Breaking News

ತಿಂಗಳಿಗೆ 100 ಕೋಟಿ ರೂ ಲಂಚ ಸಂಗ್ರಹಿಸಿ ಕೊಡುವಂತೆ ಗೃಹ ಮಂತ್ರಿಗಳ ಆದೇಶವಿತ್ತು: ‘ಮಹಾ’ ಮಾಜಿ ಪೊಲೀಸ್ ಆಯುಕ್ತರ ಸ್ಫೋಟಕ ಹೇಳಿಕೆ

ಮುಂಬೈ: ತಿಂಗಳಿಗೆ 100 ಕೋಟಿ ರೂ ಲಂಚ ಸಂಗ್ರಹಿಸಿ ಕೊಡುವಂತೆ ಗೃಹ ಮಂತ್ರಿಗಳ ಆದೇಶವಿತ್ತು ಎಂದು ಮಹಾರಾಷ್ಟ್ರ ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉದ್ಯಮಿ ಮುಕೇಶ್‌ ಅಂಬಾನಿ ಅವರ ಮನೆ ಬಳಿ ಪತ್ತೆಯಾದ ಸ್ಫೋಟಕ ವಾಹನದ ಪ್ರಕರಣವನ್ನು ಸಮರ್ಪಕವಾಗಿ ನಿಭಾಯಿಸಿಲ್ಲ ಎನ್ನುವ ಕಾರಣಕ್ಕೆ ಮಹಾರಾಷ್ಟ್ರ ಸರ್ಕಾರ ಮುಂಬೈ ನಗರ ಪೊಲೀಸ್‌ ಆಯುಕ್ತರಾಗಿದ್ದ ಪರಮ್ ಬೀರ್ ಸಿಂಗ್ ಅವರನ್ನು ಗೃಹ ರಕ್ಷಕ ದಳದ ಮುಖ್ಯಸ್ಥರನ್ನಾಗಿ ಗುರುವಾರವಷ್ಟೇ …

Read More »

ಮಧ್ಯರಾತ್ರಿ ಬಂದು, ಬೆಳಗ್ಗೆ ಎದ್ದು ಹೋಗಿದ್ದು ಗ್ರಾಮ ವಾಸ್ತವ್ಯವೇ? : ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಇಲಾಖೆಯ ಆಡಳಿತವನ್ನು ಜನರ ಮನೆ ಬಾಗಿಲಿಗೆ ತಂದಿರುವ ಕಂದಾಯ ಸಚಿವ ಅಶೋಕ್ ಮಾಡುತ್ತಿರುವ ಕೆಲಸವೇ ನಿಜವಾದ ಗ್ರಾಮ ವಾಸ್ತವ್ಯ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ ಈ ಹಿಂದೆ ಕೆಲವು ಜನಪ್ರತಿನಿಧಿಗಳು ಮಧ್ಯರಾತ್ರಿ ಬಂದು ಬೆಳಗ್ಗೆ ಎದ್ದು ಹೋಗಿದ್ದು ಗ್ರಾಮ ವಾಸ್ತವ್ಯವೇ ? ಎಂದು ಪ್ರಶ್ನಿಸಿದ್ದಾರೆ. ಮೊದಲು ಜನರು ತಮಗೆ …

Read More »

ಬಿಎಸ್‍ವೈ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಬಿಜೆಪಿ ಸೋಲು : ಯತ್ನಾಳ

ವಿಜಯಪುರ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆತೃತ್ವದಲ್ಲಿ ಚುನಾವಣೆ ಎದರುಸಿದಲ್ಲಿ ಬಿಜೆಪಿ ಪಕ್ಷಕ್ಕೆ ಸೋಲು ಖಚಿತ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕಾಗಿ ಸಿ.ಎಂ. ಬದಲಾವಣೆ ಅನಿವಾರ್ಯ ಎಂದು ಬಿಜೆಪಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು. ಶನಿವಾರ ನಗರದಲ್ಲಿ ರಾತ್ರಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ತಡೊಗಿರುವ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯಲೇಬೇಕು. ಬಿಜೆಪಿ ಉಳಿಬೇಕಿದ್ದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲೇಬೇಕು. ಸಿ.ಎಂ. ಬಚಲಾವಣೆ ನೂರಕ್ಕೆ ನೂರರಷ್ಟು ಖಚಿತ. ಭ್ರಷ್ಟಾಚಾರ …

Read More »

ಬಸವಕಲ್ಯಾಣ ಉಪ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ? ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ

