Breaking News

ಅಥಣಿಯಲ್ಲಿ ಮತ್ತೆ ಕಲಬೆರಕೆ ಹಾಲು ಪತ್ತೆ !

ಬೆಳಗಾವಿ : ಅಥಣಿ ತಾಲೂಕಿನ ಝಂಜರವಾಡ ಗ್ರಾಮದ ಹೊರ ವಲಯದಲ್ಲಿ ಕಲಬೆರಕೆ ಹಾಲು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿರುವ ಡಿಸಿಐಬಿ ಪೊಲೀರು, ಕಲಬೆರೆಕೆ ಹಾಲು ತಯಾರಿಕೆಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಬಂಧಿಸಲಾಗಿದೆ. ಡಿಸಿಐಬಿ ಘಟಕದ ನಿರೀಕ್ಷಕ ನಿಂಗನಗೌಡಾ ಪಾಟೀಲ ನೇತೃತ್ವದ ತಂಡ, ಎಸ್‌ಪಿ ಅವರ ಮಾರ್ಗದರ್ಶನದಂತೆ ದಾಳಿ ನಡೆಸಿದೆ. ಕಲಬೆರೆಕೆ ಹಾಲು ತಯಾರಿಕೆಯಲ್ಲಿ ತೊಡಗಿದ್ದ ಉಮರಲಿ ಅನಸಾರಿ(೨೩) ಎಂಬುವನನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತನಿಂದ …

Read More »

ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿದ ಯುವತಿ

ಬೆಳಗಾವಿ-ಹೊಟ್ಟೆನೋವು ತಾಳಲಾರದೆ 24ವರ್ಷದ ಯುವತಿಯೊಬ್ಬಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮದ್ಯಾಹ್ನ ನಡೆದಿದೆ. ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಚಂದೂರ ಗ್ರಾಮದ ನಿವಾಸಿಯಾದ ಸುಧಾರಾಣಿ ಭರಮಪ್ಪ ನಾಯಿಕ ಆತ್ಮ ಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ ಇಂದು ಮದ್ಯಾಹ್ನ ಮನೆಯಲ್ಲಿ ಇಲ್ಲದಿರುವಾಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸುಧಾರಾಣೆ ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದೆ ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ಜೂ.ಜಯಲಲಿತಾರಂತೆ ಕಾಣಿಸಿಕೊಂಡ ಕಂಗನಾ ರಣಾವತ್

ಬೆಂಗಳೂರು: ತಮಿಳು ನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾ ಜೀವನಾಧಾರಿತ ಚಿತ್ರ ಮಾಡುತ್ತಿರುವುದು ತಿಳಿದೇ ಇದೆ. ಅಲ್ಲದೆ ಅವರ ಬಯೋಪಿಕ್ ‘ತಲೈವಿ’ ಚಿತ್ರ ಘೋಷಣೆಯಾದಾಗಿನಿಂದ ಭಾರೀ ಚರ್ಚೆ ನಡೆಯುತ್ತಿದೆ. ಆರಂಭದಲ್ಲಿ ಜಯಾ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ಚರ್ಚೆ ನಡೆದರೆ. ನಂತರ ಚಿತ್ರ ಯಾವ ರೀತಿ ಇರುತ್ತೆ, ಪಾತ್ರವಾರ್ಗದಲ್ಲಿ ಯಾರಿರುತ್ತಾರೆ ಎಂಬೆಲ್ಲದರ ಕುರಿತು ತುಂಬಾ ಕುತೂಹಲ ಮೂಡಿತ್ತು. ಇದೀಗ ಚಿತ್ರ ತಂಡ ಮತ್ತೊಂದು ಫೋಟೊ ಬಿಡುಗಡೆ ಮಾಡಿದ್ದು, ಕ್ಯೂರಿಯಾಸಿಟಿ ಇನ್ನೂ ಹೆಚ್ಚಾಗಿದೆ. ಫೆಬ್ರವರಿ 24ರಂದು …

Read More »

