Breaking News

ಬೆಳಗಾವಿಮಹಾನಗರ ಪಾಲಿಕೆ ನಿಯಮ ಉಲ್ಲಂಘಿಸಿದವರೆಗೆ 43,400 ರೂಪಾಯಿ ದಂಡವಿಧಿಸಿದೆ.

ಬೆಳಗಾವಿ -: ಕೋವಿಡ್-೧೯ ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟಲು ನಗರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ಮಹಾನಗರ ಪಾಲಿಕೆಯು ಒಟ್ಟಾರೆ 43,400 ರೂಪಾಯಿ ದಂಡ ವಿಧಿಸಿದೆ. ಲಾಕ್ ಡೌನ್-3 ರ ಸಂದರ್ಭದಲ್ಲಿ ಕಿತ್ತಳೆ ವಲಯದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಮತ್ತು ಜನಸಂಚಾರಕ್ಕೆ ಅವಕಾಶ …

Read More »

ಬಾಗಲಕೋಟೆ ಜಿಲ್ಲೆಯ ರೋಗಿ ನಂಬರ್ 607ರ 25 ವರ್ಷದ ಗರ್ಭಿಣಿಗೆ ಕೊರೊನಾ ಪಾಸಿಟಿವ್ ಪ್ರಕರಣದ ನಂಟು ಈಗ ಗದಗ ಜಿಲ್ಲೆಗೂ ಹಬ್ಬಿದೆ.

ಗದಗ: ಬಾಗಲಕೋಟೆ ಜಿಲ್ಲೆಯ ರೋಗಿ ನಂಬರ್ 607ರ 25 ವರ್ಷದ ಗರ್ಭಿಣಿಗೆ ಕೊರೊನಾ ಪಾಸಿಟಿವ್ ಪ್ರಕರಣದ ನಂಟು ಈಗ ಗದಗ ಜಿಲ್ಲೆಗೂ ಹಬ್ಬಿದೆ. ಜಿಲ್ಲೆಯ ರೋಣ ತಾಲೂಕಿನ ಕೃಷ್ಣಾಪುರ ಗ್ರಾಮ ಸೋಂಕಿತ ಮಹಿಳೆ ತವರೂರು. ಸೋಂಕಿತ ಮಹಿಳೆ ಏಪ್ರಿಲ್ 29 ರಂದು ಕೃಷ್ಣಾಪುರ ತವರೂರಿಗೆ ಬಂದಿದ್ದರು. ಅಷ್ಟೇ ಅಲ್ಲದೇ ಈ ಸೋಂಕಿತ ಮಹಿಳೆ ರೋಣ ಪಟ್ಟಣದ 2 ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದಿದ್ದಾರೆ. ಗರ್ಭಿಣಿಗೆ ಪಾಸಿಟಿವ್ ದೃಢಪಟ್ಟ …

Read More »

‘ನೀವೇ ನಮ್ಮ ದೇಶದ ಆರ್ಥಿಕತೆ’- ಎಣ್ಣೆಗೆ ಕ್ಯೂ ನಿಂತವ್ರ ಮೇಲೆ ಹೂಮಳೆ

ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಅಥವಾ ಕೋವಿಡ್ 19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿತ್ತು. ಆದರೆ ಇದೀಗ ಈ ಲಾಕ್ ಡೌನ್ ಅನ್ನು ಸ್ವಲ್ಪ ಮಟ್ಟಿನಲ್ಲಿ ಸಡಿಲಿಕೆ ಮಾಡಲಾಗಿದ್ದು, ಮದ್ಯದಂಗಡಿಗಳನ್ನು ಆರಂಭಿಸಲಾಗಿದೆ. ಹೀಗಾಗಿ ಜನ ಮುಗಿಬಿದ್ದು ಮದ್ಯ ಖರೀದಿಸುತ್ತಿದ್ದಾರೆ. ಅಂತೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಕ್ಯೂ ನಿಂತ ಮದ್ಯಪ್ರಿಯರ ಮೇಲೆ ವ್ಯಕ್ತಿಯೊಬ್ಬ ಹೂಮಳೆ ಸುರಿಸಿದ್ದಾರೆ. ಹೌದು. ಮದ್ಯದಂಗಡಿ ನಿನ್ನೆ ಆರಂಭವಾಗಿದ್ದು, ಇಂದು ಕೂಡ ಜನ …

Read More »

