Breaking News

ಐಟಿ ವೃತ್ತಿಪರರ ವರ್ಕ್ ಫ್ರಮ್ ಹೋಮ್ ಜುಲೈ 31ರ ವರೆಗೆ ವಿಸ್ತರಣೆ…….

ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೊರೊನಾ ಲಾಕ್‍ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲಾ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಅವರು ಈ ವಿಷಯ ಪ್ರಕಟಿಸಿದ್ದಾರೆ. ಲಾಕ್ ಡೌನ್ …

Read More »

3 ವರ್ಷದಿಂದ ಕೂಡಿಟ್ಟಿದ್ದ 25 ಸಾವಿರ ಹಣ ದೇಣಿಗೆ ನೀಡಿದ ಮಕ್ಕಳು………

ಹಾವೇರಿ: ದೇಶ ಹಾಗೂ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಈಗಾಗಲೇ ಅನೇಕರು ಕೊರೊನಾ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಸಹಾಯ ಮಾಡಿದ್ದಾರೆ. ಇದೀಗ ಜಿಲ್ಲೆಯ ಮೂರು ವಿದ್ಯಾರ್ಥಿಗಳು ತಾವು ಕೂಡಿಟ್ಟುಕೊಂಡಿದ್ದ ಹುಂಡಿ ಹಣವನ್ನ ಸಿಎಂ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ. 7 ವರ್ಷದ ಅವನಿ, 6 ವರ್ಷದ ಸನ್ನಿಧಿ ಹಾಗೂ 7 ವರ್ಷದ ದೀಪ್ತಿ ಹುಂಡಿ ಹಣವನ್ನು ನೀಡಿದ್ದಾರೆ. ಮೂವರು ವಿದ್ಯಾರ್ಥಿಗಳು ಹಾವೇರಿ ಜಿಲ್ಲಾಧಿಕಾರಿ …

Read More »

ಪ್ರತಿ ವರ್ಷ ಕೊರೊನಾ ಕಾಡುವ ಸಾಧ್ಯತೆ ಇದೆ ಎಂದ ಚೀನಾ ವಿಜ್ಞಾನಿಗಳು……

ಬೀಜಿಂಗ್: ಮಹಾಮಾರಿ ಕೊರೊನಾ ಅಟ್ಟಹಾಸ ಇಲ್ಲಿಗೇ ಮುಗಿಯುವುದಿಲ್ಲ ಪ್ರತಿ ವರ್ಷವೂ ಕಾಡುವ ಸಾಧ್ಯತೆ ಇದೆ ಎಂಬ ಭಯಾನಕ ಅಂಶವನ್ನು ಚೀನಾ ವಿಜ್ಞಾನಿಗಳು ತಿಳಿಸಿದ್ದಾರೆ. ಚೀನಾದ ಬೀಜಿಂಗ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಶೋಧಕರು ಈ ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಕೊರೊನಾ ವೈರಸನ್ನು ಓಡಿಸಿದರೆ ಮುಗಿಯಿತು ಮತ್ತೆ ಬರಲ್ಲ ಎಂದುಕೊಳ್ಳುವಂತಿಲ್ಲ. ವಿಶ್ವವ್ಯಾಪಿ ಇದರ ಬೆಳವಣಿಗೆಯನ್ನು ಗಮನಿಸಿದಾಗ ಕೊರೊನಾ ಪ್ರತಿ ವರ್ಷ ಬರುವ ಸಾಧ್ಯತೆ ಇದ್ದು, ಜ್ವರದ ರೂಪದಲ್ಲಿ ಜನರನ್ನು ಕಾಡಲಿದೆ ಎಂದು ಹೇಳಿದ್ದಾರೆ. ಇದು …

Read More »

ಕಲಬುರಗಿ ಜಿಲ್ಲಾಧಿಕಾರಿ ಎತ್ತಂಗಡಿ- ನೂತನ ಡಿಸಿಯಾಗಿ ವಿಕಾಸ್ ಕಿಶೋರ್ ನೇಮಕ……..

ಬೆಂಗಳೂರು: ಕಲಬುರಗಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ರೆಡ್ ಝೋನ್‍ನಲ್ಲಿದೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಯನ್ನೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು, ಇವರ ಜಾಗಕ್ಕೆ ಸುರಾಲ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಲಾಗಿದೆ. ಬಿ.ಶರತ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬೆಂಗಳೂರಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 44 ಜನರಿಗೆ ಕೊರೊನಾ ಸೋಂಕು …

Read More »

ಗ್ರೀನ್ ಝೋನ್‍ನಲ್ಲಿರುವ ರಾಯಚೂರು ಜಿಲ್ಲೆಯಲ್ಲಿ ನಾಳೆಯಿಂದ ವ್ಯಾಪಾರ ವಹಿವಾಟುಗಳು…….

