Breaking News

ಎಸ್ಪಿ ಹೆಸರಿನಲ್ಲಿ ಪಿಎಸ್‌ಐಗೆ ಪಂಗನಾಮ

ಕಲಬುರ್ಗಿ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನನಗೆ ತುಂಬಾ ಪರಿಚಯ. ಅವರ ಮತ್ತೊಂದು ಪರ್ಸನಲ್ ನಂಬರ್ ಇದು. ಹಾಗೇ ಹೀಗೆ ಅಂತ ಪಿಎಸ್‌ಐ ಒಬ್ಬರೊಂದಿಗೆ ಮತನಾಡಿದಂತ ಚಾಲಾಕಿಯೊಬ್ಬರು, ಬರೋಬ್ಬರಿ ಪೀಕಿದ್ದು ಮಾತ್ರ 8.5 ಲಕ್ಷ ಹಣ. ಕೊನೆಗೆ ಅನುಮಾನಗೊಂಡಂತ ಪಿಎಸ್‌ಐ ನೇರವಾಗಿ ಎಸ್ಪಿ ಜೊತೆಗೆ ಮಾತನಾಡಿದಾಗ ಗೊತ್ತಾಗಿದ್ದೇ ಯಾಮಾರಿಸಿದವನ ನಿಜವಾದ ಬಣ್ಣ. ಹೀಗೆ ಪಂಗನಾಮ ಹಾಕಿದ ಆಸಾಮಿ ಅಂದರ್ ಕೂಡ ಆಗಿದ್ದಾನೆ.ಹೌದು.. ಪಿಎಸ್‌ಐ ಒಬ್ಬರಿಗೆ ಎಸ್ಪಿ ಹೆಸರಿನಲ್ಲಿ ವಂಚಿಸಿರುವಂತ ಘಟನೆ …

Read More »

ಪತಿಯ ಅತಿಯಾದ ಚಟ, ಕಿರುಕುಳಕ್ಕೆ ಬೇಸತ್ತು ಐಪಿಎಸ್​ ಅಧಿಕಾರಿಯಿಂದ ದೂರು ದಾಖಲು!

ಬೆಂಗಳೂರು: ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಹಿಳಾ ಐಪಿಎಸ್​ ಅಧಿಕಾರಿಯೊಬ್ಬರು ತಮ್ಮ ಪತಿಯ ವಿರುದ್ಧ ನಗರದ ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪತಿ ನಿತೀನ್ ಸುಬಾಶ್ ಮತ್ತು ಕುಟುಂಬಸ್ಥರ ವಿರುದ್ಧ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ದೂರು ನೀಡಿದ್ದಾರೆ. ನಿತೀನ್ ಸುಬಾಶ್ ಸೇರಿದಂತೆ ಒಟ್ಟು 7 ಮಂದಿಯ ವಿರುದ್ಧ ಎಫ್​ಐಆರ್ ದಾಖಲಾಗಿದೆ. 2009ರ ಬ್ಯಾಚ್​​ನ ಅಧಿಕಾರಿ ಅಗಿರುವ ವರ್ತಿಕಾ 2011 ರಲ್ಲಿ ವಿವಾಹ ಅಗಿದ್ದರು. ಐಎಫ್​ಎಸ್​ (ಭಾರತೀಯ ವಿದೇಶಾಂಗ …

Read More »

ಮತ್ತೆ ರಂಗೇರಲಿದೆ ಮೆಡಿಕಲ್ ಕಾಲೇಜ್ ಕ್ಯಾಂಪಸ್

ಬೆಳಗಾವಿ – ಬೆಳಗಾವಿಗೆ ಇಂದು 2 ವಿಶೇಷ ವಿಮಾನಗಳು ಆಗಮಿಸಲಿವೆ. ಮಲೇಷಿಯಾದಿಂದ ಇಂಡಿಗೋ ವಿಮಾನಗಳು ಬರಲಿದ್ದು, ಒಂದು ಸಂಜೆ 4 ಗಂಟೆಗೆ, ಇನ್ನೊಂದು ರಾತ್ರಿ 8 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿವೆ. ಈ ಎರಡೂ ವಿಮಾನಗಳು ಮಲೇಷಿಯಾದಿಂದ ವಿದ್ಯಾರ್ಥಿಗಳನ್ನು ಹೊತ್ತು ತರಲಿವೆ. ಕೊರೋನಾ ಹಿನ್ನೆಲೆಯಲ್ಲಿ ಸ್ವದೇಶಕ್ಕೆ ವಾಪಸ್ಸಾಗಿದ್ದ ಮಲೇಷಿಯನ್ ವಿದ್ಯಾರ್ಥಿಗಳು ಈಗ ಮತ್ತೆ ಬೆಳಗಾವಿಗೆ ವಾಪಸ್ಸಾಗಿ ಕಾಲೇಜು ತುಂಬಲಿದ್ದಾರೆ.