ಬಜೆಟ್‍ನಲ್ಲೂ ಹೆಚ್ಚಿನ ಅನುದಾನಕ್ಕೆ ಮಿತ್ರಮಂಡಳಿ ಪಟ್ಟು- ಮೂಲ ಸಚಿವರು ಗರಂ

ಬೆಂಗಳೂರು: ರಾಜ್ಯ ಸರ್ಕಾರದ ಪ್ರಸಕ್ತ ಹಣಕಾಸು ಸ್ಥಿತಿ ಚೆನ್ನಾಗಿಲ್ಲ. ಹೀಗಾಗಿ ಈ ಸಲದ ಬಜೆಟ್ ಸಿದ್ಧಪಡಿಸುತ್ತಿರುವ ಸಿಎಂ ಯಡಿಯೂರಪ್ಪ ಇತಿಮಿತಿಯಲ್ಲೇ ರಾಜ್ಯ ಬಜೆಟ್ ಕೊಡಲು ಮುಂದಾಗಿದ್ದಾರೆ. ಬಿಜೆಪಿ ಸರ್ಕಾರ ಬಂದ ಆರಂಭದಲ್ಲಿ ನೆರೆ, ಅತಿವೃಷ್ಟಿ ಪರಿಹಾರ ಕಾಮಗಾರಿಗಳಿಗೆ ಹಣ ಕ್ರೋಢೀಕರಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿತ್ತು. ಬಳಿಕ ಕಾಂಗ್ರೆಸ್, ಜೆಡಿಎಸ್ ನಿಂದ ವಲಸೆ ಬಂದವರ ಕ್ಷೇತ್ರಗಳಿಗೆ ಸಾಕಷ್ಟು ಅನುದಾನವನ್ನೂ ಕೊಡಲಾಯ್ತು. ಇದರಿಂದ ಸರ್ಕಾರ ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿತು. ಹೀಗಾಗಿ ಸರ್ಕಾರದ ಮಟ್ಟದಲ್ಲಿ …

Read More »

ಕರ್ನಾಟಕ ರಾಜ್ಯ ಸಹಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ 5 ನೇ ವಾರ್ಷಿಕೋತ್ಸವ ಕಾರ್ಯಕ್ರಮ

ಬೆಳಗಾವಿ ಬೆಳಗಾವಿಯ ಕಾಲೇಜು ರಸ್ತೆಯ ಮಹಾತ್ಮಾ ಗಾಂಧಿ ಭವನದಲ್ಲಿ ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘ, ಎನ್.ಜಿ.ಓ ಹಾಗೂ ಕರ್ನಾಟಕ ರಾಜ್ಯ ಸಹಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ 5 ನೇ ವಾರ್ಷಿಕೋತ್ಸವ ಹಾಗೂ ರಾಜ್ಯ ಮಟ್ಟದ ಸಮ್ಮೇಳನವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರು ಉದ್ಘಾಟಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. …

Read More »

ಹು-ಧಾ ಮಹಾನಗರ ಪೊಲೀಸ ಆಯುಕ್ತರನ್ನು ಅಮಾನತು ಮಾಡಿ:ಅಣ್ವೇಕರ ಆಗ್ರಹ

ಹು-ಧಾ ಮಹಾನಗರ ಪೊಲೀಸ ಆಯುಕ್ತರನ್ನು ಅಮಾನತು ಮಾಡಿ:ಅಣ್ವೇಕರ ಆಗ್ರಹ ಹುಬ್ಬಳ್ಳಿ:ಪಾಕ್ ಪರ ಘೋಷಣೆ ಕೂಗಿದ ದೇಶದ್ರೋಹದ ಪ್ರಕರಣದಲ್ಲಿ ಹು-ಧಾ ಮಹಾನಗರ ಪೊಲೀಸ ಆಯುಕ್ತ ಮೃಧುಧೋರಣೆ ಅನುಸರಿಸುತ್ತಿರುವುದು ಖಂಡನೀಯವಾಗಿದೆ‌‌‌.ಕೂಡಲೇ ಪೊಲೀಸ ಆಯುಕ್ತರನ್ನು ಅಮಾನತು ಮಾಡಬೇಕು ಎಂದು ಯುವ ವಕೀಲರ ಸಂಘದ ಮುಖಂಡ ಅಶೋಕ ಅಣ್ವೇಕರ ಹೇಳಿದರು. ನಗರದಲ್ಲಿಂದು ಪ್ರತಿಭಟನೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ದೇಶದ್ರೋಹದ ಪ್ರಕರಣದಲ್ಲಿ ಪೊಲೀಸ ಆಯುಕ್ತರು ಮೃಧುಧೋರಣೆ ಅನುಸರಿಸುವ ಮೂಲಕ ದೇಶದ್ರೋಹದ ಆರೋಪಿತರಿಗೆ ರಕ್ಷಣೆ ನೀಡಿರುವುದು ಖಂಡನೀಯವಾಗಿದೆ. …

Read More »

ಸ್ವಾಗತ ಕಮಾನಿನಲ್ಲಿ ಅಷ್ಟೇ ಸಕ್ಕರೆ ನಾಡು:

ಮಂಡ್ಯ: ಮೈಸೂರಿನಿಂದ ಬೆಂಗಳೂರಿಗೆ ಬರುವ ರಸ್ತೆಯ ಮಧ್ಯ ಭಾಗದಲ್ಲಿ ಸಕ್ಕರೆ ನಗರಿ ಮಂಡ್ಯಗೆ ಸ್ವಾಗತ ಎಂದು ಮಂಡ್ಯದ ಸ್ವಾಗತ ಕಮಾನನ್ನು ಹಾಕಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅತೀ ಹೆಚ್ಚು ಕಬ್ಬು ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯಗೆ ಸಕ್ಕರೆ ನಾಡು ಎಂದು ಹೆಸರು ಬಂದಿದೆ. ಆದರೆ ಇದೀಗ ಮಂಡ್ಯ ಜಿಲ್ಲೆಯಲ್ಲಿ ಸಕ್ಕರೆ ಎನ್ನುವುದು ಕೇವಲ ಸ್ವಾಗತದ ಕಮಾನಿನಲ್ಲಿ ಇದೆ. ಮಂಡ್ಯ ಜಿಲ್ಲೆಯ ಜೀವಾಳವಾಗಿದ್ದ ಮೈ ಶುಗರ್ ಹಾಗೂ ಪಾಂಡವಪುರ ಸಕ್ಕರೆ ಕಾರ್ಖಾನೆಗಳ ಬಾಗಿಲು ಮುಚ್ಚಿರುವ ಹಿನ್ನೆಲೆಯಲ್ಲಿ …

