Breaking News

ಸೆಲ್ಫೀ ಗೀಳು : ಮಹಾರಾಷ್ಟ್ರದಲ್ಲಿ ನೀರುಪಾಲಾದ ಐವರು ಯುವಕರು..!

ಪಾಲ್‍ಗಢ (ಮಹಾರಾಷ್ಟ್ರ), ಜು.3-ಮೊಬೈಲ್ ಫೋನ್ ಸೆಲ್ಫೀ ಗೀಳಿಗೆ ಯುವ ಜನಾಂಗ ಬಲಿಯಾಗುತ್ತಿರುವ ಪ್ರಕರಣ ಮರುಕಳಿಸಿದ್ದು, ಮಹಾರಾಷ್ಟ್ರದಲ್ಲಿ ಐವರು ನೀರುಪಾಲಾಗಿದ್ದಾರೆ. ಪಾಲ್‍ಗಢ ಜಿಲ್ಲೆಯ ಜವಹರ್ ಪಟ್ಟಣದ ಬಳಿ ಇರುವ ಕಾಳಮಾಂಡವೀ ಜಲಪಾತದಲ್ಲಿ ನಿನ್ನೆ ಅಪರಾಹ್ನ ಈ ಘಟನೆ ಸಂಭವಿಸಿದೆ. ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಜವಾಹರ್ ಪಟ್ಟಣದ ಹೊರವಲಯದಲ್ಲಿರುವ ಜಲಪಾತ ವೀಕ್ಷಣೆಗಾಗಿ 13 ಯುವಕರ ಗುಂಪೊಂದು ತೆರಳಿತ್ತು. ಈ ಸಂದರ್ಭದಲ್ಲಿ ಇಬ್ಬರು ಸೆಲ್ಫೀ ತೆಗೆದುಕೊಳ್ಳುತ್ತಿದ್ದಾಗ ಕಾಲು ಜರಿ ಜಲಪಾತದ ನೀರಿನೊಳಗೆ ಬಿದ್ದರು. …

Read More »

ಸತ್ಯಸಾಯಿ ಸಂಸ್ಥೆಯ 2 ಹೊಸ ಕ್ಯಾಂಪಸ್ ಸ್ಥಾಪನೆಗೆ ರಾಜ್ಯ ಸರ್ಕಾರ ಅನುಮತಿ

ಮುದ್ದೇನಹಳ್ಳಿ: ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಇನ್ಸಿಟ್ಯೂಟ್ ಆಫ್ ಹ್ಯೂಮನ್ ಎಕ್ಸಲೆನ್ಸ್ ಸಂಸ್ಥೆಗೆ ಎರಡು ಹೊಸ ಕ್ಯಾಂಪಸ್ ಗಳನ್ನು ಸ್ಥಾಪಿಸಲು ರಾಜ್ಯ ಸರಕಾರ ಅನುಮತಿ ನೀಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿರುವ ಸಂಸ್ಥೆಗೆ ಗುರುವಾರ ಭೇಟಿ ನೀಡಿದ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು, ಸಂಸ್ಥೆಯ ಮುಖ್ಯಸ್ಥರಾದ ಸದ್ಗುರು ಶ್ರೀ ಮಧುಸೂಧನ ಸಾಯಿ ಅವರಿಗೆ ಅನುಮತಿ ಪತ್ರಗಳನ್ನು ಹಸ್ತಾಂತರ …

Read More »

ದತ್ತಪೀಠ ಹಿಂದುಗಳಿಗೆ ಸೇರಿದೆ ಎಂದು ಶೀಘ್ರವೇ ಸುಗ್ರೀವಾಜ್ಞೆ ಹೊರಡಿಸಬೇಕು. ಇಲ್ಲವಾದರೆ ಎಲ್ಲ ಶಾಸಕರಿಗೆ ಘೇರಾವ್: ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ,ಜು,3- ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠ ಹಿಂದುಗಳಿಗೆ ಸೇರಿದ್ದು. ಅದರಂತೆ ಈಗಿನ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್ಟ್ ನಿರ್ದೇಶನದ ಮೇರೆಗೆ ಹಿಂದಿನ ಕಾಂಗ್ರೆಸ್ ಸರ್ಕಾರ ನ್ಯಾ. ನಾಗಮೋಹನದಾಸ್ ನೇತೃತ್ವದಲ್ಲಿ ಆಯೋಗವನ್ನು ರಚಿಸಿತ್ತು. ಅದರಲ್ಲಿ ಎಡಪಂಥೀಯರು, ಹಿಂದು ವಿರೋಧಿಗಳು ಇದ್ದರು. ಈ ಆಯೋಗದ ವರದಿ ತಿರಸ್ಕರಿಸಿ, ದತ್ತಪೀಠ ಹಿಂದುಗಳಿಗೆ ಸೇರಿದೆ ಎಂದು ಶೀಘ್ರವೇ ಸುಗ್ರೀವಾಜ್ಞೆ ಹೊರಡಿಸಬೇಕು. …

