ಆನೇಕಲ್: ಇಂದು ಬೆಳಗ್ಗೆ ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮುತ್ಯಾಲಮಡು ಬಳಿ ವೇಲು ಅಲಿಯಾಸ್ ಸೈಕೋ, ಬಾಲಕೃಷ್ಣ ಅಲಿಯಾಸ್ ಬಾಲ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಕಳೆದ ಒಂದು ವಾರದ ಹಿಂದೆ ಆರೋಪಿಗಳು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕು ವ್ಯಾಪ್ತಿಯ ಸಿಂಗೇನ ಅಗ್ರಹಾರ ಬಳಿ ಒಂಟಿ ಮಹಿಳೆ ಕೊಲೆ ಮಾಡಿ ಮನೆಯಲ್ಲಿ ಕಳ್ಳತನ ಮಾಡಿದ್ದರು. ನಿನ್ನೆ ರಾತ್ರಿ ಆರೋಪಿಗಳ ಬಂಧನಕ್ಕೆ ಪೊಲೀಸರು ತೆರಳಿದ್ರು. ಈ ವೇಳೆ ಆರೋಪಿಗಳು …
Read More »ಸ್ಯಾಂಡಲ್ವುಡ್ Drugs ಜಾಲ: ನಟ ಯೋಗಿ, ಕ್ರಿಕೆಟಿಗ NC ಅಯ್ಯಪ್ಪ ವಿಚಾರಣೆ
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್ಗೆ ಸಂಬಂಧಿಸಿದಂತೆ ನಟ ಲೂಸ್ ಮಾದ ಯೋಗೀಶ್ ಹಾಗೂ ಮಾಜಿ ಕ್ರಿಕೆಟಿಗ NC ಅಯ್ಯಪ್ಪರ ವಿಚಾರಣೆ ಸಹ ನಡೆಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸರಿಂದ ವಿಚಾರಣೆ ನಡೆದಿದ್ದು ಡ್ರಗ್ ಪೆಡ್ಲರ್ ಒಬ್ಬನ ಹೇಳಿಕೆ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು ಎಂದು ಹೇಳಲಾಗಿದೆ. ಇಬ್ಬರನ್ನು ಶಾಂತಿನಗರದ ಕೇಂದ್ರ ಕಚೇರಿಯಲ್ಲಿ ವಿಚಾರಣೆ ಮಾಡಿದ್ದೇವೆ ಎಂದು ಆಂತರಿಕ ಭದ್ರತಾ ವಿಭಾಗದ ADGP ಭಾಸ್ಕರ್ …
Read More »12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸರಣಿ ಬಾಂಬ್ ಸ್ಫೋಟ ಆರೋಪಿ CCB ಬಲೆಗೆ
ಬೆಂಗಳೂರು: ಕಳೆದ 12 ವರ್ಷಗಳ ಹಿಂದೆ ಮಡಿವಾಳ ಸೇರಿದಂತೆ 9 ಕಡೆಗಳಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇಂದ್ರ ತನಿಖಾ ಸಂಸ್ಥೆಯ ನೆರವಿನೊಂದಿಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೊಯೇಬ್ ಬಂಧಿತ ಆರೋಪಿ. ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ಸಿಸಿಬಿ ಪೊಲೀಸರು ಕೇರಳಕ್ಕೆ ಕರೆ ತರುತ್ತಿದ್ದಾರೆ. ಮಡಿವಾಳ ಸೇರಿದಂತೆ 9 ಕಡೆಗಳಲ್ಲಿ ಬಾಂಬ್ ಸ್ಪೋಟದಲ್ಲಿ ಭಾಗಿಯಾಗಿದ್ದ. ಕೃತ್ಯದಲ್ಲಿ ಓರ್ವ ಬಲಿಯಾದರೆ 20 ಮಂದಿ ಗಾಯಗೊಂಡಿದ್ದರು. ಬಳಿಕ ಅದೇ …
Read More »ಆರ್ಸಿಯುಗೆ 126 ಎಕರೆ ಮಂಜೂರು.
ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ 126 ಎಕರೆ 27 ಗುಂಟೆ ಜಮೀನನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ. ಇದರೊಂದಿಗೆ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಹಾಗೂ ವಿಸ್ತರಣೆಗೆ ಉಂಟಾಗಿದ್ದ ಜಾಗದ ಕೊರತೆ ನಿವಾರಣೆಯಾದಂತಾಗಿದೆ. ‘ತಾಲ್ಲೂಕಿನ ಬಾಗೇವಾಡಿ (ಸಂಕನಾಯ್ಕನಕೊಪ್ಪ) ಗ್ರಾಮದ ರಿ.ಸ.ನಂ. 421/2, 423, 426, 427, 429 ಮತ್ತು 431ರಲ್ಲಿ 87 ಎಕರೆ 39 ಗುಂಟೆ ಹಾಗೂ ಹಾಲಗಿಮರ್ಡಿ ಗ್ರಾಮದ ರಿ.ಸ.ನಂ. 48, 48 ಹಾಗೂ 49ರ …
Read More »ಗುಡ್ ನ್ಯೂಸ್ : ರಾಜ್ಯದಲ್ಲಿ ಇಳಿಯುತ್ತಿದೆ ಕೊರೋನಾ
ಬೆಂಗಳೂರು : ರಾಜ್ಯದಲ್ಲಿ ಸೋಮವಾರ 7,339 ಮಂದಿಗೆ ಸೋಂಕು ದೃಢಪಟ್ಟಿದ್ದು 122 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5.26 ಲಕ್ಷಕ್ಕೆ ಹಾಗೂ ಕೊರೋನಾ ಸಾವಿನ ಸಂಖ್ಯೆ 8,145ಕ್ಕೆ ಏರಿಕೆಯಾಗಿದೆ. ಆದರೆ ಸಕ್ರಿಯ ಸೋಂಕಿತರ ಸಂಖ್ಯೆ 98 ಸಾವಿರದಿಂದ 95,335ಕ್ಕೆ ಇಳಿದಿದೆ. ಇದೇ ವೇಳೆ 9,925 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 4.23 ಲಕ್ಷಕ್ಕೆ ಏರಿಕೆಯಾಗಿದೆ. ಸೋಮವಾರ ಒಟ್ಟು 42,691 ಪರೀಕ್ಷೆ ನಡೆಸಿದ್ದು, …
Read More »ಗುತ್ತಿಗೆ ಆಧಾರದ NHM ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿಶೇಷ ಹೆಚ್ಚುವರಿ ಭತ್ಯೆ
ಬೆಂಗಳೂರು : ರಾಜ್ಯ ಸರ್ಕಾರವು ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ದಡಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 14,252 ವಿವಿಧ ಹುದ್ದೆಗಳಿಗೆ ವಿಶೇಷ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರ ಆದೇಶಿಸಿದೆ. ಆಯುಷ್ ಮತ್ತು ಎಂಬಿಬಿಎಸ್ ವೈದ್ಯರು ಹಾಗೂ ತಜ್ಞರಿಗೆ 10 ಸಾವಿರ ರೂ. ಶುಶ್ರೂಷಕಿಯರಿಗೆ ಎ.ಎನ್. ಎಂ ಲ್ಯಾಬ್ ಟೆಕ್ನೀಷಿಯನ್ ಹಾಗೂ ಫಾರ್ಮಾಸಿಸ್ಟ್ ಗಳಿಗೆ ತಲಾ 5 ಸಾವಿರ ರೂ. ನಂತೆ ಮುಂದಿನ ಆರು ತಿಂಗಳ …
Read More »ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಆರಂಭ
ಹುಬ್ಬಳ್ಳಿ: ಕೊರೊನಾ ಲಾಕ್ಡೌನ್ ನಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ- ಮಹಾರಾಷ್ಟ್ರ ಬಸ್ ಸಂಚಾರವನ್ನು ಇದೀಗ ಮತ್ತೆ ಆರಂಭಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಆದರೆ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವುದರಿಂದ ರಾಜ್ಯದಲ್ಲಿ ಜನರಲ್ಲಿ ಆತಂಕ ಹೆಚ್ಚಾಗಿದೆ. ಮೊದಲ ಹಂತದಲ್ಲಿ ವಿಜಯಪುರ ಹಾಗೂ ಚಿಕ್ಕೋಡಿ ಮಾರ್ಗವಾಗಿ ಮಹಾರಾಷ್ಟ್ರದ ಪ್ರಮುಖ ಸ್ಥಳಗಳಾದ ಸೊಲ್ಲಾಪುರ, ಬಾರ್ಶಿ, ಫಂಡರಪುರ, ಔರಂಗಬಾದ್, ಈಚಲಕರಂಜಿ, ಮೀರಜ್ ಮತ್ತಿತರ ಸ್ಥಳಗಳಿಗೆ …