ಸಿಂಧನೂರು (ರಾಯಚೂರು): ಈ ಬಾರಿಯ ಉಪ ಚುನಾವಣೆಯಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯೇಂದ್ರ ಅಭ್ಯರ್ಥಿಯಾಗಲಿದ್ದಾರೆ ಎಂಬುದು ನೂರಕ್ಕೆ ನೂರು ಸುಳ್ಳು. ಆದರೆ, ಅವರು ಮೈಸೂರಿಗೆ ಹೋಗಿ ಅಲ್ಲಿರುತ್ತಾರೆ. ಅಲ್ಲಿಯೇ ಮನೆ ಮಾಡಲಿದ್ದು, ಇದರಿಂದ ಐದಾರು ಜಿಲ್ಲೆಗಳಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಮುಂದಿನ ಬಾರಿ ವರುಣಾ ಕ್ಷೇತ್ರಕ್ಕೆ ಯಾರು ಸ್ಪರ್ಧಿಸುತ್ತಾರೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ನಗರದಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. …

Read More »

ಉಸ್ತುವಾರಿ ಸಚಿವರ ಸಮ್ಮುಖದಲ್ಲೇ ಕೈ ಕೈ ಮಿಲಾಯಿಸಿದ ಮುಖಂಡರು

ಮಳವಳ್ಳಿ: ‘ಸರ್ಕಾರದ ನಡೆ ಗ್ರಾಮದ ಕಡೆ’ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಸಮ್ಮುಖದಲ್ಲೇ ಶನಿವಾರ ಕಾಂಗ್ರೆಸ್‌-ಜೆಡಿಎಸ್‌ ಸದಸ್ಯರು ಮಾತಿನ ಚಕಮಕಿ ನಡೆದಿ ಕೈಕೈ ಮಿಲಾಯಿಸಲು ಮುಂದಾದರು. ‌ತಾಲ್ಲೂಕಿನ ಬಿಜಿಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಕಾರ್ಯಕ್ರಮದಲ್ಲಿ ತಾ.ಪಂ.ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡುತ್ತಾ ಮಾಜಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಹೆಸರು ಪ್ರಸ್ತಾಪಿಸಿದರು. ಬಹು ನಿರೀಕ್ಷಿತ ಪೂರಿಗಾಲಿ ಹನಿ ನೀರಾವರಿ ಕಾಮಗಾರಿ ಕುಂಠಿತವಾಗಿದ್ದು, ಕಾಮಗಾರಿ ಪೂರ್ಣಗೊಳಿಸುವಂತೆ …

Read More »

ರಥೋತ್ಸವದಲ್ಲಿ ಬಾಳೆ ಹಣ್ಣಿನ ಮೇಲೆ `NEXT CM ಸಿದ್ದರಾಮಯ್ಯ’ ಎಂದು ಬರೆದು ಹರಕೆ ತೀರಿಸಿದ ಅಭಿಮಾನಿ!

ಬಳ್ಳಾರಿ : ಬಳ್ಳಾರಿ ತಾಲೂಕಿನ ಗೋನಾಳ್ ಗ್ರಾಮದಲ್ಲಿ ನಡೆದ ಗಾಧಿಲಿಂಗೆಶ್ವರ ರಥೋತ್ಸವದಲ್ಲಿ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ ಎಂದು ಅಭಿಮಾನಿಯೊಬ್ಬರು ರಥೋತ್ಸವದ ವೇಳೆ ಬಾಳೆ ಹಣ್ಣು ಎಸೆದು ಹರಕೆ ತೀರಿಸಿದ್ದಾರೆ. ಹೌದು, ಶನಿವಾರ ಗೋನಾಳ್ ಗ್ರಾಮದಲ್ಲಿ ಜರುಗಿದ ಗಾದಿಲಿಂಗೇಶ್ವರ ರಥೋತ್ಸವದ ವೇಳೆ ಸಿದ್ದರಾಮಯ್ಯ ಅಭಿಮಾನಿ ವಿರೇಶ್ ಎಂಬುವರು Next CM ಸಿದ್ದರಾಮಯ್ಯ ಎಂದು ಬರೆದು ಗಾಧಿಲಿಂಗೇಶ್ವರ ರಥೋತ್ವದಲ್ಲಿ ಬಾಳೆ ಹಣ್ಣನ್ನು ಎಸೆದಿದ್ದಾರೆ. ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಗೆ ಇನ್ನೂ ಮೂರು ವರ್ಷವಿದ್ದು, …

Read More »

