Breaking News

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಈಶ್ವರಪ್ಪ ನಾಲಾಯಕ್ – ಮಾಜಿ ಸಂಸದ ವಿಎಸ್ ಉಗ್ರಪ್ಪ ವಾಗ್ದಾಳಿ

ಬಳ್ಳಾರಿ : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಮನ್ವಯತೆಯ ಕೊರತೆ ಎದ್ದು ಕಾಣುತ್ತಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಕ್ರಮ ನಡೆದ್ರೂ ಇಲ್ಲಿ ಹೇಳೋರು, ಕೇಳೋರು ಯಾರು ಇಲ್ಲದಂತೆ ಆಗಿದೆ. ಸಿಎಂ ಯಡಿಯೂರಪ್ಪ ಹಾಗೂ ಸಚಿವ ಈಶ್ವರಪ್ಪ ನಾಲಾಯಕ್ ಎಂಬುದಾಗಿ ಮಾಜಿ ಸಂಸದ ವಿಎಸ್ ಉಗ್ರಪ್ಪ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಲ್ಲಿ ಈಗ ಸಮನ್ವಯತೆಯೇ ಇಲ್ಲ. ಭ್ರಷ್ಟಾಚಾರ, …

Read More »

ನಾಳೆ 5 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚಾರ, ಬೆಳಿಗ್ಗೆ 7 ರಿಂದ ರಾತ್ರಿ 9ರವರೆಗೆ ಓಡಾಟ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ನಾಳೆ ಮುಷ್ಕರವನ್ನ ಮಾಡ್ತಿದ್ದು, ಪ್ರಯಾಣಿಕರಿಗೆ ಅನುಕಾಲಕ್ಕಾಗಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ. ಬಸ್‌ ಇಲ್ಲದೇ ಪ್ರಯಾಣಿಕರು ಪರದಾಡಬಾರದು ಅನ್ನೋ ದೃಷ್ಠಿಯಲ್ಲಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೆಟ್ರೋ ಓಡಾಟವಿರಲಿದೆ.

Read More »

ಮುಷ್ಕರಕ್ಕೆ ಬಗ್ಗದಿದ್ದಲ್ಲಿ ಕುಟುಂಬ ಸಮೇತ ಜೈಲ್ ಭರೋ; ಹುಬ್ಬಳ್ಳಿಯಲ್ಲಿ ಸಾರಿಗೆ ನೌಕರರ ಎಚ್ಚರಿಕೆ

ಹುಬ್ಬಳ್ಳಿ(ಏ.06):  ನಾಳೆಯಿಂದ ಮುಷ್ಕರ ಮಾಡಿಯೇ ತೀರುತ್ತೇವೆ. ಅದಕ್ಕೂ ಬಗ್ಗದಿದ್ದಲ್ಲಿ ಕುಟುಂಬ ಸಮೇತ ಜೈಲ್ ಭರೋ ಚಳುವಳಿ ನಡೆಸೋದಾಗಿ ಕರ್ನಾಟಕ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಪಿ.ಎಚ್.ನೀರಲಕೇರಿ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಷ್ಕರದ ನಿರ್ಧಾರ ಅಚಲ. 6 ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಮಾಡಲೇ ಬೇಕು. ವೇತನ ಆಯೋಗದ ಶಿಫಾರಸ್ಸು ಜಾರಿ ವಿಚಾರದಲ್ಲಿ ಸರ್ಕಾರದಿಂದ ಮೊಂಡುತನ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಈ ಹಿಂದೆ ಮುಷ್ಕರ ನಡೆಸಿದಾಗ ಒಂಬತ್ತು …

Read More »

ಮಾತು ಬಾರದ ಮಹಿಳೆಯ ಮೇಲೆ ಅತ್ಯಾಚಾರ

ಮಂಡ್ಯ: ಮಾತು ಬಾರದ ಮಹಿಳೆಯ ಮೇಲೆ ಮೂವರು ಯುವಕರು ಅತ್ಯಾಚಾರ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ಜುರುಗಿದೆ. ಹೊನಗನಹಳ್ಳಿ ಗ್ರಾಮದ ಮಾತು ಬಾರದ 48 ವರ್ಷದ ಮಹಿಳೆಯ ಮೇಲೆ ಅದೇ ಗ್ರಾಮದ ಮೂವರು ಯುವಕರು ಅತ್ಯಾಚಾರವೆಸಗಿದ್ದಾರೆ. ಏಪ್ರಿಲ್ 1 ರಂದು ಈ ಮಹಿಳೆ ತನ್ನ ಹೊಲದಲ್ಲಿ ಹಸು ಮೇಯಿಸಲು ಹೋಗಿದ್ದಾರೆ. ಸಂಜೆ ನಾಲ್ಕು ಗಂಟೆಯ ವೇಳೆಯಲ್ಲಿ ಮಹಿಳೆ ಇದ್ದ ಹೊಲಕ್ಕೆ ಹೊನಗನಹಳ್ಳಿ ಗ್ರಾಮದ …

