Breaking News

ಡಿಕೆಶಿ ಕೆಪಿಸಿಸಿ ಪಟ್ಟ ಏರಿದ ತಕ್ಷಣವೇ ಲಕ್ಷ್ಮಿ ಪುತ್ರನಿಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿರ್ಯದರ್ಶಿ ಸ್ಥಾನ.

ಬೆಳಗಾವಿ: ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪಟ್ಟ ಏರುತ್ತಿದ್ದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ ಹೆಬ್ಬಾಳಕರ್ ಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಮೃಣಾಲ್ ಅವರು ವಿದ್ಯಾರ್ಥಿ ಕಾಂಗ್ರೆಸ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಆದ್ರೆ ಈಗ ಕೆಪಿಸಿಸಿ ನಾಯಕರು ಸಂಘಟನೆ ಚತುರತೆ ಕಂಡು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿಸಿದ್ದಾರೆ. ಜತೆಗೆ ಕಾಂಗ್ರೆಸ್ ನಲ್ಲಿ …

Read More »

ಕೊರೊನಾ ಮೂಲ ಹುಡುಕಲು ಹೊರಟ ಡಬ್ಲ್ಯೂಹೆಚ್‍ಓ- ಚೀನಾಕ್ಕೆ ಸಂಕಷ್ಟ ಶುರು

ನವದೆಹಲಿ: ವಿಶ್ವಾದ್ಯಂತ ಐದು ಲಕ್ಷ ಮಂದಿಯನ್ನು ಬಲಿ ಪಡೆದಿರುವ ಕೊರೊನಾ ಸೋಂಕಿನ ಮೂಲ ಪತ್ತೆ ಹಚ್ಚಲು ವಿಶ್ವ ಆರೋಗ್ಯ ಸಂಸ್ಥೆ ಮುಂದಾಗಿದೆ. ಈ ಬಗ್ಗೆ ತನಿಖೆ ನಡೆಸಲು ವಿಶೇಷ ತಂಡವೊಂದು ಮುಂದಿನ ವಾರ ಚೀನಾಕ್ಕೆ ತೆರಳುವುದಾಗಿ ಡಬ್ಲ್ಯೂಹೆಚ್‍ಓ ಹೇಳಿದೆ. ಕೊರೊನಾ ಸೋಂಕು ಕಾಣಿಸಿಕೊಂಡು ವಿಶ್ವಕ್ಕೆ ಹರಡಿದ ಆರು ತಿಂಗಳು ಬಳಿಕ ಅಧ್ಯಯನಕ್ಕೆ ಮುಂದಾಗಿರುವ ವಿಶ್ವ ಆರೋಗ್ಯ ಸಂಸ್ಥೆಯ ತಂಡ ವುಹಾನ್‍ಗೆ ಭೇಟಿ ನೀಡಲಿದೆ. ಅಲ್ಲಿ ಕೊರೊನಾ ವೈರಸ್ ಹುಟ್ಟಿದ್ದೇಗೆ ಹಾಗೂ …

Read More »

ಎಂಎಲ್‍ಸಿ ಪುಟ್ಟಣ ಅವರಿಗೂ ಕೊರೊನಾ ಸೋಂಕು

ಬೆಂಗಳೂರು: ಎಂಎಲ್‍ಸಿ ಪುಟ್ಟಣ ಅವರಿಗೂ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಕುರಿತು ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ಪುಟ್ಟಣ ಅವರು ನಿಮ್ಮ ಆಶೀರ್ವಾದದಿಂದ ಬೇಗ ಗುಣಮಖನಾಗಿ ಬರುತ್ತೇನೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಜ್ವರ ಇದ್ದುದರಿಂದ, ಕ್ವಾರಂಟೈನ್ ನಲ್ಲಿ ಇದ್ದೆ. ಗುರುವಾರ ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ತಪಾಸಣೆಯ ವರದಿ ಪಾಸಿಟಿವ್ ಬಂದಿರುವುದರಿಂದ ಶುಕ್ರವಾರ ಅಂದರೆ ನಿನ್ನೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದೇವರ …

Read More »

