Breaking News

Covid-19 Karnataka Updates: ಸತತ ನಾಲ್ಕನೇ ದಿನ ಸಾವಿರ ದಾಟಿದ ಹೊಸ ಪ್ರಕರಣ Covid-19 Karnataka Updates: ಸತತ ನಾಲ್ಕನೇ ದಿನ ಸಾವಿರ ದಾಟಿದ ಹೊಸ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಸತತ ನಾಲ್ಕನೇ ದಿನ ಹೊಸ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟಿದೆ. ಶುಕ್ರವಾರ 1,587 ಪ್ರಕರಣಗಳು ದೃಢಪಟ್ಟಿವೆ. ಮೂರುವರೆ ತಿಂಗಳಲ್ಲಿ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ. ಈವರೆಗೆ ಸೋಂಕಿತರಾದವರ ಸಂಖ್ಯೆ 9.66 ಲಕ್ಷ ದಾಟಿದೆ. ಹೊಸ ಪ್ರಕರಣಗಳು ಏರುಗತಿ ಪಡೆದ ಕಾರಣ ಸಕ್ರಿಯ ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದ್ದು, 12,067 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 131 ಮಂದಿ ತೀವ್ರ …

Read More »

‘ವಾಟ್ಸಾಪ್’ ಚಾಟ್ ಯುವತಿ ಸಾವಿಗೆ ಕಾರಣವಾಯ್ತು

ಸಾಮಾಜಿಕ ತಾಣಗಳು ಎಷ್ಟು ಅನುಕೂಲವೋ ಅಷ್ಟೇ ಮಾರಕವೆಂಬುದು ಹಲವು ಸಂದರ್ಭಗಳಲ್ಲಿ ಸಾಬೀತಾಗಿದ್ದು, ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ವಾಟ್ಸಾಪ್ ಮೂಲಕ ಪರಿಚಿತನಾಗಿದ್ದ ಯುವಕನೊಬ್ಬ ತನ್ನನ್ನು ಪ್ರೀತಿಸುವಂತೆ ಯುವತಿಗೆ ಗಂಟು ಬಿದ್ದ ಹಿನ್ನೆಲೆಯಲ್ಲಿ ಬೇಸತ್ತ ಆಕೆ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೆಂಚನಾಲ ಕಲ್ಯಾಣಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಿಪ್ಪನ್ ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ 19 ವರ್ಷದ …

Read More »

ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಒಂದು ಆಯ್ಕೆ: ಉದ್ಧವ್ ಠಾಕ್ರೆ

ನವದೆಹಲಿ: ಒಂದೇ ಸಮನೆ ಹೆಚ್ಚಳವಾಗುತ್ತಿರುವ ಕೋವಿಡ್ 19 ಸೋಂಕು ತಡೆಯಲು ಲಾಕ್ ಡೌನ್ ಒಂದು ಆಯ್ಕೆಯಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ(ಮಾರ್ಚ್ 19) ತಿಳಿಸಿದ್ದಾರೆ. ಸುದ್ದಿಗಾರರ ಜತೆ ನಡೆಸಿದ ಸಂವಹನದಲ್ಲಿ ಸುರಕ್ಷತೆಯ ದೃಷ್ಟಿಯಿಂದ ಜನರು ಕೋವಿಡ್ 19 ಮಾರ್ಗಸೂಚಿಯನ್ನು ಪಾಲಿಸುತ್ತಾರೆ ಎಂಬ ನಂಬಿಕೆ ಇದೆ. ಆದರೂ ಲಾಕ್ ಡೌನ್ ಒಂದು ಆಯ್ಕೆಯಾಗಿದೆ ಎಂದು ಹೇಳಿದರು. ಪರಿಸ್ಥಿತಿ ಕೈಮೀರುವ ಹಂತದಲ್ಲಿ ಲಾಕ್ ಡೌನ್ ನಮ್ಮ ಆಯ್ಕೆಯಾಗಿದೆ. ಆದರೆ ರಾಜ್ಯದ …

Read More »

