Breaking News

ಕ ರೋನಾ ಇದೆ ಎಂದು ಹಂಗಿಸಿದಕ್ಕೆ ಆತ್ಮ ಹತ್ಯೆ ಮಾಡಿಕೊಂಡ ಸೋಂಕಿತ..

ಬೆಂಗಳೂರು: ಕೊರೊನಾ ಸೋಂಕಿತರನ್ನು ಜನರು ಅವಮಾನಿಸುತ್ತಿದ್ದು, ಇದರಿಂದ ನೊಂದ ಸೋಂಕಿತರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಸಮಾಜ ಎಷ್ಟೇ ಬದಲಾಗಿದ್ದರೂ ವಿದ್ಯಾವಂತರು ಹೆಚ್ಚಿದ್ದರೂ ಕೂಡ ಜನರ ಮನ:ಸ್ಥಿತಿ ಮಾತ್ರ ಇನ್ನೂ ಬದಲಾಗುತ್ತಿಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪತ್ನಿ ಮತ್ತು ಮಗನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಕೀಲಾಗಿ ನೋಡುತ್ತಿದ್ದುದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಸರುಘಟ್ಟದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ನಿವಾಸಿ ನಾಗರಾಜು (56) ಮೃತ …

Read More »

N-95 ಮಾಸ್ಕ್‌ ಧಾರಣೆಯಿಂದ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ. ಕೇಂದ್ರ ಸರ್ಕಾರ

ಹೊಸದಿಲ್ಲಿ: ಮಾರಕ ಕೊರೊನಾ ವೈರಸ್ ಹಾವಳಿಯ ಸಂದರ್ಭದಲ್ಲಿ ಎಲ್ಲರೂ ಫೇಸ್ ಮಾಸ್ಕ್ ಮೊರೆ ಹೋಗಿರುವುದು ಸಾಮಾನ್ಯ ಸಂಗತಿಯಾಗಿದೆ. ಸರ್ಕಾರ ಖುದ್ದು ಫೇಸ್ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಅದರಂತೆ ಸದ್ಯ ದೇಶದಲ್ಲಿ ವಿವಿಧ ರೀತಿಯ ಫೇಸ್ ಮಾಸ್ಕ್‌ಗಳು ಬಳಕೆಯಲ್ಲಿದ್ದು, ಅವುಗಳಲ್ಲಿ N-95 ಮಾಸ್ಕ್ ಅತ್ಯಂತ ಜನಪ್ರಿಯವಾಗಿವೆ. ಭಾರೀ ಸಂಖ್ಯೆಯಲ್ಲಿ N-95 ಮಾಸ್ಕ್‌ಗಳನ್ನು ಜನ ಖರೀದಿಸಿದ್ದಾರೆ. ಆದರೆ N-95 ಮಾಸ್ಕ್‌ ಕುರಿತು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, …

Read More »

ಕೊರೊನಾ ಸದ್ಯ ಬುಡಾ ಕಚೇರಿಗೂ ಕಾಲಿಟ್ಟಿದೆ. ಬುಡಾ ಕಚೇರಿ ಸೀಲ್ ಡೌನ್

ಬೆಳಗಾವಿ:  ಜಿಲ್ಲೆಯಲ್ಲಿ  ಜೂನ್ ಅಂತ್ಯದಿಂದ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹಚ್ಚುತಲಿದ್ದು, ಸದ್ಯ ಬುಡಾ ಕಚೇರಿಗೂ ಕಾಲಿಟ್ಟಿದೆ. ನಗರಾಭಿವೃದ್ದಿ ಪ್ರಾಧಿಕಾರ ಕಚೇರಿ  ಇಂಜಿನೀಯರ್ ಗೆ  ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ  ಕಚೇರಿ ಸೀಲ್ ಡೌನ್ ಮಾಡಲಾಗಿದೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಗೆ ಸೋಂಕು ತಗುಲಿದೆ. ಸದ್ಯ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಬುಡಾ ಕಚೇರಿ ಸೀಲ್ ಡೌನ್ ಮಾಡಲಾಗಿದೆ. ಸೋಂಕಿತನ  ಪ್ರಾಥಮಿಕ ಸಂಪರ್ಕ …

Read More »

ಸಚಿವರಾದ ರಮೇಶ ಜಾರಕಿಹೊಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು.

  ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ರಾಂಕ್ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು. ಈ ಸಂದರ್ಭದಲ್ಲಿ  ಮಾದ್ಯಮದವರ ಜೊತೆ ಮಾತಾನಾಡಿದ ಗೋಕಾಕ ಶಿಕ್ಷಣಾಧಿಕಾರಿಯಾದ ಜಿ,ಬಿ,ಬಳಿಗಾರ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದಿನ …

Read More »

ಬೆಂಗಳೂರಿನಲ್ಲಿ ಮಳೆ; ವಿದ್ಯುತ್ ಶಾಕ್​ಗೆ ಬಾಲಕಿ ಸಾವು; ಟಿ ದಾಸರಹಳ್ಳಿಯ ಹಲವು ಪ್ರದೇಶ ಜಲಾವೃತ

ಬೆಂಗಳೂರು(ಜುಲೈ 21): ನಗರದಲ್ಲಿ ನಿನ್ನೆ ಸಂಜೆಯ ನಂತರದಿಂದಲೂ ವಿವಿಧೆಡೆ ಭಾರೀ ಮಳೆಯಾಗಿದೆ. ತಗ್ಗಿದ ಪ್ರದೇಶಗಳು ಬಹಳ ಹೊತ್ತು ಜಲಾವೃತಗೊಂಡವು. ಯಲಹಂಕ, ದೊಡ್ಡಬೊಮ್ಮಸಂದ್ರ, ಟಿ. ದಾಸರಹಳ್ಳಿ ಪ್ರದೇಶಗಳಲ್ಲಿ ಮಳೆ ನೀರು ಹಲವು ಅಪಾರ್ಟ್ಮೆಂಟ್, ಮನೆಗಳಿಗೆ ನುಗ್ಗಿತ್ತು. ಇಲ್ಲಿಯ ರಸ್ತೆಗಳು ಕೆರೆಯಂತಾದವು. ಆರ್.ಟಿ. ನಗರದಲ್ಲಿ ಬಾಲಕಿಯೊಬ್ಬಳು ವಿದ್ಯುತ್ ಶಾಕ್​ನಿಂದ ಮೃತಪಟ್ಟ ದುರಂತ ಘಟನೆಯೂ ನಿನ್ನೆ ರಾತ್ರಿ ಸಂಭವಿಸಿದೆ. ಕಾವಲ್ ಬೈರಸಂದ್ರದಲ್ಲಿ 8 ವರ್ಷದ ಫಾತಿಮಾ ಮೃತಪಟ್ಟ ಬಾಲಕಿ. ನಿನ್ನೆ ರಾತ್ರಿ 8ಗಂಟೆಯ ಸಮಯದಲ್ಲಿ …

Read More »

ಸೋಂಕಿತರು ಬಳಸಿದ ಹಾಸಿಗೆ ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ನೀಡಿದರೇ ಸರ್ಕಾರದ ವಿರುದ್ಧ ಹೋರಾಟ ಗ್ಯಾರಂಟಿ‘ – ಡಿ.ಕೆ ಶಿವಕುಮಾರ್​​

ಬೆಂಗಳೂರು): ಕೊರೋನಾ  ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಮತ್ತು ಕೋವಿಡ್-19 ಚಿಕಿತ್ಸಾ ಸಲಕರಣೆ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಸೇರಿದಂತೆ ರಾಜ್ಯಾದ್ಯಂತ ಸೋಂಕಿತರ ಪರದಾಟ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಭೆ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಹಿರಿಯ ಮುಖಂಡರು, ಕಾಂಗ್ರೆಸ್ ಕೋವಿಡ್ ಕಾರ್ಯಪಡೆ ಹಾಗೂ ವೈದ್ಯ ಘಟಕದ ಪ್ರತಿನಿಧಿಗಳು ಭಾಗಿಯಾಗಿದ್ದರು. ಹಾಗೆಯೇ ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ವಿಧಾನಸಭೆ …

Read More »

ಮಾಸ್ಕ್ ಏಕೆ ಧರಿಸಬೇಕು?………..

ಬೆಂಗಳೂರು: ಕೊರೊನಾ ಆತಂಕ ಮತ್ತು ತಡೆಗಾಗಿ ಸಾರ್ವಜನಿಕರು ಮಾಸ್ಕ್ ಧರಿಸುತ್ತಿದ್ದಾರೆ. ಆದ್ರೆ ಮಾಸ್ಕ್ ಧರಿಸೋದು ಹೇಗೆ ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ. ಮಾಸ್ಕ್ ಏಕೆ ಧರಿಸಬೇಕು?: ಕೋವಿಡ್-19 ವೈರಸ್ ವ್ಯಕ್ತಿಯಿಂದ ವ್ಯಕ್ತಿಯ ನಡುವೆ ಆಗುವ ಸಂಪರ್ಕದಿಂದ ಸುಲಭವಾಗಿ ಹರಡುತ್ತದೆ. ವೈರಸ್ ಗಳನ್ನು ಹೊತ್ತ ನೀರಿನ ಹನಿಗಳು ಬೇಗನೆ ಒಣಗಿ, ಬೀಜಕಣಗಳಾಗಿ ತೇಲಾಡಿ ನಂತರ ನೆಲ ಅಥವಾ ಇನ್ಯಾವುದೇ ಪದರುಗಳ ಮೇಲೆ ಚಿಮ್ಮುತ್ತವೆ. ಕೋವಿಡ್-19 ಸಂಭವಿಸಲು ಕಾರಣವಾದ ಸಾರ್ಸ್-ಸಿಓವಿ-2 ವೈರಸ್ …

