ಹೈದರಾಬಾದ್: ಅಕ್ರಮ ಸಂಬಂಧದ ವಿಚಾರ ಪತಿಗೆ ತಿಳಿಯುತ್ತಿದ್ದಂತೆ ಮಹಿಳೆ ತಾನು ಸಂಬಂಧ ಹೊಂದಿದ್ದ ಯುವಕನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿ ನಡೆದಿದೆ. ದೇವಮ್ಮ (30) ಮತ್ತು ಶಿವ ನಾಯಕ್ (20) ಆತ್ಮಹತ್ಯೆ ಮಾಡಿಕೊಂಡವರು. ಸಂಬಂಧದಲ್ಲಿ ಅಳಿಯನಾಗಬೇಕಿದ್ದ ಯುವಕನೊಂದಿಗೆ ಮಹಿಳೆ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಚಾರ ಪತಿಗೆ ತಿಳಿಯುತ್ತಿದ್ದಂತೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://www.facebook.com/105350550949710/posts/182529756565122/?sfnsn=wiwspwa&extid=lWaxzjRYmeP37MlU&d=w&vh=e ಮೃತ ದೇವಮ್ಮ 10 ವರ್ಷಗಳ ಹಿಂದೆ ರಾಜು ಜೊತೆ …
Read More »ತಿರುಪತಿ ಯಲ್ಲಿ ಇಳಿಯ ಬೇಕಾದ ವಿಮಾನ ಬೆಂಗಳೂರಿನಲ್ಲಿ ಇಳಿದು ಜನರ ಪ್ರಾಣ ಉಳಿಸಿದೆ..!
ತಿರುಪತಿ: ಪೈಲಟ್ ಒಬ್ಬರ ಸಮಯ ಪ್ರಜ್ಞೆಯಿಂದ 75 ಜನ ಪ್ರಯಾಣಿಕರ ಜೀವ ಉಳಿದಿರುವ ಘಟನೆ ತಿರುಪತಿಯಲ್ಲಿ ಭಾನುವಾರ ನಡದಿದೆ. ಹೈದರಾಬಾದ್-ತಿರುಪತಿ-ಬೆಂಗಳೂರು ಮಧ್ಯೆ ಸಂಚಿಸಲಿರುವ ಇಂಡಿಗೋ ಸಂಸ್ಥೆಗೆ ಸೇರಿದ ವಿಮಾನವೊಂದು ಭಾರಿ ಅಪಘಾತಕ್ಕೆ ಈಡಾಗುವ ಸಂಭವವಿತ್ತು. ಈ ಮಧ್ಯೆಯೇ ಪೈಲಟ್ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಜೀವ ಉಳಿದಿದೆ. ತಿರುಪತಿಯಲ್ಲಿ ಇಳಿಯಬೇಕಿದ್ದ ವಿಮಾನವನ್ನು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ತಂದು ಇಳಿಸಲಾಗಿದೆ. ನಿನ್ನೆ ಬೆಳಗ್ಗೆ ಈ ವಿಮಾನವು ಪ್ರಯಾಣಿಕರನ್ನು ಇಳಿಸುವ ಸಂಬಂಧ ತಿರುಪತಿ ಅಂತಾರಾಷ್ಟ್ರೀಯ …
Read More »ಕೋವಿಡ್ ಪರಿಕರಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ:ಕಾಂಗ್ರೆಸ್ ನಾಯಕರು,
ಬೆಂಗಳೂರು: ಕೋವಿಡ್ ಪರಿಕರಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕರು, ಈ ಹಿಂದೆ ಲೆಕ್ಕ ಕೊಡಿ ಎಂಬ ಅಭಿಯಾನ ಆರಂಭಿಸಿದ್ದರು. ಇದೀಗ ಈ ವಿಚಾರದಲ್ಲಿ ಸರ್ಕಾರದ ವಿರುದ್ದ ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾದ ಕುರಿತು ಪಕ್ಷದ ನಾಯಕರೊಂದಿಗೆ ಚರ್ಚಿಸಿದರು. ಕೊರೊನಾ ಹೆಸರಲ್ಲಿ ರಾಜ್ಯ ಸರ್ಕಾರ ಲೂಟಿ …
Read More »ಅಮವಾಸ್ಯೆ ಹೂ, ಹಣ್ಣಿಗೆ ಮುಗಿಬಿದ್ದ ಜನ- ಲಾಕ್ಡೌನ್ ಮಧ್ಯೆ ಭಕ್ತರಿಂದ ತುಂಬಿದ ದೇವಾಲಯ
ರಾಯಚೂರು: ಭೀಮನ ಅಮವಾಸ್ಯೆ ಹಾಗೂ ಶ್ರಾವಣ ಆರಂಭ ಹಿನ್ನೆಲೆ ರಾಯಚೂರಿನಲ್ಲಿ ಕೊರೊನಾ ಹರಡುವಿಕೆ ಭೀತಿ ಮರೆತು ಭಕ್ತರು ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ನಗರದ ಉರುಕುಂದಿ ಈರಣ್ಣ ದೇವಾಲಯದಲ್ಲಿ ಭಕ್ತರ ದಂಡು ಹರಿದು ಬಂದಿದೆ. ಲಾಕ್ಡೌನ್ ಮಧ್ಯೆ ಅಮವಾಸ್ಯೆ ಹಿನ್ನೆಲೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು, ಇದರಿಂದ ದೇವರ ದರ್ಶನಕ್ಕೆ ಭಕ್ತರು ಸಾಲುಗಟ್ಟಿ ನಿಂತಿದ್ದರು. ಸಾಮಾಜಿಕ ಅಂತರ, ಮಾಸ್ಕ್ ಸೇರಿದಂತೆ ಎಲ್ಲವನ್ನೂ ಮರೆತು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ಮುನ್ನೆಚ್ಚರಿಕೆಯಾಗಿ ಕೆಲ …