ಬೆಳಗಾವಿ: 8 ವಿಧಾನಸಭಾ ಕ್ಷೇತ್ರಗಳ ಪೈಕಿ 6 ಕಡೆ ಬಿಜೆಪಿ ಪ್ರಾಬಲ್ಯ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 6ರಲ್ಲಿ ಬಿಜೆಪಿ ಶಾಸಕರಿದ್ದಾರೆ. ಎರಡು ಕಡೆ ಮಾತ್ರ ಕಾಂಗ್ರೆಸ್‌ ಪ್ರತಿನಿಧಿಗಳಿದ್ದಾರೆ. ಜೊತೆಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿಯಲ್ಲೂ ಬಿಜೆಪಿಯವರ ಬಲವೇ ಹೆಚ್ಚಿದೆ. ಅಲ್ಲದೇ, ಈಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಕಮಲ ಪಕ್ಷದ ಬೆಂಬಲಿತರು ಜಾಸ್ತಿ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಇವೆಲ್ಲ ಅಂಶಗಳೂ ಉಪ ಚುನಾವಣೆಯಲ್ಲಿ ಪರಿಣಾಮ ಬೀರಲಿವೆ. ಬೆಳಗಾವಿ ಉತ್ತರ (ಅನಿಲ ಬೆನಕೆ), ಬೆಳಗಾವಿ ದಕ್ಷಿಣ (ಅಭಯ ಪಾಟೀಲ), …

Read More »

ಬಿರುಸುಗೊಂಡ ಉಪ ಚುನಾವಣೆ ಕಣ

ಬೆಂಗಳೂರು: ಬೆಳಗಾವಿ ಲೋಕ ಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನ ಸಭೆ ಕ್ಷೇತ್ರಗಳ ಉಪ ಚುನಾವಣೆ ಸಂಬಂಧ 3 ಪಕ್ಷಗಳಲ್ಲಿ ಚಟುವಟಿಕೆಗಳು ತೀವ್ರಗೊಂಡಿವೆ. ಶನಿವಾರ ನಡೆದ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದು ಮೂರೂ ಕ್ಷೇತ್ರಗಳಿಗೆ ಸಂಭಾವ್ಯರ ಬಗ್ಗೆ ಚರ್ಚಿಸಿದ್ದು, ಕೇಂದ್ರ ಚುನಾವಣ ಸಮಿತಿಗೆ ಹೆಸರು ಶಿಫಾರಸು ಮಾಡುವ ಅಧಿಕಾರ ರಾಜ್ಯಾಧ್ಯಕ್ಷರಿಗೆ ಕೊಡಲಾಗಿದೆ. ಈ ಮಧ್ಯೆ, ಬಳ್ಳಾರಿ ಜಿಲ್ಲೆಯ ತೋರಣಗಲ್ಲು ವಿಮಾನ ನಿಲ್ದಾಣದಲ್ಲಿ …

Read More »

ಅತಿಥಿ ಉಪನ್ಯಾಸಕರಿಗೆ ಶುಭಸುದ್ದಿ : ಖಾಲಿ ಇರುವ 1,835 ಹುದ್ದೆಗಳಿಗೆ `ಅತಿಥಿ ಉಪನ್ಯಾಸಕರ’ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆ

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಸರ್ಕಾರ ಅನುಮೋದನೆ ನೀಡಿದೆ.   ಅತಿಥಿ ಉಪನ್ಯಾಸಕರ ನೇಮಕ ಸಂಬಂಧ ಪಿಯು ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. 2021 ನೇ ಸಾಲಿನ ಫೆಬ್ರವರಿ ತಿಂಗಳಿಂದ ಮಾಸಿಕ 9 ಸಾವಿರ ರೂ. ಗೌರವಧನದ ಆಧಾರದಲ್ಲಿ …

Read More »

ರಾಜ್ಯದ ಆಸ್ಪತ್ರೆಗಳಲ್ಲಿ ಗುತ್ತಿಗೆ ನೌಕರರ ಸೇವೆ 6 ತಿಂಗಳಿಗೆ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಸಿಬ್ಬಂದಿಯನ್ನು ಮುಂದಿನ 6 ತಿಂಗಳಿಗೆ ಮುಂದುವರೆಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.   ರಾಜ್ಯದ 18 ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೆ ತಾತ್ಕಾಲಿಕವಾಗಿ ವೈದ್ಯರು, ಶುಶ್ರೂಷಕರು, ಪ್ರಯೋಗಾಲಯ ತಜ್ಞರು ಸೇರಿ 45 ಮಂದಿ ನೇಮಕಕ್ಕೆ ಸೂಚಿಸಲಾಗಿತ್ತು. ಒಟ್ಟಾರೆ ರಾಜ್ಯದಲ್ಲಿ 810 ಸಿಬ್ಬಂದಿ ನೇಮಕಗೊಂಡಿದ್ದರು. ಸದ್ಯ ಅವರ ಸೇವಾವಧಿ ಮುಕ್ತವಾಗುತ್ತಿದೆ. ಕೊರೊನಾ …

Read More »