ನಾಲ್ವರು ಕೆ.ಎಸ್.ಆರ್.ಟಿ.ಸಿ ಕಂಡಕ್ಟರ್ ಗಳು ಸೇರಿದಂತೆ ಇಂದು 25 ಜನರಿಗೆ ಕೊರೊನಾ ಪಾಸಿಟಿವ್

ಹಾಸನ: ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ಕೆ.ಎಸ್.ಆರ್.ಟಿ.ಸಿ ಕಂಡಕ್ಟರ್ ಗಳು ಸೇರಿದಂತೆ ಹಾಸನದಲ್ಲಿ ಇಂದು 25 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ನಾಲ್ವರು ನಿರ್ವಾಹಕರು ಅರಸೀಕೆರೆ, ತುಮಕೂರು, ಬೆಂಗಳೂರು ಮಾರ್ಗದ ಬಸ್‍ಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಸೋಂಕಿತ ಕಂಡಕ್ಟರ್ ಗಳು ಹಲವರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದಾರೆ. ಇವರಷ್ಟೇ ಅಲ್ಲದೆ 25 ಜನರಲ್ಲಿ ಓರ್ವ ಪೊಲೀಸ್, ಇಬ್ಬರು ಆರೋಗ್ಯ ಇಲಾಖೆ ಸಿಬ್ಬಂದಿಗೂ ಇಂದು ಕೊರೊನಾ ಪಾಸಿಟಿವ್ ಬಂದಿರುವುದು …

Read More »

ಕೊರೊನಾ ಭಯಕ್ಕೆ ಗಂಟುಮೂಟೆ ಸಮೇತ ಊರಿಗೆ ಹೊರಟ ಜನ

ಬೆಂಗಳೂರು: ದಿನದಿಂದ ದಿನಕ್ಕೆ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ಇತ್ತ ಕೊರೊನಾ ಭಯದಿಂದ ಮತ್ತು ಭಾನುವಾರ ಕರ್ಫ್ಯೂ ಜಾರಿಯಾಗುವ ಹಿನ್ನೆಲೆಯಲ್ಲಿ ಜನರು ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಬೆಂಗಳೂರಿಗರು ಮತ್ತೆ ಲಾಕ್‍ಡೌನ್ ಆಗುತ್ತೆ ಎಂಬ ಭಯದಲ್ಲಿ ತಮ್ಮ ತಮ್ಮ ಸ್ವ-ಗ್ರಾಮಕ್ಕೆ ತೆರಳುತ್ತಿದ್ದಾರೆ. ಅನೇಕರು ಗಂಟು ಮೂಟೆ ಸಮೇತ ಊರುಗಳತ್ತ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ನವಯುಗ ಟೋಲ್ ಬಳಿ ಕಿಲೋಮೀಟರ್ ದೂರದವರೆಗೂ …

Read More »

ರಾಯಚೂರಿನ ಸರ್ಕಾರಿ ಕಚೇರಿಗಳಿಗೆ ಎದುರಾದ ಕೊರೊನಾ ಭೀತಿ

ರಾಯಚೂರು: ನಗರದ ಜಿಲ್ಲಾ ಪಂಚಾಯತ್ ಕಚೇರಿಗೆ ಕೊರೊನಾ ಸೋಂಕಿನ ಭೀತಿ ಎದುರಾಗಿದೆ. ಕೊರೊನಾ ಸೋಂಕಿತನ ಸಂಪರ್ಕಿತನೋರ್ವ ಕಚೇರಿ ತುಂಬಾ ಓಡಾಡಿರುವ ವಿಷಯ ತಿಳಿದ ಬಳಿಕ ಕಚೇರಿ ಸಿಬ್ಬಂದಿ ಆತಂಕಕ್ಕೊಳಗಾಗಿದ್ದಾರೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಪಂಚಾಯತಿ ಕಚೇರಿ ಹಾಗೂ ಆವರಣವನ್ನ ಡಿಸ್ ಇನ್ಫೆಕ್ಷನ್ ಮಾಡಲಾಗಿದೆ. ಸೋಂಕಿತನ ಸಂಪರ್ಕಿತ ಬಂದು ಹೋದಮೇಲೆ ರಾಸಾಯನಿಕ ಸಿಂಪಡಣೆ ಮೂಲಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಕಚೇರಿಯ ಎಲ್ಲಾ ಕೊಠಡಿ, ಸಭಾಂಗಣದಲ್ಲಿ ರಾಸಾಯನಿಕ ಸಿಂಪಡಣೆ ಮಾಡಲಾಗಿದೆ. ಅಗ್ನಿಶಾಮಕ …

Read More »

ತೈಲ ಬೆಲೆ ಏರಿಕೆ ಖಂಡಿಸಿ ಎತ್ತಿನ ಮೂಲಕ ಕೈ ಪ್ರತಿಭಟನೆ…..?

