Breaking News

ಗುಡ್ ನ್ಯೂಸ್: ಬಿಡುಗಡೆಯಾದವರ ಸಂಖ್ಯೆ ಭಾರೀ ಹೆಚ್ಚಳ – 5773 ಜನರಿಗೆ ಸೋಂಕು, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ 5773 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 4,04,324 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ನಿನ್ನೆ 8015 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 3,00,770 ಜನ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ 141 ಮಂದಿ ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 6134 ಕ್ಕೆ ಏರಿಕೆಯಾಗಿದೆ. 97,001 ಸಕ್ರಿಯ ಪ್ರಕರಣಗಳಿದ್ದು, 794 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ಬಾಗಲಕೋಟೆ 126, ಬಳ್ಳಾರಿ 266, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು …

Read More »

ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆಗೆ ಅನುಮೋದನೆ: ಸುರೇಶ್ ಅಂಗಡಿ

ಬೆಳಗಾವಿ,  : ಉತ್ತರ ಕರ್ನಾಟಕ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಕಿತ್ತೂರು-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆಗೆ ಅನುಮೊದನೆ ದೊರೆತಿದ್ದು, ಈ ಯೋಜನೆಗೆ 927.40 ಕೋಟಿ ವೆಚ್ಚವಾಗಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ. ಸೋಮವಾರ ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಗೊಂಡಲ್ಲಿ ಪ್ರಮುಖ ನಗರಗಳಾದ ಬೆಳಗಾವಿ, ಧಾರವಾಡ ಹಾಗೂ ಹುಬ್ಬಳ್ಳಿಗೆ ಕಡಿಮೆ ಸಮಯದಲ್ಲಿ ಸಂಪರ್ಕ ಸಾಧ್ಯವಾಗಲಿದೆ. ಜತೆಗೆ ಮುಂದಿನ ವರ್ಷಗಳಲ್ಲಿ …

Read More »

ಹುಬ್ಬಳ್ಳಿ-ಬೆಳಗಾವಿ ನಡುವಿನ ಹೊಸ ಮಾರ್ಗಕ್ಕೆ ರೈಲ್ವೆ ಮಂಡಳಿ ಅನುಮೋದನೆ

ಹುಬ್ಬಳ್ಳಿ: ಕಿತ್ತೂರು ಮತ್ತು ಧಾರವಾಡದ ಮಾರ್ಗವಾಗಿ ಬೆಳಗಾವಿ ಮತ್ತು ಹುಬ್ಬಳ್ಳಿ ನಡುವಿನ 73 ಕಿಲೋಮೀಟರ್ ಉದ್ದದ ಹೊಸ ರೈಲ್ವೆ ಮಾರ್ಗದ ಯೋಜನೆಗೆ ರೈಲ್ವೆ ಮಂಡಳಿ ಅನುಮೋದಿಸಿದೆ ಎಂದು ನೈರುತ್ಯ ರೈಲ್ವೆ ಪ್ರಧಾನ ಕಚೇರಿ ಸೋಮವಾರ ಪ್ರಕಟಿಸಿದೆ. ಇದರಂತೆ, ಹೊಸ ಮಾರ್ಗ ಬೆಳಗಾವಿ-ಹುಬ್ಬಳ್ಳಿ ನಡುವಿನ ಪ್ರಯಾಣದ ಸಮಯವನ್ನು ಕನಿಷ್ಠ ಒಂದು ಗಂಟೆಯವರೆಗೆ ಕಡಿಮೆ ಮಾಡುವ ಸಾಧ್ಯತೆಯಿದೆ. ರಸ್ತೆ ಮಾರ್ಗಕ್ಕೆ ಹೋಲಿಸಿದರೆ ಇದು ಸುಮಾರು 31 ಕಿಲೋಮೀಟರ್ ದೂರವನ್ನು ಕಡಿಮೆ ಮಾಡುತ್ತದೆ. ಧಾರವಾಡ ಮತ್ತು …

Read More »