ರಾಯಚೂರು: ಗ್ರೀನ್ ಝೋನ್‍ನಲ್ಲಿರುವ ರಾಯಚೂರು ಜಿಲ್ಲೆಯಲ್ಲಿ ನಾಳೆಯಿಂದ ವ್ಯಾಪಾರ ವಹಿವಾಟುಗಳು ಆರಂಭವಾಗಲಿವೆ. ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯಾಪಾರ ಮಾಡಬಹುದು ಅಂತ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ. ಜಿಲ್ಲೆ ಗ್ರೀನ್ ಝೋನ್ ಪಟ್ಟಿಯಲ್ಲಿ ಇರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲಿಕೆಯಾಗಿದ್ದು, ಬುಧವಾರದಿಂದ ಜಿಲ್ಲೆಯಾದ್ಯಂತ ವ್ಯಾಪಾರ- ವಹಿವಾಟು ಶುರುವಾಗಲಿದೆ. ಗ್ರಾಮೀಣ ಪ್ರದೇಶದಲ್ಲಿರುವ ಕಂಪನಿ, ಕೈಗಾರಿಕೆಗಳನ್ನ ಆರಂಭಿಸಲು ಜಿಲ್ಲಾಡಳಿತ ಅನುಮತಿ ನೀಡಿದೆ. ಆದರೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕಂಪನಿ ಆರಂಭಿಸಲು ಸೂಚಿಸಲಾಗಿದೆ. ಜೊತೆಗೆ ಬೇರೆ …

Read More »

ಮದ್ಯದಗಂಡಿ ತೆರೆಯಲು ಪ್ರಧಾನಿ ಮೋದಿ ನಿರಾಕರಿಸಿದ್ದಾರೆ: ಎಚ್.ನಾಗೇಶ್……….

ಕೋಲಾರ: ಮೂರನೇ ತಾರೀಖಿನಿಂದ ಮದ್ಯದಂಗಡಿ ತೆರೆಯುವ ಚಿಂತನೆ ಇತ್ತು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಇದಕ್ಕೆ ಒಪ್ಪಿಲ್ಲ. ಹೀಗಾಗಿ ಸದ್ಯಕ್ಕೆ ಮದ್ಯದಂಗಡಿ ತೆರೆಯೋದು ಸಾಧ್ಯವಿಲ್ಲ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಂದರ್ಭದಲ್ಲಿ ಕೆಲ ರಾಜ್ಯಗಳ ಸಿಎಂಗಳು ಈ ಕುರಿತು ಕೇಳಿದ್ದಾರೆ. ಈ ವೇಳೆ ಪ್ರಧಾನಿ …

Read More »

ಮಕ್ಕಳಗೇರಿಗ್ರಾಮ ಪಂಚಾಯತಿ ಕಾರ್ಯಾಲಯದ ವತಿಯಿಂದ ಗ್ರಾಮದಲ್ಲಿ ಪ್ರತಿಯೊಂದು ಮನೆ ಮತ್ತು ವ್ಯಕ್ತಿಗೆ ಕರೋನ ಸೋಂಕು ತಡೆಗಟ್ಟುವ ಮತ್ತು ಕರೋನ ಜಾಗೃತಿ ಆದೋಲನ ಮಾಡಲಾಯಿತು.

ಗೋಕಾಕ: ಮಕ್ಕಳಗೇರಿಗ್ರಾಮ ಪಂಚಾಯತಿ ಕಾರ್ಯಾಲಯದ ವತಿಯಿಂದ ಗ್ರಾಮದಲ್ಲಿ ಪ್ರತಿಯೊಂದು ಮನೆ ಮತ್ತು ವ್ಯಕ್ತಿಗೆ ಕರೋನ ಸೋಂಕು ತಡೆಗಟ್ಟುವ ಮತ್ತು ಕರೋನ ಜಾಗೃತಿ ಆದೋಲನ ಮಾಡಲಾಯಿತು. ಪ್ರತಿಯೊಂದು ಮನೆಗೆ ಹೋಗಿ ಪ್ರತಿಯೊಬ್ಬರನ್ನು ಮಹಿಳೆಯರು ಮತ್ತು ಪುರುಷರು ಹಾಗೂ ವ್ಯಕ್ತಿಯನ್ನು ಹಾಗೂ ಮಕ್ಕಳನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಪಿ.ಡಿ.ಓ.ಇವರ ಜಂಟಿಯಾಗಿ ಮಾಸ್ಕ ವಿತರಣೆ ಮಾಡಿದರು. ಸಾರ್ವಜನಿಕರಿಗೆ ಈ ಮುಖದ ರಕ್ಷಕಗಳು ಸಹಾಯಕವಾಗುವುದು. ಅಲ್ಲದೇ ನರ್ಸ್, …

Read More »