Read More »ಕೊರೊನಾ ತಡೆಗಟ್ಟಲು ಲಾಕ್ ಡೌನ್ ವೊಂದೆ ಮಾರ್ಗವಲ್ಲ:ರಮೇಶ ಜಾರಕಿಹೊಳಿ
ಬೆಳಗಾವಿ: ಕೊರೊನಾ ತಡೆಗಟ್ಟಲು ಲಾಕ್ ಡೌನ್ ವೊಂದೆ ಮಾರ್ಗವಲ್ಲ. ಜನರು ಸ್ವ ಪ್ರೇರಣೆಯಿಂದ ಸಹಕರಿಸಿದೆ ಮಾತ್ರ ಸೋಂಕು ತಡೆಗಟ್ಟಬಹುದು. ಮುಂದಿನ ದಿನ ಸಾಧಕ, ಬಾಧಕಗಳ ಕುರಿತು ಚರ್ಚಿಸಿ ಲಾಕ್ ಡೌನ್ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾಡಳಿತ ಹಾಗೂ ಸರ್ಕಾರ ಕೋವಿಡ್ ನಿರ್ವಹಣೆಗೆ ನಿರಂತರ ಶ್ರಮಿಸುತ್ತಿದೆ. ಬಿಮ್ಸ್ ಆಸ್ಪತ್ರೆಯಲ್ಲಿ …
Read More »ಕೆಎಲ್ ಇ ಸಂಸ್ಥೆಯ ಉಪಾಧ್ಯಕ್ಷ ರಾಜೇಂದ್ರ ಹಂಜಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸಂತಾಪ
ಬೆಳಗಾವಿ : ಕೆಎಲ್ ಇ ಸಂಸ್ಥೆಯ ಉಪಾಧ್ಯಕ್ಷ ರಾಜೇಂದ್ರ ಹಂಜಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರತಿಷ್ಠಿತ ಉದ್ಯಮಿಯಾಗಿರುವ ಹಂಜಿ ಅವರು ಶಿಕ್ಷಣ ಕ್ಷೇತ್ರದಲ್ಲಿಯೂ ಅಪಾರ ಕೊಡುಗೆ ನೀಡಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆತ್ಮೀಯ ಸ್ನೇಹಿತ ಹಂಜಿ ನಮ್ಮನಲ್ಲಿದ್ದು, ಪ್ರತಿಭಾವಂತ ವ್ಯಕ್ತಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ಇವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸತೀಶ …
Read More »ಮುಂಬರುವ ದಿನಗಳಲ್ಲಿ ಕೋವಿಡ್-೧೯ ಸೇರಿದಂತೆ ಯಾವುದೇ ಬಗೆಯ ಮರಣ ಪ್ರಕರಣಗಳು ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು
ಬೆಳಗಾವಿ -: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ಕೋವಿಡ್-೧೯ ಸೇರಿದಂತೆ ಯಾವುದೇ ಬಗೆಯ ಮರಣ ಪ್ರಕರಣಗಳು ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು. ಸಕಾಲಕ್ಕೆ ಚಿಕಿತ್ಸೆ, ಅಂಬ್ಯುಲೆನ್ಸ್ ಹಾಗೂ ಊಟೋಪಹಾರ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. https://www.facebook.com/105350550949710/posts/182513749900056/?sfnsn=wiwspwa&extid=Jf6CE1WTyAcoaLRh&d=w&vh=e ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಸೋಮವಾರ (ಜು.20) ನಡೆದ ಉನ್ನತಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ …
Read More »ಬಾಳೆಹಣ್ಣಿಗೆ ವಿಷಹಾಕಿ 20ಕ್ಕೂ ಹೆಚ್ಚು ಹಸುಗಳನ್ನು ಕೊಂದಿರುವ ಆಘಾತಕಾರಿ ಘಟನೆ…?
