Breaking News

ಚಿತ್ರದುರ್ಗದಲ್ಲಿ ಅಂಬುಲೆನ್ಸ್‌ನಲ್ಲಿ ಆಕ್ಸಿಜನ್ ಸಿಗದೆ ಕೋವಿಡ್ ರೋಗಿ ಸಾವು

ಚಿತ್ರದುರ್ಗ: ಒಂದ್ಕಡೆ ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳ ಆಗ್ತಿದ್ರೆ ಇತ್ತ ಚಿತ್ರದುರ್ಗದಲ್ಲಿ ಅಂಬುಲೆನ್ಸ್‌ನಲ್ಲಿ ಆಮ್ಲಜನಕ ಸಿಗದೇ ಕೋವಿಡ್ ರೋಗಿ ಮೃತಪಟ್ಟಿರುವ ದುರಂತ ನಡೆದಿದೆ. ಅಂಬುಲೆನ್ಸ್‌ನಲ್ಲಿ ಸಕಾಲಕ್ಕೆ ಆಕ್ಸಿಜನ್ ಸಿಗದೇ 65 ವರ್ಷದ ವೃದ್ಧೆಯೊಬ್ಬರು ಪ್ರಾಣಬಿಟ್ಟಿದ್ದಾರೆ. ಹಿರಿಯೂರು ನಗರದ ವೇದಾವತಿ ಬಡಾವಣೆಯ ಕೋವಿಡ್ ಸೊಂಕಿತ ವೃದ್ಧೆಯನ್ನು ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಿಂದ ದಾವಣಗೆರೆಗೆ ಅಂಬುಲೆನ್ಸ್ ಮೂಲಕ ಕರೆದೊಯ್ಯುವಾಗ ಮಾರ್ಗಮಧ್ಯೆ ವೃದ್ದೆ ಮೃತಪಟ್ಟಿದ್ದಾರೆ. ಆಕ್ಸಿಜನ್ ಸಿಲಿಂಡರ್ ಬೇಕು ಐದು ಸಾವಿರ ರೂಪಾಯಿ ಕೊಡ್ಬೇಕು …

Read More »

ರಾತ್ರಿ 10 ರಿಂದ ಬೆಳಗ್ಗೆ 5 ವರೆಗೆ ದೆಹಲಿಯಲ್ಲಿ ನೈಟ್ ಕರ್ಫ್ಯೂ!

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳದಿಂದಾಗಿ ಎಚ್ಚೆತ್ತುಕೊಂಡಿರುವ ದೆಹಲಿ ಸರ್ಕಾರ ಇದೀಗ ನೈಟ್ ಕರ್ಫ್ಯೂ ಹಾಕಲು ಮುಂದಾಗಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಕೊರೊನಾ ನಾಲ್ಕನೇ ಅಲೆ ಬೀಸಲು ಆರಂಭಿಸಿದೆ. ಆದರೆ ಲಾಕ್‍ಡೌನ್ ಹೇರಲು ನಾವು ಸಿದ್ಧರಿಲ್ಲ ಎಂದು ಹೇಳಿದ್ದಾರೆ. ಕೊರೊನಾ ಪ್ರಕರಣಗಳ ಸಂಖ್ಯೆ ದೆಹಲಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವುದರಿಂದಾಗಿ ಲಾಕ್‍ಡೌನ್ ಬದಲಾಗಿ ನೈಟ್‍ ಕರ್ಫ್ಯೂ ಹಾಕಲು ದೆಹಲಿ ಸರ್ಕಾರ …

Read More »

ಚಿತ್ರಮಂದಿರಗಳು ಬಂದ್, ಶೂಟಿಂಗ್‌ಗೆ ಹೊಸ ಮಾರ್ಗಸೂಚಿ

ದೇಶದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಶುರುವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಒಂದು ಹಂತದಲ್ಲಿ ಕೋವಿಡ್ ನಿಯಂತ್ರಣದಲ್ಲಿ ಭಾರತ ಯಶಸ್ಸು ಕಂಡಿತ್ತು ಎಂದು ಹೇಳಲಾಗಿತ್ತು. ಇದೀಗ, ಮತ್ತೆ ದೇಶದಲ್ಲಿ ಕೊರೊನಾ ಸೋಂಕು ಹರಡುತ್ತಿವೆ. ಸದ್ಯ ಮಹಾರಾಷ್ಟ್ರದಲ್ಲಿ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಮಾಡುವ ಸುಳಿವು ಸಿಕ್ಕಿದೆ. ಇದರ ಮೊದಲ ಹಂತ ಎಂಬಂತೆ ಚಿತ್ರಮಂದಿರಗಳು, ರಂಗಮಂದಿರಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಶೂಟಿಂಗ್ ಮಾಡಲು ಷರತ್ತು ವಿಧಿಸಲಾಗಿದೆ.   …

Read More »