ಡಬ್ಬಲ್ ಶರ್ಟ್ ಹಾಕೋ ಆಟೋ ಚಾಲಕರಿಗೆ ನಾಳೆಯಿಂದ 500 ರೂ. ದಂಡ

ಉಡುಪಿ: ಪುನೀತ್ ರಾಜ್ ಕುಮಾರ್, ಪ್ರಿನ್ಸ್ ಮಹೇಶ್ ಬಾಬು ಸ್ಟೈಲ್ ಮಾಡಿಕೊಂಡು ಓಡಾಡುವ ಆಟೋ ಚಾಲಕರಿಗೆ ಉಡುಪಿಯಲ್ಲಿ ಫೈನ್ ಬೀಳುತ್ತೆ. ಉಡುಪಿಯ ಪ್ರಮುಖ ಜಂಕ್ಷನ್‍ಗಳಲ್ಲಿ ಇರುವ ಪೊಲೀಸರು ಡಬ್ಬಲ್ ಶರ್ಟ್ ಹಾಕುವ ಆಟೋ ಡ್ರೈವರ್‌ಗಳಿಗೆ ಪಾಠ ಮಾಡುತ್ತಿದ್ದಾರೆ. ಉಡುಪಿಯಲ್ಲಿ ಆಟೋ ಚಾಲಕರು ಒಳಗೊಂದು ಶರ್ಟ್ ಹಾಕಿ, ಹೊರಗೆ ಖಾಕಿ ಶರ್ಟ್  ಓಪನ್ ಬಿಟ್ಟುಕೊಳ್ಳುವುದು ಒಂದು ಟ್ರೆಂಡ್ ಆಗಿದೆ. ಫುಲ್ ಹ್ಯಾಂಡ್ ಶರ್ಟ್ ಮೇಲೆ ಹಾಫ್ ಖಾಕಿ ಶರ್ಟ್ ಹಾಕಿಕೊಂಡು ಅದನ್ನು …

Read More »

ಮದ್ಯದ ನಶೆಯಲ್ಲಿ ಚಾಲನೆ- ರಸ್ತೆ ಬಿಟ್ಟು ಗದ್ದೆಗೆ ಹಾರಿದ ಕಾರು………..

ಮೈಸೂರು: ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು ಹೇರಲಾಗಿದ್ದ ಲಾಕ್ ಡೌನ್ ಅನ್ನು ಸಡಿಲಿಕೆ ಮಾಡಲಾಗಿದ್ದು, ರಾಜ್ಯದಲ್ಲಿ ನಿನ್ನೆಯಿಂದಲೇ ಮದ್ಯದಂಗಡಿಗಳು ಓಪನ್ ಆಗಿವೆ. ಮದ್ಯದ ನಶೆಯಲ್ಲಿ ನಿನ್ನೆಯೇ ಕೆಲವೊಂದು ಅನಾಹುತಗಳು ನಡೆದುಹೋಗಿವೆ. ಇದಕ್ಕೆ ಮೈಸೂರಿನ ಘಟನೆ ಕೂಡ ಸೇರಿಕೊಂಡಿದೆ. ಹೌದು. ಮದ್ಯದ ಅಂಗಡಿ ಆರಂಭವಾದ ಪರಿಣಾಮದಿಂದ ಕುಡಿದ ಮತ್ತಿನಲ್ಲಿದ್ದ ಯುವಕ ಪ್ರಾಣಾಪಾಯದಿಂದ ಪಾರಾದ ಘಟನೆ ಮೈಸೂರು ಜಿಲ್ಲೆಯ ಹುಲ್ಲಹಳ್ಳಿ ನಂಜನಗೂಡು ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹುಲ್ಲಹಳ್ಳಿಯ ಯೋಗಿ ಕಾರು …

Read More »

ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಕೊಂದ ಭೂಪ……….

ಕೋಲಾರ: ಕುಡಿದ ಮತ್ತಿನಲ್ಲಿ ಭೂಪನೊಬ್ಬ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಷ್ಟೂರು ಗ್ರಾಮದ ಕುಮಾರ್ ಹಾವನ್ನು ಸಾಯಿಸಿದ ಭೂಪ. ನಶೆಯಲ್ಲಿದ್ದ ಕುಡುಕ ದಾರಿಯಲ್ಲಿ ಹೋಗುತ್ತಿದ್ದ ಹಾವನ್ನು ಹಿಡಿದು ಕತ್ತಿಗೆ ಸುತ್ತಿಕೊಂಡು ಗ್ರಾಮ ಪ್ರವೇಶಿಸಿದ್ದಾನೆ. ಗ್ರಾಮದ ಮಧ್ಯೆ ಬರುತ್ತಿದ್ದಂತೆ ಕುತ್ತಿಗೆ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕುಮಾರ್ ಹಾವನ್ನು ಕಚ್ಚಿ ಸಾಯಿಸುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆಹಿಡಿದುಕೊಂಡಿದ್ದಾರೆ. ಆದ್ರೆ …

Read More »

