ನವದೆಹಲಿ, ಮಾರ್ಚ್ 24: ಭಾರತದ ರಾಷ್ಟ್ರೀಯ ಹೆದ್ದಾರಿ ಟೋಲ್ನಿಂದ ತಿಂಗಳಾಂತ್ಯದ ವೇಳೆಗೆ 34,000 ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸಲಾಗುವುದು ಎಂದು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ನವದೆಹಲಿ ಮೂಲದ ಕೈಗಾರಿಕಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. “ನಾವು ರಸ್ತೆಗಳಿಂದ ಹಣ ಗಳಿಸುತ್ತಿದ್ದೇವೆ. ಸಾರ್ವಜನಿಕರಿಂದಲೂ ಈ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 2021ನೇ ಆರ್ಥಿಕ ಸಾಲಿನ ಅಂತ್ಯದ ವೇಳೆಗೆ ಅಂದರೆ ಮಾರ್ಚ್ 31ರ …
Read More »ರೈತನ ಮಗ ನ್ಯಾ ಎನ್ವಿ ರಮಣ ಸುಪ್ರೀಂಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿ
ನವದೆಹಲಿ: ಸುಪ್ರೀಂಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ಹಿರಿಯ ನ್ಯಾಯಮೂರ್ತಿ ಎನ್ವಿ ರಮಣ ಅವರು ನೇಮಕವಾಗುವುದು ಖಚಿತವಾಗಿದೆ. ನ್ಯಾ ರಮಣ ಅವರ ಹೆಸರನ್ನು ಸುಪ್ರೀಂಕೋರ್ಟ್ನ ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಅವರು ಸೂಚಿಸಿದ್ದಾರೆ. ನ್ಯಾ ಎಸ್ಎ ಬೊಬ್ಡೆ ಅವರು ಏಪ್ರೀಲ್ 23 ರಂದು ನಿವೃತ್ತಿಯಾಗಲಿದ್ದಾರೆ. ಸುಪ್ರೀಂಕೋರ್ಟ್ನ 48 ನೇ ಮುಖ್ಯ ನ್ಯಾಯಮೂರ್ತಿಯಾಗಿ ರಮಣ ಅವರು ಏಪ್ರೀಲ್ 24 ರಂದು ಪ್ರಮಾಣ ವಚನ ತೆಗೆದುಕೊಳ್ಳಲಿದ್ದಾರೆ. ಕಳೆದ ಶುಕ್ರವಾರ ಕೇಂದ್ರ ಕಾನೂನು ಸಚಿವ …
Read More »ಸುಧಾಕರ್ ರಾಜೀನಾಮೆಗೆ ವಿರೋಧ ಪಕ್ಷಗಳ ಆಗ್ರಹ: ಕಲಾಪ ಅನಿರ್ಧಿಷ್ಟ ಕಾಲ ಮುಂದೂಡಿಕೆ
ಬೆಂಗಳೂರು: ರಾಜ್ಯದ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆಯಾಗಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೀಡಿರುವ ಹೇಳಿಕೆಯನ್ನು ವಿರೋಧಿಸಿ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಚಿವ ಸುಧಾಕರ್ ಅವರ ರಾಜೀನಾಮೆಗೆ ಒತ್ತಾಯಿಸಿದರು. ಭೋಜನ ವಿರಾಮದ ಬಳಿಕ ಕಲಾಪ ಸೇರಿದಾಗ ಸುಧಾಕರ್ ಹೇಳಿಕೆಯನ್ನು ವಿಪಕ್ಷ ಸದಸ್ಯರು ಕಟುವಾಗಿ ಟೀಕಿಸಿದರು. ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಸಿದ್ದರಾಮಯ್ಯ ಮಾತನಾಡಿ, ‘ಸುಧಾಕರ್ …
