ಉಡುಪಿ: ಎರಡು ಗೋಣಿಚೀಲಗಳಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕಾಡಿನಲ್ಲಿ ತುಂಬಿರುವ ಎರಡು ಸೆಣಬಿನ ಗೋಣಿ ಎಸೆದು ಹೋಗಿದ್ದರು. ಇದನ್ನು ಕಂಡ ಸ್ಥಳೀಯರು ತೆರೆದು ನೋಡಿದಾಗ ಹಲವಾರು ಮಂಗಗಳ ಮೃತದೇಹಗಳು ಕಾಣಿಸಿಕೊಂಡಿದೆ. ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತೋಟಕ್ಕೆ ಬಂದು ಉಪಟಳ ನೀಡುತ್ತಿದ್ದ ಮಂಗಗಳಿಗೆ ವಿಷವಿಟ್ಟು ಕೊಂದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಆಗುಂಬೆ ಘಾಟಿ ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಂಗಗಳು ಕಾಣಿಸಿಕೊಳ್ಳುತ್ತವೆ. …
Read More »ಅನಂತಕುಮಾರ್ ಹೆಗಡೆ ನಡೆಸಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅಂಜಲಿ ನಿಂಬಾಳಕರ ಅವರ ಬೆಂಬಲಿಗರ ಅಡ್ಡಿ
ಖಾನಾಪುರ: ತಾಲ್ಲೂಕಿನಲ್ಲಿ ಸಂಸದ ಅನಂತಕುಮಾರ್ ಹೆಗಡೆ ನಡೆಸಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅಂಜಲಿ ನಿಂಬಾಳಕರ ಅವರ ಬೆಂಬಲಿಗರು ಅಡ್ಡಿ ಪಡೆಸಿದ್ದು, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಶಾಸಕಿ ಅಂಜಲಿ ನಿಂಬಾಳಕರ ಕೊರೊನಾದಿಂದ ಕ್ವಾರಂಟೈನ್ ನಲ್ಲಿ ಇದ್ದಾರೆ. ಇಂತಹ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ವಿವಿಧ ಗ್ರಾಮಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಭೂಮಿ ಪೂಜೆಯನ್ನು ಸಂಸದ ಅನಂತಕುಮಾರ್ ಹೆಗಡೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಭೂಮಿ ಪೂಜೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಆಹ್ವಾನ ನೀಡಿಲ್ಲ …
Read More »5 ತಿಂಗಳಿಂದ ಪ್ರವಾಸಿಗರಿಂದ ದೂರವಿದ್ದ ವಿಶ್ವ ಪ್ರಸಿದ್ದ ಗಿರಿಧಾಮ ಈಗ ಮುಕ್ತ
ಚಿಕ್ಕಬಳ್ಳಾಪುರ : ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದ ಜಿಲ್ಲೆಯ ವಿಶ್ವವಿಖ್ಯಾತ ನಂದಿ ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಅವಕಾಶ ನಿಡುತ್ತಿದ್ದು ಗಿರಿಧಾಮ ವೀಕ್ಷಣೆಗೆ ಪ್ರವಾಸಿಗರು ತುದಿಗಾಲಲ್ಲಿ ನಿಂತಿದ್ದಾರೆ. ಪ್ರತಿ ಶನಿವಾರ, ಭಾನುವಾರ ಸಹಸ್ರಾರು ಸಂಖ್ಯೆಯಲ್ಲಿ ಗಿರಿಧಾಮಕ್ಕೆ ಲಗ್ಗೆ ಇಟ್ಟು ಬೆಟ್ಟದ ಕಾನನ ಮಧ್ಯೆ ರಿಲ್ಯಾಕ್ಸ್ ಮೂಡ್ನಲ್ಲಿದ್ದು ಹೋಗುತ್ತಿದ್ದ ಐಟಿ, ಬಿಟಿ ಉದ್ಯೋಗಿಗಳಿಗೆ, ಪ್ರೇಮಿಗಳಿಗೆ ಸತತ ಐದು ತಿಂಗಳಿಂದ ಗಿರಿಧಾಮಕ್ಕೆ ಪ್ರವೇಶವಿಲ್ಲವಾಗಿತ್ತು. ಆದರೆ ಕೇಂದ್ರ ಸರ್ಕಾರ …
