ಗದಗ: ಇವರ ಹೆಸರು ಪ್ರಕಾಶ್ ಹೈಗರ್, ಗದಗ ಜಿಲ್ಲೆಯ ವಿಚಿತ್ರ ಹೆಸರು ಹೊಂದಿರುವ ಅಂತೂರು ಬೆಂತೂರು ಗ್ರಾಮದವರು. ಭಾರತೀಯ ಸೇನೆಯಲ್ಲಿರುವ ಇವರು ಅರುಣಾಚಲ ಪ್ರದೇಶದಲ್ಲಿ ಸೇವೆಯಲ್ಲಿದ್ದು, ಒಂದು ತಿಂಗಳ ರಜೆಯ ಮೇಲೆ ತವರಿಗೆ ಬಂದಿದ್ದಾರೆ. ಬರುವದಕ್ಕೂ ಮೊದಲು ತಾವು ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡು, ನೆಗೆಟಿವ್ ಆಗಿರುವ ಕುರಿತು ಸರ್ಟಿಫಿಕೇಟ್ ಕೂಡ ತೆಗೆದುಕೊಂಡು ತಮ್ಮ ಗ್ರಾಮಕ್ಕೆ ಆಗಮಿಸಿದ್ದಾರೆ. ಎರಡು ವರುಷಗಳ ನಂತರ ತಮ್ಮ 15 ಸದಸ್ಯರ ಅವಿಭ್ಯಕ್ತ ಕುಟುಂಬ ಸೇರುತ್ತಿರುವ ಅವರು …
Read More »ಕಾನ್ಪುರ್ ಎನ್ಕೌಂಟರ್- ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರ ಎನ್ಕೌಂಟರ್
ಲಕ್ನೋ: ಪೊಲೀಸ್ ಕಸ್ಟಡಿಯಲ್ಲಿರುವ ಉತ್ತರ ಪ್ರದೇಶದ ಕಾನ್ಪುರದ ಪೊಲೀಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಆರೋಪಿ ವಿಕಾಸ್ ದುಬೆಯ ಅನುಚರರಾದ ಪ್ರಭಾತ್ ಮಿಶ್ರಾ, ಭವನ್ ಶುಕ್ಲಾರನ್ನು ಇಂದು ಪೊಲೀಸರು ಕಾನ್ಪುರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಮಾರ್ಗದ ನಡುವೆ ಪೊಲೀಸರಿಂದ ಪಿಸ್ತೂಲ್ ಕಸಿದುಕೊಂಡಿದ್ದ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಶೂಟೌಟ್ ಮಾಡಿದ್ದ …
Read More »ರಾಜ್ಯದ ಹಲವೆಡೆ ಭಾರಿ ಮಳೆ………………..
ಬೆಂಗಳೂರು, ಜು.9- ಕೊಡಗು, ಮಂಗಳೂರು, ಕಾರವಾರ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲ ಭಾಗಗಳಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ತಿಂಗಳ ಆರಂಭದಿಂದ ಮುಂಗಾರು ಮಳೆ ಚುರುಕುಗೊಂಡಿದ್ದು, ರೈತರು ಸಂತಸಗೊಂಡಿದ್ದಾರೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಒಂದೇ ಸಮನೆ ಸುರಿಯುತ್ತಿದ್ದು, ಕೃಷಿ ಚಟುವಟಿಕೆಗೆ ಸಹಕಾರಿಯಾಗಿದೆ. ದಕ್ಷಿಣ ಕನ್ನಡ, ಮಂಗಳೂರು, ಬೆಳ್ತಂಗಡಿ, ಉಡುಪಿ, ಕುಮಟ, ಕಾರವಾರ, ಶಿರಸಿ, ಸಾಗರ ಹಾಗೂ …
Read More »ಮದುವೆಯಾಗಲಿದ್ದ ಯುವಕನಿಗೆ ಕೋವಿಡ್ ಪಾಸಿಟಿವ್………….
ಯಾದಗಿರಿ,ಜು.9- ಇಷ್ಟು ದಿನ ಮಹಾರಾಷ್ಟ್ರದ ಕಂಟಕ ಅನುಭವಿಸುತ್ತಿದ್ದ ಯಾದಗಿರಿಗೆ ಈಗ ಬೆಂಗಳೂರಿನ ಕಂಟಕ ಕೂಡ ಎದುರಾಗಿದೆ. ಬೆಂಗಳೂರಿನಿಂದ ತನ್ನ ಮದುವೆ ಸಲುವಾಗಿ ಜಿಲ್ಲೆಗೆ ಬಂದ ಯುವಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜಿಲ್ಲೆಯ ಶಹಾಪುರ ತಾಲೂಕಿನ ಹಳ್ಳಿಯೊಂದರ ಯುವಕನಿಗೆ ಕೊರೊನಾ ದೃಢಪಟ್ಟಿದೆ. ಕೊರೊನಾ ಪಾಸಿಟಿವ್ ಬಂದ ಯುವಕನ ಮದುವೆ ಇದೇ ತಿಂಗಳ 13ಕ್ಕೆ ನಿಗದಿಯಾಗಿತ್ತು. ಹೀಗಾಗಿ ಕಳೆದ ತಿಂಗಳ ಜೂನ್ 29 ರಂದು ಬೆಂಗಳೂರಿನಿಂದ ಯಾದಗಿರಿಗೆ ಬಂಧಿದ್ದಾನೆ.ಬೆಂಗಳೂರಿನಿಂದ ಬರುವಾಗಲೇ ಯುವಕನ ಆರೋಗ್ಯ …
Read More »ನನ್ನ ಕಿಡ್ನಿ ಮಾರಿ ಯಾದ್ರು ಬಂಗಾರ ತಂದು ಕೊಡ್ತೀನಿ ನನ್ನ ಮಗಳನ್ನ ಉಳಿಸಿ.. ಆತ್ಮ ಹತ್ಯೆ ಮಾಡಿಕೊಂಡ ಮಗಳು..
