ಚಾಮರಾಜನಗರ: ಸಫಾರಿಗೆ ಹೋಗಿ ಪ್ರಾಣಿಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದೆ. ಇನ್ಮುಂದೆ ಸಫಾರಿಗೆ ತೆರಳುವ ಪ್ರವಾಸಿಗರು ಮೊಬೈಲ್ ಬಳಸದಂತೆ ನಿಷೇಧವೇರಿದೆ. ಇದು ವನ್ಯ ಪ್ರಾಣಿಗಳ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ವನ್ಯಪ್ರಿಯರು ಅರಣ್ಯ ಇಲಾಖೆ ನಿರ್ಧಾರಕ್ಕೆ ತಲೆ ಬಾಗಿದ್ರೆ,ಪ್ರವಾಸಿಗರು ವಿರೋಧ ವ್ಯಕ್ತಪಡಿಸ್ತಿದ್ದಾರೆ. ಹೌದು. ಸಫಾರಿ ಅಂದ್ರೆ ಯಾರಿಗಿಷ್ಟವಿಲ್ಲ ಹೇಳಿ, ಕಾಡಿಗೆ ಹೋದ್ರೆ ಸಾಕು ಒಂದು ರೌಂಡ್ ಸಫಾರಿಗೆ ಹೋಗಿಬರಬೇಕು ಅನ್ಸುತ್ತೆ. ವನ್ಯ ಪ್ರಾಣುಗಳಾದ ಹುಲಿ, ಆನೆ …
Read More »ವೈದ್ಯರ ಜೊತೆಗಿನ ಸಂಧಾನ ಸಭೆ ಯಶಸ್ವಿಯಾಗಿದೆ: ಸುಧಾಕರ್
ಚಿಕ್ಕಬಳ್ಳಾಪುರ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸರ್ಕಾರಕ್ಕೆ ಯಾವುದೇ ತರನಾದ ರಿಪೋರ್ಟ್ ನೀಡದೆ ವೈದ್ಯರು ಸರ್ಕಾರದ ವಿರುದ್ಧ ಅಸಹಕಾರ ಚಳವಳಿ ನಡೆಸುವ ವಿಚಾರಕ್ಕೆ ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ಪ್ರತಿಭಟನೆ ವಿಚಾರದ ಸಂಬಂಧ ನಿನ್ನೆ ಹಾಗೂ ಮೊನ್ನೆ ವೈದ್ಯರ ಜೊತೆ ಸಿಎಂ ಸಮಾಲೋಚಿಸಿದ್ದಾರೆ. ಇಂದು ಮಧ್ಯಾಹ್ನ ನಾನು ಸಹ ವೈದ್ಯರ ಜೊತೆ ಮಾತನಾಡಿದ್ದೇನೆ. ಆರ್ಥಿಕ ಇಲಾಖೆ ಜೊತೆ ಮಾತುಕತೆ ನಡೆಸಿ ವೇತನ ಪರಿಷ್ಕರಣೆಗೆ ಸಿದ್ಧವಿದ್ದೇವೆ. ವೈದ್ಯರು …
Read More »ದುಷ್ಕರ್ಮಿಗಳು 2 ಎಕರೆ ಟೊಮೆಟೊ ತೋಟಕ್ಕೆ ಕಳೆ ನಾಶಕ ಸಿಂಪಡಣೆ ಮಾಡಿ ವಿಕೃತಿ ಮೆರೆದಿದ್ದಾರೆ
ಕೋಲಾರ: ಹಳೆ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು 2 ಎಕರೆ ಟೊಮೆಟೊ ತೋಟಕ್ಕೆ ಕಳೆ ನಾಶಕ ಸಿಂಪಡಣೆ ಮಾಡಿ ವಿಕೃತಿ ಮೆರೆದಿದ್ದಾರೆ. ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಫಸಲಿಗೆ ಬಂದಿದ್ದ ಟೊಮೆಟೊ ಬೆಳೆ ನಾಶವಾಗಿದೆ. ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಗ್ರಾಮದ ರೈತ ಅರ್ಜುನಪ್ಪ ಎಂಬವರ ಟೊಮೆಟೊ ತೋಟಕ್ಕೆ ಕಿಡಿಗೇಡಿಗಳು ಕಳೆದ ರಾತ್ರಿ ಕಳೆ ನಾಶಕ ಸಿಂಪಡಣೆ ಮಾಡಿದ್ದಾರೆ. ಪರಿಣಾಮ 2 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಸುಮಾರು 10 ಸಾವಿರ ಟೊಮೆಟೊ …
Read More »ಏಕಕಾಲದಲ್ಲಿ ಎರಡೂ ಕೈಯಲ್ಲಿ ವಿಭಿನ್ನ ಬರಹ- ದಾಖಲೆ ಬರೆದ ಮಂಗ್ಳೂರು ಬಾಲಕಿ
ಮಂಗಳೂರು: ಮಾಮೂಲಿಯಾಗಿ ಎಲ್ಲರೂ ಒಂದು ಕೈಯಲ್ಲಿ ಬರೆಯೋದು ನಾವೆಲ್ಲ ನೋಡಿದ್ದೇವೆ, ನಾವೂ ಬರೆಯುತ್ತೇವೆ. ಆದರೆ ಮಂಗಳೂರಿನ ಬಾಲಕಿಯೋರ್ವಳು ಎರಡು ಕೈಗಳಲ್ಲಿಯೂ ಏಕಕಾಲದಲ್ಲಿ ಬೇರೆ ಬೇರೆ ವಿಚಾರಗಳನ್ನು ಬರೆಯುತ್ತಾಳೆ. ಅದು ಉಲ್ಟಾ ಬರವಣಿಗೆಯೂ ಇರಲಿ, ಮಿರರ್ ಏಫೆಕ್ಟ್ ರೈಟಿಂಗೂ ಇರಲಿ ಎಲ್ಲವನ್ನೂ ಆಕೆ ಸಲೀಸಾಗಿ ಬರೆಯುತ್ತಾಳೆ. ಏಕಕಾಲಕ್ಕೆ ಎರಡು ಕೈಗಳಿಂದ ಬರೆಯುವ ಅದ್ಭುತ ಕಲೆ ಹೊಂದಿರುವ ಬಾಲಕಿ ಹೆಸರು ಆದಿ ಸ್ವರೂಪ. ಮಂಗಳೂರಿನ ಸ್ವರೂಪ ಅಧ್ಯಯನ ಕೇಂದ್ರದ ಗೋಪಾಡ್ಕರ್-ಸುಮಾಡ್ಕರ್ ದಂಪತಿಯ ಪುತ್ರಿಯಾಗಿರುವ …
Read More »ಶಾರ್ಜಾ ತಲುಪಿದ ಬಿಸಿಸಿಐ ಬಿಗ್ ಬಾಸ್ ಸೌರವ್ ಗಂಗೂಲಿ
ದುಬೈ, ಐಪಿಎಲ್ ಪಂದ್ಯಗಳು ಸುಲಲಿತವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲ ತಯಾರಿಗಳ ನಡುವೆಯೇ ನಾಲ್ಕು ದಿನ ಮುಂಚಿತವಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶಾರ್ಜಾಗೆ ಬಂದಿಳಿದಿದ್ದಾರೆ. ಭಾರತ ಕ್ರಿಕೆಟ್ ತಂಡದ ಆಟಗಾರನಾಗಿ, ನಾಯಕನಾಗಿ ಹಲವು ಕೀರ್ತಿ ಸಾಸಿದ ಮತ್ತು ಐಪಿಎಲ್ನಲ್ಲೂ ತನ್ನ ಖದರ್ ತೋರಿಸಿದ್ದ ಸೌರವ್ ಗಂಗೂಲಿ ಈಗ ಭಾರತ ಕ್ರಿಕೆಟ್ನ ಬಿಗ್ಬಾಸ್. ಮೈದಾನದಿಂದ ಹೊರಗೆ ಆಡಳಿತ ನಡೆಸುವ ಚಾಕಚಕ್ಯತೆಯನ್ನು ಕಲಿಯುತ್ತಿರುವ ಗಂಗೂಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈಗ ತಮ್ಮ ಛಾಪು ಒತ್ತಲು …
Read More »ಸಿಗರೇಟು ಸೇದುವ ಚಟಕ್ಕೆ ಜೀವ ಕಳೆದುಕೊಂಡ ಬಾಲಕರು..!
