Breaking News

ದ. ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ; ಜು.18 ರಂದು ಶಾಲಾ – ಕಾಲೇಜುಗಳಿಗೆ ರಜೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 18) ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಈ ಆದೇಶ ಹೊರಡಿಸಿದ್ದಾರೆ. ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ …

Read More »

ರಾಜ್ಯದ ಹಲವೆಡೆ ವರುಣನ ಅಬ್ಬರ – ಅನ್ನದಾತನ ಮೊಗದಲ್ಲಿ ಸಂತಸ

ಬೀದರ್‌: ಜಿಲ್ಲೆಯ  ಹಲವೆಡೆ ಒಂದು ಗಂಟೆಯಿಂದ ಸುರಿದ ಧಾರಾಕಾರ ಮಳೆಗೆ  ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬೀದರ್, ಹುಮ್ನಾಬಾದ್, ಚಿಟ್ಟಗುಪ್ಪ, ಬಸವಕಲ್ಯಾಣ, ಔರಾದ್ ಸೇರಿದಂತೆ ಜಿಲ್ಲೆಯಾದ್ಯಂತ ಬಿರುಗಾಳಿ, ಸಿಡಿಲು ಸಹಿತ ಮಳೆಯಾಗಿದೆ. ರಾಯಚೂರು: ಮಳೆಯಿಲ್ಲದೆ ಕಂಗೆಟ್ಟಿದ್ದ ಬಿಸಿಲನಾಡು ರಾಯಚೂರು  ಜಿಲ್ಲೆಯಲ್ಲಿ ಕೊನೆಗೂ ಮಳೆರಾಯ ದರ್ಶನ ನೀಡಿದ್ದಾನೆ. ರಾಯಚೂರು ಜಿಲ್ಲೆಯಾದ್ಯಂತ ಗುಡುಗು ಮಿಂಚು ಸಹಿತ ಜೋರು ಮಳೆಯಾಗಿದೆ. ಸುಮಾರು ಒಂದು ಗಂಟೆ ಕಾಲ ಮಳೆ ಸುರಿದಿದೆ. ಮುಂಗಾರು ಆರಂಭವಾದಾಗಿನಿಂದ ಮಳೆ ಬಾರದೇ ರೈತರು …

Read More »

ಅರಣ್ಯ ಸಿಬ್ಬಂದಿ ಮೇಲೆಯೇ ಜೀಪ್‌ ಹತ್ತಿಸಲು ಯತ್ನಿಸಿದ ಆರೋಪ – ಕಳ್ಳ ಬೇಟೆಗಾರರ ಮೇಲೆ ಫೈರಿಂಗ್‌

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ಕಳ್ಳಬೇಟೆಗೆ ಕಡಿವಾಣ ಹಾಕಲು ಅರಣ್ಯ ಇಲಾಖೆ ಮುಂದಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆಯೇ ಜೀಪ್ ಹತ್ತಿಸಲು ಯತ್ನಿಸಿದ ಆರೋಪದ ಮೇಲೆ ಆತ್ಮರಕ್ಷಣೆಗಾಗಿ ಸಿಬ್ಬಂದಿ ಗುಂಡು ಹಾರಿಸಿದ್ದು, ಇಬ್ಬರು ಕಳ್ಳ ಬೇಟೆಗಾರರು ಗಾಯಗೊಂಡಿದ್ದಾರೆ. ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಕಾಡುಕೋಣ ಬೇಟೆಯಾಡಿ ಜೀಪ್‌ನಲ್ಲಿ ಮಾಂಸ ಸಾಗಿಸುತ್ತಿದ್ದ ಇಬ್ಬರು ಕಳ್ಳಬೇಟೆಗಾರರನ್ನ ಅರಣ್ಯ ಇಲಾಖೆ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಆರೋಪಿಗಳು ಜೀಪನ್ನು …

Read More »

ಬಟಕುರ್ಕಿ ಇಂದಿರಾಗಾಂಧಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಭೇಟಿ

ತಾಲೂಕಿನ ಬಟಕುರ್ಕಿ ಇಂದಿರಾಗಾಂಧಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಬುಧವಾರ ಭೇಟಿ ನೀಡಿ ಮೂಲಸೌಕರ್ಯ ಹಾಗೂ ವ್ಯವಸ್ಥೆ ಪರಿಶೀಲಿಸಿದರು. ಶಾಲೆಯಲ್ಲಿನ ಬೋಧನಾ ಕೊಠಡಿ, ವಸತಿ ಕಟ್ಟಡ ಹಾಗೂ ವಿಜ್ಞಾನ ಪ್ರಯೋಗಾಲಯ ಸೇರಿದಂತೆ ಮೂಲ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಪರಿತಪಿಸುತ್ತಿರುವ ಕುರಿತು ಜು.11ರಂದು “ವಸತಿ ಶಾಲೆಗೆ ಬೇಕು ಸೌಕರ್ಯ’ ಶೀರ್ಷಿಕೆಯಡಿ ವಿಜಯವಾಣಿ ವಿಶೇಷ ವರದಿ ಪ್ರಕಟಿಸಿತ್ತು. ಪರಿಶೀಲನೆ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಕನ್ನೊಳ್ಳಿ …