Read More »

ಸಿದ್ದರಾಮಯ್ಯ ಸಾಹೇಬ್ರಿಗೆ ಏನ್ ಗೊತ್ತು, ಎಲ್ಲವನ್ನ ಕಾಮಾಲೆ ಕಣ್ಣಿನಲ್ಲಿ ನೋಡೋದು ಬಿಡಿ: ಸೋಮಣ್ಣ ಟಾಂಗ್

ಬೆಂಗಳೂರು: ಇಂದು ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ವಸತಿ ಸಚಿವ ವಿ.ಸೋಮಣ್ಣ ಗೇಲಿ ಮಾಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಅಗ್ರಹಾರ ಪಾಳ್ಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭಾರತಕ್ಕೆ ಡೊನಾಲ್ಡ್ ಟ್ರಂಪ್ ಭೇಟಿಯಿಂದ ಯಾವುದೇ ಪ್ರಯೋಜನವಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ತಿರುಗೇಟು ನೀಡಿದರು. ಈ ವಿಚಾರದಲ್ಲಿ ಸಿದ್ದರಾಮಯ್ಯ ಸಾಹೇಬ್ರಿಗೆ ಏನ್ ಗೊತ್ತು ಟ್ರಂಪ್ ಎಲ್ಲಿ, ಸಿದ್ದರಾಮಯ್ಯ ಎಲ್ಲಿ. ಅಮೆರಿಕ …

Read More »

ಮಾರ್ಚ್ ಮೊದಲ ವಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ: ಮಾಜಿ ಸ್ಪೀಕರ್. ಕೆ.ಬಿ.ಕೋಳಿವಾಡ ಅಭಿಪ್ರಾಯ

ಬೆಂಗಳೂರು, ಫೆ.24-ಮಾರ್ಚ್ ಮೊದಲ ವಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ. ಆದಷ್ಟು ಬೇಗ ನೇಮಕ ಮಾಡದಿದ್ದರೆ ಪಕ್ಷ ಸೊರಗಿ ಹೋಗುತ್ತದೆ ಎಂದು ಮಾಜಿ ಸ್ಪೀಕರ್. ಕೆ.ಬಿ.ಕೋಳಿವಾಡ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧ್ಯಕ್ಷರ ನೇಮಕ ತಡ ಮಾಡಿದಷ್ಟು ಪಕ್ಷಕ್ಕೆ ಹಾನಿಕಾರಕ. ಹೈಕಮಾಂಡ್ ಗಮನಕ್ಕೂ ತರುವ ಪ್ರಯತ್ನ ನಾನು ಮಾಡುತ್ತೇನೆ. ಕೆಪಿಸಿಸಿ ಪದಾಧಿಕಾರಿಗಳ ನೇಮಕ ಕೂಡ ಆಗಬೇಕಾಗಿದೆ. ಹೈಕಮಾಂಡ್ ಬಳಿಯೂ ಸ್ವಲ್ಪ ಗೊಂದಲವಿದೆ. ಅಲ್ಲಿ ಎಐಸಿಸಿ ಅಧ್ಯಕ್ಷರು ಯಾರು ಆಗಬೇಕು …

Read More »

ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಚಂದನ್, ನಿವೇದಿತಾ

ಮೈಸೂರು: ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿವಾಹ ಬುಧವಾರ ಮೈಸೂರಿನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಮೈಸೂರಿನ ದಟ್ಟಗಹಳ್ಳಿಯ ನಿವೇದಿತಾ ಗೌಡ ಮನೆಯಲ್ಲಿ ಮದುವೆ ಕಾರ್ಯಗಳು ಜೋರಾಗಿ ನಡೆದಿದ್ದು, ಫೆ.25 ಮತ್ತು 26ರಂದು ಕನ್ವೆನ್ಶನ್ ಹಾಲ್‍ನಲ್ಲಿ ನಡೆಯಲಿರುವ ವಿವಾಹಕ್ಕೆ ಗಣ್ಯರ ದಂಡೇ ಹರಿದು ಬರುತ್ತಿದೆ. ಈ ಮದುವೆ ಸಮಾರಂಭಕ್ಕೆ ಸ್ಯಾಂಡಲ್‍ವುಡ್‍ನ ಕಲಾವಿದರು, ಗಾಯಕರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಸೇರಿ ಸುಮಾರು ಐದು ಸಾವಿರಕ್ಕೂ ಅಧಿಕ ಜನ ಸಾಕ್ಷಿ …

Read More »