ಗೋಕಾಕ :ನಿನ್ನೆ ತಾನೇ ಕರೋಣ ಪೀಡಿತರ ಸಂಖ್ಯೆ ಗೋಕಾಕ ನಗರದಲ್ಲಿ ಹೆಚ್ಚಾಗಿ ಜನರಲ್ಲಿ ಆತಂಕ ಮೂಡಿಸಿದ ಬೆನ್ನಲ್ಲೇ ಇವತ್ತು ಮತ್ತೊಂದು ಕರಳು ಚುರುಕ್ ಅನ್ನುವ ಘಟನೆ ಒಂದು ಗೋಕಾಕ ನಗರದಲ್ಲಿ ನಡೆದಿದೆ. ಬಹುಶಃ ನಮ್ಮ ಜನ ಇನ್ನೂ ಈ ವರದಕ್ಷಿಣೆ , ಅತ್ತೆ ಮಾವ ಹಾಗೂ ಗಂಡ ಸೊಸೆ ಯಂದ್ರಿಗೆ ಕೊಡುವ ಕಿರುಕುಳ ಇನ್ನೂ ಹೋಗಿಲ್ಲ ಅಂಥ ಒಂದು ಗುಂಗಿನಿಂದ ಹೊರಬಂದಿಲ್ಲ ಅನ್ಸತ್ತೆ ಕೆಲವೊಂದಿಷ್ಟು ಜನ ನಿನ್ನೆ ಗೋಕಾಕ ನಲ್ಲಿ …
Read More »ಮಲೆ ಮಹದೇಶ್ವರ ಸ್ವಾಮಿ ದೇವಾಲಯ ಬಂದ್ಗೆ ಆಗ್ರಹಿಸಿ ಪ್ರತಿಭಟನೆ
ಚಾಮರಾಜನಗರ: ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ತಪ್ಪಲಲ್ಲಿ ನೆಲೆಸಿರುವ ಮಾದಪ್ಪನ ದೇಗುಲವನ್ನು ಬಂದ್ ಮಾಡುವಂತೆ ಆಗ್ರಹಿಸಿ ನೂರಾರು ಜನರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಮಲೆ ಮಹದೇಶ್ವರ ಸ್ವಾಮಿ ಸನ್ನಿಧಿಗೆ ದಿನನಿತ್ಯ ಭೇಟಿ ನೀಡುವವರ ಸಂಖ್ಯೆ ಸಾವಿರಾರು. ಕರೊನಾ ಭೀತಿಯ ನಡುವೆಯೂ ರಾಜ್ಯ ಮತ್ತು ತಮಿಳುನಾಡು ಭಾಗದಿಂದ ಮಾದಪ್ಪನ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಲೇ ಇದ್ದಾರೆ. ಪರಿಣಾಮ ಸ್ಥಳೀಯರಲ್ಲೂ ಸೋಂಕಿನ ಛಾಯೆ ಆವರಿಸಿದೆ. ಹಾಗಾಗಿ ಎಲ್ಲೆಡೆ …
Read More »ಸಿದ್ದರಾಮಯ್ಯನವ್ರೇ ಖುದ್ದಾಗಿ ಸಿಎಂ ಅವ್ರೇ ದಾಖಲೆ ಕೊಡ್ತಿದ್ದಾರೆ ಹೋಗಿ ಪರಿಶೀಲಿಸಿ: ಪ್ರತಾಪ್ ಸಿಂಹ
ಮೈಸೂರು: ಸಿದ್ದರಾಮಯ್ಯ ಅವರೇ ಖುದ್ದಾಗಿ ಸಿಎಂ ಅವರೇ ದಾಖಲೆ ಕೊಡ್ತಿದ್ದಾರೆ ಹೋಗಿ ಪರಿಶೀಲಿಸಿ. ಖುದ್ದಾಗಿ ಸ್ವತಃ ಸಿಎಂ ದಾಖಲೆ ಕೊಡುವುದಕ್ಕಿಂತ ಒಳ್ಳೆಯ ಅವಕಾಶ ಇದ್ಯಾ?. ಈ ಅವಕಾಶ ಬಳಸಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೊರೊನಾ ಚಿಕಿತ್ಸೆ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ಮಾಡಿದೆ ಎಂಬ ಸಿದ್ದರಾಮಯ್ಯ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯನವರೇ ನಿಮ್ಮ ಮಟ್ಟವನ್ನ ಪ್ರಧಾನಿಗೆ ಹೋಲಿಕೆ …
Read More »ಸಾಮಾಜಿಕ ಅಂತರ ನಿಯಮ ಉಲ್ಲಂಘನೆ ಬಸ್, ಆಟೋ, ಕ್ಯಾಬ್ ವಶಕ್ಕೆ: 9 ಪ್ರಕರಣ ದಾಖಲು