ಪರೀಕ್ಷಾ ಪೇ ಚರ್ಚಾ’ಗೆ ಆಯ್ಕೆ: ಆರ್ಡಿ ಶಾಲೆಯ ಅನುಷಾಗೆ ಅಭಿನಂದನೆ ಸಲ್ಲಿಸಿದ ಸುರೇಶ್ ಕುಮಾರ್

ಕುಂದಾಪುರ: ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಡುವ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮಕ್ಕೆ ಆಯ್ಕೆಯಾದ ಉಡುಪಿ ಜಿಲ್ಲೆಯ ಆರ್ಡಿಯ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅನುಷಾಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದರು. ಅನುಷಾಗೆ ಕರೆ ಮಾಡಿದ ಸಚಿವರು, ಪ್ರಧಾನಿಯವರ ಜೊತೆ ಮಾತನಾಡಲು ನೀನು ಆಯ್ಕೆಯಾಗಿರುವುದು ನಮಗೆ ಖುಷಿಯಾಗಿದೆ. ನೀನು ಶಾಲೆಗೆ ಮತ್ತು ರಾಜ್ಯಕ್ಕೆ ಹೆಮ್ಮೆ ತರಬೇಕು ಎಂದು ಹೇಳಿದರು. …

Read More »

ಕೋವಿಡ್; ಚಿತ್ರಮಂದಿರ, ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಅವಕಾಶ;

ಮುಂಬೈ:ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಎಲ್ಲಾ ಚಿತ್ರಮಂದಿರಗಳು, ಆಡಿಟೋರಿಯಂ ಹಾಗೂ ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಜನಸಂಖ್ಯೆಗೆ ಸೀಮಿತಗೊಳಿಸಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ(ಮಾರ್ಚ್ 31) ಆದೇಶ ಹೊರಡಿಸಿದೆ. ಕಳೆದ 24ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 25,833 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದೆ. ಇದು ಕಳೆದ ವರ್ಷ ಕೋವಿಡ್ ಸೋಂಕು ಆರಂಭವಾದ ನಂತರ ಗರಿಷ್ಠ ಪ್ರಮಾಣದಲ್ಲಿ ಪತ್ತೆಯಾದ ಪ್ರಕರಣವಾಗಿದೆ. ಒಂದು ವೇಳೆ ಮಾಸ್ಕ್ ಧರಿಸದೇ ಎಲ್ಲೆಂದರಲ್ಲಿ ಓಡಾಡುತ್ತಿದ್ದರೆ ಜನರು …

Read More »

ವರ್ಕ್ ಫ್ರಮ್ ಹೋಂ ಓಕೆ ..! ಸಂಬಳ ಕಡಿತ ಯಾಕೆ..? : ವರದಿ

ನವ ದೆಹಲಿ : ಕೋವಿಡ್ 19 ಭಾರತದ ಮೇಲೆ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಪರಿಣಾಮ ಬೀರಿದೆ. ಆರ್ಥಿಕ ಸ್ಥಿತಿ, ಉದ್ಯಮ ಕ್ಷೇತ್ರಗಳ ಮೇಲಂತೂ ಬಾರಿ ಪ್ರಹಾರ ಮಾಡಿರುವುದು ಸುಳ್ಳಲ್ಲ. ಪರಿಸ್ಥಿತಿ ಚೇತರಿಕೆಯಾಗುವತ್ತ ಮುಖ ಮಾಡುತ್ತಿದೆ ಎನ್ನುವಷ್ಟರಲ್ಲೆ ರೂಪಾಂತರಿ ಕೋವಿಡ್ ಮತ್ತೆ ಅಲೆ ಎಬ್ಬಿಸಿದೆ. ಕೇಂದ್ರ ಸರ್ಕಾರ ಲಾಕ್ ಡೌನ್ ಮಾಡುವ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದರೂ ಕೂಡ ಜನರಲ್ಲಿ ಮತ್ತೆ ಲಾಕ್ ಡೌನ್ ಆಗಬಹುದು ಎಂಬ ಭೀತಿ ಆರಂಭವಾಗಿದೆ. ಕೋವಿಡ್ …

Read More »

ಸುಳ್ಳನ್ನು ಹೇಳಿ,   ಶಾಸಕ ಅಭಯ ಪಾಟೀಲ ರವರು ಮಾಡಿರುವ ಕೆಲಸದ  ಕ್ರೆಡಿಟ್‌ ತಗೆದುಕೊಳ್ಳುವುದನ್ನು ನಿಲ್ಲಿಸಬೇಕು.: B.J.P.. ದಕ್ಷಿಣ ಅಧ್ಯಕ್ಷೆ ಗೀತಾ ಸುತಾರ್

