ಕೋಲಾರ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿದ್ದು, ಕೊರೊನಾ ವೈರಸ್ ಆತಂಕಕ್ಕೆ ಕೋಲಾರದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋಲಾರದ ಗಾಂಧಿನಗರದಲ್ಲಿ ಈ ಘಟನೆ ನಡೆದಿದ್ದು, ನಾಗರಾಜ್ (37) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗರಾಜ್ ಅವರ ತಮ್ಮನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಣ್ಣ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಮ್ಮನಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಪ್ರಾಥಮಿಕ ಸಂಪರ್ಕದಲ್ಲಿದ್ದ ತನಗೂ ಹಾಗೂ …
Read More »ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ವೈಯಕ್ತಿಕ ಮತ್ತು ಕಾನೂನು ಬೆಂಬಲವನ್ನು ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ.
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ ಹೊಸ ಮಾರ್ಗಸೂಚಿಗಳನ್ನು ರೂಪಿಸಿದ್ದು ಇದು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ವೈಯಕ್ತಿಕ ಮತ್ತು ಕಾನೂನು ಬೆಂಬಲವನ್ನು ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ 2012, ಮಗುವಿಗೆ ಮಾನಸಿಕ ಆರೋಗ್ಯ, ವೈದ್ಯಕೀಯ ನೆರವು, ಮಗು ಮತ್ತು ಮಗುವಿನ ಕುಟುಂಬದ ನಡುವೆ ಸಂಬಂಧ ಕಲ್ಪಿಸುವುದು ಮುಂತಾದ ವಿವಿಧ ರೀತಿಯ ಸಹಾಯವನ್ನು ಒದಗಿಸಲು ‘ಬೆಂಬಲಿಸುವ ವ್ಯಕ್ತಿಗಳನ್ನು(ಸಪೊರ್ಟ್ ಪರ್ಸನ್ಸ್)’ ನೇಮಕ …
Read More »ಬೆಳಗಾವಿ:ಬಿಮ್ಸ್ ಆಸ್ಪತ್ರೆಯ ಅವ್ಯವಸ್ಥೆ, ಕೋವಿಡ್-19 ರೋಗಿಗಳ ಪರಿಸ್ಥಿತಿ ಕರುಣಾಜನಕ!