ಧಾರವಾಡ: ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದರೂ ಸಾಮಾಜಿಕ ಅಂತರ ನಿಯಮ ಪಾಲಿಸದೇ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ವಾಹನಗಳನ್ನು ಪೊಲೀಸರು ಸೀಜ್ ಮಾಡಿ, ಪ್ರಕರಣ ದಾಖಲಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೂರ್ವ ಮತ್ತು ಪಶ್ಚಿಮ ವಿಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರತ್ಯೇಕವಾಗಿ ಒಟ್ಟು ಒಂಬತ್ತು ಪ್ರಕರಣಗಳನ್ನು ದಾಖಲಿಸಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. 3 ಬೇಂದ್ರೆ ನಗರಸಾರಿಗೆ ವಾಹನಗಳು, ಆಟೋ ರಿಕ್ಷಾ, ಮ್ಯಾಕ್ಸಿಕ್ಯಾಬ್ ಹಾಗೂ ಸರಕು ಸಾಗಣೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. …
Read More »ಮುತ್ತಪ್ಪ ರೈ ಸಾವಿನ ಬೆನ್ನಲ್ಲೇ ಶುರುವಾದ ಆಸ್ತಿ ವಿವಾದ – ಕೋರ್ಟ್ ಮೆಟ್ಟಿಲೇರಿದ ಪತ್ನಿ
ಬೆಂಗಳೂರು: ಮುತ್ತಪ್ಪ ರೈ ಸಾವಿನ ನಂತರ ಅವರ ಕುಟುಂಬದಲ್ಲಿ ಆಸ್ತಿ ವಿವಾದ ಶುರುವಾಗಿದ್ದು, ರೈ ಎರಡನೇ ಪತ್ನಿ ಆಸ್ತಿಯಲ್ಲಿ ಪಾಲು ಕೇಳಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುತ್ತಪ್ಪ ರೈ ಅವರು ಸಾಯುವ ಮುನ್ನವೇ ತನ್ನ ಆಸ್ತಿಯ ಬಗ್ಗೆ ವಿಲ್ ಬರೆದು ಇಟ್ಟಿದ್ದರು. ಇದರಲ್ಲಿ ಅವರ ಆಸ್ತಿ ಯಾರಿಗೇ ಸೇರಬೇಕು ಮತ್ತು ಎಷ್ಟು ಸೇರಬೇಕು ಎಂದು ತಿಳಿಸಿದ್ದರು. ಹೀಗಿದ್ದರೂ ಅವರ ಸಾವಿನ ಬಳಿಕ ಅವರ ಎರಡನೇ ಪತ್ನಿ ಅನುರಾಧ ಪಾಲು ಕೋರಿ ಕೋರ್ಟ್ …
Read More »ಫೇಸ್ಬುಕ್, ಇನ್ಸ್ಟಾಗ್ರಾಮ್ ಸೇರಿ 89 ಆ್ಯಪ್ ಡಿಲೀಟ್ ಮಾಡುವಂತೆ ಸೈನಿಕರಿಗೆ ಸೂಚನೆ
ನವದೆಹಲಿ: ವಿದೇಶಿ ಆ್ಯಪ್ ಬ್ಯಾನ್ ಮಾಡುವ ಕುರಿತು ಕೇಂದ್ರ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಇಟ್ಟಿದ್ದು, 59 ಚೀನಿ ಆ್ಯಪ್ಗಳನ್ನು ದೇಶಾದ್ಯಂತ ಬ್ಯಾನ್ ಮಾಡಿದ ಬಳಿಕ ಇದೀಗ ಸೇನೆಗೆ ವಿಶೇಷ ಸೂಚನೆಯೊಂದನ್ನು ನೀಡಲಾಗಿದೆ. ಕೇಂದ್ರ ಸರ್ಕಾರ ಆ್ಯಪ್ ನಿಷೇಧ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಈಗಾಗಲೇ ಚೀನಾ ಆ್ಯಪ್ಗಳನ್ನು ಬ್ಯಾನ್ ಮಾಡಲಾಗಿದೆ. ಇದೀಗ ಸೇನೆಗೆ 89 ಆ್ಯಪ್ಗಳನ್ನು ಬಳಸದಂತೆ ಸೂಚನೆ ನೀಡಲಾಗಿದೆ. ಭಾರತೀಯ ಸೇನೆ ಈ ಕುರಿತು ಯೋಧರಿಗೆ ಸೂಚನೆ ನೀಡಿದ್ದು, …
Read More »