ಎಸ್‌ಎಸ್‌ಎಲ್ ಸಿ, ಪಿಯು ಪರೀಕ್ಷೆ ಸಿದ್ದತೆ ಪರಿಶೀಲನಾ ಸಭೆ: ಸಚಿವ ಸುರೇಶ್ ಕುಮಾರ್ ಭಾಗಿ

ಧಾರವಾಡ: ಕೋವಿಡ್ ಹಾವಳಿ‌ ಮಧ್ಯೆಯೂ ಕಳೆದ ವರ್ಷ ಎಸ್‌ಎಸ್‌ಎಲ್ ಸಿ, ಪಿಯು ಪರೀಕ್ಷೆ ನಡೆಸಿದಂತೆ ಈ ವರ್ಷ ನಿಗದಿಯಾಗಿರುವ ಪರೀಕ್ಷೆಗಳ ಯಶಸ್ವಿಯಾಗಿ ನಡೆಸಲು ಧಾರವಾಡದ ಡಯಟ್ ಸಭಾಂಗಣದಲ್ಲಿ ಇಂದು ಸಭೆ ನಡೆಸಲಾಗುತ್ತಿದೆ. ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು, ಬೆಳಗಾವಿ ವಿಭಾಗದ ಶೈಕ್ಷಣಿಕ ಜಿಲ್ಲೆಗಳ ಎಸ್‌ಎಸ್‌ಎಲ್ ಸಿ, ಪಿಯುಸಿ ಪರೀಕ್ಷಾ ಪೂರ್ವಸಿದ್ಧತಾ ಪರಿಶೀಲನೆ ಸಭೆ ನಡೆಸಿದರು. ಸಂಜೆವರೆಗೂ ಎಲ್ಲಾ ಒಂಭತ್ತು ಶೈಕ್ಷಣಿಕ ಜಿಲ್ಲೆಗಳಲ್ಲಿನ ಪರೀಕ್ಷಾ ಸಿದ್ದತೆ ಕುರಿತು …

Read More »

ಖಾಸಗಿ ವಾಹನಗಳು ವಸೂಲಿಗಿಳಿದರೆ ಕಾನೂನು ಕ್ರಮ : ಸಾರಿಗೆ ಆಯುಕ್ತರ ಎಚ್ಚರಿಕೆ

ಬೆಂಗಳೂರು,ಏ.6-ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ವಾಹನಗಳು ಎಲ್ಲಾ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಿದ್ದೇವೆ. ಒಂದು ವೇಳೆ ಯಾರಾದರೂ ಪರಿಸ್ಥಿತಿಯ ಲಾಭ ಪಡೆದು ಹೆಚ್ಚಿನ ದರ ವಸೂಲಿ ಮಾಡಲು ಮುಂದಾದರೆ ಅಂಥವರ ಮೇಲೂ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಸಾರಿಗೆ ಆಯುಕ್ತ ಶಿವಕುಮಾರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ನಾಳೆ ಸಾರಿಗೆ ನೌಕರರು ಮುಷ್ಕರ ನಡೆಸಿ ಬಸ್‍ಗಳು ಕಾರ್ಯಾರಂಭ ಮಾಡದಿದ್ದರೆ, ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ಪರ್ಯಾಯ ಕ್ರಮ ಕೈಗೊಂಡಿದ್ದೇವೆ ಎಂದರು. …

Read More »

ನಾಳೆ ಮುಷ್ಕರ ನಡೆಸುವ ಸಾರಿಗೆ ನೌಕರರಿಗೆ ಎಸ್ಮಾ ಜಾರಿ; ಪರ್ಯಾಯ ವ್ಯವಸ್ಥೆಗೂ ಸಿದ್ಧತೆ: ಎಚ್ಚರಿಕೆ ನೀಡಿದ ಸರ್ಕಾರ

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಏ.7 ರಂದು ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರಿಗೆ ಸರ್ಕಾರ ಎಸ್ಮಾ ಎಚ್ಚರಿಕೆ ನೀಡಿದೆ. ಆರನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ, ಸಾರಿಗೆ ನೌಕರರೊಂದಿಗೆ ಮತ್ತೆ ಮಾತುಕತೆಯ ಪ್ರಶ್ನೆಯೂ ಇಲ್ಲ, ಮುಷ್ಕರಕ್ಕೆ ಮುಂದಾದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ,ಎಸ್ಮಾ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಷ್ಕರಕ್ಕೆ ಕರೆ …

Read More »

ಮತಗಟ್ಟೆಯಲ್ಲಿ ಅಭಿಮಾನಿಯ ಫೋನ್ ಕಿತ್ತುಕೊಂಡು ಟ್ರೋಲ್ ಗೆ ಗುರಿಯಾದ ತಮಿಳು ಸ್ಟಾರ್ ಅಜಿತ್!ವಿಡಿಯೋ

