Breaking News

ನಮಗೆ ನೀರು ಕೊಡದಿದ್ರೆ ಪೈಪ್‍ಲೈನ್ ಒಡೆದು ಹಾಕ್ತೀನಿ: ಶಿವಲಿಂಗೇಗೌಡ

ಹಾಸನ: ನಮಗೆ ನೀರು ಕೊಡದೆ ಪೈಪ್ ಲೈನ್ ತೆಗೆದುಕೊಂಡು ಹೋದರೆ ಅದನ್ನು ಒಡೆದು ಹಾಕಿಸ್ತೀನಿ. ಏನಾಗುತ್ತೋ ಆಗಲಿ ಎಂದು ಶಾಸಕ ಶಿವಲಿಂಗೇಗೌಡ ಕೆಡಿಪಿ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಹಾಸನದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿತ್ತು. ಈ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡ ಕೃಷ್ಣಾ ಬೇಸಿನ್ ನಲ್ಲಿ ನಮಗೂ ಹಕ್ಕಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಎರಡು ಹೋಬಳಿಗಳು ಕೃಷ್ಣಾ ಬೇಸಿನ್‍ಗೆ ಸೇರಿದೆ. ನಮಗೆ ನೀರು ಕೊಡ್ತೀವಿ …

Read More »

ಬೆಳಗಾವಿ ಜಿಲ್ಲೆ ವಿಭಜನೆ ಬೇಕಾ..? ಕಮೆಂಟ್ ಮಾಡಿ ತಿಳಿಸಿ

ಬೆಳಗಾವಿ – ಬಳ್ಳಾರಿ ಜಿಲ್ಲೆ ವಿಭಜನೆ ಘೋಷಣೆ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಸದ್ದು ಕೇಳಿಬಂದಿದೆ. ರಾಜ್ಯದಲ್ಲೇ ದೊಡ್ಡದಾಗಿರುವ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ 3 ಜಿಲ್ಲೆಯನ್ನಾಗಿಸಬೇಕೆನ್ನುವ ಪ್ರಸ್ತಾವನೆಗೆ 2 ದಶಕಗಳ ಇತಿಹಾಸವಿದೆ. ಯಾವ ದೃಷ್ಟಿಯಿಂದ ನೋಡಿದರೂ ಜಿಲ್ಲೆಯ ವಿಭಜನೆ ಅಗತ್ಯ, ಅನಿವಾರ್ಯ. ಕೇವಲ ಭಾಷೆ ಮತ್ತು ಗಡಿ ವಿವಾದದ ಕಾರಣದಿಂದ ಜಿಲ್ಲಾ ವಿಭಜನೆಯನ್ನು ಮುಂದೂಡಲಾಗುತ್ತಿದೆ. ಬೆಳಗಾವಿಯನ್ನು ಎರಡು ವಿಭಾಗ ಮಾಡಬೇಕೋ, ಮೂರು ವಿಭಾಗ ಮಾಡಬೇಕೋ? ವಿಭಜಿಸುವುದಾದರೆ ಯಾವ್ಯಾವುದು ಜಿಲ್ಲಾ ಕೇಂದ್ರವಾಗಬೇಕು? ವಿಭಜಿತವಾಗಲಿರುವ …

Read More »

‘ನಮ್ಮ ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವವನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.:ಬಾಲಚಂದ್ರ ಜಾರಕಿಹೊಳಿ

ಗೋಕಾಕ :  ‘ನಮ್ಮ ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವವನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಶ್ರೇಯಸ್ಸು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಸಲ್ಲುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಅರಭಾವಿ ಮಂಡಲ ಭಾರತೀಯ ಜನತಾ ಪಾರ್ಟಿ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಸಂವಿಧಾನ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ …

Read More »

ಮರಾಠ ಅಭಿವೃದ್ಧಿ ನಿಗಮ ರಚನೆ ರಾಜಕೀಯ ಪ್ರೇರಿತ,:ಕರವೇ ಪ್ರತಿಭಟನೆ ನಿರ್ಧಾರ

ಬೆಂಗಳೂರು, ನ.26- ಮರಾಠ ಅಭಿವೃದ್ಧಿ ನಿಗಮ ರಚನೆ ರಾಜಕೀಯ ಪ್ರೇರಿತ, ಸರ್ಕಾರದ ದುಡುಕಿನ ನಿರ್ಧಾರ ಹಾಗೂ ಅಸಾಂವಿಧಾನಿಕ ತೀರ್ಮಾನವಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಇದನ್ನು ತೀವ್ರವಾಗಿ ವಿರೋಸುತ್ತದೆ ಎಂದು ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ. ಮರಾಠ ಅಭಿವೃದ್ಧಿ ನಿಗಮ ವಿರೋಸಿ ಕರ್ನಾಟಕ ಬಂದ್‍ಗೆ ಕನ್ನಡ ಒಕ್ಕೂಟ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ರಕ್ಷಣಾ ವೇದಿಕೆ ರಾಜ್ಯ ಪದಾಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಬಂದ್‍ಗೆ ಬೆಂಬಲ ನೀಡುವುದಾಗಿ …