ಬೆಳಗಾವಿ :ಕೋವಿಡ್-19 ರೋಗಿಗಳು ತಮಗೆ ತಾವೇ ಅಟೆಂಡರ್ ಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಆಸ್ಪತ್ರೆ ಅಧಿಕಾರಿಗಳು ಹೇಳುತ್ತಿದ್ದಾರೆ. ಕಳೆದ ವಾರ ಒಬ್ಬ ಕೋವಿಡ್ ರೋಗಿ ಇಲ್ಲಿಗೆ ದಾಖಲಾಗಿದ್ದರು. ಕೋವಿಡ್ ಅಲ್ಲದ ಅವರ ಪತ್ನಿಯೇ ಅವರ ಸಹಾಯಕರಾಗಿ ಆಸ್ಪತ್ರೆಯಲ್ಲಿ ನಿಲ್ಲಬೇಕಾಯಿತು. ನಂತರ ಅವರು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದರು. ಇದೀಗ ಪತ್ನಿಯ ಕೋವಿಡ್-19 ಪರೀಕ್ಷೆ ಮಾಡಿಸಿದ್ದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ತೀರಿಹೋದ ತಮ್ಮ ಪತಿಯ ಪರಿಸ್ಥಿತಿ ಕೊನೆಯವರೆಗೂ ಚಿಂತಾಜನಕವಾಗಿತ್ತು ಎನ್ನುತ್ತಾರೆ ಮಹಿಳೆ. ನಿನ್ನೆ ಅಥಣಿಯ …
Read More »ಗ್ಯಾಂಗ್ಸ್ಟರ್ ವಿಕಾಸ್ ದುಬೆ ವೆಬ್ ಸಿರೀಸ್ಗೆ ಟೈಟಲ್ ಫಿಕ್ಸ್
ಮುಂಬೈ: ಉತ್ತರ ಪ್ರದೇಶ ಗ್ಯಾಂಗ್ಸ್ಟರ್ ವಿಕಾಸ್ ದುಬೆ ಎನ್ಕೌಂಟರ್ ಸ್ಟೋರಿಯನ್ನು ವೆಬ್ ಸಿರೀಸ್ ಮಾಡಲು ಬಾಲಿವುಡ್ ನಿರ್ಮಾಪಕರೊಬ್ಬರು ಮುಂದಾಗಿದ್ದು, ಟೈಟಲ್ ಕೂಡ ಫಿಕ್ಸ್ ಮಾಡಲಾಗಿದೆ. ಬೀದಿ ರೌಡಿಯಾಗಿ ಜೀವನ ಆರಂಭಿಸಿದ್ದ ದುಬೆ ರಾಜಕೀಯ ನಾಯಕರ ಬೆಂಬಲದೊಂದಿಗೆ ಗ್ಯಾಂಗ್ಸ್ಟರ್ ಆಗಿ ಬೆಳೆದಿದ್ದು ಹೇಗೆ ಎಂಬ ಬಗ್ಗೆ ವೆಬ್ ಸಿರೀಸ್ ಮಾಡಲು ನಿರ್ಮಾಪಕ ಮನೀಶ್ ವಾತ್ಸಲ್ಯ ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಕ್ರೈಂ ಆಧರಿಸಿ ಹಲವು ವೆಬ್ ಸಿರೀಸ್ಗಳು ನಿರ್ಮಾಣ ಮಾಡಿ ಯಶಸ್ಸು ಪಡೆದಿದ್ದಾರೆ. …
Read More »ಆಗಸ್ಟ್ ಮೂರು ಅಥವಾ ನಾಲ್ಕನೇ ತಾರೀಖಿನಂದು ರಾಮಮಂದಿರದ ಶಿಲಾನ್ಯಾಸ ನೆರವೇರುವ ಸಾಧ್ಯತೆ
ಉಡುಪಿ: ಆಗಸ್ಟ್ ಮೂರು ಅಥವಾ ನಾಲ್ಕನೇ ತಾರೀಖಿನಂದು ರಾಮಮಂದಿರದ ಶಿಲಾನ್ಯಾಸ ನೆರವೇರುವ ಸಾಧ್ಯತೆಗಳಿವೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧಿಸಿದ ವಿಡಿಯೋ ಕಾನ್ಫರೆನ್ಸ್ ಮೂಲಕ ಟ್ರಸ್ಟಿಗಳು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾಗಿದ್ದರು. ಇವತ್ತು ನಡೆದ ಸಭೆಯಲ್ಲಿ ಮಂದಿರ ನಿರ್ಮಾಣ ಕ್ಕೆ ಭೂಮಿಯ ಧಾರಣಾ ಸಾಮರ್ಥ್ಯ ಅಧ್ಯಯನ ಮತ್ತು ಮಂದಿರ ನಿರ್ಮಾಣ ಮೊತ್ತದ ಕ್ರೋಢೀಕರಣದ ಬಗ್ಗೆ ಚರ್ಚೆಯಾಗಿದೆ. ಈ ಬಗ್ಗೆ ಉಡುಪಿಯಲ್ಲಿ ಮಾಧ್ಯಮಗಳಿಗೆ ಪೇಜಾವರ …