Read More »ಒಂದೇ ವಾರದಲ್ಲಿ 145 ಕೆ.ಜಿ ಜಪ್ತಿ ಮಾಡಿ 14 ಆರೋಪಿಗಳನ್ನುಬಂಧಿಸಲಾಗಿದೆ
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ಗಾಂಜಾ ಮಾರಾಟ ಹಾಗೂ ಸೇವೆನೆ ಎಗ್ಗಿಲ್ಲದೆ ನಡೆಯುತ್ತಿದ್ದು, ಒಂದೇ ವಾರದಲ್ಲಿ 145 ಕೆ.ಜಿ ಜಪ್ತಿ ಮಾಡಿ 14 ಆರೋಪಿಗಳನ್ನು ಬಂಧಿಸಿದ್ಧಾರೆ. 2 ಲಕ್ಷ 25 ಸಾವಿರ ಬೆಲೆಯ 145 ಕೆ.ಜಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 6 ದೂರು ದಾಖಲಾಗಿದ್ದು, 14 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಕಾರ್ಯಾಚರಣೆ …
Read More »ಹೈಪರ್ಸಾನಿಕ್ ಮಿಸೈಲ್ ಕ್ಲಬ್ ಸೇರಿತು ಭಾರತ
ನವದೆಹಲಿ: ಒಡಿಶಾದ ಬಾಲಸೋರ್ನ ಎಪಿಜೆ ಅಬ್ದುಲ್ ಕಲಾಂ ಟೆಸ್ಟಿಂಗ್ ರೇಂಜ್ನಲ್ಲಿ ಹೈಪರ್ ಸಾನಿಕ್ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಭಾರತ ಇಂದು ಹೈಪರ್ ಸಾನಿಕ್ ಮಿಸೈಲ್ ಕ್ಲಬ್ ಸೇರ್ಪಡೆಯಾಗಿದೆ. ಈ ಕ್ಷಿಪಣಿಯ ಶಬ್ದದ ವೇಗಕ್ಕಿಂತಲೂ ಆರು ಪಟ್ಟು ವೇಗದಲ್ಲಿ ಸಾಗುತ್ತದೆ. ಇಂತಹ ಮಿಸೈಲ್ ಹೊಂದಿರುವ ಇತರ ದೇಶಗಳು ಅಮೆರಿಕ, ರಷ್ಯಾ ಮತ್ತು ಚೀನಾ. ಹೈಪರ್ ಸಾನಿಕ್ ಟೆಸ್ಟ್ ಡೆಮಾನ್ಸ್ಟ್ರೇಟರ್ ವೆಹಿಕಲ್ ಅನ್ನು ಡಿಫೆನ್ಸ್ ರಿಸರ್ಚ್ ಆಯಂಡ್ ಡೆವಲಪ್ಮೆಂಟ್ ಆರ್ಗನೈಸೇಷನ್ …
Read More »ಕ್ಯಾಸಿನೋ ಕಾರ್ಯಕ್ರಮಕ್ಕೆ ನಾನು ಮುಖ್ಯ ಅತಿಥಿಯಾಗಿ ಹೋಗಿದ್ದೆ. ವಿವೇಕ್ ಒಬೇರಾಯ್ ನನ್ನ ಪಕ್ಕ ನಿಂತಿದ್ದರು, ಉಪೇಂದ್ರ ಸಹ ಭಾಗವಹಿಸಿದ್ದರು
ಬೆಂಗಳೂರು: ನಮ್ಮ ಅಮ್ಮನ ಹಾರ್ಟ್ ವೀಕ್, ಈಗಾಗಲೇ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಶಾಂತ್ ಸಂಬರಗಿ ಇನ್ನಾ ಮಾತನಾಡಿ ನಮ್ಮ ಅಮ್ಮಗೆ ಏನಾದರೂ ಆದರೆ ನಾನು ಸತ್ತೋದರೂ ಅವನನ್ನು ನಾನು ಬಿಡಲ್ಲ ಎಂದು ನಟಿ ಸಂಜನಾ ಕಣ್ಣೀರು ಹಾಕಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ನಟಿ ಸಂಜನಾ, ಕ್ಯಾಸಿನೋ ಕಾರ್ಯಕ್ರಮಕ್ಕೆ ನಾನು ಮುಖ್ಯ ಅತಿಥಿಯಾಗಿ ಹೋಗಿದ್ದೆ. ವಿವೇಕ್ ಒಬೇರಾಯ್ ನನ್ನ ಪಕ್ಕ ನಿಂತಿದ್ದರು, ಉಪೇಂದ್ರ ಸಹ ಭಾಗವಹಿಸಿದ್ದರು. ಎಲ್ಲಾ ರಾಜ್ಯಗಳಿಂದ 200 ಜನ …
Read More »ಜೆಡಿಎಸ್ ಪಕ್ಷ ತೀರಿಸುವ ಕೆಲಸ ನಡೆಯುತ್ತಿದೆ : ಗಂಭೀರ ಆರೋಪ