Read More »ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿಕೆಶಿ ಏಕಪತ್ನಿ ವ್ರತ ಮಾಡ್ತಿದ್ದಾರಾ?: ಆರೋಗ್ಯ ಸಚಿವ ಡಾ.ಕೆ. ಸುಧಾಕರ್
ರಮೇಶ್ ಜಾರಕಿಹೊಳಿ CD ವಿಚಾರದಲ್ಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ನಡೆಸುತ್ತಿರೋ ಧರಣಿ, ಆರೋಪಗಳ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ‘ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಹೆಚ್.ಡಿ. ಕುಮಾರಸ್ವಾಮಿ.. ಇವರೆಲ್ಲರೂ ಸತ್ಯ ಹರಿಶ್ಚಂದ್ರರು. ಎಲ್ಲರೂ ಏಕಪತ್ನಿ ವ್ರತಸ್ಥರು. ಇವರೆಲ್ಲರೂ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೀಗಾಗಿ ನಾನೊಂದು ಚಾಲೆಂಜ್ ಹಾಕ್ತೀನಿ. ನಾನೂ ಸೇರಿದಂತೆ 225 ಶಾಸಕರ ಮೇಲೆ ತನಿಖೆ ನಡೆಯಲಿ. ಯಾರಿಗೆ ಅನೈತಿಕ ಸಂಬಂಧ ಇದೆ, ಯಾರ ಚರಿತ್ರೆ ಏನು ಅಂತ ಗೊತ್ತಾಗುತ್ತೆ. ಮುಖ್ಯಮಂತ್ರಿ …
Read More »ಐದು ನೋಟಿಸ್ ಗಳಿಗೂ ಯುವತಿಯಿಂದ ನೋ ರೆಸ್ಪಾನ್ಸ್ :ವಿಧಾನಸೌಧಕ್ಕೆ ದೌಡಾಯಿಸಿದ ಎಸ್ ಐಟಿ ಅಧಿಕಾರಿಗಳು
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಎಸ್ಐಟಿ ತನಿಖೆ ಗಂಟೆಗೊಂದು ಟ್ವಿಸ್ಟ್ ಗಳನ್ನು ಪಡೆಯುತ್ತಿದ್ದು, ಸಾಲು ಸಾಲು ಸುದ್ದಿಗಳು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಪ್ರಕರಣದ ಕುರಿತು ತನಿಖೆಗೆ ಹಾಜರಾಗುವಂತೆ ತನಿಖಾಧಿಕಾರಿಗಳು ಇಮೇಲ್ನಲ್ಲಿ ಕಳುಹಿಸಿದ್ದ ನೋಟಿಸ್ನ್ನು ಯುವತಿ ನೋಡಿದ್ದಾಳೆ ಎನ್ನುವ ಮಾಹಿತಿ ಹೊರಬಿದ್ದಿದೆ. ಆದರೆ, ಪೊಲೀಸರ ನೋಟಿಸ್ಗೆ ಆಕೆಯಿಂದ ಯಾವುದೇ ಉತ್ತರ ದೊರೆತಿಲ್ಲ ಎನ್ನಲಾಗ್ತಿದೆ. ಸಿಡಿ ಲೇಡಿಗೆ ಮತ್ತೊಂದು ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆದಿದ್ದು, ಎಸ್ …