Read More »

ರಾಷ್ಟ್ರವ್ಯಾಪಿ ‘ಚಕ್ಕಾ ಜಾಮ್‍’,ರಾಜ್ಯದಲ್ಲಿ ಯಾವೆಲ್ಲ ರಸ್ತೆಗಳು ಬಂದ್?:

ನವದೆಹಲಕ, ಫೆ.6 (ಪಿಟಿಐ)- ಕೇಂದ್ರದ ಹೊಸ ಕೃಷಿ ಕಾಯಿದೆ ವಿರೋಸಿ ರೈತರು ಶನಿವಾರ ನಡೆಸುತ್ತಿರುವ ರಾಷ್ಟ್ರವ್ಯಾಪಿ ಚಕ್ಕಾ ಜಾಮ್‍ನಿಂದ ಹೊರಬರುವ ಯಾವುದೇ ಪರಿಸ್ಥ್ಥಿತಿಯನ್ನು ಎದುರಿಸಲು ಅರೆಸೈನಿಕ ಪಡೆಗಳೂ ಸೇರಿದಂತೆ ಸಾವಿರಾರು ಸಿಬ್ಬಂದಿಯನ್ನು ನಿಯೋಜಿಸಿರುವ ದೆಹಲಿ ಪೊಲೀಸರು ಎಲ್ಲಾ ಗಡಿ ಕೇಂದ್ರಗಳಲ್ಲಿ ಭದ್ರತೆಯನ್ನು ತೀವ್ರಗೊಳಿಸಿದ್ದಾರೆ. ಆದಾಗ್ಯೂ, ಸಂಯುಕ್ತ ಕಿಸಾನ್ ಮೋರ್ಚಾ ಚಕ್ಕಾ ಜಾಮ್ ಸಂದರ್ಭದಲ್ಲಿ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿನ ರಸ್ತೆಗಳನ್ನು ನಿರ್ಬಂಸುವುದಿಲ್ಲ ಎಂದಿದೆ. ಆದರೆ, ದೇಶದ ಇತರ ಭಾಗಗಳು …

Read More »

ರಾಜ್ಯದ ಎಲ್ಲಾ ಉತ್ಪನ್ನಗಳ ಪ್ಯಾಕೆಟ್‍ಗಳ ಮೇಲೆ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು,

ಬೆಂಗಳೂರು, – ರಾಜ್ಯದ ಎಲ್ಲಾ ಉತ್ಪನ್ನಗಳ ಪ್ಯಾಕೆಟ್‍ಗಳ ಮೇಲೆ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು, ಕನ್ನಡದ ಹೆಸರುಗಳನ್ನು ದಪ್ಪಅಕ್ಷರಗಳಲ್ಲಿ ಕಾಣುವಂತೆ ಹಾಕುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಒತ್ತಾಯಿಸಿದರು. ರಾಜಾಜಿನಗರದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಪಂಚದಾಧ್ಯಂತ ಕರ್ನಾಟಕದ ಅಸ್ಮಿತೆಯನ್ನು ಜಗತ್ತಿಗೆ ಸಾರುವ ಸಂಸ್ಥೆಯಿದು. ಇದರ ಪ್ರತಿಯೊಂದು ಉತ್ಪನ್ನಗಳ ಮೂಲಕ ಜಗತ್ತಿನಾದ್ಯಂತ ಕರ್ನಾಟಕ ಹೆಸರು ಕೇಳುತ್ತಿದೆ. ಅದರ ಜೊತೆಗೆ ಇಲಾಖೆಯ ರಾಯಬಾರಿಯಂತೆ ಕೆಲಸ ನಿರ್ವಹಿಸಬೇಕು …

Read More »

