋಟಿ ಹಣ ಹರಿದು ಬಂದಿದೆ. ಮೊದಲೇ ಆರ್ಥಿಕ ಸಂಕಷ್ಟದಲ್ಲಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಕೊರೊನಾ ಲಾಕ್‍ಡೌನ್ ಬರಸಿಡಿಲು ಬಡಿದಂತಾಗಿತ್ತು. ಹೀಗಾಗಿ ಆರ್ಥಿಕ ಪುನಶ್ಚೇತನಕ್ಕೆ ಮಹಾನಗರ ಪಾಲಿಕೆ ಆಯುಕ್ತ …

Read More »

ಮಹಾಮಾರಿ ಕೊರೊನಾ ಗೆದ್ದ ಮೈಸೂರು- 90ರಲ್ಲಿ 83 ಮಂದಿ ಡಿಸ್ಚಾರ್ಜ್………

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಏರುತ್ತಿದ್ದದ್ದು ನೋಡಿದಾಗ ಮೈಸೂರು ಇಡೀ ರಾಜ್ಯದಲ್ಲಿ ನಂಬರ್ ಒನ್ ಆಗಿ ಬಿಡುತ್ತೋ ಎಂಬ ಆತಂಕ ಇತ್ತು. ಮೈಸೂರಲ್ಲಿ ಒಟ್ಟು 90 ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಅದರಲ್ಲಿ ಜ್ಯೂಬಿಲಿಯೆಂಟ್ ಕಾರ್ಖಾನೆಯ ಪಾತ್ರವೇ ಅತಿ ದೊಡ್ಡದಾಗಿತ್ತು. ರೋಗಿ ನಂಬರ್ 52 ಸೃಷ್ಟಿಸಿದ ಆತಂಕಕ್ಕೆ ಇಡೀ ಮೈಸೂರೇ ಆತಂಕಕ್ಕೀಡಾಗಿತ್ತು. ಈತನೊಬ್ಬನಿಂದಲೇ 75 ಜನರಿಗೆ ಕೊರೊನಾ ಬಂದಿತ್ತು. ಆದರೆ ಈಗ ಮೈಸೂರು ಮಹಾಮಾರಿ ಕೊರೊನಾವನ್ನ ಗೆದ್ದಿದೆ. ಹೌದು. ಬರೋಬ್ಬರಿ …

Read More »

ಕೊರೊನಾ ಹೋಲುವ ಪುಷ್ಪ – ಜನತೆಯಲ್ಲಿ ಕುತೂಹಲ ಮೂಡಿಸಿದ ಹೂವು

ಹುಬ್ಬಳ್ಳಿ: ಮಳೆರಾಯ ಭೂಮಿಗೆ ಆಗಮಿಸುತ್ತಿದ್ದಂತೆ ಗಿಡ ಮರಗಳೆಲ್ಲ ಚಿಗುರೊಡೆದು ನಿಸರ್ಗ ದೇವತೆಯನ್ನು ಅಲಂಕರಿಸುತ್ತವೆ. ಪ್ರಸ್ತುತ ದಿನಮಾನಗಳಲ್ಲಿ ಕೊರೊನಾ ವೈರಸ್ ಭೀತಿ ಎಲ್ಲೆಡೆಯೂ ಹಬ್ಬಿದ್ದು, ಕೊರೊನಾ ವೈರಸ್ ಚಿತ್ರಣವೊಂದು ಎಲ್ಲರ ಗಮನದಲ್ಲಿದೆ. ಇದೀಗ ಕೊರೊನಾ ವೈರಸ್ ಚಿತ್ರಣವನ್ನು ಹೋಲುವ ಹೂವೊಂದು ವಾಣಿಜ್ಯನಗರಿಯಲ್ಲಿ ಅರಳಿದ್ದು, ಆಕರ್ಷಣಿಯವಾಗಿ ಗೋಚರಿಸುತ್ತಿದೆ. ಮಾಧ್ಯಮಗಳಲ್ಲಿ ಕೊರೊನಾ ವೈರಸ್ ಚಿತ್ರಣವನ್ನು ನೋಡಿರುವ ಜನರಿಗೆ ಈ ಹೂವನ್ನು ನೋಡಿದಾಕ್ಷಣ ಕೆಲಕಾಲ ಅಚ್ಚರಿಯನ್ನುಂಟು ಮಾಡಿದೆ. ಹುಬ್ಬಳ್ಳಿಯ ಅಮರನಗರದಲ್ಲಿರುವ ಮುತ್ತು ಶಾಂತಪೂರಮಠ ಅವರ ಮನೆಯ …

Read More »

ಬಾಗಲಕೋಟೆ ಗರ್ಭಿಣಿ ಕುಟುಂಬದವರ 8 ಜನರ ವರದಿ ನೆಗೆಟಿವ್

ಬಾಗಲಕೋಟೆ: ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮದ ಗರ್ಭಿಣಿಯ ಕುಟುಂಬಸ್ಥರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಬುಧವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಾಧ್ಯಮ ಬುಲೆಟಿನ್ ನಲ್ಲಿ 12 ಜನರಿಗೆ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 9 ಜನರಿಗೆ ಸೋಂಕು ತಗುಲಿಲ್ಲ ಎಂಬುವುದು ವರದಿಯಲ್ಲಿ ಬಂದಿದೆ. ಜಿಲ್ಲಾಡಳಿತ ಇಂದು ಗ್ರಾಮದ 45 ಜನರ ಗಂಟಲು ದ್ರವ ಪರೀಕ್ಷೆ ವರದಿ ನಿರೀಕ್ಷೆಯಲ್ಲಿದೆ. ಸದ್ಯ ಡಾಣಕಶಿರೂರು ಗ್ರಾಮಸ್ಥರಲ್ಲಿ ಯಾರ ವರದಿ ಪಾಸಿಟಿವ್ …

Read More »

ಕಂಠಪೂರ್ತಿ ಕುಡಿದವ್ರ ಕಿಕ್ಕಿಳಿಸಿದ ರಾಜ್ಯ ಸರ್ಕಾರ……..

ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ಒಂದೂವರೆ ತಿಂಗಳ ಬಳಿಕ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ಕೊಟ್ಟಿತ್ತು. ಇದೀಗ ಎಣ್ಣೆ ಮತ್ತಿನಲ್ಲಿ ತೇಲಾಡುತ್ತಿದ್ದ ಮದ್ಯಪ್ರಿಯರಿಗೆ ಸರ್ಕಾರ ಶಾಕ್ ನೀಡಿದೆ. ಮದ್ಯದ ಮೇಲೆ ಕೋವಿಡ್ -19 ಸೆಸ್ ವಿಧಿಸಲಾಗಿದೆ. ಇಂದಿನಿಂದ ಮದ್ಯದ ಹೊಸದರ ಜಾರಿಗೆ ಬರಲಿದೆ. ಸರ್ಕಾರ ಅವಕಾಶ ಕೊಟ್ಟಿದ್ದೆ ತಡ ವೈನ್ ಶಾಪ್, ಎಂಆರ್‌ಪಿ ಶಾಪ್ ಎದುರು ಅಪಾರ ಜನರು ಸೇರುತ್ತಿದ್ದಾರೆ. ಮಧ್ಯಾಹ್ನ ಎನ್ನದೇ ಮದ್ಯಪ್ರಿಯರು ಕಾದುನಿಂತು ಎಣ್ಣೆ ತೆಗೆದುಕೊಂಡು ಹೋಗಿದ್ದಾರೆ. ಸಂಜೆಯಾಗುತ್ತಲೇ …

Read More »