ಬೆಂಗಳೂರು : ರಾಜ್ಯದಲ್ಲಿ ಭಾನುವಾರ ಹೊಸದಾಗಿ 8,445 ಮಂದಿಯಲ್ಲಿ ಕೊರೋನಾ ಕಾಣಿಸಿಕೊಂಡಿದ್ದು, 8,611 ಮಂದಿ ಗುಣಮುಖರಾಗಿದ್ದಾರೆ. ಇದೇ ದಿನ 101 ಮಂದಿ ಮೃತಪಟ್ಟಿದ್ದು ಈವರೆಗೆ ಸಾವಿಗೀಡಾದವರ ಸಂಖ್ಯೆ ಸಂಖ್ಯೆ 8 ಸಾವಿರದ ಸಂಖ್ಯೆ ದಾಟಿ 8023ಕ್ಕೆ ಏರಿದೆ. ಸೆಪ್ಟೆಂಬರ್ 11ರಂದು ಸಾವಿನ ಸಂಖ್ಯೆ 7 ಸಾವಿರ ದಾಟಿತ್ತು. ಆ ನಂತರದ 10 ದಿನದಲ್ಲಿ 1000 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ನಡುವೆ, 8,611 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗುವುದರೊಂದಿಗೆ ಈವರೆಗೆ 4.13 ಲಕ್ಷ ಜನರು …
Read More »ಶಾಸಕರು ಸಚಿವರೇ ಬಿಎಸ್ವೈ ವಿರುದ್ಧ ಹೈಕಮಾಂಡ್ಗೆ ದೂರು ನೀಡಿದ್ದು:H.D.D.
ನವದೆಹಲಿ: ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿ ಬರುತ್ತಿದೆ. ಶಾಸಕರು ಸಚಿವರೇ ಬಿಎಸ್ವೈ ವಿರುದ್ಧ ಹೈಕಮಾಂಡ್ಗೆ ದೂರು ನೀಡಿದ್ದು ಬಿ.ವೈ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸಿಎಂ ಬಿಎಸ್ವೈ ದೆಹಲಿ ಪ್ರವಾಸ ವೇಳೆ ಈ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದ್ದು, ವಿರೋಧದ ನಡುವೆಯೇ ಬಿಎಸ್ವೈ ಮತ್ತಷ್ಟು ದಿನಗಳ ಕಾಲ ಮುಂದುವರಿಯಲು ಹೈಕಮಾಂಡ್ ಸೂಚನೆ ನೀಡಿದೆ . ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು …
Read More »ಕನ್ನಡಿಗ ಅಗರ್ವಾಲ್ ಸ್ಫೋಟಕ ಆಟ – ಸೂಪರ್ ಓವರ್ನಲ್ಲಿ ಡೆಲ್ಲಿಗೆ ಜಯ
ದುಬೈ: ಕನ್ನಡಿಗ ಮಯಾಂಕ್ ಅಗರ್ವಾಲ್ ಸ್ಫೋಟಕವಾಗಿ ಆಡಿದ್ದರೂ ವಿಜಯ ಲಕ್ಷ್ಮಿ ಪಂಜಾಬ್ ತಂಡದ ಕೈ ಹಿಡಿಯಲಿಲ್ಲ. ಸೂಪರ್ ಓವರಿನಲ್ಲಿ ಡೆಲ್ಲಿ ತಂಡ ಪಂಜಾಬ್ ತಂಡವನ್ನು ಸೋಲಿಸಿ ಶುಭಾರಂಭ ಮಾಡಿದೆ. ಗೆಲ್ಲಲು 157 ರನ್ಗಳ ಸುಲಭ ಸವಾಲನ್ನು ಪಡೆದಿದ್ದರೂ ಪಂಜಾಬ್ ತಂಡ ಬೇಗನೇ ವಿಕೆಟ್ ಕಳೆದುಕೊಂಡಿತ್ತು. ಆದರೆ ಒಂದು ಕಡೆ ಮಾಯಾಂಕ್ ಅಗರ್ವಾಲ್ ಬಂಡೆಯಂತೆ ನಿಂತು 89 ರನ್(60 ಎಸೆತ, 7 ಬೌಂಡರಿ, 4 ಸಿಕ್ಸರ್) ಹೊಡೆದು ತಂಡವನ್ನು ವಿಜಯದ ಬಾಗಿಲ …
Read More »ಕುಮಾರಸ್ವಾಮಿ ವಿರುದ್ಧ ಕಟ್ಟು ಕಥೆಗಳನ್ನು ಕಟ್ಟಲಾಗುತ್ತಿದೆ – H.D.D. ಕಿಡಿ
ನವದೆಹಲಿ: ಕುಮಾರಸ್ವಾಮಿ ವಿರುದ್ಧ ನಿರಂತರವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಅವರ ಪ್ರತಿ ಕೆಲಸದಲ್ಲೂ ತಪ್ಪು ಕಂಡು ಹಿಡದು ಟೀಕಿಸುವ ವ್ಯವಸ್ಥಿತ ಕೆಲಸವಾಗುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆರೋಪಿಸಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ವಿರುದ್ಧ ಕಟ್ಟು ಕಥೆಗಳನ್ನು ಕಟ್ಟಲಾಗುತ್ತಿದೆ ಎಂದರು. ಹಿಂದೆ ಸರ್ಕಾರ ಇದ್ದ ಸಂದರ್ಭದಲ್ಲಿ ರೇವಣ್ಣ ವಿರುದ್ಧ ಅಪಪ್ರಚಾರ ಮಾಡಲಾಯಿತು. ರೇವಣ್ಣ ಅವರನ್ನು ಸೂಪರ್ ಸಿಎಂ ಎಂದು …