Read More »

ಮೀನುಗಾರರ ಜೀವನ ಸುಧಾರಣೆಗೆ ಒತ್ತು

ಸರ್ಕಾರವು ಮೀನುಗಾರರ ಆರ್ಥಿಕ ಸ್ಥಿತಿ ಸುಧಾರಿಸಲು ಮತ್ತು ಸ್ವಾವಲಂಬಿಗಳನ್ನಾಗಿ ಮಾಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು. ಪಿಕಾರ್ಡ್​ ಬ್ಯಾಂಕ್​ ಆವರಣದಲ್ಲಿ ಈಚೆಗೆ ಲಾನುಭವಿಗಳಿಗೆ ಕಿಟ್​ ಹಾಗೂ ವಾಹನದ ಕೀ ಹಸ್ತಾಂತರಿಸಿ ಮಾತನಾಡಿದ ಅವರು, ಮೀನುಗಾರರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಮೀನುಗಾರಿಕೆ ಇಲಾಖೆ ವತಿಯಿಂದ ಅರ್ಹ ಲಾನುಭವಿಗಳಿಗೆ ಮೀನು ಸಲಕರಣೆ ಕಿಟ್​ ಮತ್ತು ನಾಲ್ಕು ಚಕ್ರದ ವಾಹನಗಳನ್ನು ವಿತರಿಸಲಾಗುತ್ತಿದೆ ಎಂದರು. ಬೆಮುಲ್​ ನಿರ್ದೇಶಕ ರಾಯಪ್ಪ …

Read More »

ನಮೂನೆ ಸಲ್ಲಿಸದಿದ್ದರೆ ಹೆಸರು ಕೈಬಿಡಲಾಗುವುದು

ಬೆಳಗಾವಿ ಮಹಾನಗರ ಪಾಲಿಕೆಯ ಎಸ್‌ಐಆರ್ ಕೇಂದ್ರದಲ್ಲಿ ನಡೆಯುತ್ತಿರುವ ಗಣಕೀಕರಣ ಕಾರ್ಯವನ್ನು ಡಾ. ಸಿದ್ದು ಹುಲ್ಲೋಳಿ ಹಾಗೂ ಉದಯಕುಮಾರ ಟಿ. ಪರಿಶೀಲಿಸಿದರು. ಬೆಳಗಾವಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ವಿತರಿಸಲಾದ ನಮೂನೆಗಳನ್ನು ಭರ್ತಿ ಮಾಡಿ ನಿಗದಿತ ಅವಧಿಯಲ್ಲಿ ಸಲ್ಲಿಸದಿದ್ದರೆ ಸಂಬಂಧಿತ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್. ಎಂ ಎಚ್ಚರಿಕೆ ನೀಡಿದರು. ಶುಕ್ರವಾರ ನಗರದ ಉತ್ತರ ಹಾಗೂ ದಕ್ಷಿಣ ವಿಧಾನಸಭಾ …

Read More »

ಶಿಕ್ಷಕರಿಂದ ಹಲ್ಲೆ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ, ವಿದ್ಯಾರ್ಥಿ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ನಡೆಸಿದ ತನಿಖೆ ವೇಳೆ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರ ಹಲ್ಲೆ ನಡೆಸಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿ ತಂದೆ, ಚಿಕ್ಕಬಸ್ತಿಯ ರಾಮಸಂದ್ರ ನಿವಾಸಿ ಮಹೇಶ್ ಕುಮಾರ್ ಎಂಬುವರು ನೀಡಿದ ದೂರಿನ ಮೇರೆಗೆ ಜ್ಞಾನಭಾರತಿ ಠಾಣೆ ಪೊಲೀಸರು ಮರಿಯಪ್ಪನಪಾಳ್ಯದಲ್ಲಿನ ಸೇಂಟ್ ಫಿಲೋಮಿನ ಶಾಲೆ ಆಡಳಿತ ಮಂಡಳಿ ಸಂಸ್ಥಾಪಕ ಕಾರ್ಯದರ್ಶಿ ರಂಗಸ್ವಾಮಿ, ಪ್ರಾಂಶುಪಾಲ …

Read More »