    ಅಥಣಿ: ಕೇಂದ್ರದಲ್ಲಿ ಅಂದು ಕಾಂಗ್ರೆಸ್ ಸರಕಾರದ ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಒಂದೆರಡು ರುಪಾಯಿ ತೈಲ ಬೆಲೆ ಹೆಚ್ಚಳ ಮಾಡಿದಾಗ ಬಿಜೆಪಿಯ ಸ್ಮೃತಿ ಇರಾಣಿ ಅವರು ಬಳೆಗಳನ್ನು ಕಳುಹಿಸಿಕೊಟ್ಟಿದ್ದರು. ಆದರೆ ಸುಮಾರು ೭-೪ ರುಪಾಯಿಗಳಷ್ಟು ತೈಲ ಬೆಲೆ ಏರಿಕೆಯಾಗಿದೆ. ಈಗೆಲ್ಲಿದ್ದಾರೆ ಎಂದು ಸ್ಮೃತಿ ಇರಾಣಿಗೆ ಕಾಂಗ್ರೆಸ್ ಮುಖಂಡ ಗಜಾನನ್ ಮಂಗಸೂಳೆ ಪ್ರಶ್ನೆ ಮಾಡಿದ್ದಾರೆ.. ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ತೈಲ ಬೆಲೆ ಖಂಡಿಸಿ ಚಕ್ಕಡಿ ಗಾಡಿಯಲ್ಲಿ ದ್ವೀಚಕ್ರವಾಹನ ಇಟ್ಟುಕೊಂಡು …

Read More »

ಬಿಟ್ಟು ಬಿಡದೆ ಸುರಿಯುತ್ತಿರೋ ಮಳೆ- ರಸ್ತೆ ತುಂಬೆಲ್ಲಾ ನೀರು

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಕಳೆದೆರಡು ದಿನಗಳಿಂದ ಕರಾವಳಿಯಲ್ಲಿ ಆಗ್ಗಾಗೆ ಬರುತ್ತಿದ್ದ ಮಳೆ ಇಂದು ಬಿಟ್ಟು ಬಿಡದೆ ಸುರಿಯುತ್ತಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳಲ್ಲೂ ಮಳೆ ಎಡೆಬಿಡದೆ ಸುರಿಯುತ್ತಿದೆ. ಪರಿಣಾಮ ನದಿ, ಹೊಳೆಗಳೆಲ್ಲಾ ಮೈತುಂಬಿ ಹರಿಯುತ್ತಿದೆ. ಮುಂಗಾರು ಆರಂಭವಾಗಿ ತಿಂಗಳುಗಳೇ ಕಳೆದರೂ ಈ ಬಾರಿ ಮಳೆ ಮಾತ್ರ ಬಿರುಸಾಗಿರಲಿಲ್ಲ. ಆದರೆ ಇಂದಿನಿಂದ ಮುಂಗಾರು ಅಬ್ಬರಿಸುತ್ತಿದೆ. ಮಂಗಳೂರು ನಗರದಲ್ಲೂ …

Read More »

1.03 ಕೋಟಿ ಮೌಲ್ಯದ ವಿದೇಶಿ ಸಿಗರೇಟ್ ವಶ

ಹೈದರಾಬಾದ್: ಅಕ್ರಮವಾಗಿ ಸಂಗ್ರಹಿಸಿ ಸಾಗಿಸಲಾಗುತ್ತಿದ್ದ ವಿದೇಶಿ ಸಿಗರೇಟನ್ನು ಟಾಸ್ಕ್ ಫೋರ್ಸ್ ಪೊಲೀಸರು ವಶಪಡಿಸಿಕೊಂಡಿದ್ದು, ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಬಳಿಯಿಂದ ಸುಮಾರು 1.03 ಕೋಟಿ ರೂ. ಮೌಲ್ಯದ ವಿದೇಶಿ ಸಿಗರೇಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಸಿದ್ದಿಯಂಬಾರ್ ಬಜಾರ್‌ನ ಸಮೀಪದಲ್ಲಿ ಆಟೋವೊಂದನ್ನು ಪೊಲೀಸರು ತಡೆದು ತಪಾಸಣೆ ಮಾಡಿದ್ದಾರೆ. ಆಗ ಆಟೋದಲ್ಲಿ ವಿವಿಧ ಬ್ರಾಂಡ್‍ಗಳ ಅಕ್ರಮವಾಗಿ ಆಮದು ಮಾಡಿಕೊಂಡ ವಿದೇಶಿ ಸಿಗರೇಟ್‍ಗಳ 503 ಪೆಟ್ಟಿಗೆ ಪತ್ತೆಯಾಗಿವೆ. ತಕ್ಷಣ ಆಟೋ …

Read More »

ಸಾಂಬ್ರಾ ವಿಮಾನ ನಿಲ್ದಾಣದಲ್ಲಿಸತೀಶ್ ಜಾರಕಿಹೊಳಿಅವರಿಗೆ ಅದ್ಧೂರಿ ಸ್ವಾಗತ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಅದ್ದೂರಿಯಾಗಿ ಸ್ವಾಗತಿಸಿದರು. ಜುಲೇ 2 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಧಿಕೃತವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿದ ಬಳಿಕ ಇದೇ ಮೊದಲ ಬಾರಿಗೆ  ಜಿಲ್ಲೆಗೆ ಆಗಮಿಸಿದ್ದು,ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.  ಕಾರ್ಯಾಧ್ಯಕ್ಷ , ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಸನ್ಮಾನಿ, …

Read More »