Read More »ರಾಜ್ಯದಲ್ಲಿ ವೆಂಟಿಲೇಟರ್ ಖರೀದಿ ಹಗರಣ ಆರೋಪ- ‘ಉತ್ತರ ಕೊಡಿ ಬಿಜೆಪಿ’ ಎಂದ ಡಿಕೆಶಿ
ಬೆಂಗಳೂರು: ಕೊರೊನಾ ಚಿಕಿತ್ಸಾ ಉಪಕರಣ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ಲೆಕ್ಕಕೊಡಿ ಅಭಿಯಾನ ಆರಂಭಿಸಿದ್ದರು. ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ‘ಉತ್ತರ ಕೊಡಿ ಬಿಜೆಪಿ’ ಅಂತಾ ಸಮರ ಸಾರಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ವೆಂಟಿಲೇಟರ್ ಹಗರಣದ ಆರೋಪ ಮಾಡಿದ್ದಾರೆ. ತಮಿಳುನಾಡು ಸರ್ಕಾರ ತಲಾ 4.78 ಲಕ್ಷ ರೂಪಾಯಿಗೆ ಖರೀದಿಸಿದ ವೆಂಟಿಲೇಟರ್ ಗೆ ಕರ್ನಾಟಕ ಸರ್ಕಾರ 18.20 ಲಕ್ಷ ರೂಪಾಯಿ …
Read More »ಬೆಂಗಳೂರಲ್ಲಿ ಲಾಕ್ಡೌನ್ ಮುಂದುವರಿಯುತ್ತಾ?- ಸಚಿವರಲ್ಲಿ ಗೊಂದಲವೋ, ಗೊಂದಲ
ಬೆಂಗಳೂರು: ಲಂಗು ಲಗಾಮಿಲ್ಲದೇ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಕೊರೊನಾ ಮಾರಿ ಬೆಂಗಳೂರಲ್ಲಿ ಕಂಟ್ರೋಲ್ ಸಿಗುತ್ತಿಲ್ಲ. ಒಂದು ವಾರ ಸಾವಿರ ರೇಂಜ್ನಲ್ಲಿದ್ದ ಸೋಂಕು ಈಗ 2 ಸಾವಿರ ರೇಂಜ್ಗೆ ಬಂದಿದೆ. ಕಳೆದ ಮೂರು ದಿನಗಳಿಂದ 2 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗ್ತಿವೆ. ಇದನ್ನರಿತ ಸರ್ಕಾರ ಒಂದು ವಾರ ಬೆಂಗಳೂರಿಗೆ ಬೀಗ ಜಡಿದಿದೆ. ಅದರಲ್ಲಿ ಈಗ 3 ದಿನ ಕಳೆದು ಹೋಗಿದೆ. ಉಳಿದಿರೋದು ಇನ್ನೂ ನಾಲ್ಕು ದಿನ ಮಾತ್ರ. ಅಷ್ಟರಲ್ಲಿ ಕೊರೊನಾ ಕಂಟ್ರೋಲ್ಗೆ ಸಿಗುತ್ತಾ? …
Read More »ಉಸಿರಾಟದ ತೊಂದರೆಯಿಂದ ನಡುರಸ್ತೆಯಲ್ಲೇ ನರಳಾಡಿದ ಕೊರೊನಾ ಶಂಕಿತ