ಬೆಳಗಾವಿ: ಸಮಸ್ಯೆ ಆಲಿಸಲು ಕಾರಿನಿಂದಿಳಿಯದ ಅಧಿಕಾರಿಗಳು; ಸ್ಥಳೀಯರಿಂದ ಘೇರಾವ್

ಬೆಳಗಾವಿ: ನೆರೆ ಹಾಗೂ ಅತಿವೃಷ್ಟಿಯಿಂದಾದ ಹಾನಿ ಪರಿಶೀಲನೆಗೆ ಬಂದಿದ್ದ ಕೇಂದ್ರ ಅಧ್ಯಯನ ತಂಡಕ್ಕೆ ಸ್ಥಳೀಯರು ಘೇರಾವ್ ಹಾಕಿದ ಘಟನೆ ಗೋಕಾಕ ತಾಲ್ಲೂಕಿನ ಲೋಳಸೂರ ಸೇತುವೆ ಬಳಿ ಮಂಗಳವಾರ ನಡೆಯಿತು. ಅಧ್ಯಯನ ತಂಡದ ಅಧಿಕಾರಿಗಳ ಎದುರು ಸಮಸ್ಯೆ ಹೇಳಿಕೊಳ್ಳಲು ಮುಂದಾದ ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದ ಕೊಪ್ಪದ ಹಾಗೂ ಮುಖಂಡರಿಗೆ ಅವಕಾಶ ದೊರೆಯಲಿಲ್ಲ. ಅವರೊಂದಿಗೆ ಮಾತ‌ನಾಡಲು ತಂಡದ ಅಧಿಕಾರಿಗಳು ನಿರಾಕರಿಸಿದರು. ಕಾರಿನಲ್ಲಿ ಹೋಗಿ ಕುಳಿತರು. ಇದರಿಂದಾಗಿ ಸಿಟ್ಟಾದ ಮುಖಂಡರು ಕಾರಿಗೆ ಘೇರಾವ್ ಹಾಕಿ …

Read More »

ಬೆಳಗಾವಿಯಲ್ಲಿ ಕಬ್ಬಿನ ಬಾಕಿ ಹಣಕ್ಕಾಗಿ ಆಗ್ರಹಿಸಿ ರೈತರ ಧರಣಿ

ಬೆಳಗಾವಿ – ಬೆಳಗಾವಿ ಜಿಲ್ಲೆಯ ಕಬ್ಬು ಬೆಳೆಗಾರರು ಮತ್ತೆ ಬೀದಿಗೆ ಇಳಿದು ಧರಣಿ ನಡೆಸಿದ್ದಾರೆ. ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಎರಡು ವರ್ಷದಿಂದ ಬಾಕಿ ಹಣ ಉಳಿಸಿಕೊಂಡಿದ್ದು, ರೈತರಿಗೆ ಪಾವತಿ ಮಾಡಿಲ್ಲ. ಲಾಕ್​​ಡೌನ್​​ನಂತಹ ಸಂಕಷ್ಟದ ಸಂದರ್ಭದಲ್ಲಿ ರೈತರಿಗೆ ಹಣ ನೀಡದೆ ಸತಾಯಿಸುತ್ತಿದೆ. ಹೀಗಾಗಿ ಸೋಮವಾರ ರೈತ ಸಂಘದ ನೇತೃತ್ವದಲ್ಲಿ ಬೃತಹ್ ಧರಣಿ ನಡೆಸಿ, ತಕ್ಷಣ ಬಾಕಿ ಹಣ ಪಾವತಿ ಮಾಡಬೇಕು ಎಂದು ಆಗ್ರಹಿಸಿಲಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಎಂ ಕೆ …

Read More »

ಕರಾವಳಿ: ಇಂದು ಧಾರಾಕಾರ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಸೆ.8ರಿಂದ 11ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.3. ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು …

Read More »

ಮಳೆ ಹಾನಿ: ಬೆಳಗಾವಿ ಜಿಲ್ಲೆಗೆ ಬಂದ ಕೇಂದ್ರ ತಂಡ

ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯ ಪರಿಶೀಲನೆಗಾಗಿ ಮಂಗಳವಾರ ಬಂದಿರುವ ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಜಿಲ್ಲೆಯ ಸ್ಥಿತಿಗತಿ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಮಾಹಿತಿ ನೀಡಿದರು. ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಪಾಲ್ಗೊಂಡಿದ್ದರು. ತಂಡವು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಲಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ …

Read More »

ಗಡಿ ನುಸುಳಲು ಯತ್ನಿಸಿದ ಚೀನಾ ಯೋಧರಿಗೆ ಗುಂಡೇಟು: ಗಡಿ ಉದ್ವಿಗ್ನ

ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ಉಂಟಾಗಿದ್ದು ಗುಂಡಿನ ಕಾಳಗ ನಡೆದಿದೆ ಎಂದು ಹೇಳಲಾಗಿದೆ. ಪಾಂಗಾಂಗ್ ಸರೋವರದ ಬಳಿ ಚೀನಿ ಸೈನಿಕರು ಹಾಗೂ ಭಾರತೀಯ ಯೋಧರು ಬೀಡುಬಿಟ್ಟಿದ್ದಾರೆ. ಚೀನಿ ಯೋಧರು ಗಡಿ ನುಸುಳಲು ಯತ್ನಿಸಿದ ವೇಳೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ್ದು ಮತ್ತೆ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.   ಚೀನಾ ಸರ್ಕಾರದ ಒಡೆತನದ ಗ್ಲೋಬಲ್ ಟೈಮ್ಸ್ ಸೋಮವಾರ ಭಾರತೀಯ …

Read More »

ಖಾಸಗಿ ಶಾಲೆಗಳಿಗೆ ಶಿಕ್ಷಣ ಸಚಿವರ ಖಡಕ್ ವಾರ್ನಿಂಗ್ :`ಒನ್ ಟರ್ಮ್ ಪ್ರವೇಶ ಶುಲ್ಕ ಮಾತ್ರ ಪಡೆಯಲು ಸೂಚನೆ

ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಖಾಸಗಿ ಶಾಲೆಗಳಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದು, ಒಂದು ಅವಧಿಯ (ಟರ್ಮ್‌) ಪ್ರವೇಶ ಶುಲ್ಕವನ್ನು ಮಾತ್ರ ವಿದ್ಯಾರ್ಥಿಗಳಿಂದ ಪಡೆಯಬೇಕು ಎಂದು ಸೂಚಿಸಿದ್ದಾರೆ. ‘ಜೂನ್‌ನಿಂದ ಶಾಲೆಗಳು ಆರಂಭವಾಗಿಲ್ಲ. ಅನೇಕ ಖಾಸಗಿ ಶಾಲೆ‌ಗಳ ಶಿಕ್ಷಕರು ಕಷ್ಟದಲ್ಲಿದ್ದಾರೆ. ಹೀಗಾಗಿ, ಮಕ್ಕಳ ದಾಖಲಾತಿಗೆ ಅನುಮತಿ ನೀಡಿ, ಒಂದು ಅವಧಿಯ ಅಧಿಕೃತ ಶುಲ್ಕವನ್ನು ಮಾತ್ರ ಪಡೆಯುವಂತೆ ಸೂಚಿಸಿದ್ದೇವೆ ಮತ್ತು ಸಂಗ್ರಹಿಸಿದ ಶುಲ್ಕವನ್ನು ಶಿಕ್ಷಕರ ವೇತನಕ್ಕೆ ಪಾವತಿಸಲು ಬಳಸುವಂತೆ ತಿಳಿಸಲಾಗಿದೆ …

Read More »

ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಕಂಪ್ಯೂಟರ್, ಗ್ರಂಥಾಲಯ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ: ಸತೀಶ ಜಾರಕಿಹೊಳಿ

ಬೆಳಗಾವಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಕಂಪ್ಯೂಟರ್, ಗ್ರಂಥಾಲಯ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ್ ಹೇಳಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಮಣ್ಣಿಕೇರಿ ಸರಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರು, ಶಾಲಾ ಅಭಿವೃದ್ದಿ ಪದಾಧಿಕಾರಿಗಳು ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು‌ ಮಾತನಾಡಿದರು.  ಗ್ರಾಮೀಣ ಭಾಗದ ಯುವಕ, …

Read More »