ಕೋವಿಡ್ 19 ವಾರಿಯರ್ಸ್ ಗೆ ಯುವ ಧುರೀಣರಾದ ಶ್ರೀ ನೀಲಕಂಠ ಕಪ್ಪಲಗುದ್ದಿ ಅವರಿಂದ ಅನ್ನ ಸಂತರ್ಪಣೆ

ಕಲ್ಲೋಳಿ ಪಟ್ಟಣದ ಕೋವಿಡ್ 19 ವಾರಿಯರ್ಸ್ ಗೆ ಪಟ್ಟಣದ ಯುವ ದುರೀಣರಾದ ಶ್ರೀ ನೀಲಕಂಠ ಬಸವರಾಜ ಕಪ್ಪಲಗುದ್ದಿ ಇವರಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಸಲಾಯಿತು. ಕೋವಿಡ್ 19 ವಾರಿಯರ್ಸ್ ಯಾದ ಪಟ್ಟಣ ಪಂಚಾಯತ್ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆ ಮತ್ತು ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಕೆ. ಇ. ಬಿ ಸಿಬ್ಬಂದಿ ಕಲ್ಲೋಳಿ ಪಂಚಾಯತಿ ಆವರಣದಲ್ಲಿ ಎಲ್ಲಾ ವರ್ಗದವರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ …

Read More »

ಕುಡುಕರ ಎಡವಟ್ಟಿನಿಂದ ಮೂರ್ನಾಲ್ಕು ಬಣವೆಗಳಿಗೆ ಬೆಂಕಿ

ಬಳ್ಳಾರಿ: ಲಾಕ್‍ಡೌನ್ ಸಡಿಲಿಕೆ ಮಾಡಿ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದೆ ತಡ ಮದ್ಯಪ್ರಿಯರು ಮದ್ಯದಂಗಡಿ ಮುಂದೆ ಕ್ಯೂ ನಿಂತು ಖರೀದಿಸುತ್ತಿದ್ದಾರೆ. ಅಲ್ಲದೆ ಸಿಕ್ಕಿಸಿಕ್ಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದಾರೆ. ಇದೀಗ ಕುಡುಕರು ಮಾಡಿದ ಎಡವಟ್ಟಿನಿಂದಾಗಿ ಮೂರು ಬಣವೆಗಳು ಹೊತ್ತಿ ಉರಿದಿರುವ ಘಟನೆ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯಲ್ಲಿ ನಡೆದಿದೆ. ಕಪ್ಪಗಲ್ಲು ರಸ್ತೆಯ ಡ್ರೀಮ್ ವರ್ಲ್ಡ್ ಶಾಲೆಯ ಹಿಂಭಾಗದ ಹೊಲದಲ್ಲಿರುವ ಮೂರು ಬಣವೆಗಳಿಗೆ ಬೆಂಕಿ ಬಿದ್ದಿದೆ. ಅಲ್ಲದೇ ಪಕ್ಕದಲ್ಲಿದ್ದ ಎಮ್ಮೆಗಳ ಮೈಗೂ ಬೆಂಕಿ …

Read More »

ಕುಡುಕನಿಂದ ವೈದ್ಯರ ಮೇಲೆ ಹಲ್ಲೆ, ಪೊಲೀಸ್ ಜೀಪ್ ಕೆಳಗೆ ಮಲಗಿ ರಂಪಾಟ……

ಚಿಕ್ಕೋಡಿ (ಬೆಳಗಾವಿ): ಲಾಕ್‍ಡೌನ್ ಹಿನ್ನೆಲೆ ರಾಜ್ಯದಲ್ಲಿ ಕಳೆದ 43 ದಿನಗಳಿಂದ ಮದ್ಯ ಮಾರಾಟ ಸಂಪೂರ್ಣ ಬಂದ್ ಮಾಡಲಾಗಿತ್ತು. ಆದರೆ ನಿನ್ನೆಯಿಂದ ರಾಜ್ಯ ಸರ್ಕಾರ ಲಾಕ್‍ಡೌನ್ ಸಡಿಲಿಕೆ ಮಾಡಿ ಕಂಟೈನಮೆಂಟ್ ಝೋನ್‍ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕಡೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಮದ್ಯ ಸಿಕ್ಕಿದ್ದೇ ತಡ ಕೆಲವೆಡೆ ಕುಡುಕರ ರಂಪಾಟ, ಗಲಾಟೆಗಳು ಜೋರಾಗಿ ಶುರುವಾಗಿವೆ. ಹೌದು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಕುಡುಕನೊಬ್ಬ ವೈದ್ಯರ ಮೇಲೆ ಹಲ್ಲೆ …

Read More »

ಬೆಳಗಾವಿ: ಇಪ್ಪತ್ತೆಂಟು ವರ್ಷದ ಯುವಕನೊಬ್ಬ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಂದಿಗನೂರ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ: ಇಪ್ಪತ್ತೆಂಟು ವರ್ಷದ ಯುವಕನೊಬ್ಬ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ನಡೆದಿದೆ. ಸ್ಥಳಿಯ ನಿವಾಸಿ ಕಿರಣ ಶೆಟ್ಟೆಪ್ಪಾ ಶಿನೋಳ್ಕರ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಗದ್ದೆಯಲ್ಲಿನ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ. ಕಾಕತಿ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.

Read More »