Breaking News

ರಾಜ್ಯಸಭೆಯಲ್ಲಿ ಮೋದಿ ಕಣ್ಣೀರಿನ ನಾಟಕ : ಶಶಿ ತರೂರ್ ಟೀಕೆ

ನವದೆಹಲಿ, ಫೆ.11- ರಾಜ್ಯಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಆಜಾದ್ ಅವರ ರಾಜ್ಯಸಭೆ ಅವಧಿ ಮುಗಿದಿದ್ದರಿಂದ ಭಾವನಾತ್ಮಕವಾಗಿ ಕಣ್ಣೀರು ಹರಿಸಿದ್ದನ್ನು ಕಾಂಗ್ರೆಸ್ ಮುಖಂಡ, ಸಂಸದ ಶಶಿ ತರೂರ್ ಟೀಕಿಸಿದ್ದಾರೆ. ಪ್ರಧಾನಿಯವರು ಬುಧವಾರ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರ ಮೇಲೆ ತೋರಿದ ಭಾವನಾತ್ಮಕ ವಿದಾಯ ಭಾಷಣ ಒಂದು ರೀತಿಯಲ್ಲಿ ಕಲಾತ್ಮಕವಾಗಿ ರಚಿಸಲಾದ …

Read More »

ಪೆಟ್ರೋಲ್- ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ವಾಟಾಳ್ ವಿನೂತನ ಪ್ರತಿಭಟನೆ

ಬೆಂಗಳೂರು, ಫೆ.11- ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದಿನಸಿ ಪದಾರ್ಥಗಳ ಬೆಲೆ ಏರಿಕೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿಂದು ವಿನೂತನ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದರು. ಸಿಲಿಂಡರ್‍ಅನ್ನು ಕತ್ತೆಯ ಮೇಲಿಟ್ಟು ಪ್ರತಿಭಟಿಸುವ ಮೂಲಕ ಬೆಲೆ ಏರಿಕೆಯನ್ನು ಖಂಡಿಸಿದರು. ನಂತರ ಮಾತನಾಡಿದ ಅವರು, ನಿರಂತರವಾಗಿ ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರ ಬದುಕು …

Read More »

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ : ಭತ್ತ, ರಾಗಿ, ತೊಗರಿ, ಶೇಂಗಾ, ಕಡಲೆಗೆ ‘ಬೆಂಬಲ ಬೆಲೆ’ ನಿಗದಿ

ಬೆಂಗಳೂರು : 2020-21ನೇ ಸಾಲಿನಲ್ಲಿ ಕನಿಷ್ಟ ಬೆಂಬಲ ಬೆಲೆಯೊಜನೆಯಡಿಯಲ್ಲಿ ಭತ್ತ, ರಾಗಿ, ಬಿಳಿಜೋಳ, ತೊಗರಿ, ಶೇಂಗಾ ಹಾಗೂ ಕಡೆಲೆ ಖರೀದಿಗೆ, ಇಂದು ನಡೆದಂತ ಸಂಪುಟ ಉಪ ಸಮಿತಿ ಸಭೆಯಲ್ಲಿ ದರ ನಿಗದಿ ಪಡಿಸಲಾಗಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಇಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಕುಸಿದಾಗ ಬೆಲೆಗಳ ಸ್ಥಿರಿಕರಣಕ್ಕಾಗಿ …

Read More »

ವಿಶ್ವ ಮಾರುಕಟ್ಟೆಗೆ Mi 11 ಸ್ಮಾರ್ಟ್ ಫೋನ್ ಎಂಟ್ರಿ; ವಿಶೇಷತೆಗಳೇನು?

ನವದೆಹಲಿ: ವಿಶ್ವದ ಸ್ಮಾರ್ಟ್ ಪೋನ್ ,ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಶಿಯೋಮಿ ಕಂಪನಿಯು ತನ್ನ Mi 11 ಸರಣಿಯ ಹೊಸ ಸ್ಮಾರ್ಟ್ ಫೋನ್ ಒಂದನ್ನು ವಿಶ್ವದಾದ್ಯಂತ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ್ದು, ಇದು ತನ್ನ ವಿಭಿನ್ನ ಫೀಚರ್ ಗಳ ಮೂಲಕ ಮಾರುಕಟ್ಟೆಯಲ್ಲಿ ದೂಳೆಬ್ಬಿಸುತ್ತಿದೆ. ಗ್ರಾಹಕ ಸ್ನೇಹಿ ಸ್ಮಾರ್ಟ್ ಪೋನ್ ಎಂಬ ಪ್ರಖ್ಯಾತಿಗೆ ಪಾತ್ರವಾಗಿರುವ Mi ಸ್ಮಾರ್ಟ್ ಪೋನ್ ಕಳೆದ ವರ್ಷದ ಕೊನೆಯಲ್ಲಿ ಈ ಹೊಸ ಆವೃತ್ತಿಯ Mi 11 ಮೊಬೈಲ್ ಪೋನ್ …

