Breaking News

ಪೊಲೀಸ್ ಆಯುಕ್ತರ ಕಚೇರಿ ಮತ್ತೊಮ್ಮೆ ಸೀಲ್‍ಡೌನ್

ಬೆಂಗಳೂರು, ಜು.11- ನಗರದ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಆಯುಕ್ತರ ಕಚೇರಿಯನ್ನು ಮತ್ತೊಮ್ಮೆ ಸೀಲ್‍ಡೌನ್ ಮಾಡಲಾಗಿದೆ. ನಿನ್ನೆ 9 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಯುಕ್ತರ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ ಎಂದು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಈ ಸಂಜೆಗೆ ತಿಳಿಸಿದ್ದಾರೆ. ಸೀಲ್‍ಡೌನ್ ಆಗಿರುವ ಆಯುಕ್ತರ ಕಚೇರಿಯನ್ನು ಮುಂದಿನ ಬುಧವಾರ ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಹಿಂದೆಯೂ ಕಚೇರಿಯ ಸಿಬ್ಬಂದಿಗೆ ಕೊರೊನಾ …

Read More »

ಇಮ್ಯುನಿಟಿ ಪವರ್ ಹೆಚ್ಚಿಸುವ ಆಹಾರಕ್ಕೆ ಮೊರೆಹೋದ ಸಿಎಂ””””’

ಬೆಂಗಳೂರು,ಜು.11- ತಮ್ಮ ಆಪ್ತ ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆ ಸೆಲ್ಫ್ ಕ್ವಾರಂಟೈನ್‍ನಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಇದೀಗ ಇಮ್ಯುನಿಟಿ ಪವರ್ ಹೆಚ್ಚಿಸುವ ಆಹಾರದ ಮೊರೆ ಹೋಗಿದ್ದಾರೆ. ಕಾವೇರಿ ನಿವಾಸದಲ್ಲಿ ಸೆಲ್ಫ್ ಕ್ವಾರಂಟೈನ್‍ನಲ್ಲಿರುವ ಬಿಎಸ್‍ವೈ, ವಿಟಮಿನ್ ಎ ಮತ್ತು ಸಿ ಅಂಶ ಇರುವ ಆಹಾರ ಪದಾರ್ಥಗಳನ್ನು ಹೆಚ್ಚು ಬಳಕೆ ಮಾಡುತ್ತಿದ್ದಾರೆ. ಸೋಂಕು ಬಾರದಿರುವಂತೆ ಸಿಎಂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಸೇವಿಸಲು ಪ್ರಾರಂಭಿಸಿದ್ದಾರೆ. ಈ ಸಂಬಂಧ ವೈದ್ಯರೂ ಸಲಹೆ ನೀಡಿದ್ದು, ಇಮ್ಯುನಿಟಿ …

Read More »

ಕೊರೋನಾ ಮಹಾಮಾರಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೂ ವಕ್ಕರಿಸಿದೆ,

ಬೆಳಗಾವಿ-ಕಳೆದ ಮೂರು ತಿಂಗಳಿನಿಂದ ಬೆಳಗಾವಿ ಜಿಲ್ಲೆಯ ಜನತೆಗೆ ಕಾಡುತ್ತಿರುವ ಕೊರೋನಾ ಮಹಾಮಾರಿಯ ಕಾಟ ಈಗ ಬೆಳಗಾವಿ ಜಿಲ್ಲಾ ಆಸ್ಪತ್ರೆಗೂ ವಕ್ಕರಿಸಿದೆ,OPD ಯಲ್ಲಿ ನೂರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ 23 ವರ್ಷದ ಡಾಕ್ಟರ್ ಗೂ ಸೊಂಕು ತಗಲಿರುವ ಕಾರಣ ಬೆಳಗಾವಿ ಜಿಲ್ಲಾ ಆಸ್ಪತ್ರೆಯ OPD ವಿಭಾಗವನ್ನೇ ಸೀಲ್ ಡೌನ್ ಮಾಡಲಾಗಿದೆ. ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಓಪಿಡಿ ಮತ್ತು ಕೋವಿಡ್ ವಾರ್ಡ್ ಒಂದೇ ಕಟ್ಟಡದಲ್ಲಿ ಇರುವದರಿಂದ ಓಪಿಡಿಯನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡಲು …

Read More »

ಮುನ್ನೆಚ್ಚರಿಕಾ ಕ್ರಮವಾಗಿ ಅರಸೀಕೆರೆಯಲ್ಲಿ ಗಾರ್ಮೆಂಟ್ಸ್‌ಗಳಿಗೆ ರಜೆ…..