ವಿದ್ಯಾರ್ಥಿನಿ ಕುಮಾರಿ ಕರುಣಾ ರಾಘವೇಂದ್ರ ಪತ್ತಾರ್ ಇವಳು ಜವಾಹರ್ ನವೋದಯ ವಿದ್ಯಾಲಯ ಕೊತಲಿ ಕುಪ್ಪನವಾಡಿ ಎಸ್ಪಿ ಸಿ ಬ್ಯಾಚ್ 2019 2020 ನೇ ಸಾಲಿನಲ್ಲಿ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ನಗರದ ವಿದ್ಯಾರ್ಥಿನಿ ಕುಮಾರಿ ಕರುಣಾ ರಾಘವೇಂದ್ರ ಪತ್ತಾರ್ ಇವಳು ಜವಾಹರ್ ನವೋದಯ ವಿದ್ಯಾಲಯ ಕೊತಲಿ ಕುಪ್ಪನವಾಡಿ ಎಸ್ಪಿ ಸಿ ಬ್ಯಾಚ್ 2019 2020 ನೇ ಸಾಲಿನಲ್ಲಿ lಎಂಟನೇ ತರಗತಿ ವಿದ್ಯಾರ್ಥಿನಿಯಾದ ಕರುಣಾ ಇವಳು ಭಾರತ ದೇಶಾದ್ಯಂತ ಕೋರೋಣ ವೈರಸ ನಿಂದ ಸಂಕಷ್ಟಕ್ಕೊಳಗಾದ ಭಾರತ ದೇಶ ಮಹಾಮಾರಿ ಕೋರೋಣ ವೈರಸ್ಸನ್ನು ಹೊಡೆದೋಡಿಸಲು ವೈದ್ಯರು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.ಈ ನಿಟ್ಟಿನಲ್ಲಿ ಅವರನ್ನು ಎಷ್ಟು ಹೊಗಳಿದರೂ ಕಡಿಮೆ. …

Read More »

ವಿದೇಶಿ ಕಂಪನಿಗಳನ್ನ ಭಾರತಕ್ಕೆ ಸೆಳೆಯಲು ಸಿದ್ಧರಾಗಿ :ಎಲ್ಲ ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಕೊರೊನಾ ಆತಂಕ ಶುರುವಾದಾಗಿನಿಂದಲೂ ಅದನ್ನ ಮೆಟ್ಟಿ ನಿಲ್ಲುವ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮ ವಹಿಸುತ್ತಲೇ ಇವೆ. ಇದರ ಜೊತೆ ಜೊತೆಗೆ ಸರ್ಕಾರಗಳನ್ನ ಕಾಡುತ್ತಿರುವ ಮತ್ತೊಂದು ದೊಡ್ಡ ಸವಾಲು ಅಂದ್ರೆ ಅದು ಆರ್ಥಿಕತೆ. ಕೊರೊನಾದಿಂದಾಗಿ ಇಡೀ ದೇಶವೇ ಲಾಕ್​ಡೌನ್ ಆಗಿದ್ದು, ಇದು ಆರ್ಥಿಕತೆಗೂ ಪೆಟ್ಟು ನೀಡಿದೆ. ಈಗ ದೇಶದಲ್ಲಿ ಲಾಕ್​ಡೌನ್​ನ ಎರಡನೇ ಹಂತವೂ ಪೂರ್ಣಗೊಳ್ಳುತ್ತಿದ್ದು, ಆರ್ಥಿಕತೆಯನ್ನ ಹೆಚ್ಚಿಸುವ ಬಗ್ಗೆ ಸರ್ಕಾರಗಳು ಚಿಂತನೆ ನಡೆಸಿವೆ. ಈ ನಿಟ್ಟಿನಲ್ಲಿ ವಿದೇಶಿ …

Read More »

ಬ್ರೇಕಿಂಗ್ : ಕಲಬುರ್ಗಿಯಲ್ಲಿ ಮತ್ತೆ ತಬ್ಲಿಘಿ ತಾಂಡವ, ಇಂದು 8 ಮಂದಿಯಲ್ಲಿ ಕೊರೋನಾ ಪತ್ತೆ..!

ಬೆಂಗಳೂರು, ಏ.28- ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಕ್ಷೀಣಿಸುತ್ತಿದ್ದಂತೆ ಕಂಡು ಬಂದರೂ ಅತ್ತ ಕಲಬುರ್ಗಿಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗಿದೆ. ನಿನ್ನೆ ಸಂಜೆ 5 ಗಂಟೆಯಿಂದ ಬೆಳಗ್ಗೆ 12 ಗಂಟೆವರೆಗಿನ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಕೇವಲ ಒಂದು ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾದರೆ, ಕಲಬುರ್ಗಿಯಲ್ಲಿ ಆರು ಪ್ರಕರಣಗಳು ಪತ್ತೆಯಾಗಿವೆ. ಗದಗದಲ್ಲಿ ಒಂದು ಪ್ರಕರಣ ಸೇರಿದಂತೆ ರಾಜ್ಯದಲ್ಲಿ 8 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ಸೋಂಕಿತರ ಸಂಖ್ಯೆ 520ಕ್ಕೆ …

Read More »