ಬಾಗಲಕೋಟೆ: ವ್ಯಕ್ತಿಯೊಬ್ಬ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದ ಬಳಿಕ ಪತ್ನಿಯ ತಲೆ ಹಾಗೂ ಮುಖಕ್ಕೆ ಗುದ್ದಲಿಯಿಂದ ಹೊಡೆದು ಬರ್ಬರವಾಗಿ ಕೊಲೆಗೈದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಮಿತ್ರಾ ಉಳ್ಳಾಗಡ್ಡಿ(48) ಎಂದು ಗುರುತಿಸಲಾಗಿದೆ. ಪತ್ನಿಯನ್ನು ಕೊಲೆಗೈದ ಬಳಿಕ ಆರೋಪಿ ಪತಿ ಮಲ್ಲಪ್ಪ ಉಳ್ಳಾಗಡ್ಡಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಕೊಲೆ ಯಾಕೆ..? ಪತ್ನಿಗೆ ಶ್ರೀಶೈಲ ಎಂಬ ವ್ಯಕ್ತಿ ಜೊತೆ ಅಕ್ರಮ ಸಂಬಂಧ ಇದೆ ಎಂದು ಶಂಕಿಸಿ 2017ರಲ್ಲಿ ಜಗಳವಾಗಿತ್ತು. ಅಲ್ಲದೆ ಇದೇ …
Read More »ಸಾರಿಗೆ ನೌಕರರ ಸಂಪೂರ್ಣವಾಗಿ ಬಂದ್ ಗೆ ಕರೆ
ಬೆಂಗಳೂರು: ಇಂದು ರೋಡಿಗೆ ಇಳಿಯೋ ಮುನ್ನ ಎಚ್ಚರವಾಗಿರಿ. ಯಾಕಂದ್ರೆ ಇಂದು ಸಾರಿಗೆ ನೌಕರರು ಸಂಪೂರ್ಣವಾಗಿ ಬಂದ್ ಗೆ ಕರೆಕೊಟ್ಟಿದ್ದಾರೆ.ಹೌದು. ಬಂದ್ ಕರೆಕೊಟ್ಟ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರಲ್ಲಿ ಬಸ್ಸುಗಳ ಓಡಾಟ ಬಹುತೇಕ ಸ್ಥಗಿತಗೊಂಡಿದೆ. ಬಸ್ ಹೊರಡದೆ ಡಿಪೋದಲ್ಲಿಯೇ ಸ್ಥಗಿತಗೊಳಿಸಲಾಗಿದೆ. ವಿವಿಧ ಡಿಪೋಗಳಿಂದ ಸಿಬ್ಬಂದಿ ಒಂದೆಡೆ ಸೇರಿದ್ದು, ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಗಣಿಸುವವವರೆಗೆ ಹೋರಾಟ ಕೈ ಬಿಡಲ್ಲ ಎಂದು ಆಗ್ರಹಿಸುತ್ತಿದ್ದಾರೆ. ನಿನ್ನೆ ವಿಧಾನ ಸೌಧ ಮುತ್ತಿಗೆ ಹಾಕಿದರೂ ಸರ್ಕಾರ ಅಹವಾಲು ಆಲಿಸಲಿಲ್ಲ ಎಂದು …
Read More »ಖಾಸಗಿ ಆಸ್ಪತ್ರೆಗಳು ಮುಷ್ಕರ ಆಸ್ಪತ್ರೆಯ ಓಪಿಡಿಗಳು ಬಂದ್
ಬೆಂಗಳೂರು : ಆಯುರ್ವೇದ ವೈದ್ಯರಿಗೆ ಸರ್ಜರಿ ಮಾಡಲು ಅವಕಾಶ ನೀಡಿರುವುದನ್ನು ವಿರೋಧಿಸಿ ಖಾಸಗಿ ಆಸ್ಪತ್ರೆಗಳು ಮುಷ್ಕರಕ್ಕೆ ಕರೆ ಕೊಟ್ಟಿವೆ. ಹೀಗಾಗಿ ಖಾಸಗಿ ಆಸ್ಪತ್ರೆಯ ಓಪಿಡಿಗಳು ಬಂದ್ ಇರಲಿವೆ. ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಓಪಿಡಿ ಸೇವೆ ಸ್ಥಗಿತಗೊಳ್ಳಲಿವೆ. ಆದರೆ ಎಮರ್ಜನ್ಸಿ ಸೇವೆ ಎಂದಿನಂತೆ ಇರಲಿದೆ. ಐಎಂಎ ನೀಡಿರುವ ಬಂದ್ ಕರೆಗೆ PHANA ಸೇರಿ ಹಲವು ಸಂಘಟನೆಗಳು ಸಾಥ್ ನೀಡಿವೆ. ಕೇಂದ್ರ ಸರ್ಕಾರ ಆಯುರ್ವೇದ ಶಿಕ್ಷಣ ತಿದ್ದುಪಡಿ …
Read More »“ಬಿಜೆಪಿಯವರಿಗೆ ಸರ್ಕಾರ ಮಾಡುವ ಉಸಾಬರಿ ಏಕೆ ಬೇಕಿತ್ತು:ಬಸವರಾಜ ಹೊರಟ್ಟಿ