Read More »

ಕಿಮ್ಸ್‌ನಿಂದ ಶುಕ್ರವಾರ ಬೆಳಿಗ್ಗೆ ಪರಾರಿಯಾಗಿದ್ದ ಕೊರೊನಾ ಸೋಂಕಿತ ರಾತ್ರಿ ಗದಗದಲ್ಲಿ ಸಿಕ್ಕು ಬಿದ್ದಿದ್ದಾನೆ.

ಹುಬ್ಬಳ್ಳಿ: ಕಿಮ್ಸ್‌ನಿಂದ ಶುಕ್ರವಾರ ಬೆಳಿಗ್ಗೆ ಪರಾರಿಯಾಗಿದ್ದ ಕೊರೊನಾ ಸೋಂಕಿತ ರಾತ್ರಿ ಗದಗದಲ್ಲಿ ಸಿಕ್ಕು ಬಿದ್ದಿದ್ದಾನೆ. ಇದರಿಂದಾಗಿ ಜಿಲ್ಲಾಡಳಿತ ಹಾಗೂ ಪೊಲೀಸರು ನಿಟ್ಟುಸಿರು ಬಿಡುವಂತಾಗಿದೆ. ಕಳ್ಳತನದ ಆರೋಪದ ಮೇಲೆ ಬಂಧಿತನಾಗಿದ್ದ ಕೊರೊನಾ ಸೋಂಕಿತ ಆರೋಪಿ ಶುಕ್ರವಾರ ಬೆಳಗ್ಗೆ 5.30ರ ಸುಮಾರಿಗೆ ಐಸೋಲೇಷನ್ ವಾರ್ಡ್‍ನಿಂದ ಹೊರಬಂದ 55 ವರ್ಷದ ಸೋಂಕಿತ ಆರೋಪಿ ಎಲ್ಲರ ಕಣ್ತಪ್ಪಿಸಿ ಪರಾರಿಯಾಗಿದ್ದ. ಬೆಳಗ್ಗೆ ವೈದ್ಯರು ಚಿಕಿತ್ಸೆ ನೀಡಲು ತೆರಳಿದ ವೇಳೆ ಇದು ಬೆಳಕಿಗೆ ಬಂದಿತ್ತು. ಈತನನ್ನು ಕಾಯ್ದುಕೊಳ್ಳಲು ಇಬ್ಬರು …

Read More »

ಬಂಧಿಸಲು ಹೋದಾಗ ಕ್ರಿಮಿನಲ್ ಗ್ಯಾಂಗ್‍ನಿಂದ ಫೈರಿಂಗ್- 8 ಮಂದಿ ಪೊಲೀಸರು ದುರ್ಮರಣ

ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿ 8 ಮಂದಿ ಪೊಲೀಸರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿವೈಎಸ್ಪಿ, ಮೂವರು ಸಬ್ ಇನ್ಸ್ ಪೆಕ್ಟರ್‍ಗಳು ಹಾಗೂ ನಾಲ್ಕು ಮಂದಿ ಕಾನ್ಸ್ ಸ್ಟೇಬಲ್ ಗಳನ್ನು ಕಾನ್ಪುರದ ಡಿಕ್ರು ಗ್ರಾಮದಲ್ಲಿ ಕ್ರಿಮಿನಲ್ ಗ್ಯಾಂಗ್ ಹತ್ಯೆ ಮಾಡಿದೆ. ಈ ಘಟನೆ ಉತ್ತರಪ್ರದೇಶ ರಾಜಧಾನಿ ಲಕ್ನೋದಿಂದ 150 ಕಿ.ಮಿ ದೂರದಲ್ಲಿ ನಡೆದಿದೆ. ಮೃತರನ್ನು ಸಿಒ ದೇವೇಂದ್ರ ಕುಮಾರ್ ಮಿಶ್ರಾ, ಎಸ್‍ಒ ಮಹೇಶ್ ಯಾದವ್, ಅನೂಪ್ ಕುಮಾರ್, ಸಬ್ ಇನ್ಸ್ …