ಹಾಸನ: ಜಿಲ್ಲೆಯ ಅರಸೀಕೆರೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಕೆಲವೊಂದು ಗಾರ್ಮೆಂಟ್ಸ್‌ನವರು ಇಂದಿನಿಂದ ತಮ್ಮ ನೌಕರರಿಗೆ ಕೆಲವು ದಿನಗಳ ಕಾಲ ರಜೆ ನೀಡಿ ಮನೆಗೆ ಕಳುಹಿಸಿದ್ದಾರೆ. ಅಷ್ಟೇ ಅಲ್ಲದೇ ಅರಸೀಕೆರೆ ಡಿಪೋದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೆಲವು ಕೆಎಸ್‌ಆರ್‌ಟಿಸಿ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಅರಸೀಕೆರೆ ಡಿಪೋದಿಂದ ಸಂಚರಿಸುತ್ತಿದ್ದ ಬಸ್‍ಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಈ ಬಗ್ಗೆ ಶುಕ್ರವಾರ ರಾತ್ರಿಯಷ್ಟೇ …

Read More »

ಬಸವ ಭೀಮ ಸೇನೆಯಿಂದ ಶನಿವಾರ ಗೌರವ…………

ಬೆಳಗಾವಿ: ಛಲವಾದಿ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷ ದುರ್ಗೇಶ್ ಮೇತ್ರಿ ಅವರ ಮಾತೋಶ್ರೀ ದಶಕಗಳ ಕಾಲ ಕಾರ್ಮಿಕರ ಸಮಸ್ಯೆಗಳ ವಿರುದ್ಧ ಹೋರಾಡಿದ ಅವ್ವಕ್ಕ ಮೇತ್ರಿ ಅವರಿಗೆ ಬಸವ ಭೀಮ ಸೇನೆಯಿಂದ ಶನಿವಾರ ಗೌರವಿಸಿದರು.  ಬಸವ ಭೀಮ ಸೇನೆಯಿಂದ ಜುಲೈ 26ರವರೆಗೆ ಬಸವ ಪಂಚಮಿ ಅಂಗವಾಗಿ   ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನ ಹಮ್ಮಿಕೊಂಡಿದ್ದೆವೆ.  ಶೋಷಿತ ಸಮುದಾಯಗಳಿಗೆ ಬಸವಣ್ಣನವರೇ ಸತ್ವ. ಅಂಬೇಡ್ಕರರೇ ಶಕ್ತಿ. ಸತ್ವ ಮತ್ತು ಶಕ್ತಿಗಳನ್ನು …

Read More »

ಪೌಷ್ಟಿಕಾಂಶಯುಕ್ತ ಆಹಾರ ಕೊಡದಿದ್ರೆ ಹೇಗೆ ಹುಷಾರಾಗ್ತೇವೆ- ಸರ್ಕಾರಕ್ಕೆ ಸೋಂಕಿತರ ಪ್ರಶ್ನೆ

ಹಾಸನ: ಪೌಷ್ಟಿಕಾಂಶಯುಕ್ತ ಆಹಾರ ಕೊಡದಿದ್ದರೆ ನಾವು ಹೇಗೆ ಹುಷಾರಾಗುತ್ತೇವೆ. ಬರೀ ಅನ್ನ ಬಿಟ್ರೆ ನಮಗೆ ಬೇರೆ ಆಹಾರ ಕೊಡುತ್ತಿಲ್ಲ ಎಂದು ಹಾಸನದ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ತಮಗೆ ನೀಡುತ್ತಿರುವ ಚಿಕಿತ್ಸಾ ವಿಧಾನದ ಬಗ್ಗೆ ಅಸಮಾಧಾನ ಹೊರಹಾಕಿ ವಿಡಿಯೋ ಮಾಡಿರುವ ಕೊರೊನಾ ಸೋಂಕಿತರು, ನಮಗೆ ಆರಂಭದ ಐದು ದಿನ ಮಾತ್ರ ಮೆಡಿಸಿನ್ ಕೊಟ್ರು. ಈಗ ಮೆಡಿಸಿನ್ ಕೊಡ್ತಿಲ್ಲ. ಬರೀ ಅನ್ನ …

Read More »