ಚೆನ್ನೈ: ಮತಗಟ್ಟೆ ಬಳಿ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದ ಮಾಸ್ಕ್ ಧರಿಸದ ಅಭಿಮಾನಿಯೊಬ್ಬರ ಫೋನ್ ನ್ನು ಕಾಲಿವುಡ್ ಸೂಪರ್ ಸ್ಟಾರ್ ಅಜಿತ್ ಕಸಿದುಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಚೆನ್ನೈ ಪಕ್ಕದಲ್ಲಿರುವ ತಿರುವಣ್ ಮಿಯೂರ್ ನ ಮತಗಟ್ಟೆಯೊಂದರ ಬಳಿ ಇಂದು ಬೆಳಗ್ಗೆ ಪತ್ನಿ ಶಾಲಿನಿ ಜೊತೆಗೆ ಮತದಾನ ಮಾಡಲು ವಿಜಯ್ ಬಂದಾಗ ಈ ಘಟನೆ ನಡೆದಿದೆ. ವಿಡಿಯೋ ದೃಶ್ಯಾವಳಿಗಳು ಇದೀಗ ವೈರಲ್ ಆಗಿವೆ. ಅಜಿತ್ ಅವರ ಒಪ್ಪಿಗೆ …

Read More »

ಜೊಯಿಡಾ ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ್‍ನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ

ಕಾರವಾರ: ಜೊಯಿಡಾ ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ್‍ನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಜೋಯಿಡಾದ ನಂದಿಗದ್ದಾ ಗ್ರಾಮದ ಗ್ರಾಮಪಂಚಾಯ್ತಿ ಅಧಿಕಾರಿ ರಾತ್ರಿ 8 ಗಂಟೆಯಾದರೂ ಕಚೇರಿ ಮುಂದೆ ಹಾರಾಡುತ್ತಿದ್ದ ರಾಷ್ಟ್ರಧ್ವಜವನ್ನು ಇಳಿಸದೆ ನಿರ್ಲಕ್ಷ್ಯದಿಂದ ತೆರಳಿದ್ದಾರೆ. ಈ ಘಟನೆ ಸ್ಥಳೀಯ ಜನರ ಗಮನಕ್ಕೆ ಬಂದಿದ್ದು ನಂತರ ಪಂಚಾಯ್ತಿ ಸಿಬ್ಬಂದಿ ರಾಷ್ಟ್ರಧ್ವಜವನ್ನು ಇಳಿಸಿದ್ದಾರೆ. ನಿಯಮದ ಪ್ರಕಾರ ಎಲ್ಲಾ ಗ್ರಾ.ಪಂಗಳಲ್ಲೂ ರಾಷ್ಟ್ರಧ್ವಜ ಬೆಳಗ್ಗೆ ಏರಿಸಿ ಸೂರ್ಯಾಸ್ತದ ವೇಳೆ ಇಳಿಸಬೇಕು. ಆದರೆ …

Read More »

ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ

ಕಲಬುರಗಿ: ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ ಮಾಡಿದ್ದಾರೆ. ಸಾರಿಗೆ ನೌಕರರ ಪ್ರತಿಭಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಯವಿಟ್ಟು ಕೊರೊನಾ ಸಂಕಷ್ಟದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ನೀತಿ ಸಂಹಿತೆಯಿಂದಾಗಿ ಬೇಡಿಕೆ ಈಡೇರಿಕೆಗೆ ಸಾಧ್ಯವಿಲ್ಲ. ಘೋಷಣೆ ಮಾಡುವ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು. ನೀತಿ ಸಂಹಿತೆ ಜಾರಿ ಇರೋದ್ರಿಂದ ಏನು ಹೇಳಲು ಆಗೋದಿಲ್ಲ. ಇಂದು ಸಾರಿಗೆ ನೌಕರರ ಜೊತೆ ಜೊತೆ …

Read More »

ಪ್ರತಿಭಟನೆಗೆ ಹೋದ್ರೆ ಸಾರಿಗೆ ಇಲಾಖೆ ಬೇರೆ ವ್ಯವಸ್ಥೆ ಮಾಡಲಿದೆ – ಬಸ್‍ಗೆ ಹಾನಿ ಮಾಡಿದ್ರೂ ಕಠಿಣ ಕ್ರಮ:ರವಿ ಕುಮಾರ್ ಸ್ಪಷ್ಟನೆ

ಬೆಂಗಳೂರು: ಸಾರಿಗೆ ನೌಕರರು ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಹೋಗಬಾರದು ಎಂದು ಮನವಿ ಮಾಡುತ್ತೇವೆ. 9 ಬೇಡಿಕೆಗಳಲ್ಲಿ ಒಂದು ಬೇಡಿಕೆ ಬಿಟ್ಟು ಎಲ್ಲಾ ಈಡೇರಿಸಿದ್ದೇವೆ ಎಂದು ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ. ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತುರ್ತು ಸಭೆ ಕರೆದ ಸಿಎಂ ಬಿಎಸ್ ಯಡಿಯೂರಪ್ಪ, ನಾಲ್ಕು ನಿಗಮಗಳ ಎಂಡಿಗಳ ಜೊತೆ ಕೃಷ್ಣಾದಲ್ಲಿ ಸಭೆ ನಡೆಸಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮುಂದಿನ ನಿರ್ಧಾರದ ಬಗ್ಗೆ ಚರ್ಚೆ ಮಾಡಲಾಗಿದೆ. …

Read More »