ಬೆಳಗಾವಿ – ಬೆಳಗಾವಿ ರಿಂಗ್ ರಸ್ತೆಗೆ ಈ ಬಾರಿಯ ಬಜೆಟ್ ನಲ್ಲಿ 140 ಕೋಟಿ ರೂ. ತೆಗೆದಿರಿಸಿರುವುದು ಶಾಸಕ ಅಭಯ ಪಾಟೀಲ ಅವರ ಪ್ರಸ್ತಾವನೆಯ ಅನ್ವಯ ಎಂದು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಕುರಿತು ಶಾಸಕ ಅಭಯ ಪಾಟೀಲ ಸಚಿವರಿಂದ ವಿಧಾನಸಭೆಯಲ್ಲಿ ಲಿಖಿತ ಉತ್ತರ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಬಿಜೆಪಿ ಬೆಳಗಾವಿ ದಕ್ಷಿಣ ಅಧ್ಯಕ್ಷೆ ಗೀತಾ ಸುತಾರ್,  ಕೆಲವರು ರಿಂಗ್ ರಸ್ತೆಗೆ ತಾವೇ ಹಣ …

Read More »

ಲೋಕಸಭಾ ಉಪ ಚುನಾವಣೆ ವಿವಿಧ ಕಟ್ಟಡಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ: ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ನಗರದ ಟಿಳಕವಾಡಿಯ ಆರ್.ಪಿ.ಡಿ. ಮಹಾವಿದ್ಯಾಲಯದ ಆವರಣದಲ್ಲಿರುವ ವಿವಿಧ ಕಟ್ಟಡಗಳನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪರಿಶೀಲಿಸಿದರು. ಸ್ಟ್ರಾಂಗ್ ರೂಮ್ ಹಾಗೂ ಮತ ಎಣಿಕೆ ಕೊಠಡಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಕೊಠಡಿಗಳನ್ನು ಪರಿಶೀಲಿಸಿ, ಮೂಲಸೌಕರ್ಯಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಾಗೂ ದೈನಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಿಕ್ಷಣ ಸಂಸ್ಥೆಯ …

Read More »

ಗುಜರಾತ್‌ನಲ್ಲಿ ಮತ್ತೆ ಲಾಕ್‍ಡೌನ್‍ ಘೋಷಣೆ..!?

ಅಹಮದಾಬಾದ್, ಮಾ.19-ಕೊರೊನಾ ಮಹಾಮಾರಿ ತೀವ್ರಗತಿಯಲ್ಲಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ನೈಟ್‍ಕಫ್ರ್ಯೂ ಜಾರಿಗೊಳಿಸಿದ್ದರೂ ಮತ್ತಷ್ಟು ತುರ್ತುಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗುಜರಾತ್ ಸರ್ಕಾರ ಸಾರ್ವಜನಿಕ ಬಸ್ ಸಂಚಾರ, ಶಾಲಾ-ಕಾಲೇಜುಗಳು, ಉದ್ಯಾನವನ ಹಾಗೂ ಜಿಮ್‍ಗಳನ್ನು ಬಂದ್ ಮಾಡಲು ಆದೇಶಿಸಿದೆ.ಅಹಮದಾಬಾದ್ ಮತ್ತು ಸೂರತ್‍ನಲ್ಲಿ ರಾತ್ರಿ ಕಫ್ರ್ಯೂ 9 ಗಂಟೆಯಿಂದ ಬೆಳಗ್ಗೆ 6ರ ವರೆಗೆ ಇರಲಿದ್ದು, ಎಲ್ಲ ರೀತಿಯ ವಾಹನ ಸಂಚಾರ ಹಾಗೂ ಜನರ ಓಡಾಟವನ್ನು ನಿಷೇಧಿಸಲಾಗಿದೆ. ಮುಂದಿನ ಏಪ್ರಿಲ್ 10ರ ವರೆಗೆ ಎಲ್ಲ ಶಾಲಾ-ಕಾಲೇಜುಗಳಲ್ಲಿ ನಡೆಯಬೇಕಿದ್ದ …

Read More »

ಹೆಚ್ಚಿದ ಕೊರೋನಾ: ಶಾಲಾ-ಕಾಲೇಜುಗಳಿಗೆ ರಜೆ, ಪರೀಕ್ಷೆ ಮುಂದೂಡಿಕೆ

ಅಹಮದಾಬಾದ್: ಗುಜರಾತ್ ನಲ್ಲಿ ಕೊರೋನಾ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 8 ಮಹಾನಗರಗಳ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಹಮದಾಬಾದ್, ವಡೋದರಾ, ಸೂರತ್, ರಾಜಕೋಟ್ ಸೇರಿದಂತೆ 8 ಮಹಾನಗರಗಳ ವ್ಯಾಪ್ತಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಆನ್ಲೈನ್ ತರಗತಿ ನಡೆಯಲಿದ್ದು, ಶುಕ್ರವಾರದಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಏಪ್ರಿಲ್ ನಲ್ಲಿ ನಡೆಸಲಾಗುವುದು ಎಂದು ಗುಜರಾತ್ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ವಿಜಯ ರೂಪಾನಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ …

Read More »