ಕುಣಿಗಲ್, ಕದ್ದುಮುಚ್ಚಿ ಸಿಗರೇಟ್ ಸೇದಲು ಹೋದ ಬಾಲಕರ ಮೇಲೆ ಇಟ್ಟಿಗೆ ಗೂಡು ಕುಸಿದು ಸಾವನ್ನಪ್ಪಿರುವ ಘಟನೆ ಅಮೃತೂರು ಪೊಲೀಸ್ ಠಾಣಾವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ, ಸೂಯಾನ್(15) ಹಾಗೂ ಪರ್ವೆಜ್(17) ಮೃತಪಟ್ಟ ಬಾಲಕರು. ಗ್ರಾಮದ ಹೊರವಲಯಲ್ಲಿರುವ ಇಟ್ಟಿಗೆ ಗೂಡಿನಲ್ಲಿ ಯಾರಿಗೂ ಕಾಣದಂತೆ ಸಿಗರೇಟ್ ಸೇದಲು ಹೋಗಿದ್ದು, ಇಟ್ಟಿಗೆ ಗೂಡಿನೊಳಗೆ ಸಿಗರೇಟ್ ಸೇದುತ್ತಿದ್ದ ಸಂದರ್ಭದಲ್ಲಿ ಮಳೆಯಿಂದ ತೇವವಾಗಿದ್ದ ಉಳಿದ ಇಟ್ಟಿಗೆಗಳು ಬಾಲಕರ ಮೇಲೆ ಕುಸಿದು ಬಿದ್ದಿವೆ. ಪರಿಣಾಮ ಇಟ್ಟಿಗೆಗಳ ಮಧ್ಯೆ ಸಿಲುಕಿ ಉಸಿರು …
Read More »ಟೀಂ ಇಂಡಿಯಾದ ಮಾಜಿ ಆಲ್ರೌಂಡರ್ ಸದಾಶಿವ್ ಪಾಟೀಲ್ ನಿಧನ
ನವದೆಹಲಿ: ಟೀಂ ಇಂಡಿಯಾ ಮಾಜಿ ಆಲ್ರೌಂಡರ್ ಸದಾಶಿವ್ ಪಾಟೀಲ್(86) ಅವರು ಕೊಲ್ಹಾಪುರದ ತಮ್ಮ ನಿವಾಸದಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ. ವೇಗದ ಬೌಲಿಂಗ್ ಆಲ್ರೌಂಡರ್ ಸದಾಶಿವ್ ಅವರು 1955ರ ಡಿಸೆಂಬರ್ನಲ್ಲಿ ಬಾಂಬೆಯಲ್ಲಿ(ಈಗಿನ ಮುಂಬೈ) ನ್ಯೂಜಿಲೆಂಡ್ ವಿರುದ್ಧ ಭಾರತದ ಪರ ಏಕೈಕ ಟೆಸ್ಟ್ ಆಡಿದರು. ಇದರಲ್ಲಿ ಅವರು ಒಟ್ಟು 51 ರನ್ಗಳಿಗೆ ಎರಡು ವಿಕೆಟ್ ಪಡೆದರು ಮತ್ತು 14 ರನ್ ಬಾರಿಸಿದರು. ಇದರ ನಂತರ ಅವರು ಮತ್ತೆ ಭಾರತ …
Read More »70,000ಕ್ಕೂ ಅಧಿಕ ಉದ್ಯೋಗ: ನಿರುದ್ಯೋಗಿಗಳಿಗೆ ಇದು ಬಿಗ್ ಡೇಸ್
ನವದೆಹಲಿ : ಆನ್ಲೈನ್ ಗ್ರಾಹಕರು ಪ್ರತಿವರ್ಷವೂ ಕುತೂಹಲದಿಂದ ಕಾಯುವಂತಹ ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಮತ್ತೆ ಬಂದಿದೆ. ಈ ಸಂದರ್ಭದಲ್ಲಿ ದೇಶಾದ್ಯಂತ 70,000ಕ್ಕೂ ಅಧಿಕ ಉದ್ಯೋಗ ಸೃಷ್ಟಿಗೆ ನೆರವಾಗಲಿದೆ. ಇದೇ ಸೆ.18ರಿಂದ 20ರವರೆಗೆ ಬಿಗ್ ಬಿಲಿಯನ್ ಡೇಸ್ ಸೇಲ್ ಪ್ರಾರಂಭವಾಗುತ್ತಿದ್ದು, ಫ್ಲಿಪ್ಕಾರ್ಟ್ ಡೆಲಿವರಿ ಎಕ್ಸಿಕ್ಯೂಟಿವ್, ಪಿಕ್ಕರ್, ಪ್ಯಾಕರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹುಡುಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ನಿರುದ್ಯೋಗಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: …
Read More »ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಶಿವಸೇನೆ-ಎನ್ಸಿಪಿ-ಕಾಂಗ್ರೆಸ್ ಮೈತ್ರಿ ಸರ್ಕಾರದ ಅದೃಷ್ಟವೇ ಸರಿ ಇಲ್ಲ ಅನಿಸುತ್ತೆ.
ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಶಿವಸೇನೆ-ಎನ್ಸಿಪಿ-ಕಾಂಗ್ರೆಸ್ ಮೈತ್ರಿ ಸರ್ಕಾರದ ಅದೃಷ್ಟವೇ ಸರಿ ಇಲ್ಲ ಅನಿಸುತ್ತೆ. ಕಳೆದ ಮೂರು ತಿಂಗಳಿನಿಂದ ಸರ್ಕಾರದ ವಿರುದ್ಧ ಒಂದಾದ ಮೇಲೊಂದರಂತೆ ಆರೋಪ ಕೇಳಿ ಬರ್ತಿದೆ. ಸುಶಾಂತ್ ಸಿಂಗ್ ಪ್ರಕರಣದಿಂದ ಹಿಡಿದು ನೌಕಾಪಡೆಯ ಮಾಜಿ ಅಧಿಕಾರಿ ಮೇಲಿನ ಹಲ್ಲೆವರೆಗೆ ಸಾಕಷ್ಟು ಘಟನೆಗಳು ಮಹಾರಾಷ್ಟ್ರ ಸರ್ಕಾರವನ್ನು ಪ್ರಶ್ನಿಸುವಂತೆ ಮಾಡಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅನ್ನೋ ಆರೋಪಗಳನ್ನ ಮಾಡಲಾಗ್ತಿದೆ. ಇದೆಲ್ಲದರ ನಡುವೆ ನೌಕಾಪಡೆಯ ಮಾಜಿ ಅಧಿಕಾರಿ ಮದನ್ ಶರ್ಮಾ ಇವತ್ತು ಮಹಾರಾಷ್ಟ್ರ ರಾಜ್ಯಪಾಲ …
Read More »ಮನೆಯ ಹಿತ್ತಲಲ್ಲೇ ಅಕ್ರಮ ಗಾಂಜಾ ಗಿಡ ಬೆಳೆಸಿದ ಆರೋಪಿಗಳು: ಓರ್ವನ ಬಂಧನ
ಮಂಡ್ಯ: ತಮ್ಮ ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಇಬ್ಬರು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿರುವ ಕೆ.ಆರ್.ಪೇಟೆ ಗ್ರಾಮಾಂತರ ಪೋಲೀಸರು ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಬೂಕನಕೆರೆ ಹೋಬಳಿಯ ಬಳ್ಳೆಕೆರೆ ನಾಟನಹಳ್ಳಿಯ ಜೇಟ್ ಕುಂಟಣ್ಣನ ಬೋರೇಗೌಡರ ಮಗ ಮಂಜೇಗೌಡ(45) ಬಂಧಿತ ಆರೋಪಿಯಾಗಿದ್ದು ಇದೇ ಗ್ರಾಮದ ಮತ್ತೊಬ್ಬ ಆರೋಪಿ ರಾಜೇಗೌಡ ಬಿನ್ ಲೇಟ್ ಈರೇಗೌಡ(58) ತಲೆ ಮರೆಸಿಕೊಂಡಿದ್ದಾನೆ. ಘಟನೆಯ ವಿವರ: ಆರೋಪಿಗಳಾದ ಮಂಜೇಗೌಡ ಮತ್ತು ರಾಜೇಗೌಡ ಅವರು ತಮ್ಮ ವಾಸದ ಮನೆಯ …
Read More »