Read More »ತಂಗಿಯನ್ನು ಪ್ರೀತಿಸಿದ ಯುವಕನನ್ನು ಅಣ್ಣನೋರ್ವ ಕೊಚ್ಚಿ ಕೊಲೆ
ಬೆಂಗಳೂರು: ತಂಗಿಯನ್ನು ಪ್ರೀತಿಸಿದ ಯುವಕನನ್ನು ಅಣ್ಣನೋರ್ವ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಕಾಡುಗೋಡಿ ಸಮೀಪ ನಡೆದಿದೆ. ಕೊಲೆಯಾದ ಯುವಕನನ್ನು ರಾಜೇಶ್ (35) ಎಂದು ಗುರುತಿಸಲಾಗಿದೆ. ರಾಜೇಶ್ ಒಂದು ಹುಡುಗಿಯನ್ನು ಪ್ರೀತಿ ಮಾಡುತ್ತಿದ್ದ. ಆದರೆ ನಂತರ ಆ ಯುವತಿಯನ್ನು ಪ್ರೀತಿಯನ್ನು ನಿರಾಕರಣೆ ಮಾಡಿದ್ದ. ಇದರಿಂದ ಮನನೊಂದ ಯುವತಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ರೊಚ್ಚಿಗೆದ್ದ ಅಣ್ಣ, ನನ್ನ ತಂಗಿಯ ಬಾಳು ಈತನಿಂದಲೇ ಹಾಳಾಯ್ತು ಎಂದು ರಾಜೇಶ್ …
Read More »ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡ ಪೋಕರಿಗಳ ವರ್ತನೆ ನೋಡಿದರೆ ಸಾಮಾನ್ಯ ಜನರಿಗೆ ಭಯ,ಯುವಕ ಯುವತಿಯ ವರ್ತನೆ ನೋಡಿ ನೆಟ್ಟಗರು ಶಾಕ್ ಆಗಿದ್ದಾರೆ.
ಬೆಂಗಳೂರು: ಕತ್ತಲಾದ ಮೇಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡ ಪೋಕರಿಗಳ ವರ್ತನೆ ನೋಡಿದರೆ ಸಾಮಾನ್ಯ ಜನರಿಗೆ ಭಯವಾಗುತ್ತದೆ. ಆದರೆ ಇಲ್ಲೊಬ್ಬ ಯುವಕ ಯುವತಿಯ ವರ್ತನೆ ನೋಡಿ ನೆಟ್ಟಗರು ಶಾಕ್ ಆಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ವೀಲಿಂಗ್ ಮಾಡುವುದು ಅಪರಾಧವಾದರೂ ಯುವಕರು ಶೋಕಿಗಾಗಿ ವೀಲಿಂಗ್ ಮಾಡುತ್ತಿರುತ್ತಾರೆ. ಆದರೆ ಯುವಕ ವೀಲಿಂಗ್ ಮಾಡುವಾಗ ಬೈಕ್ ಹಿಂಬದಿ ಕುಳಿತಿದ್ದ ಯುವತಿ ಕೈಯಲ್ಲಿ ಡ್ರ್ಯಾಗರ್ ಹಿಡಿದು ಭಯ ಹುಟ್ಟಿಸುವಂತೆ ಪೋಸ್ ನೀಡಿದ್ದಾಳೆ. ಯುವತಿಯ ಈ ವಿಡಿಯೋ ಸಾಮಾಜಿಕ …
Read More »ಕೊಚ್ಚಿ ಹೋಗುತ್ತಿದ್ದಾಗ ಹಗ್ಗ ನೀಡಿದ್ರೂ ಬಾರದ ಯುವಕ – ಹೃದಯಾಘಾತದಿಂದ ಸಾವು
ಕಲಬುರಗಿ: ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವನೋರ್ವ ಭಯಗೊಂಡು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಕೂಕಿನ ಚಂದನಲ್ಲಿ ಗ್ರಾಮದ ಬಳಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ಪೀರಶೆಟ್ಟಿ (29) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆ ನೀರಿನಿಂದ ಹಳ್ಳ ಕೊಳ್ಳಗಳು ತುಂಬಿ ರಭಸದಿಂದ ಹರಿಯುತ್ತಿವೆ. ಈ ಸಮಯದಲ್ಲಿ ಹಳ್ಳ ದಾಟಲು ಹೋದ ಪೀರಶೆಟ್ಟಿ ನೀರನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾನೆ. ಆದರೆ ಹಳ್ಳಕ್ಕೆ ಆಡಲಾಗಿ ಹಾಕಿದ್ದ ಕಂಬವನ್ನು …