Read More »

ಬೆಂಗಳೂರಿನ ಎಎಸ್‍ಐ ಇವರಿಗೆ ಕೊರೊನಾ ತಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಕೊರೊನಾ ತನ್ನ ಮರಣಕೇಕೆಯನ್ನು ಮುಂದುವರಿಸಿದ್ದು, ನಗರದಲ್ಲಿ ಮತ್ತೊಬ್ಬ ಕೊರೊನಾ ವಾರಿಯರ್ ಸಾವನ್ನಪ್ಪಿದ್ದಾರೆ. ಎಎಸ್‍ಐ ಆಗಿ ಕರ್ತವ್ಯ ನಿರ್ವಹಿಸುತಿದ್ದ ವಾರಿಯರ್ ಮಹಾಮಾರಿ ಕೊರೊನಾಗೆ ಮೃತಪಟ್ಟಿದ್ದಾರೆ. ಮೃತ ಎಎಸ್‍ಐ ಬೆಂಗಳೂರಿನ ಸಿಟಿ ಆರ್ಮ್ ರಿಸರ್ವ್ ಸೌತ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರಿಗೆ ಕೊರೊನಾ ತಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ನಗರದಲ್ಲಿ 33 ಪೊಲೀಸರಿಗೆ ಸೋಂಕು ಕಾಣಿಸಿಕೊಂಡಿದೆ. …

Read More »

ಕೊರೊನಾ ಆತಂಕ- ಮಗುವಿಗೆ ಹಾಲುಣಿಸುವ ಮುನ್ನ ತಾಯಂದಿರು ತೆಗೆದುಕೊಳ್ಳಬೇಕಾದ ಕ್ರಮಗಳು

ಬೆಂಗಳೂರು: ಕೊರೊನಾ ಆತಂಕ ಮಾತ್ರ ಕಡಿಮೆ ಆಗುತ್ತಲೇ ಇಲ್ಲ. ಪಕ್ಕದ ಬೀದಿಯಲ್ಲಿ ಬಂತು, ಮನೆಯ ಹಿಂದೆಯ ನಿವಾಸಿಗೆ ಸೋಂಕು ತಗುಲಿತು ಎಂಬ ವಿಷಯಗಳನ್ನು ನೀವು ಕೇಳಿರುತ್ತೀರಿ. ಕೊರೊನಾ ಭಯ ಬೇಡ ಮುಂಜಾಗ್ರತೆ ಇರಲಿ ಎಂದು ತಜ್ಞರು ಸೇರಿದಂತೆ ಸರ್ಕಾರ ಸಲಹೆಗಳನ್ನು ನೀಡುತ್ತಾ ಬಂದಿದೆ. ಆರೋಗ್ಯ ಇಲಾಖೆ ಸಹ ಕೊರೊನಾಗೆ ಸಂಬಂಧಿಸಿದ ಮಾಹಿತಿಯನ್ನು ಸಾರ್ವಜನಿಕರು ನೀಡುವ ಪ್ರಯತ್ನವನ್ನು ಮಾಡುತ್ತಿದೆ. ಮನೆಯಲ್ಲಿ ಮಕ್ಕಳು ಮತ್ತು ಹಿರಿಯರು ಇದ್ರೆ ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು …

Read More »

ಮಧ್ಯಪ್ರದೇಶ ರಾಜ್ಯಪಾಲ ಲಾಲ್‍ಜಿ ಟಂಡನ್ (85) ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಲಖನೌ: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ ಲಾಲ್‍ಜಿ ಟಂಡನ್ (85) ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಲಖನೌನ ಮೆದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಜೂನ್ 11 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆ, ಜ್ವರ ಮತ್ತು ಮೂತ್ರಕೋಶದ ತೊಂದರೆಯಿಂದ ಬಳಲುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ಸೋಮವಾರ ಲಾಲ್‍ಜಿ ಟಂಡನ್ ಅವರನ್ನು ವೆಂಟಿಲೇಟರ್ ನಲ್ಲಿ ಇಡಲಾಗಿತ್ತು. ಅಲ್ಲದೇ ಸಣ್ಣ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು ಎಂಬ ಮಾಹಿತಿ ಲಭಿಸಿದೆ.  ಸದ್ಯ …

Read More »