ಗದಗ: ಕೊರೊನಾ ಶಂಕಿತ ವ್ಯಕ್ತಿಯೋರ್ವ ನಡುರಸ್ತೆಯಲ್ಲಿ ಬಿದ್ದು ನರಳಾಡುತ್ತಿರುವ ದೃಶ್ಯ ಗದಗ ನಗರದ ಬೆಟಗೇರಿ ಭಾಗದಲ್ಲಿ ಕಂಡು ಬಂದಿದೆ. ನಡುರಸ್ತೆಯಲ್ಲಿ ನರಳಾಡಿದ ವ್ಯಕ್ತಿ ನಗರದ ಕುರಹಟ್ಟಿಪೆಟೆ ನಿವಾಸಿ ಎನ್ನಲಾಗಿದೆ. ಗಂಟಲು ನೋವು, ಹೊಟ್ಟೆ ಉರಿ, ಎದೆ ಉರಿ ಎಂದು ಎದೆ ಬಡಿದುಕೊಂಡು ನರಳಾಡುತ್ತಿದ್ದರೂ ಯಾರು ಮುಟ್ಟಿಲ್ಲ. ಕೂಡಲೇ 108 ವಾಹನಕ್ಕೆ ಫೋನ್ ಮಾಡಿದರೂ ವಾಹನ ಬರಲಿಲ್ಲ. ಒಂದು ಗಂಟೆ ತಡವಾಗಿ ಬಂದಿದ್ದಕ್ಕೆ ಸ್ಥಳೀಯರು ಅಂಬುಲೆನ್ಸ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. …
Read More »ಮೂಡಲಗಿ ತಾಲೂಕಿನಲ್ಲಿ ಮೊದಲ ಬಲಿ ಪಡೆದ ಕೊರೋನಾ
ಮೂಡಲಗಿ : ನಿನ್ನೆ ತಾನೇ ಮೂಡಲಗಿಗೆ ಪ್ರವೇಶಿಸಿದ ಕೊರೋನಾ ಇಂದು ಮೊದಲ ಬಲಿ ಪಡೆದು ಮೂಡಲಗಿ ಜನತೆಗೆ ಆತಂಕ ಹೆಚ್ಚಿಸುವಂತೆ ಮಾಡಿದೆ. ಹೌದು ನಿನ್ನೆ ತಾನೆ ಮೊದಲಿಗೆ ಪಟ್ಟಣದ ತಳವಾರ ಓಣಿಯಲ್ಲಿ 38 ವರ್ಷದ ಮಹಿಳೆಗೆ ಕೊರೋನಾ ದೃಢವಾಗಿತ್ತು. ಇಂದು ಆ ಮಹಿಳೆ ಮೃತಪಟ್ಟಿದ್ದು, ಮೂಡಲಗಿಯ ಸಾರ್ವಜನಿಕ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಡಿ ಜಿ ಮಹಾತ್, ಪೊಲೀಸ್ ಇಲಾಖೆಯ ಸಿಪಿಐ ವೆಂಕಟೇಶ್ ಮುರನಾಳ, ಪಿಎಸ್ಐ …
Read More »ಕಂಟೈನ್ಮೆಂಟ್ ಪ್ರದೇಶದಲ್ಲೇ ವೈನ್ಶಾಪ್ ಓಪನ್- ಪಾನಮತ್ತರಿಂದ ಬೇಸತ್ತ ಸ್ಥಳೀಯರು
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಕಂಟೈನ್ಮೆಂಟ್ ಪ್ರದೇಶದಲ್ಲಿ ಎಲ್ಲವೂ ಬಂದ್ ಇದ್ದು, ವೈನ್ಶಾಪ್ ಮಾತ್ರ ಓಪನ್ ಮಾಡಲಾಗಿದೆ. ಗ್ರಾಮದಲ್ಲಿ ಪಾಸಿಟಿವ್ ಕೇಸ್ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಅನೇಕ ಏರಿಯಾಗಳನ್ನಿ ಸೀಲ್ ಡೌನ್ ಮಾಡಲಾಗಿದೆ. ಕಂಟೈನ್ಮೆಂಟ್ ಪ್ರದೇಶದಲ್ಲಿರುವ ಎಲ್ಲಾ ಅಂಗಡಿ ಮುಗ್ಗಟ್ಟುಗಳು, ಜನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಆದರೆ ಕಂಟೈನ್ಮೆಂಟ್ ಪ್ರದೇಶದಲ್ಲಿ ಪ್ರಭಾವಿಯೊಬ್ಬರ ವೈನ್ಶಾಪ್ ಮಾತ್ರ ಓಪನ್ ಮಾಡಿದ್ದಾರೆ. ಪಾನಮತ್ತರ ಹಾವಳಿಯಿಂದ ಸ್ಥಳೀಯರು ಬೆಸತ್ತಿದ್ದಾರೆ. …
Read More »