Read More »

ಹೆಚ್ಚುವರಿ ₹534 ಕೋಟಿಗೆ ಬೇಡಿಕೆ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಾಡುತ್ತಿರುವ ಅಪೌಷ್ಟಿಕತೆ ಮತ್ತು ರಕ್ತಹೀನತೆ ಸಮಸ್ಯೆಗಳನ್ನು ಹೋಗಲಾಡಿಸಲು ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು. ಇದಕ್ಕಾಗಿ ಬಜೆಟ್‌ನಲ್ಲಿ ₹534 ಕೋಟಿ ಹೆಚ್ಚುವರಿ ಹಣ ನೀಡಲು ಮುಖ್ಯಮಂತ್ರಿಯವರಿಗೆ ಮನವಿ ಮಾಡಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಇಲಾಖೆಗೆ ಪ್ರತಿ ವರ್ಷ ಸುಮಾರು ₹5,000 ಕೋಟಿ ಬಜೆಟ್‌ನಲ್ಲಿ ನೀಡಲಾಗುತ್ತದೆ. ಇದಲ್ಲದೇ ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರವೇ ಅನುದಾನ ನೀಡುತ್ತದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ …

Read More »

ಪಿಎಂ ಆವಾಸ್ ಯೋಜನೆ, ಪಿಎಂ ಸ್ವನಿಧಿ ಯೋಜನೆ: ತ್ವರಿತ ಸಾಲ ವಿತರಣೆಗೆ ಸಿಎಂ ಸೂಚನೆ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ಬ್ಯಾಂಕುಗಳು ವಿಳಂಬ ಧೋರಣೆ ಅನುಸರಿಸದೆ ತ್ವರಿತವಾಗಿ ಸಾಲ ವಿತರಣೆ ಮಾಡಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವ ನಿಧಿ ಯೋಜನೆಗಳ ಪ್ರಗತಿ ಕುರಿತು ಬ್ಯಾಂಕರುಗಳೊಂದಿಗೆ ಚರ್ಚಿಸಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗಳು ಪ್ರಧಾನಿ ನರೇಂದ್ರ ಮೋದಿಯವರು …

Read More »

ಕುರುಬ ಸಮುದಾಯವನ್ನು ಒಡೆಯುವುದೇ ಬಿಜೆಪಿಯವರ ಮುಖ್ಯ ಉದ್ದೇಶ: ಸಿದ್ದರಾಮಯ್ಯ

ಹುಬ್ಬಳ್ಳಿ: ಕುರುಬ ಸಮುದಾಯವನ್ನು ಒಡೆಯುವುದೇ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರ ಮುಖ್ಯ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕುರುಬ ಸಮುದಾಯದ ಮೀಸಲಾತಿ ಹೋರಾಟದ ವಿಚಾರವಾಗಿ ಗುರುವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಕುರುಬರ ಮೀಸಲಾತಿ ಹೋರಾಟದಲ್ಲಿ ಆರ್.ಎಸ್.ಎಸ್ ಮತ್ತು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಕುರುಬ ಸಮುದಾಯವನ್ನು ಒಡೆಯುವುದೇ ಅವರ ಮುಖ್ಯ ಉದ್ದೇಶ’ ಎಂದು ಹರಿಹಾಯ್ದಿದ್ದಾರೆ. ‘ಬಿಜೆಪಿ ಮುಖಂಡ ಈಶ್ವರಪ್ಪನವರು ಹೋರಾಟ ಮಾಡುತ್ತಿರೋದು ಯಾರ ವಿರುದ್ಧ? ತಮ್ಮದೇ ಸರ್ಕಾರದ …

Read More »

ಆಸ್ಕರ್‌ನಿಂದ ಹೊರಬಿದ್ದ ಜಲ್ಲಿಕಟ್ಟು ಸಿನಿಮಾ..!