B.S.N.L. ನೊಂದಿಗೆ ಒಟಿಟಿ ಸಹಭಾಗಿತ್ವ

ಬೆಂಗಳೂರು,ಫೆ.5- ಪ್ರಮುಖ ಜಾಗತಿಕ ಒಟಿಟಿ ಪ್ಲಾಟ್‍ಫಾರ್ಮ್ ಯುಪ್.ಟಿವಿ, ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‍ಎನ್‍ಎಲ್) ನೊಂದಿಗೆ ಸಹಭಾಗಿತ್ವ ಹೊಂದಿದೆ. ಪರಿಣಾಮ ಹೊಸ-ಯುಗದ ಟೆಕ್-ಶಕ್ತಗೊಂಡ ಏಕ ಚಂದಾದಾರಿಕೆ ವಿಡಿಯೋ ಸ್ಟ್ರೀಮಿಂಗ್ ಪ್ಲಾಟ್‍ಫಾರ್ಮ್ ಯುಪ್ಟಿವಿ ಸ್ಕೋಪ್ ಸೇವೆಯನ್ನು ಪ್ರಾರಂಭಿಸಿದೆ. ಟ್ರಿಪಲ್ ಪ್ಲೇ ಕೊಡುಗೆಯಾಗಿ ಬ್ರಾಡ್‍ಬ್ಯಾಂಡ್ ಚಂದಾದಾರರಿಗೆ ಕಟ್ಟುಗಳ ಒಟಿಟಿ ಸೇವೆಗಳನ್ನು ನೀಡಲು ಈ ಹಿಂದೆ ಬಿಎಸ್‍ಎನ್‍ಎಲ್‍ನೊಂದಿಗೆ ಎಂಒಯುಗೆ ಸಹಿ ಹಾಕಿದ್ದ ಯುಪ್.ಟಿವಿ ಈಗ ಬಿಎಸ್‍ಎನ್‍ಎಲ್ ಬ್ರಾಡ್‍ಬ್ಯಾಂಡ್ ಬಳಕೆದಾರರಿಗಾಗಿ ಬಲವಾದ ವೀಡಿಯೊ ಸೇವೆಗಳನ್ನು ಪ್ರಾರಂಭಿಸುತ್ತಿದೆ.ಅಂತಹ …

Read More »

ಫೆ. 9ಕ್ಕೆ ಪರಿಷತ್‌ ಸಭಾಪತಿ ಚುನಾವಣೆ :

ಬೆಂಗಳೂರು: ವಿಧಾನಪರಿಷತ್‌ ಸಭಾಪತಿ ಚುನಾವಣೆಗೆ ಫೆ. 9ರಂದು ದಿನಾಂಕ ನಿಗದಿಯಾಗಿದೆ. ಬಿಜೆಪಿ -ಜೆಡಿಎಸ್‌ ಬೆಂಬಲದೊಂದಿಗೆ ಜೆಡಿಎಸ್‌ನ ಬಸವರಾಜ ಹೊರಟ್ಟಿ ಸಭಾಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತ. ಸಭಾಪತಿ ಚುನಾವಣೆ ಹಿನ್ನೆಲೆಯಲ್ಲಿ ಪರಿಷತ್‌ ಕಲಾಪವನ್ನು ಫೆ. 10ರ ವರೆಗೆ ಮುಂದುವರಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ತೀರ್ಮಾನಿಸಲಾಯಿತು. ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರ ರಾಜೀನಾಮೆ ಪತ್ರ ಅಂಗೀಕರಿಸಿ ಪರಿಷತ್‌ ಕಲಾಪ ಮುಂದುವರಿಕೆ ಮತ್ತು ಸಭಾಪತಿ ಚುನಾವಣೆ ನಿಗದಿಗೆ ರಾಜ್ಯಪಾಲರು ಅನುಮತಿ ನೀಡಿದರು.

Read More »