Read More »

ಕೊರೊನಾ ಎಂಬ ಮಹಾಮಾರಿ ಬದುಕು ಬದಲಿಸಿ ಈಗ ಬೀದಿಯಲ್ಲಿ ನಿಂತು ಕೆಲಸ ಮಾಡುವಂತೆ ಮಾಡಿದೆ.

ಬೆಂಗಳೂರು: ಕೊರೊನಾ ಸುನಾಮಿ ಹಲವರ ಬದುಕನ್ನು ಅತಂತ್ರ ಮಾಡಿದೆ. ಲಾಕ್‍ಡೌನ್‍ಗೂ ಮುಂಚೆ ಹೇಗೋ ಜೀವನಸಾಗಿಸುತ್ತಿದ್ದ ವಯೋವೃದ್ಧೆಯರು ಈಗ ದುಡಿಮೆಗಾಗಿ ಗಾಳಿ, ಬಿಸಿಲು, ಮಳೆ ಎನ್ನದಂತೆ ದುಡಿಯಬೇಕಿದೆ. ಕೊರೊನಾ ಎಂಬ ಮಹಾಮಾರಿ ಬದುಕು ಬದಲಿಸಿ ಈಗ ಬೀದಿಯಲ್ಲಿ ನಿಂತು ಕೆಲಸ ಮಾಡುವಂತೆ ಮಾಡಿದೆ. ಮನೆಗೆಲಸ ಮಾಡುತ್ತಿದ್ದ ಮಹಿಳೆ, ಕಳೆದ 10 ವರ್ಷಗಳಿಂದ ತಿಂಗಳಿಗೊಮ್ಮೆ ಸಂಬಳ. ಹತ್ತಾರು ಮನೆಯಲ್ಲಿ ಅಡುಗೆ, ಕ್ಲಿನಿಂಗ್ ಕೆಲಸ ಇಷ್ಟೇ ಈಕೆ ಪ್ರಪಂಚವಾಗಿತ್ತು. ಆದರೆ ಇದೀಗ ಎಲ್ಲವೂ ಬದಲಾಗಿದೆ. …

Read More »

ರುದ್ರ-ರಮಣೀಯ ತಾಣ ದೇವರಮನೆ ಗುಡ್ಡಕ್ಕೆ ತಾತ್ಕಾಲಿಕವಾಗಿ ಪ್ರವಾಸಿಗರನ್ನ ಸಂಪೂರ್ಣ ನಿಷೇಧ…….

ಚಿಕ್ಕಮಗಳೂರು: ಕೊರೊನಾ ಮಹಾಮಾರಿಯಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ರುದ್ರ-ರಮಣೀಯ ತಾಣ ದೇವರಮನೆ ಗುಡ್ಡಕ್ಕೆ ತಾತ್ಕಾಲಿಕವಾಗಿ ಪ್ರವಾಸಿಗರನ್ನ ಸಂಪೂರ್ಣ ನಿಷೇಧಿಸಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ರುದ್ರ-ರಮಣೀಯ ತಾಣ ದೇವರಮನೆ ಗುಡ್ಡದ ಸೌಂದರ್ಯ ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿತ್ತು. ಲಾಕ್‍ಡೌನ್ ಸಡಿಲವಾಗುತ್ತಿದ್ದಂತೆ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಜನಜಾತ್ರೆ ಏರ್ಪಡುತ್ತಿತ್ತು. ಅದರಲ್ಲೂ ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡಕ್ಕೆ ಭಾರೀ ಪ್ರವಾಸಿಗರು ಭೇಟಿ ಕೊಡುತ್ತಿದ್ದರು. ದೇವರಮನೆ ಗುಡ್ಡಕ್ಕೆ ಬರುತ್ತಿದ್ದ ಪ್ರವಾಸಿಗರು ಎಲ್ಲೆಂದರಲ್ಲಿ ಮಧ್ಯದ ಬಾಟಲಿ ಹಾಗೂ ಪ್ಲಾಸ್ಟಿಕ್, …

Read More »

ಶಿವಣ್ಣ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಳ್ಳದಿರಲು ನಿರ್ಧಾರಿಸಿದ್ದಾರೆ.