ಬೆಂಗಳೂರು,ಡಿ.10- ರಾಜ್ಯದಲ್ಲಿ ಬೀದಿ ದೀಪಗಳು ಹಗಲಿನ ವೇಳೆಯೂ ಉರಿಯುತ್ತಿರುತ್ತವೆ. ವಿಧಾನಸೌಧ, ವಿಕಾಸಸೌಧದ ಕಚೇರಿಗಳಲ್ಲಿ ವಿದ್ಯುತ್ ಉರಿಯುತ್ತಲೇ ಇರುತ್ತದೆ. ಇಂತಹ ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು ಎಂದು ಜೆಡಿಎಸ್ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಮನವಿ ಮಾಡಿದರು. ವಿಧಾನ ಪರಿಷತ್ನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನಿಮ್ಮ ಪಾಡಿಗೆ ನೀವು 105 ಮಂದಿ ಇಟ್ಟುಕೊಂಡು ಪ್ರತಿಪಕ್ಷದಲ್ಲಿ ಕುಳಿತಿದ್ದರೆ ಸಾಕಿತ್ತು. ಸರ್ಕಾರ ಮಾಡುವ ಉಸಾಬರಿ ಯಾಕೆ ಬೇಕಿತ್ತು. ಸರ್ಕಾರ …
Read More »ಕೋವಿಡ್ ತಡೆ ಜಾಗೃತಿ ಅಭಿಯಾನ ರ್ಯಾಲಿಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಚಾಲನೆ
ಬೆಳಗಾವಿಯಲ್ಲಿ ಕೋವಿಡ್ ತಡೆ ಜಾಗೃತಿ ಅಭಿಯಾನ ರ್ಯಾಲಿಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಚಾಲನೆ ಕೋವಿಡ್ 19 ಸಾಂಕ್ರಾಮಿಕ ರೋಗ ಪ್ರಸಾರ ತಡೆಗೆ ಜಾಗೃತಿ ಅಭಿಯಾನದ ಅಂಗವಾಗಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಿಂದ ಆಯೋಜಿಸಿದ್ದ ರ್ಯಾಲಿಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ರೆಡ್ ಕ್ರಾಸ್ ಸೊಸೈಟಿ, ಹೋಂ ಗಾಡ್ರ್ಸ್, ಆರೋಗ್ಯ ಇಲಾಖೆ ಸಹಯೋಗದಲ್ಲಿ ರ್ಯಾಲಿ ಆಯೋಜಿಸಲಾಗಿತ್ತು. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಕೋವಿಡ್ 19 ಸಾಂಕ್ರಾಮಿಕ ರೋಗ …
Read More »ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್.
ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್ ಹಾಗೂ ಸಾಹುಕಾರ್ ಪಡೆ ಕರ್ನಾಟಕ ಜಾಲತಣವನ್ನು ಉದ್ಘಾಟನೆ ಮಾಡಿದ ನಮ್ಮ ರಮೇಶ್ ಅಣ್ಣ ಜಾರಕಿಹೊಳಿ ಸಾಹುಕಾರ್ ಹಾಗು ಅಮರನಾಥ್ ಜಾರಕಿಹೊಳಿ ಸಾಹುಕಾರ್ ರವರು ಉದ್ಘಾಟನೆ ಈ ಸಂದರ್ಭದಲ್ಲಿ ಸಾಹುಕಾರ ಪಡೆ ಕರ್ನಾಟಕ ಗೌರವ ಅಧ್ಯಕ್ಷರು ದೋಡ್ಡಯ್ಯ ಎಮ್. ಎಚ್. ಹಾಗೂ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರು ಶೇಖರ.ಎಸ್ ರಾಜ್ಯ ಕಾರ್ಯದರ್ಶಿಗಳು ದೀಪು.ಎಮ್. ಮತ್ತು ಚೇತನ ಹಾಗೂ ಸಾಗರ್ …
Read More »ಸಿದ್ದರಾಮಯ್ಯ ಸಗಣಿಎತ್ತಿದ್ದರಿಂದ ಏನೂ ಆಗೋದಿಲ್ಲಗೋವನ್ನು ಆರಾಧನೆ ಮಾಡಬೇಕು:ಕಟೀಲ್
ಮಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಸಗಣಿ ಎತ್ತಿದ್ದೇನೆ ಅಂತಾ ಹೇಳ್ತಾರೆ. ಸಗಣಿ ಎತ್ತಿದ್ದರಿಂದ ಏನೂ ಆಗೋದಿಲ್ಲ. ಗೋವನ್ನು ಆರಾಧನೆ ಮಾಡಬೇಕು. ಸಗಣಿ ಎತ್ತಿ ನಾಟಕ ಮಾಡೋದ್ರಿಂದ ಪ್ರಯೋಜನ ಇಲ್ಲ. ಕಾಂಗ್ರೆಸ್ ರೈತರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಹಿನ್ನೆಲೆಯಲ್ಲಿ ಕಟೀಲ್ ಮಂಗಳೂರಿನ ಬಿಜೆಪಿ ಕಚೇರಿ ಮುಂಭಾಗದಲ್ಲಿ ಗೂಪೂಜೆ ಮಾಡಿದ್ದಾರೆ. ಈ ವೇಳೆ ಮಧ್ಯಮದವರೊಂದಿಗೆ ಮಾತನಾಡಿದ …
Read More »ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡಕ್ಕೆ ಸಿಎಂ ಶಂಕುಸ್ಥಾಪನೆ
ಬೆಂಗಳೂರು, ಡಿ.10- ಕನ್ನಡ ಚಿತ್ರೋದ್ಯಮ ಜಾಗತಿಕ ಮಟ್ಟದಲ್ಲಿ ಹೆಸರು ಪಡೆಯುವಂತಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶಿಸಿದರು. ನಗರದ ಶಿವಾನಂದ ವೃತ್ತದ ಬಳಿ ಇರುವ ಗಾಂಧಿ ಭವನದ ಎದುರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಬಹಳಷ್ಟು ಒಳ್ಳೆಯ ಚಿತ್ರಗಳು ಬಂದಿವೆ. ಇನ್ನಷ್ಟು ಅತ್ಯುತ್ತಮ ಕನ್ನಡ ಚಲನಚಿತ್ರಗಳು ಬಂದು ಜಾಗತಿಕ ಮಟ್ಟದಲ್ಲಿ ಹೆಸರು ಪಡೆಯಲಿ ಎಂದು ಹಾರೈಸಿದರು. …
Read More »ಕಲ್ಯಾಣ,ಭ್ರಷ್ಟಾಚಾರ ವಿರೋಧಿ ಸಮಿತಿಯಿಂದ ಪಾದಯಾತ್ರೆ
ಮಾನವ ಅಧಿಕಾರ ದಿನಾಚರಣೆ ನಿಮಿತ್ತ ಮಾನವ ಅಧಿಕಾರ ಲೋಕ ಕಲ್ಯಾಣ,ಭ್ರಷ್ಟಾಚಾರ ವಿರೋಧಿ ಸಮಿತಿಯಿಂದ ಪಾದಯಾತ್ರೆ ಮಾನವ ಅಧಿಕಾರ ಲೋಕ ಕಲ್ಯಾಣ ಮತ್ತು ಭ್ರಷ್ಟಾಚಾರ ವಿರೋಧಿ ಸಮಿತಿಯಿಂದ ಮಾನವ ಅಧಿಕಾರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. : ವಿಶ್ವ ಸಂಸ್ಥೆಯ ಮಾರ್ಗದರ್ಶನದಲ್ಲಿ ಪ್ರತಿವರ್ಷ ಡಿಸೆಂಬರ್ 10ರಂದು ವಿಶ್ವ ಮಾನವ ಅಧಿಕಾರ ದಿನ ಆಚರಿಸಲಾಗುತ್ತದೆ. 1948ರಿಂದ ಆಚರಿಸುತ್ತ ಬರಲಾಗಿರುವ ಈ ದಿನವನ್ನು ಈ …
Read More »ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ, ಜಾಗೃತಿ ಮೆರವಣಿಗೆ
ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ, ಜಾಗೃತಿ ಮೆರವಣಿಗೆ ಬೆಳಗಾವಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ ಸಮಾರಂಭವನ್ನು ಗಣೇಶಪುರ ರಸ್ತೆ ಸ್ಕೂಲ್ ಆಫ್ ಕಲ್ಚರ್ನಲ್ಲಿ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಚನ್ನಮ್ಮ ಸರ್ಕಲ್ನಿಂದ ಕಾಲೇಜು ರಸ್ತೆ ಮಾರ್ಗವಾಗಿ ಗೋಗಟೆ ರಂಗಮಂದಿರದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು …
Read More »
Laxmi News 24×7