Breaking News

ಮತ್ತೊಂದು ಜೀವಂತ ಹೃದಯ ರವಾನೆ ಮತ್ತು ಜೀವಂತ ಹೃದಯ ಕಸಿ ಶಸ್ತ್ರ ಚಿಕಿತ್ಸೆ ನಡೆಸುವಲ್ಲಿ ಯಶಸ್ವಿಯಾದ ನಾರಾಯಣ ಹೆಲ್ತ್ ಸಿಟಿ ವೈದ್ಯರ ತಂಡ

ಆನೇಕಲ್: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಸಮೀಪದ ನಾರಾಯಣ ಹೆಲ್ತ್ ಸಿಟಿ ವೈದ್ಯರ ತಂಡದಿಂದ ಮತ್ತೊಂದು ಜೀವಂತ ಹೃದಯ ರವಾನೆ ಮತ್ತು ಜೀವಂತ ಹೃದಯ ಕಸಿ ಶಸ್ತ್ರ ಚಿಕಿತ್ಸೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ನಾರಾಯಣ ಹೆಲ್ತ್ ಸಿಟಿ ಹೃದ್ರೋಗ ತಜ್ಞರಾದ ಡಾ ಭಗೀರಥ್ ಮತ್ತು ವರುಣ್ ಶೆಟ್ಟಿ ತಂಡದಿಂದ ಬೆಂಗಳೂರು ಮೂಲದ ಸುಮಾರು 42 ವರ್ಷ ವಯಸ್ಸಿನ ವ್ಯಕ್ತಿಗೆ ಯಶಸ್ವಿಯಾಗಿ ಹೃದಯ ಕಸಿ ನಡೆಸಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಬೆಂಗಳೂರು …

Read More »

ತಿರುಪತಿ ತಿಮ್ಮಪ್ಪ ಕಲ್ಯಾಣ ಕರ್ನಾಟಕದ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದಾನೆ. ಕೇವಲ 1 ಗಂಟೆ 5 ನಿಮಿಷದಲ್ಲಿ ಕಲಬುರ್ಗಿಯಿಂದ ತಿರುಪತಿಗೆ ಹೋಗೋ ಅವಕಾಶವನ್ನು ಜನ ಪಡೆದಿದ್ದಾರೆ.

ಕಲಬುರ್ಗಿ(ಡಿಸೆಂಬರ್​. 16): ಕಲ್ಯಾಣ ಕರ್ನಾಟಕಕ್ಕೂ ತಿರುಪತಿಗೂ ಅವಿನಾಭಾವ ಸಂಬಂಧ. ಒಂದು ಕಾಲಕ್ಕೆ ತಿರುಪತಿ ಮೇಲೆ ದಾಳಿ ನಡೆದಂತಹ ಸಂದರ್ಭದಲ್ಲಿ ಕ್ಷೇತ್ರದ ಸಂರಕ್ಷಣೆಗೆ ನಿಂತವರು ಸುರಪುರ ಸಂಸ್ಥಾನದ ದೊರೆಗಳು. ಅದೇ ಕಾರಣಕ್ಕೆ ವಿಜಯದಶಮಿ ಸಂದರ್ಭದಲ್ಲಿ ತಿರುಪತಿಯಲ್ಲಿ ನಡೆಯುವ ಬ್ರಹ್ಮತ್ಸವದಲ್ಲಿ ಮೊದಲ ಪೂಜೆ ನಡೆಯುವುದು ಸುರಪುರ ದೊರೆಗಳದ್ದು. ಈಗಲೂ ಸಹ ಸುರಪುರ ಸಂಸ್ಥಾನವನ್ನು ಪ್ರತಿನಿಧಿಸುವವರಿಗೆ ಅಗ್ರ ಪೂಜೆಯ ಭಾಗ್ಯ ಕಲ್ಪಿಸಲಾಗಿದೆ. ಹೀಗಾಗಿ ತಿರುಪತಿಯಲ್ಲಿ ಕಲ್ಯಾಣ ಕರ್ನಾಟಕದ ಜನತೆಯ ಬಗ್ಗೆ ಒಂದಷ್ಟು ಪ್ರೀತ್ಯಾದರಗಳಿವೆ. ಪ್ರತಿ ವರ್ಷವೂ …

Read More »

ಕಾಲೇಜ್​ ಆಡ್ಮಿಷನ್​ ನೆಪದಲ್ಲಿ ಸ್ನೇಹಿತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ

ಬೆಂಗಳೂರು (ಡಿ. 16): ಕಾಲೇಜಿಗೆ ದಾಖಲಾತಿ ಮಾಡಿಸುತ್ತೇನೆಂದು ತನ್ನ ರೂಮ್​ಗೆ ಕರೆಸಿಕೊಂಡ ಸ್ನೇಹಿತನೊಬ್ಬ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಿದ್ಯಾಭ್ಯಾಸಕ್ಕಾಗಿ ಹೊರರಾಜ್ಯದಿಂದ ಇಲ್ಲಿಗೆ ಆಗಮಿಸಿದ್ದ ಯುವತಿಯನ್ನು ಆಕೆಯ ಸಹಪಾಠಿ ಯುವಕನೇ ಅತ್ಯಾಚಾರಗೈದು ಕೊಲೆ ಮಾಡಿದ್ದಾನೆ. ಲಾಕ್​ಡೌನ್​ ಹಿನ್ನಲೆ ಒಂದು ಕಂತಿನ ಫೀಜ್​ ಅನ್ನುಬಾಕಿ ಉಳಿಸಿಕೊಂಡಿದ್ದು, ಅದನ್ನು  ಕಟ್ಟಲು ಆಕೆ ನಗರಕ್ಕೆ …

Read More »

ರಾಜ್ಯದ ಪ್ರಮುಖ ರಾಜಕಾರಣಿ BIGBOSS ದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ…………..?

ಬೆಂಗಳೂರು: ರಾಜ್ಯದ ಪ್ರಮುಖ ರಾಜಕಾರಣಿಗಳ ಪೈಕಿ ಒಬ್ಬರಾದ, ಕಾಲಕ್ಕೆ ತಕ್ಕಂತೆ, ಅಗತ್ಯಕ್ಕೆ ಅನುಗುಣವಾಗಿ, ಕ್ಷಣಾರ್ಧದಲ್ಲಿ ಗುಣಕಾರ ಭಾಗಕಾರ ಹಾಕಿ ಮಾತನಾಡುವ, ಮಾತಿನ ಮಧ್ಯೆ ಹಾಸ್ಯವನ್ನು ಹರಿಬಿಡುವ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಈಗ ರಾಜ್ಯದ ಜನತೆ ಮುಂದೆ ಇನ್ನೊಂದು ರೂಪದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ‘ಕಲರ್ಸ್ ಕನ್ನಡ’ ವಾಹಿನಿಯ ಜನಪ್ರಿಯ ಕಾರ್ಯಕ್ರಮ ‘ಬಿಗ್ ಬಾಸ್’ನಲ್ಲಿ ಭಾಗವಹಿಸುವಂತೆ ‘ಮಾತಿನ ಮಲ್ಲ’ ಹೆಚ್. ವಿಶ್ವನಾಥ್ ಅವರನ್ನು …

Read More »

ಉಸ್ತುವಾರಿ ಸಚಿವರನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾಂಗ್ರೆಸ್ ಶಾಸಕ : ಆಡಿಯೋ ವೈರಲ್

ಚಾಮರಾಜನಗರ(ಡಿಸೆಂಬರ್. 16): ಚಾಮರಾಜನಗರ ಜಿಲ್ಲೆಯಲ್ಲಿ ಕೆರೆ ನೀರು ತುಂಬಿಸುವ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಅವರನ್ನೇ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ಮೂರು ಹಾಗು ನಾಲ್ಕನೇ ಹಂತದ ಕೆರೆಗಳಿಗೆ ನೀರು ತುಂಬಿಸುವ ವಿಚಾರವಾಗಿ ಶಾಸಕ ಸಿ.ಪುಟ್ಟರಂಗಶೆಟ್ಟಿ ರೈತರೊಬ್ಬರೊಡನೆ ಪೋನ್ ನಲ್ಲಿ ಮಾತನಾಡುತ್ತಾ ಉಸ್ತುವಾರಿ ಸಚಿವರನ್ನೆ ಅವಾಚ್ಯ ಶಬ್ದ ಉಪಯೋಗಿಸಿ ನಿಂದಿಸಿದ್ದಾರೆ. ಅಲ್ಲದೆ ಕಾವೇರಿ ನೀರಾವರಿ …

Read More »

ಈ ವೇಳೆ ರಾಹುಲ್​ ಗಾಂಧಿಯವರಿಗೆ ಮಾತನಾಡದಲು ಸಮಿತಿ ಅಧ್ಯಕ್ಷರು ಅವಕಾಶ ನೀಡಲಿಲ್ಲ. ಈ ಹಿನ್ನಲೆ ಕಾಂಗ್ರೆಸ್​ ನಾಯಕರು ಸಭೆಯಿಂದ ಹೊರ ನಡೆಯಲು ನಿರ್ಧರಿಸಿದರು ಎಂದು ಅವರು ತಿಳಿಸಿದ್ದಾರೆ. ಈ ವೇಳೆ ಮತ್ತಿಬ್ಬರು ನಾಯಕರಾದ ಸತ್ವ ಹಾಗೂ ರೆಡ್ಡಿ ಕೂಡ ಅವರ ಹಾದಿ ಹಿಡಿದರು.

ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ಮಧ್ಯಭಾಗದಲ್ಲಿಯೇ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹೊರ ನಡೆದಿದ್ದಾರೆ. ಇವರ ಜೊತೆಗೆ ಕಾಂಗ್ರೆಸ್​ ಸಂಸದರಾದ ರಾಜೀವ್​ ಸತ್ವ ಹಾಗೂ ರೇವಂತ್​ ರೆಡ್ಡಿ ಕೂಡ ಹೊರ ನಡೆದಿದ್ದಾರೆ. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಮಸ್ಯೆ ಕುರಿತು ಚರ್ಚೆ ನಡೆಸುವ ಬದಲು ಸಶಸ್ತ್ರ ಪಡೆಗಳ ಸಮವಸ್ತ್ರ ಕುರಿತು ಚರ್ಚಿಸುವ ಮೂಲಕ ಸಮಯ ವ್ಯರ್ಥ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಚೀನಾದ ಆಕ್ರಮಣಶೀಲತೆ ಮತ್ತು …

Read More »

ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಬುಧವಾರ ನೋಟಿಸ್‌…?

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಯನ್ನು ವಿರೋಧಿಸಿ ದೆಹಲಿ ಗಡಿ ಭಾಗದ ಹಲವು ರಸ್ತೆಗಳಲ್ಲಿ ಪ್ರತಿಭಟಿಸುತ್ತಿರುವ ರೈತರನ್ನು ಸ್ಥಳಾಂತರಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ಕುರಿತಾಗಿ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಬುಧವಾರ ನೋಟಿಸ್‌ ಜಾರಿ ಮಾಡಿದೆ. ಅರ್ಜಿ ವಿಚಾರಣೆ ನಡೆಸಿದ ಪೀಠವು,’ಕೃಷಿ ಕಾನೂನು ಸಂಬಂಧಿತ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಮತ್ತು ರೈತ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯನ್ನು ರೂಪಿಸುವುದಾಗಿ ಹೇಳಿದೆ. ಈ ಪೀಠವು ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು …

Read More »

ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ನವದೆಹಲಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದು, 60 ಲಕ್ಷ ಟನ್ ಸಕ್ಕರೆಯನ್ನು ರೈತರಿಂದ ಖರೀದಿಸಿ ವಿದೇಶಗಳಿಗೆ ರಫ್ತು ಮಾಡಲು ನಿರ್ಧರಿಸಲಾಗಿದೆ. ಹೀಗೆ ಬಂದ ಹಣವನ್ನು ರೈತರ ಖಾತೆಗೆ ಜಮಾವಣೆ ಮಾಡಲು ಕೇಂದ್ರ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ ಎಂದು ಕೇಂದ್ರ ಸಚಿವ …

Read More »

ಹಾಡ ಹಗಲೇ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ

ಮಂಗಳೂರು: ಹಾಡ ಹಗಲೇ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್, ಮಹಿಳಾ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಬಂದರು ಠಾಣಾ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಜಿಲ್ಲೆಯಲ್ಲಿ ಯುವ ಮತದಾರರ ನೋಂದಣಿ ಹೆಚ್ಚಿಸುವುದರ ಜತೆಗೆ ಲೋಪರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಮತದಾರರ ಪಟ್ಟಿಯ ಪರಿಷ್ಕರಣೆ

ಬೆಳಗಾವಿ : ಜಿಲ್ಲೆಯಲ್ಲಿ ಯುವ ಮತದಾರರ ನೋಂದಣಿ ಹೆಚ್ಚಿಸುವುದರ ಜತೆಗೆ ಲೋಪರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಮಾರ್ಗಸೂಚಿ ಪ್ರಕಾರ ಸಮರ್ಪಕವಾಗಿ ನಡೆಸಬೇಕು ಎಂದು ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕ(ರೋಲ್ ಅಬ್ಸರ್ವರ್)  ಎಲ್.ಕೆ.ಅತೀಕ್ ಸೂಚನೆ ನೀಡಿದರು. ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಡಿ.16) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಶೇ.71 ರಷ್ಟು ಜನರ …

Read More »