ಬೆಳಗಾವಿಯಲ್ಲಿ ಸಹೋದರರ ಭೀಕರ ಕೊಲೆ

ಬೆಳಗಾವಿ: ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದ ಕ್ಷುಲ್ಲಕ ಕಾರಣದ ಜಗಳವೊಂದು ಇಬ್ಬರು ಸಹೋದರರ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ. ಲಗಮಪ್ಪ ರಾಮಣ್ಣವರ (32) ಹಾಗೂ ಬಸಪ್ಪ ರಾಮಣ್ಣವರ (38) ಕೊಲೆಯಾದ ದುರ್ದೈವಿ ಸಹೋದರರು. ಮೃತ ಸಹೋದರರು ಹಾಗೂ ಅವರ ಸಂಬಂಧಿಕರ ನಡುವೆ ಕೌಟುಂಬಿಕ ವಿಚಾರವಾಗಿ ಜಗಳ ಆರಂಭವಾಗಿದೆ.  ಮಾತಿನ ಚಕಮಕಿಯಾಗಿದ್ದ ವಾಗ್ವಾದ, ಕ್ಷಣಾರ್ಧದಲ್ಲೇ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ವೇಳೆ ಉದ್ರಿಕ್ತಗೊಂಡ …

Read More »

ಅರಿವು ಮೂಡಿಸಿ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಪಿಆರ್‌ಗಳ ಪಾತ್ರ ಪ್ರಮುಖ: ಡಾ. ಕರ್ನಲ್‌ ಎಂ ದಯಾನಂದ

ಬೆಳಗಾವಿ: ಆಸ್ಪತ್ರೆಯಲ್ಲಿ ಕೆಲಸ ಮಾಡುವಾಗ ಹಲವಾರು ಸಮಸ್ಯೆಗಳು, ಒತ್ತಡಗಳು, ಅಸಮಾಧಾನಗಳು, ಬೇಡಿಕೆಗಳಿರುತ್ತವೆ. ಆದರೆ ಅವುಗಳನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಜನಸಂಪರ್ಕ ಅಧಿಕಾರಿಗಳು ನಿಸ್ಸಿಮರು. ಅವರು ಆಸ್ಪತ್ರೆಯಲ್ಲಿದ್ದರೂ, ಇಲ್ಲದಿದ್ದರೂ ಕೆಲಸದ ಮಹತ್ವ ಒಂದೇ ಆಗಿರುತ್ತದೆ. ಆಸ್ಪತ್ರೆಗಳ ಬಗ್ಗೆ ಜನರ ಮನೋಭಾವ ಸ್ವಲ್ಪ ನಕಾರಾತ್ಮಕವಾಗಿದ್ದು, ಹಣ ಹೆಚ್ಚು ಖರ್ಚಾಗುತ್ತದೆ ಎಂಬ ಭಾವನೆ.  ಅದನ್ನು ಹೋಗಲಾಡಿಸಿ ಜನರಿಗೆ ಅರಿವು ಮೂಡಿಸಿ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಜನಸಂಪರ್ಕ ಅಧಿಕಾರಿಗಳು ಪ್ರಮುಖ ಪಾತ್ರವಹಿಸುತ್ತಾರೆ ಎಂದು ಕೆಎಲ್‌ಇ ಸಂಸ್ಥೆಯ ಡಾ. …

Read More »

ಪಿಜಿ ಕೋರ್ಸ್‌ಗಳ ಪ್ರವೇಶ ದಿನಾಂಕ ವಿಸ್ತರಿಸಿದ ಆರ್‌ಸಿಯು

ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿ ಮುಖ್ಯ ಆವರಣದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರ ವಿಜಯಪುರ ಹಾಗೂ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿನ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿರುವ ಸ್ನಾತಕೋತ್ತರ ಕೋರ್ಸುಗಳ ವ್ಯಾಸಂಗಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಯು.ಯು.ಸಿ.ಎಂ.ಎಸ್ ತಂತ್ರಾಂಶ (UUCMS) https://uucms.karnataka.gov.in. ಮೂಲಕ ಅರ್ಜಿಗಳನ್ನು ದಿನಾಂಕ: 01-07-2026 ರಿಂದ ದಿನಾಂಕ:   20-07-2026. ಆಹ್ವಾನಿಸಲಾಗಿತ್ತು. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಸ್ನಾತಕೋತ್ತರ ಪ್ರವೇಶಾತಿ ಅರ್ಜಿ ಸಲ್ಲಿಸುವ ದಿನಾಂಕವನ್ನು ದಿನಾಂಕ: 21-07-2026 ರಿಂದ 26-07-2026ರ ವರೆಗೆ …

Read More »