Read More »ಟಿಆರ್ಪಿ ಹಗರಣ: ಅರ್ನಾಬ್ ಬಂಧಿಸಲು 3 ದಿನಗಳ ಮುಂಗಡ ನೋಟೀಸ್ ಕೊಡಿ; ಪೋಲೀಸರಿಗೆ ಹೈಕೋರ್ಟ್ ಸೂಚನೆ
ಮುಂಬೈ: ಟೆಲಿವಿಷನ್ ರೇಟಿಂಗ್ ಪಾಯಿಂಟ್ (ಟಿಆರ್ಪಿ) ಹಗರಣ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯವರನ್ನು ಬಂಧಿಸಲು ಬಯಸಿದರೆ ಮೂರು ದಿನಗಳ ಮುಂಗಡ ನೋಟಿಸ್ ನೀಡುವಂತೆ ಬಾಂಬೆ ಹೈಕೋರ್ಟ್ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ. ರಿಪಬ್ಲಿಕ್ ಟಿವಿ, ಎಲ್ಲಾ ರಿಪಬ್ಲಿಕ್ ಟಿವಿ ಚಾನೆಲ್ಗಳನ್ನು ನಡೆಸುವ ಎಆರ್ಜಿ ಔಟಿಯರ್ ಮೀಡಿಯಾ ಇತರ ಉದ್ಯೋಗಿಗಳು ಮತ್ತು ಟೆಲಿವಿಷನ್ ಚಾನೆಲ್ಗಳ ವಿರುದ್ಧದ ತನಿಖೆ 12 ವಾರಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮಹಾರಾಷ್ಟ್ರ ಸರ್ಕಾರ ನೀಡಿದ ಹೇಳಿಕೆಯನ್ನು …
Read More »ಎಲ್ಲರ ಮೇಲೆ ಆರೋಪ ಮಾಡೋದು ಸರಿಯಲ್ಲ; ಡಾ. ಸುಧಾಕರ್ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ಕಿಡಿ
ಬೆಂಗಳೂರು (ಮಾ. 24): ಯಾವೆಲ್ಲ ಸಚಿವರು, ಶಾಸಕರು ಏಕಪತ್ನಿವ್ರತಸ್ಥರು ಎಂಬುದು ಗೊತ್ತಾಗಲಿ, ಎಲ್ಲ 224 ಶಾಸಕರದ್ದೂ ತನಿಖೆಯಾಗಲಿ ಎಂಬ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಯಾರಿಗೆಲ್ಲ ಅನೈತಿಕ ಸಂಬಂಧವಿದೆ, ಯಾವ ಮುಖ್ಯಮಂತ್ರಿಗಳು ತಮ್ಮ ಅಧಿಕಾರಾವಧಿಯಲ್ಲಿ ಏನೆಲ್ಲ ಮಾಡಿದ್ದರು ಎಂಬುದು ತನಿಖೆಯಾಗಲಿ ಎಂದು ಡಾ. ಸುಧಾಕರ್ ಹೇಳಿದ್ದರು. ಇದಕ್ಕೆ ಈಗಾಗಲೇ ಡಿ.ಕೆ. ಶಿವಕುಮಾರ್, ಸೌಮ್ಯಾ ರೆಡ್ಡಿ, ಹೆಚ್.ಡಿ. ರೇವಣ್ಣ ಸೇರಿದಂತೆ ವಿಪಕ್ಷಗಳ ಅನೇಕ …
Read More »ನನಗಿರುವುದು ಒಬ್ಬಳೆ ಹೆಂಡ್ತಿ, ಒಂದೇ ಸಂಸಾರ’ : ಸಚಿವ ಸುಧಾಕರ್ ಗೆ ಡಿ.ಕೆ. ಶಿವಕುಮಾರ್ ತಿರುಗೇಟು