Read More »

ಸತೀಶಣ್ಣ ಜಾರಕಿಹೊಳಿಯವರಿಗೆ ಸಂಪೂರ್ಣ ಬೆಂಬಲ:ಜಾತ್ಯತೀತ ಜನತಾದಳಪಕ್ಷ

  ಬೆಳಗಾವಿ ಜಾತ್ಯಾತೀತ ಪಕ್ಷದ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದರು. ಬೆಳಗಾವಿ ಪಾರ್ಲಿಮೆಂಟ್ ಚುನಾವಣೆಯ ಮರುಚುನಾವಣೆಯ ಆಗುತ್ತಿದೆ ಜಾತ್ಯತೀತ ಜನತಾದಳದ ಪಕ್ಷ ಎಲ್ಲಾ ಪದಾಧಿಕಾರಿಗಳು ಸಮಾವೇಶದಿಂದ ಪಕ್ಷ ಬಿಟ್ಟು ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ. ಸಯ್ಯದ್ ಮನಸೂರ ಜಾತ್ಯಾತೀತ ಜನತಾದಳದ ರಾಜ್ಯ ಸಂಘಟನಾ ಕಾರ್ಯ ಅಧ್ಯಕ್ಷರು 20ವರ್ಷ ಸೇವೆ ಸಲ್ಲಿಸಿದರು . ಜೆಡಿಎಸ್ ಪಕ್ಷವನ್ನು ಪ್ರಬಲವಾಗಿ ಭದ್ರವಾಗಿ ಕಟ್ಟಬೇಕಾದರೆ ಜಿಲ್ಲಾ ಅಧ್ಯಕ್ಷರನ್ನು ಬದಲು ಮಾಡಿ ಎಂದು ಮನವಿ ಮಾಡಿದರು. ಜೆಡಿಎಸ್ …

Read More »

ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಪ್ರಚಾರ ಫಿರೋಜ್ ಹಾಗೂ ರಾಜು ಸೆಟ ಸಾಥ್

ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರ” ಇಲ್ಲಿನ ಬೆಳಗಾವಿ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಸೋಮವಾರ ವಿವಿಧ ಬಡಾವಣೆಗಳಲ್ಲಿ ಮತಯಾಚನೆ ನಡೆಸಲಾಯಿತು. ಬೆಲೆ ಏರಿಕೆಯಿಂದ ಕೆಳವರ್ಗದ ಜನತೆಗೆ ಬದುಕು ಸಾಗಿಸುವುದು ಕಷ್ಟಕರವಾಗಿದೆ. ಕ್ಷೇತ್ರದ ಜನತೆ ಸುಗಮವಾಗಿ ಜೀವನ ಸಾಗಿಸಬೇಕೆಂದರೆ, ದಿನಸಿ ಬೆಲೆ ಕಡಿಮೆಯಾಗಬೇಕಿದೆ ಇದರ ವಿರುದ್ಧ ಧ್ವನಿ ಎತ್ತುವ ಕಾಲಾವಕಾಶ ಕೂಡಿ ಬಂದಿದೆ ಕ್ಷೇತ್ರದ ಮತಪ್ರಭುಗಳು ಕೈ ಜೋಡಿಸಿ ಎಂದು ಮನವಿ ಮಾಡಿಕೊಳ್ಳಲಾಯಿತು.

Read More »

ರಾಮದುರ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅವರ ಅಬ್ಬರದ ಪ್ರಚಾರ

ರಾಮದುರ್ಗ ವಿಧಾನಸಭಾ ಮತಕ್ಷೇತ್ರದ ಗೊಡಚಿ, ಕಡಕೋಳ, ಉಜ್ಜಿನಕೊಪ್ಪ, ಚುಂಚನೂರ, ತೋರನಗಟ್ಟಿ, ಹಲಗತ್ತಿ, ಇಡಗಲ್, ಮುದಕವಿ, ಮುದೇನೂರ ಗ್ರಾಮಗಳಲ್ಲಿ ಮಂಗಳವಾರ ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಲಾಯಿತು. ಇದೇ ಸಂದರ್ಭದಲ್ಲಿ ಗೊಡಚಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಾಯಿತು. ಮಾಜಿ ಸಚಿವರಾದ ಎಂ.ಬಿ. ಪಾಟೀಲ, ಪ್ರಕಾಶ ಹುಕ್ಕೇರಿ, ಮಾಜಿ ಶಾಸಕ ಅಶೋಕ ಪಟ್ಟಣ, ವೀಣಾ ಕಾಶಪ್ಪನವರ ಸೇರಿ ಇನ್ನಿತರರು ಇದ್ದರು. “ಕಾಂಗ್ರೆಸ್ ಸದಾ ಬಡವರ ಪರವಾಗಿರುವ ಪಕ್ಷವಾಗಿದೆ. ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್ …