ಸೋಮವಾರ ಬೆಳಗಾವಿ ಜಿಲ್ಲೆಯ ಖಾನಾಪುರಕ್ಕೆ ಶಿಕ್ಷಣ ಸಚಿವ ಸುರೇಶ ಕುಮಾರ ಭೇಟಿ

ಬೆಂಗಳೂರು – ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಸೋಮವಾರ ಬೆಳಗಾವಿ ಜಿಲ್ಲೆಯ ಖಾನಾಪುರಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 6.30ಕ್ಕೆ ದಾವಣಗೆರೆಯಿಂದ ರಸ್ತೆ ಮಾರ್ಗವಾಗಿ ಹೊರಟು 9.30ಕ್ಕೆ ಖಾನಾಪುರಕ್ಕೆ ಆಗಮಿಸುವರು. ನಂತರ ಖಾನಾಪುರ ತಾಲೂಕಿನಲ್ಲಿ ಆಯ್ದ ಸರಕಾರಿ ಶಾಲೆಗಳಿಗೆ ಭೇಟಿ ನೀಡುವರು. 10.30ಕ್ಕೆ ಜಾಂಬೋಟಿಯಲ್ಲಿ ವಿಶ್ವಭಾರತಿ ಸಂಸ್ಥೆಯ ವತಿಯಿಂದ ಪುನರುತ್ಥಾನಗೊಂಡ ಶಾಲಾ ಕಟ್ಟಡವನ್ನು ಸಚಿವರು ಲೋಕಾರ್ಪಣೆಗೊಳಿಸಲಿದ್ದಾರೆ. 12.30ಕ್ಕೆ ಗಡಿ ಭಾಗದ ಶಾಲೆಗಳ ಅಭಿವೃದ್ಧಿ ಕುರಿತಂತೆ ಪ್ರಗತಿ …

Read More »

B.S.Y.&ಸಿದ್ದು ಟಾಕ್ ವಾರ್

ಬೆಂಗಳೂರು : ಶುಕ್ರವಾರ ವಿಧಾನಸಭೆ ಕಲಾಪದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನ ನಿರ್ಣಯ ಪ್ರಸ್ತಾವದ ಚರ್ಚೆಗೆ ಸಿಎಂ ಯಡಿಯೂರಪ್ಪ ಉತ್ತರ ನೀಡಿದ್ದು, ತಮ್ಮ ವಿರುದ್ಧ ವಾಗ್ಧಾಳಿ ನಡೆಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾತಿನಲ್ಲೇ ತಿವಿದಿದ್ದಾರೆ. – ಎಲ್ಲಿಯ ವರೆಗೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವರ ಬೆಂಬಲ, ರಾಜ್ಯದ ಜನರ ಆಶೀರ್ವಾದ ಇರುವುದೋ ಅಲ್ಲಿಯ ವರೆಗೆ ನನ್ನ ವಿರುದ್ಧ 100 ಕೇಸ್‌ ದಾಖಲಿಸಿದರೂ ಎದುರಿಸುವ ಶಕ್ತಿ ಇದೆ. – …

Read More »

ಕೃಷಿ ಕಾಯ್ದೆ ಖಂಡಿಸಿ ಇಂದು ರೈತರಿಂದ ಕರ್ನಾಟಕ ಸಹಿತ ದೇಶವ್ಯಾಪಿಯಾಗಿ ಹೆದ್ದಾರಿ ಬಂದ್‌

ಬೆಂಗಳೂರು/ಹೊಸದಿಲ್ಲಿ : ಕೃಷಿ ಕಾಯ್ದೆಗಳನ್ನು ಖಂಡಿಸಿ ಶನಿವಾರ ಕರ್ನಾಟಕ ಸಹಿತ ದೇಶವ್ಯಾಪಿಯಾಗಿ ರೈತ ಸಂಘಟನೆಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಬಂದ್‌ ನಡೆಸಲಿವೆ. ರಾಷ್ಟ್ರ ಮಟ್ಟದಲ್ಲಿ ಕಿಸಾನ್‌ ಮೋರ್ಚಾ ಸೇರಿ ಹಲವು ರೈತ ಸಂಘನೆಗಳು ಹೆದ್ದಾರಿ ಬಂದ್‌ನಲ್ಲಿ ಭಾಗಿ ಆಗಲಿದ್ದು, ರಾಜ್ಯದಲ್ಲಿ ಸಂಯುಕ್ತ ಹೋರಾಟ -ಕರ್ನಾಟಕ ವೇದಿಕೆ ಕಾರ್ಯಕರ್ತರು, ರೈತರ ಜತೆಗೂಡಿ ಹಲವು ಕಡೆ ರಸ್ತೆ ತಡೆ ನಡೆಸಲಿದ್ದಾರೆ. ಹಾಗೆಯೇ ರಸ್ತೆ ಮಧ್ಯೆ ಊಟ ಸಿದ್ಧಪಡಿಸಿ ಸೇವಿಸಲಿದ್ದಾರೆ. ಎಲ್ಲೆಲ್ಲಿ ಚಕ್ಕಾ …

Read More »