ನಾಗಮಂಗಲ : ಜಿಲ್ಲಾಡಳಿತ ಜೆಡಿಎಸ್ ಪಕ್ಷವನ್ನು ತೀರಿಸುವ ಕೆಲಸ ಮಾಡುತ್ತಿದೆ. ಜನರಿಂದ ಆಯ್ಕೆಯಾದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವ ಕನಿಷ್ಠ ಪ್ರಯತ್ನವನ್ನೂ ಮಾಡುತ್ತಿಲ್ಲ. ಜನರಿಂದ ತಿರಸ್ಕೃತರಾದವರೇ ಅಧಿಕಾರಿಗಳಿಗೆ ಗಾಡ್ಫಾದರ್ಗಳಾಗಿದ್ದಾರೆ ಎಂದು ನಾಗಮಂಗಲ ಶಾಸಕ ಕೆ.ಸುರೇಶ್ಗೌಡ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ನಾಗಮಂಗಲ ಶಾಸಕ ಕೂಡ ಜಿಲ್ಲಾಡಳಿತದ ಕಾರ್ಯವೈಖರಿ ವಿರುದ್ಧ ಸಿಟ್ಟಿಗೆದ್ದಿದ್ದಾರೆ. …
Read More »`LPG’ ಸಬ್ಸಿಡಿ ರದ್ದು ಮಾಡಿ ಮಹಿಳೆಯರು ಕೂಡಿಡುವ ಡಬ್ಬಿ ಹಣಕ್ಕೂ ಮೋದಿ ಸರ್ಕಾರ ಕನ್ನ ಹಾಕುತ್ತಿದೆ : ಈಶ್ವರ್ ಖಂಡ್ರೆ ಕಿಡಿ
ಬೆಂಗಳೂರು : ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನು ಧೀಡಿರ್ ಆಗಿ ರದ್ದುಗೊಳಿಸುವ ಮೂಲಕ ಮಧ್ಯಮ ವರ್ಗದ ಜನರಿಗೆ ಮೋಸ ಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಈಶ್ವರ್ ಖಂಡ್ರೆ, ಈಶ್ವರ್ ಖಂಡ್ರೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನ ಧಿಡೀರ್ ಆಗಿ ರದ್ದುಗೊಳಿಸಿದೆ. ಮಹಿಳೆಯರ ವೋಟ್ ಪಡೆದು ಅಧಿಕಾರಕ್ಕೆ ಬಂದ ಮೋದಿ …
Read More »ಕೋವಿಡ್-19, ಶಾಸಕರ ವಿರೋಧಗಳ ನಡುವೆ ಮಹಾರಾಷ್ಟ್ರ ವಿಧಾನಸಭೆಯ 2 ದಿನಗಳ ಮುಂಗಾರು ಅಧಿವೇಶನ ಆರಂಭ
ಮುಂಬೈ: ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಮಹಾರಾಷ್ಟ್ರ ವಿಧಾನಸಭೆಯ ಎರಡು ದಿನಗಳ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಉಪಾಧ್ಯಕ್ಷ ನರಹರಿ ಝಿರ್ವಾಲ್, ಕೋವಿಡ್-19 ಹಿನ್ನೆಲೆಯಲ್ಲಿ ಸದಸ್ಯರು ಮಾಸ್ಕ್ ಧರಿಸುವಂತೆ, ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ, ಕ್ರಾಸ್ ಚಿಹ್ನೆಯಿರುವ ಸೀಟಿನಲ್ಲಿ ಕೂರದಂತೆ ಸದನದ ಸದಸ್ಯರಿಗೆ ಮಾರ್ಗದರ್ಶನ ನೀಡಿದರು. ಇಬ್ಬರು ಕುಳಿತುಕೊಳ್ಳುಲ್ಲಿ ಒಬ್ಬರು ಸದಸ್ಯರಿಗೆ ಮಾತ್ರ ಈ ಬಾರಿ ಅವಕಾಶ ಕಲ್ಪಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸದನ ಸದಸ್ಯರು ವಿದ್ಯಾರ್ಥಿಗಳು ಮತ್ತು ಪ್ರೇಕ್ಷಕರು ಕುಳಿತುಕೊಳ್ಳುವ …
Read More »ಸತೀಶ ಜಾರಕಿಹೊಳಿ ಟೈಗರ್ ಗ್ಯಾಂಗ್ ಬಗ್ಗೆ ಹೇಳಿದ್ದೇನು….
ಗೋಕಾಕ: ನಗರದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿದ್ದ ಟೈಗರ್ ಗ್ಯಾಂಗ್ ನ್ನು ತಡವಾದರು ಕೂಡ ಪೊಲೀಸರು ಬಂಧಿಸಿದ್ದು, ಇದೊಂದು ಒಳ್ಳೆಯ ಬೆಳವಣಿಗೆ. ನಿಷ್ಪಕ್ಷಪಾತ ತನಿಖೆಯಿಂದ ಮತ್ತಷ್ಟು ಮಾಹಿತಿ ಹೊರ ಬರಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? ಟೈಗರ್ ಗ್ಯಾಂಗ್ ಬಂಧನ ವಿಚಾರವಾಗಿ ನಗರದಲ್ಲಿ …
Read More »