Read More »

ಬೆಳಗಾವಿ ಉಪಚುನಾವಣೆ ಅಖಾಡಕ್ಕೆ ಸಿಎಂ ಯಡಿಯೂರಪ್ಪ: ಮಂಗಲಾ ಅಂಗಡಿ ಪರ ಮತಯಾಚನೆ

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ಪ್ರಮುಖ ಪಕ್ಷಗಳ ನಾಯಕರು ಕ್ಷೇತ್ರಗಳಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ್ ಅಂಗಡಿ ಪರ ಮುಖ್ಯಮಂತ್ರು ಬಿ.ಎಸ್.ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ. ಸಿಎಂ ಯಡಿಯೂರಪ್ಪ ಇಂದು ಕೆಂಪೇಗೌಡ ಏರ್ ಪೋರ್ಟ್ ಮೂಲಕ ಹುಬ್ಬಳಿಗೆ ಪ್ರಯಾಣ ಬೆಳೆಸಿದರು. ಹುಬ್ಬಳ್ಳಿಯಿಂದ ರಸ್ತೆ ಮಾರ್ಗದ ಮೂಲಕ ಬೆಳಗಾವಿಗೆ ಪ್ರಯಾಣ ಮಾಡಲಿದ್ದು, ಇಂದು …

Read More »

ಕುಮಾರಸ್ವಾಮಿಗೆ ಕರಿಯ ಎಂದ ಜಮೀರ್ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು: ಮಾರ್ಚ್‌ 30ರಂದು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಹಿರಂಗ ಪ್ರಚಾರ ಸಭೆಯಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರ ಬಣ್ಣದ ಕುರಿತು ‘ಕಾಲಾ ಕುಮಾರಸ್ವಾಮಿ’ ಎಂಬ ಪದ ಬಳಕೆ ಮಾಡಿರುವ ಕಾಂಗ್ರೆಸ್‌ ಶಾಸಕ ಬಿ.ಜೆಡ್‌. ಜಮೀರ್‌ ಅಹಮ್ಮದ್ ಖಾನ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಡಿಎಸ್ ಯುವ ಘಟಕ ಬೆಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ದೂರು ಸಲ್ಲಿಸಿದೆ. ಬೆಂಗಳೂರು ಮಹಾನಗರ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ …

Read More »

ರಮೇಶ್ ಜಾರಕಿಹೊಳಿ ನೋಡಲು ಗೋಕಾಕ ಗೆ ಬಂದ S.I.T.ಅಧಿಕಾರಿ

ಗೋಕಾಕ್​ (ಏ. 6):  ಕೊರೋನಾ ಹಿನ್ನಲೆ ಉಸಿರಾಟದ ಸಮಸ್ಯೆಯಿಂದಾಗಿ ಐಸಿಯುನಲ್ಲಿ ದಾಖಲಾಗಿರುವ  ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೂರನೇ ದಿನದ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಗೆ ದಾಖಲಾದ ಹಿನ್ನಲೆ ಎಸ್​ಐಟಿ ವಿಚಾರಣೆಗೆ ರಮೇಶ್​ ಜಾರಕಿಹೊಳಿ ಗೈರಾಗಿದ್ದರು. ಈ ಹಿನ್ನಲೆ ಇಂದು ಎಸ್​ಐಟಿ ತಂಡ ಆಸ್ಪತ್ರೆಗೆ ಭೇಟಿ ನೀಡಿ ರಮೇಶ್​ ಜಾರಕಿಹೊಳಿ ಆರೋಗ್ಯದ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ರಮೇಶ್​ ಜಾರಕಿಹೊಳಿ ಅವರು ಎಸ್​ಐಟಿ ತನಿಖೆಯಿಂದ ತಪ್ಪಿಸಿಕೊಳ್ಳಲು ಕೊರೋನಾ ಸುಳ್ಳು ನೆಪ ಹೇಳುತ್ತಿದ್ದಾರೆ …

Read More »