ತೋಟದೊಳಗೆ ಬರುತ್ತಿವೆ ಎಂದು ಪಾಪಿಗಳು ಬಾಳೆಹಣ್ಣಿಗೆ ವಿಷಹಾಕಿ 20ಕ್ಕೂ ಹೆಚ್ಚು ಹಸುಗಳನ್ನು ಕೊಂದಿರುವ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಐಗೂರಿನ ಡಿಬಿಡಿ ಟಾಟಾ ಎಸ್ಟೇಟ್ನಲ್ಲಿ ಈ ಘಟನೆ ನಡೆದಿದ್ದು, ಎಸ್ಟೇಟ್ ಒಳಗೆ ಸ್ಥಳೀಯ ದನಗಳು ಹೋಗುತ್ತಿದ್ದರಿಂದ ಎಸ್ಟೇಟ್ನ ಮ್ಯಾನೇಜರ್ ಮತ್ತು ಸಿಬ್ಬಂದಿ ಸೇರಿ ಬಾಳೆಹಣ್ಣಿಗೆ ವಿಷ ಹಾಕಿ ಹಸುಗಳಿಗೆ ತಿನಿಸಿ ಕೊಂದಿದ್ದಾರೆ. ಈ ರೀತಿ ಕಳೆದ ಹಲವು ದಿನಗಳಿಂದ 20ಕ್ಕೂ ಹೆಚ್ಚು ಹಸುಗಳಿಗೆ ಹತ್ಯೆ ಮಾಡಿದ್ದಾರೆ ಎಂದು …
Read More »ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರನ್ನ ಕದ್ದು ಕದ್ದು ನೋಡ್ತಿದ್ದ ಕಾಮುಕನಿಗೆ ಧರ್ಮದೇಟು
ವಿಜಯಪುರ: ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರ ಮೇಲೆ ಕಾಮುಕ ಕಣ್ಣು ಹಾಕಿದ್ದಕ್ಕೆ ಹಿಗ್ಗಾಮುಗ್ಗಾ ಧರ್ಮದೇಟು ತಿಂದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಶಿನಾಥ ಧರ್ಮದೇಟು ತಿಂದ ಕಾಮುಕ. ಈತ ಗಿಡದ ಮೇಲೆ ಕುಳಿತು ಕದ್ದು ಕದ್ದು ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರನ್ನ ನೋಡುತ್ತಿದ್ದನುಎಂದಿನಿಂತೆ ಭಾನುವಾರ ಕೂಡ ಕಾಮುಕ ಕಾಶಿನಾಥ ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರನ್ನ ನೋಡುತ್ತಿದ್ದನು. ಆದರೆ ಈ ವೇಳೆ ಸಾರ್ವಜನಿಕರ ಕೈಯಲ್ಲಿ ರೆಡ್ …
Read More »ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಸೇರಿ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹೋಮ್ ಕ್ವಾರಂಟೈನ್ ವಿಧಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಸ್ ಪಿ ಸೇರಿದಂತೆ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್, ಎಸ್ ಪಿ ಸೀಮಂತ್ ಕುಮಾರ್ ಗೆ ಹೋಂ ಕ್ವಾರಂಟೈನ್ ವಿಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಕಚೇರಿಯನ್ನು ಒಂದು ವಾರ ಕಾಲ ಸೀಲ್ ಡೌನ್ ಮಾಡಲಾಗಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಎಸ್ ಪಿ ಪಿಎ …
Read More »