Read More »

ಎಚ್.ಐ.ವಿ, ಏಡ್ಸ್ ಪೀಡಿತರಿಗೆ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ: ಎಚ್.ಐ.ವಿ, ಏಡ್ಸ್ ಪೀಡಿತರಿಗೆ ರೇಷನ್ ಕಾರ್ಡ್, ವೈದ್ಯಕೀಯ ಸೌಲಭ್ಯ, ಶಾಲಾ ಪ್ರವೇಶ, ವಿದ್ಯಾರ್ಥಿ ವೇತನ, ವಸತಿ ಯೋಜನೆಯಡಿ ವಸತಿ ಸೇರಿದಂತೆ ಸರ್ಕಾರದಿಂದ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಎಚ್.ಐ.ವಿ., ಏಡ್ಸ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಚ್.ಐ.ವಿ. ಸೋಂಕಿತರಿಗೆ ಖಾಸಗಿ ಆಸ್ಪತ್ರೆಯವರು ಚಿಕಿತ್ಸೆ ನಿರಾಕರಿಸಿದರೆ …

Read More »

ಇವಿಎಂ ಬಳಕೆ ಕೈಬಿಟ್ಟು, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ:ಇವಿಎಂ ವಿರುದ್ಧ ವಕೀಲ ಸಿ.ಆರ್. ಜಯ ಸುಕಿನ್

ನವದೆಹಲಿ: ಚುನಾವಣೆಗಳಲ್ಲಿ ಇವಿಎಂ ಬಳಕೆ ಕೈಬಿಟ್ಟು, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಇವಿಎಂ ವಿರುದ್ಧ ವಕೀಲ ಸಿ.ಆರ್. ಜಯ ಸುಕಿನ್ ಎಂಬವವರು ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿಯು ಉಪ ಚುನಾವಣೆ ಸೇರಿದಂತೆ ಬಿಹಾರ ವಿಧಾನಸಭಾ ಚುನಾವಣೆ ಎಲ್ಲೆಡೆಯೂ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಇದೀಗ ಎಲೆಕ್ಟ್ರಾನಿಕ್ ಮತ ಯಂತ್ರ (ಇವಿಎಂ) ಸರಿಯಾಗಿಲ್ಲ ಎಂಬ ಗಲಾಟೆ ಶುರುವಾಗಿದೆ. ಇದು ಪ್ರತಿ ಚುನಾವಣೆಯಲ್ಲಿ ನಡೆಯುತ್ತಿರುವ ವಿಷಯವೇ. ಆದರೆ …

Read More »

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಈಗ ಇರುವ ಮೀಸಲಾತಿ ಪ್ರಮಾಣ, ಹೆಚ್ಚಿಸುವ ಅಗತ್ಯತೆ: ಶ್ರೀರಾಮುಲು

ಬೆಂಗಳೂರು,: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಈಗ ಇರುವ ಮೀಸಲಾತಿ ಪ್ರಮಾಣ, ಹೆಚ್ಚಿಸುವ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ನಾಲ್ಕು ಸದಸ್ಯರನ್ನು ಒಳಗೊಂಡ ಸಚಿವ ಸಂಪುಟ ಉಪ ಸಮಿತಿ ರಚಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಬಿ. ಶ್ರೀರಾಮುಲು ಅಧ್ಯಕ್ಷರಾಗಿದ್ದು, ಸದಸ್ಯರಾಗಿ ಸಚಿವರಾದ ಗೋವಿಂದ ಎಂ. ಕಾರಜೋಳ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಜೆ. ಮಾಧುಸ್ವಾಮಿ …

Read More »

ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಲೈಸೆನ್ಸ್ ರದ್ದು: ಎಂ.ಜಿ.ಹಿರೇಮಠ ಎಚ್ಚರಿಕೆ

ಬೆಳಗಾವಿ: ದಂಡ ವಿಧಿಸಿದ ಬಳಿಕವೂ ನಿಯಮಾವಳಿ ಮೀರಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಲೈಸೆನ್ಸ್ ರದ್ದು ಮಾಡುವುದರ ಜತೆಗೆ ಅಂಗಡಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಕೋಟ್ಪಾ ಕಾಯ್ದೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು …

Read More »

ಅರೆಸ್ಟ್ ಮಾಡಲು ಬಂದ ಪೊಲೀಸರ ಮೇಲೆ ಹಾಡಹಗಲೇ ನಡುಬೀದಿಯಲ್ಲೇ ಇರಾನಿ ಗ್ಯಾಂಗ್‌ನ ಕಳ್ಳರ ಹಲ್ಲೆ

ಧಾರವಾಡ: ಕಳ್ಳರು ತಪ್ಪಿಸಿಕೊಂಡು ಹೋಗುವಾಗ ಪೊಲೀಸರು ಅವರನ್ನು ಹೊಡೆಯುವುದು ಸಾಮಾನ್ಯ. ಆದರೆ ತಮ್ಮನ್ನು ಅರೆಸ್ಟ್ ಮಾಡಲು ಬಂದ ಪೊಲೀಸರ ಮೇಲೆ ಹಾಡಹಗಲೇ ನಡುಬೀದಿಯಲ್ಲೇ ಇರಾನಿ ಗ್ಯಾಂಗ್‌ನ ಕಳ್ಳರು ಹಲ್ಲೆ ಮಾಡಿ, ರಾಜಾರೋಷವಾಗಿ ತಪ್ಪಿಸಿಕೊಂಡು ಹೋಗಿರುವ ಘಟನೆ ವಿದ್ಯಾಕಾಶಿ ಧಾರವಾಡದಲ್ಲಿ ನಡೆದಿದೆ. ಇದು ಪೊಲೀಸರು ಮತ್ತು ಕಳ್ಳರ ಮಧ್ಯೆ ನಡೆದ ಫೈಟಿಂಗ್ ಅಂದರೆ ನೀವು ನಂಬಲೇಬೇಕು. ಬೆಂಗಳೂರಿನ ಪೊಲೀಸರಿಗೆ ಸಂಗಮ್‌ ವೃತ್ತದಲ್ಲಿ ನಡುಬೀದಿಯಲ್ಲಿ ಹೊಡೆದು ಧಾರವಾಡದ ಇರಾನಿ ಗ್ಯಾಂಗ್‌ನ ನಟೋರಿಯಸ್ ಕಳ್ಳರು …

Read More »

ಪ್ರಕೃತಿದತ್ತವಾದ ಬೆಟ್ಟವನ್ನ ಒಡೆದು ಲೇಔಟ್ ನಿರ್ಮಾಣ ಮಾಡಲು ಮುಂದಾಗಿರುವುದಕ್ಕೆ ಪರಿಸರ ಪ್ರೇಮಿಗಳ ಆಕ್ರೋಶ

ರಾಯಚೂರು: ನಗರದಲ್ಲಿ ಪ್ರಕೃತಿದತ್ತವಾದ ಬೆಟ್ಟವನ್ನ ಒಡೆದು ಲೇಔಟ್ ನಿರ್ಮಾಣ ಮಾಡಲು ಮುಂದಾಗಿರುವುದಕ್ಕೆ ಪರಿಸರ ಪ್ರೇಮಿಗಳು ಆಕ್ರೋಶಗೊಂಡಿದ್ದಾರೆ. ದೊಡ್ಡ ದೊಡ್ಡ ಬಂಡೆಗಳ ಸ್ಫೋಟದಿಂದ ಸುತ್ತಮುತ್ತಲಿನ ನಿವಾಸಿಗಳು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಗ್ರೀನ್ ಝೋನ್ ನಲ್ಲಿರುವ ಬೆಟ್ಟವನ್ನು ಹಗಲು ರಾತ್ರಿ ನಿರಂತರ ನೆಲಸಮ ಮಾಡಲಾಗುತ್ತಿದೆ ಅಂತ ನಿವಾಸಿಗಳು ಹೋರಾಟಕ್ಕೆ ಮುಂದಾಗಿದ್ದಾರೆ.   ನಗರದ ಮಧ್ಯದಲ್ಲೇ ಇರುವ ಇಲ್ಲಿನ ವಿದ್ಯಾನಗರ, ಸಾವಿತ್ರಿ ಕಾಲೋನಿ, ಲಕ್ಷ್ಮಿಪುರಂ ಲೇಔಟ್‍ಗೆ ಹೊಂದಿಕೊಂಡಿರುವ ಬೆಟ್ಟವನ್ನ ನಿರಂತರವಾಗಿ ಸ್ಫೋಟಿಸಲಾಗುತ್ತಿದೆ. ರಾಯಚೂರು ನಗರದ …

Read More »