Read More »ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್
ಶಿವಮೊಗ್ಗ: ರಾಜ್ಯದ ಬಹುತೇಕ ಕಡೆ ವರುಣ ಅಬ್ಬರಿಸಿದ್ದು, ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇತ್ತ ಆಗುಂಬೆ ಬಳಿ ಸಹ ಮಳೆ ವಿಪರೀತವಾಗಿ ಸುರಿಯುತ್ತಿದ್ದು, ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮಾಲತಿ ಮತ್ತು ಸೀತಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಅಪಾರ ಪ್ರಮಾಣದ ನೀರು ಆಗುಂಬೆಯ ಭಾಗಗಳ ತೋಟ, ಗದ್ದೆಗಳಿಗೆ ನುಗ್ಗಿದೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಶಿವಮೊಗ್ಗ-ಆಗುಂಬೆ-ಮಂಗಳೂರು ಎನ್.ಹೆಚ್ 169-ಎ …
Read More »ಶ್ರೀರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದ ವಿಧಾನಸಭೆ ಉಪಸಭಾಪತಿ, ಶಾಸಕ ಆನಂದ ಮಾಮನಿ
ಸವದತ್ತಿ) – ಬೆಂಗಳೂರಿನಲ್ಲಿ ಸೋಮವಾರ ಪ್ರಾರಂಭಗೊಳ್ಳುವ ಅಧಿವೇಶನದಲ್ಲಿ ಪ್ರಥಮ ಬಾರಿಗೆ ಉಪಸಭಾಪತಿ ಸ್ಥಾನವನ್ನು ಅಲಂಕರಿಸುವ ಮುನ್ನಾ ದಿನ ರವಿವಾರ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದ ವಿಧಾನಸಭೆ ಉಪಸಭಾಪತಿ, ಶಾಸಕ ಆನಂದ ಮಾಮನಿ ಅವರನ್ನು ದೇವಸ್ಥಾನ ವತಿಯಿಂದ ರವಿ ಕೊಟಾರಗಸ್ತಿ ಹಾಗೂ ದೇವಸ್ಥಾನ ಸಿಬ್ಬಂದಿ ಶಾಲೂಹೊದಿಸಿ ಸತ್ಕರಿಸಿದರು. ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ್ರ ಮಾಳಗಿ, ಆರ್ ಎಚ್ ಸವದತ್ತಿ, ಅಲ್ಲಮಪ್ರಭು ಪ್ರಭುನವರ, ಪ್ರಕಾಶ ಪ್ರಭುನವರ, ಪಂಡಿತ ಯಡೂರಯ್ಯ, …
Read More »ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಿದ್ಧ………..
ಬೆಂಗಳೂರು: ಇವತ್ತಿನಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ. ಕೊರೊನಾ, ಲಾಕ್ಡೌನ್ ಬಳಿಕ ನಡೆಯುತ್ತಿರುವ ವಿಧಾನಮಂಡಲದ ಮೊದಲ ಅಧಿವೇಶನ ಇದಾಗಿದೆ. ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಿದ್ಧವಾಗಿದ್ದು, ಕೊರೊನಾ ಹಗರಣ, ಕೇಂದ್ರದಿಂದ ಬರಬೇಕಿರುವ ಜಿಎಸ್ಟಿ ಪರಿಹಾರ ಬಾಕಿ, ಲಾಕ್ಡೌನ್ ಹೊತ್ತಲ್ಲೇ ರೈತರಿಗೆ ಸಂಬಂಧಿಸಿದ ಮಸೂದೆಗಳಿಗೆ ಮಾಡಲಾಗಿರುವ ತಿದ್ದುಪಡಿ. ಏರುತ್ತಿರುವ ಕೊರೋನಾ ಕೇಸ್, ಪ್ರವಾಹ ಪರಿಹಾರ, ಡ್ರಗ್ಸ್ ಕೇಸ್, ಡಿಜೆ ಹಳ್ಳಿ ಕೇಸ್ ಹೀಗೆ ಸರ್ಕಾರದ ವಿರುದ್ಧ ಅಸ್ತ್ರಗಳನ್ನು ಬಳಸಲು ಸಿದ್ಧವಾಗಿವೆ. ಕೊರೊನಾ ಹಿನ್ನೆಲೆಯಲ್ಲಿ …
Read More »