ಬೆಂಗಳೂರು : ರಾಜ್ಯದ 224 ಶಾಸಕರದ್ದೂ ತನಿಖೆಯಾಗಲಿ ಯಾರಿಗೆಲ್ಲಾ ಅನೈತಿಕ ಸಂಬಂಧ ಇದೆ ಎಂದು ಗೊತ್ತಾಗಲಿದೆ ಎಂದು ಸಚಿವ ಸುಧಾಕರ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಸಚಿವ ಸುಧಾಕರ್ ನುಡಿಮುತ್ತುಗಳನ್ನು ಇಡೀ ರಾಜ್ಯಕ್ಕೆ ಕೊಟ್ಟಿದ್ದಾರೆ. ಇವರ ಹೇಳಿಕೆ ಹೇಳಿಕೆಯನ್ನು ಅಸೆಂಬ್ಲಿಯಲ್ಲಿ ಚರ್ಚೆ ಮಾಡಬೇಕು. ಇದು ಸಾಮೂಹಿಕ ವಿಚಾರ, ನನಗಿರುವುದು ಒಬ್ಬ ಹೆಂಡತಿ, ನಂದು ಒಂದೇ ಸಂಸಾರ ಎಂದು ಹೇಳಿದ್ದಾರೆ. ಯಾವ್ಯಾವ ಮುಖ್ಯಮಂತ್ರಿಗಳು …
Read More »ಸುಧಾಕರ್ ಹೇಳಿದಂತೆ ಎಲ್ಲಾ 225 ಶಾಸಕರ ತನಿಖೆ ಮಾಡಲಿ : ಸತೀಶ್ ಜಾರಕಿಹೊಳಿ
ಬೆಂಗಳೂರು : ಅನೈತಿಕ ಸಂಬಂಧ ವಿಚಾರವಾಗಿ ಎಲ್ಲಾ ಶಾಸಕರ ತನಿಖೆ ಆಗಲಿ ಎಂದು ಸಚಿವ ಸುಧಾಕರ್ ಸವಾಲು ವಿಚಾರಕ್ಕೆ ಕಾಂಗ್ರೆಸ್ ಶಾಸಕ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸುಧಾಕರ್ ಬೇಡಿಕೆಯಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ತನಿಖೆ ಮಾಡಲಿ, ಎಲ್ಲಾ 225 ಶಾಸಕರ ಮೇಲೂ ತನಿಖೆ ನಡೆಯಲಿ ಎಂದು ಹೇಳಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇದ್ದವರು ಹೇಳಿದ್ದಾರೆ. ಹಾಗಾದರೆ ಎಲ್ಲರ ಮೇಲೂ ತನಿಖೆ ನಡೆಯಲಿ, ಸತ್ಯ ಶೋಧನ ಕಮಿಟಿ …
Read More »ಬಾರ್ಬಿಕ್ಯೂ ನೇಷನ್ ಐಪಿಒ ಇಂದಿನಿಂದ ಶುರು: ಬೆಲೆ 498-500 ರೂಪಾಯಿ
ದೇಶಾದ್ಯಂತ ಅನೇಕ ರೆಸ್ಟೋರೆಂಟ್ಗಳನ್ನು ಹೊಂದಿರುವ ಬಾರ್ಬಿಕ್ಯೂ ನೇಷನ್ ಹಾಸ್ಪಿಟಲಿಟಿ ಐಪಿಒ ಬುಧವಾರದಿಂದ ಆರಂಭವಾಗಿದ್ದು, ಆರಂಭಿಕ ಪ್ರೈಸ್ ಬ್ಯಾಂಡ್ ಅನ್ನು 498-500 ರೂಪಾಯಿ ನಿಗದಿಪಡಿಸಲಾಗಿದೆ. ಮಾರ್ಚ್ 24ರಿಂದ ಆರಂಭಗೊಂಡಿರುವ ಐಪಿಒ, ಮಾರ್ಚ್ 26ರಂದು ಮುಕ್ತಾಯವಾಗಲಿದೆ. 15 ಪ್ರಮುಖ ಹೂಡಿಕೆದಾರರನ್ನು ಒಳಗೊಂಡಿರುವ ಬಾರ್ಬಿಕ್ಯೂ ನೇಷನ್ 202 ಕೋಟಿ ರೂಪಾಯಿ ಸಂಗ್ರಹಿಸಲು 40,57,861 ಷೇರುಗಳನ್ನು ಮಾರಾಟ ಮಾಡಲಿದೆ. ನವೆಂಬರ್ 30, 2019 ರ ಹೊತ್ತಿಗೆ ಬಾರ್ಬಿಕ್ಯೂ ನೇಷನ್ ಭಾರತದ 73 ನಗರಗಳಲ್ಲಿ ಮತ್ತು ವಿದೇಶದಲ್ಲಿ …
Read More »
Laxmi News 24×7