Read More »ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ- ಜಾರ್ಜ್ಗೆ ಸಮನ್ಸ್ ಜಾರಿ
ಮಡಿಕೇರಿ: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿಚಾರ ಖುಷಿ ತಂದಿದೆ. ಮತ್ತೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಡಿವೈಎಸ್ಪಿ ಗಣಪತಿ ತಂದೆ ಕುಶಾಲಪ್ಪ ಹಾಗೂ ಗಣಪತಿ ಸಹೋದರ ಮಚ್ಚಯ್ಯ ಸಂತಸ ವ್ಯಕ್ತಪಡಿಸಿದರು. ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತಾನಾಡಿದ ಅವರು, ಗಣಪತಿ ಅವರು ಮರಣ ಹೊಂದಿದ ನಂತರ ನ್ಯಾಯಕ್ಕಾಗಿ ಗಣಪತಿ ಕುಟುಂಬಸ್ಥರು ಹೋರಾಟ …
Read More »ಒಪ್ಪಿಗೆಯಿಲ್ಲದೆ ಫೋಟೋ ಬಳಕೆ- ಆ್ಯಪ್ ಕಂಪನಿ ವಿರುದ್ಧ ಸಂಸದೆ ದೂರು
ಕೋಲ್ಕತ್ತಾ: ವಿಡಿಯೋ ಚಾಟ್ ಆ್ಯಪ್ ‘ಫ್ಯಾನ್ಸಿಯೂ’ ಪ್ರಚಾರಕ್ಕಾಗಿ ಒಪ್ಪಿಗೆಯಿಲ್ಲದೆ ನನ್ನ ಫೋಟೋವನ್ನು ಬಳಸಿದೆ ಎಂದು ನಟಿ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಕೋಲ್ಕತ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ನಟಿ ನುಸ್ರತ್ ಜಹಾನ್ ಟ್ವೀಟ್ ಮಾಡುವ ಮೂಲಕ ತಮ್ಮ ಫೋಟೋವನ್ನು ಬಳಸಿರುವುದಾಗಿ ದೂರು ನೀಡಿದ್ದಾರೆ. ಅಲ್ಲದೇ ವಿಡಿಯೋ ಚಾಟ್ ಆ್ಯಪ್ಗಾಗಿ ಜಾಹೀರಾತಿ ನೀಡಿರುವ ಸ್ಕ್ರೀನ್ಶಾಟ್ ಕ್ಲಿಕ್ಕಿಸಿಕೊಂಡಿದ್ದು, ಆ ಫೋಟೋವನ್ನು ಟ್ವಿಟ್ಟರಿನಲ್ಲಿ ಶೇರ್ ಮಾಡಿದ್ದಾರೆ. ನಂತರ ಈ ಟ್ವೀಟನ್ನು ಕೋಲ್ಕತಾ …
Read More »ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ಓರ್ವ ವೈದ್ಯ ಹಾಗೂ ನರ್ಸ್ ಮೇಲೆ ಹಲ್ಲೆ
ಬೆಳಗಾವಿ- ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ಓರ್ವ ವೈದ್ಯ ಹಾಗೂ ನರ್ಸ್ ಮೇಲೆ ಹಲ್ಲೆ ಮಾಡಿದ ಘಟನೆ ತಡರಾತ್ರಿ ನಡೆದಿದೆ ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ತಡರಾತ್ರಿ ಮಹಿಳೆಯೊಬ್ಬಳಿಗೆ ಉಸಿರಾಟದ ತೊಂದರೆ ಆಗುತ್ತಿದೆ ಎಂದು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ, ಕೆಲ ಹೊತ್ತಿನಲ್ಲಿಯೇ ಮಹಿಳೆ ಮೃತಪಟ್ಟಿದ್ದಾಳೆ,ಆದ್ರೆ ಅವಳಿಗೆ ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ ಎಂದು ಆರೋಪಿಸಿ,ಮೃತ ಮಹಿಳೆಯ ಸಮಂಧಿಕರು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ ಮಹಿಳೆ ಸಾವನ್ನೊಪ್ಪುತ್ತಿದ್ದಂತೆಯೇ ಆಸ್ಪತ್ರೆಯಲ್ಲಿ ಗದ್ದಲ …
Read More »