ಸತೀಶ ಜಾರಕಿಹೊಳಿ ಅವರು ಮತ್ತೊಂದು ಐತಿಹಾಸಿಕ ಹೆಜ್ಜೆ

ಬೆಳಗಾವಿ: ಬಡವರ ಜೀವ ಹಿಂಡುತ್ತಿರುವ ಮೌಢ್ಯಗಳ ವಿರುದ್ಧದ ಹೋರಾಟದಲ್ಲಿ ಸದಾ ಮಂಚೂಣಿಯಲ್ಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮತ್ತೊಂದು ಐತಿಹಾಸಿಕ ಹೆಜ್ಜೆಯನ್ನು ಇಟ್ಟಿದ್ದಾರೆ. ಬುದ್ಧ, ಬಸವ ಅಂಬೇಡ್ಕರ್ ಅವರ ಸಿದ್ದಾಂತಗಳ ಮೇಲೆ ನಡೆಯುತ್ತಿರುವ ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಖ್ಯಾತಿ ಪಡೆದಿರುವ ಸತೀಶ ಜಾರಕಿಹೊಳಿ ತಮ್ಮ ಸ್ವಂತ ಬಳಕೆಗಾಗಿ ನೂತನವಾಗಿ ಖರೀದಿಸಿರುವ ವಾಹನದ ಉದ್ಘಾಟನಾ ಮತ್ತು ಚಾಲನಾ ಸಮಾರಂಭವನ್ನು ಸ್ಮಶಾನದಲ್ಲಿ ನಡೆಸುವ ಮೂಲಕ ಮತ್ತೊಮ್ಮೆ ಮನೆ ಮಾತಾಗಿದ್ದಾರೆ. ಭಾರತದ …

Read More »

ಸಿದ್ದರಾಮಯ್ಯ ಕನ್ನಡಿಯಲ್ಲಿ ಮುಖ ನೋಡಿಕೊಳ್ಳಲಿ- ನಳಿನ್ ಕುಮಾರ್ ತಿರುಗೇಟು

ಮಡಿಕೇರಿ: ರಾಜ್ಯದಲ್ಲಿ ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಒಮ್ಮೆ ಅವರ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್ ತಿರುಗೇಟು ನೀಡಿದ್ದಾರೆ. ಮಡಿಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಳಿನ್ ಕುಮಾರ್, ಅವರ ಸರ್ಕಾರ ಇದ್ದಾಗ ಇಂದಿರಾ ಕ್ಯಾಂಟಿನ್ ಹೆಸರಿನಲ್ಲಿ ಎಷ್ಟು ಅವ್ಯವಹಾರ ನಡೆಸಿದರು ಎನ್ನೋದು ಗೊತ್ತಿದೆ. ಮೊದಲು ಅದರ ಲೆಕ್ಕವನ್ನು ಕೊಡಲಿ. ಈಶ್ವರ ಕಂಡ್ರೆ …

Read More »

ತಾಯಿಯ ಸಾಲ ವಾಪಸ್ ಕೊಡದ್ದಕ್ಕೆ ಯುವಕನ ಕೊಲೆ-

ಕಲಬುರಗಿ: ಹಣಕಾಸಿನ ವಿಚಾರಕ್ಕೆ ಮೂವರು ಸ್ನೇಹಿತರು ಯುವಕನನ್ನು ಕೊಲೆ ಮಾಡಿದ್ದರು. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತಾರಫೈಲ್ ಬಡಾವಣೆ ನಿವಾಸಿಗಳಾದ ಸುನೀಲ್ ಅಲಿಯಾಸ್ ಸೋನು, ಶಿವಲಿಂಗ ಹುಲಿಮನಿ ಮತ್ತು ರಾಜು ಬಂಧಿತ ಆರೋಪಿಗಳು. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ತಾರಫೈಲ್ ಬಡಾವಣೆ ನಿವಾಸಿ ವಿಶಾಲ್‍ನನ್ನ ಜೂನ್ 26 ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮೃತ ವಿಶಾಲ್ ಆರೋಪಿ ಸುನೀಲ್ ತಾಯಿ ಬಳಿ 3 ಲಕ್ಷ …

Read More »

ಬೆಳಗಾವಿ ಜಿಲ್ಲೆಯ ಕಡೆಯಿಂದಲೂ ಕಾಮಗಾರಿ ಆರಂಭಿಸಬೇಕು ಎಂದು ತಿಳಿಸಿದರು.

ಬೆಳಗಾವಿ: ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವುದು ರೈಲ್ವೆ ಇಲಾಖೆಯ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು. ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಮ್ಮೆ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡರೆ ಡಿಪಿಆರ್ ಮತ್ತು …

Read More »