ನವದೆಹಲಿ : ವಿಶ್ವ ಪ್ರಸಿದ್ಧ ಆಸ್ಕರ್ ಸ್ಪರ್ಧೆಯಿಂದ ಭಾರತೀಯ ಚಿತ್ರರಂಗದ ಪ್ರತಿಷ್ಠೆಯ ಗುರುತಾಗಿ, ಅತ್ಯುತ್ತಮ ಅಂತಾರಾಷ್ಟ್ರೀಯ ವೈಶಿಷ್ಟ್ಯ ವಿಭಾಗದಲ್ಲಿ ಪ್ರವೇಶ ಪಡೆದಿದ್ದ ಮಲೆಯಾಳಂ ಚಿತ್ರ ಜಲ್ಲಿಕಟ್ಟು ಮುಂದಿನ ಹಂತಕ್ಕೆ ತಲುಪುವಲ್ಲಿ ಸೋತು ಸ್ಪರ್ಧೆಯಿಂದ ಹೊರಬಿದ್ದಿದೆ. 93ನೇ ಅಕಾಡೆಮಿ ಪ್ರಶಸ್ತಿಯಿಂದ ಜಲ್ಲಿಕಟ್ಟು ಹೊರಬಿದ್ದರೂ, ದೇಶದ ಮತ್ತೊಂದು ಅತುತ್ತಮ ಲೈವ್ ಆಯಕ್ಷನ್ ಶಾರ್ಟ್ ಫಿಲಂ ‘ಬಿಟ್ಟು’ ಮುಂದಿನ ಹಂತಕ್ಕೆ ತಲುಪಿ ಆಶ್ಚರ್ಯ ಮೂಡಿಸಿದೆ. ಶಾರ್ಟ್ ಫಿಲಂ ವಿಭಾಗದಲ್ಲಿ ಬಿಟ್ಟು ತೀವ್ರ ಸ್ಪರ್ಧೆ ನೀಡುತ್ತಿದೆ. …

Read More »

ಶಿಲ್ಪಕಲಾ ಅಕಾಡೆಮಿ: ಐವರಿಗೆ ಗೌರವ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ 2020ನೇ ಸಾಲಿನ ಗೌರವ ಪ್ರಶಸ್ತಿಗೆ ಐವರು ಕಲಾವಿದರು ಹಾಗೂ ವಾರ್ಷಿಕ ಶಿಲ್ಪಕಲಾ ಪ್ರದರ್ಶನ ಬಹುಮಾನಕ್ಕೆ 6 ಮಂದಿಯ ಶಿಲ್ಪ ಕಲಾಕೃತಿಗಳು ಆಯ್ಕೆಯಾಗಿವೆ. ಪ್ರಶಸ್ತಿಗೆ ಭಾಜನರಾದವರ ಪಟ್ಟಿಯನ್ನು ಅಕಾಡೆಮಿ ಬುಧವಾರ ಬಿಡುಗಡೆ ಮಾಡಿದೆ. ಗದಗದ ನಾಗರಾಜ ಎಸ್‌. ಬೆಟಗೇರಿ (ಸಾಂಪ್ರದಾಯಿಕ ಶಿಲ್ಪ), ಶಿವಮೊಗ್ಗದ ಜೆ.ಸಿ. ಗಂಗಾಧರ (ಸಾಂಪ್ರದಾಯಿಕ ಶಿಲ್ಪ), ಧಾರವಾಡದ ರುದ್ರಪ್ಪ ಮಾನಪ್ಪ ಬಡಿಗೇರ (ಜಾನಪದ ಶಿಲ್ಪ), ಬೆಂಗಳೂರಿನ ಉಲ್ಲಾಸ್ಕರ್ ಡೇ (ಟೆರ್ರಾಕೋಟಾ) ಹಾಗೂ ಉಡುಪಿಯ …

Read More »

ಎಲ್‌ಐಸಿ ಐಪಿಒದೊಡ್ಡ ಸಂಚಲನಎಲ್ಲಾ ಐಪಿಒಗಳಿಗಿಂತ ದೊಡ್ಡದಾಗಿ ಹೊರಹೊಮ್ಮುವ ಸಾಧ್ಯತೆ

ನವದೆಹಲಿ, ಫೆಬ್ರವರಿ 10: ಎಲ್‌ಐಸಿ ಐಪಿಒ ಈಗಾಗಲೇ ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಏಕೆಂದರೆ ಇದುವರೆಗಿನ ಎಲ್ಲಾ ಐಪಿಒಗಳಿಗಿಂತ ದೊಡ್ಡದಾಗಿ ಹೊರಹೊಮ್ಮುವ ಸಾಧ್ಯತೆಯಿದೆ. ಇದರ ಜೊತೆಗೆ ಎಲ್‌ಐಸಿ ಐಪಿಒಗಿಂತ ಮುಂಚೆ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ ವಿಮಾ ಪಾಲಿಸಿಗಳನ್ನು ಹೊಂದಿರುವವರಿಗೆ ಗುಡ್‌ನ್ಯೂಸ್ ಇಲ್ಲಿದೆ. ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಎಲ್‌ಐಸಿ ಐಪಿಒ ವಿತರಣೆಯ ಗಾತ್ರದ ಶೇಕಡಾ 10 ರಷ್ಟು ಎಲ್‌ಐಸಿ ಪಾಲಿಸಿದಾರರಿಗೆ ಮೀಸಲಿಡುತ್ತಾರೆ ಎಂಬುದನ್ನು ಖಚಿತಪಡಿಸಿದ್ದಾರೆ. …

Read More »