ಬೆಂಗಳೂರು: ಹೆಮ್ಮಾರಿ ಕೊರೊನಾದಿಂದ ಈಗಾಗಲೇ ಅನೇಕ ನಟರು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದೀಗ ಸ್ಯಾಂಡಲ್‍ವುಡ್‍ನ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ತಮ್ಮ ಹುಟ್ಟುಹಬ್ಬಕ್ಕೂ ಮುನ್ನ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದೇ ತಿಂಗಳ 12ರಂದು ಶಿವಣ್ಣ ಅವರ ಹುಟ್ಟುಹಬ್ಬವಿದೆ. ಪ್ರತಿ ವರ್ಷ ಸಾವಿರಾರು ಅಭಿಮಾನಿಗಳು ಶಿವಣ್ಣ ಅವರ ಮುಂದೆ ಜಮಾಯಿಸುತ್ತಿದ್ದರು. ಹೂವಿನ ಹಾರ, ಕೇಕ್ ತಂದು ಸಂಭ್ರಮಿಸುತ್ತಿದ್ದರು. ಆದರೆ ಈ ಕೊರೊನಾದಿಂದ ಯಾವುದೇ ಸಂಭ್ರಮಕ್ಕೂ …

Read More »

ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ ಸೀಲ್‍ಡೌನ್ ಮಾಡಲಾಗಿದೆ.

ಬೆಳಗಾವಿ: ಪೊಲೀಸರಿಂದ ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಬಂದಿದ್ದು, ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸಿಬ್ಬಂದಿ ಸೀಲ್‍ಡೌನ್ ಮಾಡಿದ್ದಾರೆ. ಸದ್ಯ ಕ್ಯಾಂಪ್ ಪೊಲೀಸ್ ಠಾಣೆಯನ್ನು ಮಹಿಳಾ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಲಾಗಿದೆ. ಜೂ.27ರಂದು 29 ವರ್ಷದ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧಿಸಿ ಕೋವಿಡ್ ಟೆಸ್ಟ್ ಮಾಡಿದಾಗ ಆರೋಪಿಗೆ ಕೊರೊನಾ ದೃಢವಾಗಿತ್ತು. 29 ವರ್ಷದ ರೋಗಿ-18291ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆರೋಪಿಯ ಪ್ರಾಥಮಿಕ ಸಂಪರ್ಕಕ್ಕೆ …

Read More »

ಧ್ರುವ ಸರ್ಜಾ ಆರೋಗ್ಯವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಬೆಂಗಳೂರು: ನಟ ಧ್ರುವ ಸರ್ಜಾ ಅವರಿಗೆ ಆರೋಗ್ಯ ಸಮಸ್ಯೆ ಆಗಿದೆ. ಲೋ ಬಿಪಿಯಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಂತ ಗಾಂಧಿನಗರದಲ್ಲಿ ಸುದ್ದಿಯಾಗಿತ್ತು. ಈ ಎಲ್ಲಾ ಗಾಸಿಪ್ ಗಳಿಗೆ ಧ್ರುವ ಆಪ್ತ ವಲಯ ಉತ್ತರ ಕೊಟ್ಟಿದೆ. ಧ್ರುವ ಸರ್ಜಾ ಆರೋಗ್ಯವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕಳೆದ ತಿಂಗಳು ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಆರಾಮಾಗಿದ್ದಾರೆ. ತಂದೆ, ತಾಯಿ ಕೂಡ ಆರಾಮಾಗಿದ್ದಾರೆ ಅಂತ ಧ್ರುವ ಆಪ್ತವಲಯ ಪಬ್ಲಿಕ್ …

Read More »