ಬೆಂಗಳೂರು, ಜೂ.30- ಕೊರೊನಾ ವಾರಿಯರ್ಸ್ಗಳಾಗಿ ಕೆಲಸ ಮಾಡುವ ಖಾಸಗಿ ಮತ್ತು ಅರೆಕಾಲಿಕ ವೈದ್ಯರು, ಪ್ಯಾರಾಮೆಡಿಕಲ್ ಸಿಬ್ಬಂದಿಗಳಿಗೂ 50 ಲಕ್ಷ ವಿಮಾ ಸೌಲಭ್ಯವನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಜತೆ ಸಭೆ ನಡೆಸಿದ ಅವರು, ಕೊರೊನಾ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆಗಳು ಸಹಕಾರ ನೀಡುವಂತೆ ಮನವಿ ಮಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೊರೊನಾ ವಾರಿಯರ್ಸ್ಗಳಾಗಿ ಕೆಲಸ ಮಾಡುವ ವೈದ್ಯಕೀಯ ಕ್ಷೇತ್ರದವರಿಗೆ 50 ಲಕ್ಷ …
Read More »ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಕೊರೊನಾ ಸೋಂಕಿತ ಸಾವು………..
ಬೆಂಗಳೂರು,ಜೂ.30- ಖಾಸಗಿ ಆಸ್ಪತ್ರೆಗಳ ನಿರ್ಲಕ್ಷದಿಂದ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ. ನಗರ್ತಪೇಟೆಯ ನಿವಾಸಿಯೊಬ್ಬರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ತಕ್ಷಣ ಅವರು ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಖಾಸಗಿ ಆಸ್ಪತ್ರೆಗಳನ್ನು ಎಡತಾಕಿದರೂ ಯಾರೂ ಅಡ್ಮಿಟ್ ಮಾಡಿಕೊಳ್ಳದ ಪರಿಣಾಮ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ ಈ ಮಧ್ಯೆ ಗುಟ್ಟಿಗೆರೆ ಮೂಲದ ವ್ಯಕ್ತಿಯೊಬ್ಬರಿಗೂ ಸೋಂಕು ಕಾಣಿಸಿಕೊಂಡಿದ್ದು ಅವರು 7 ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಅಡ್ಮಿಟ್ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಲಿಲ್ಲ. ಆದರೆ ಮತ್ತೊಂದು …
Read More »ಕೊರೊನಾ ವೇಗಕ್ಕೆ ಕಡಿವಾಣ ಹಾಕಬೇಕಾದರೆ ಲಾಕ್ಡೌನ್ ಅನಿವಾರ್ಯ” : ಆರ್.ಅಶೋಕ್
ಬೆಂಗಳೂರು, ಜೂ.30- ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಎಸ್ಎಸ್ಲ್ಸಿ ಪರೀಕ್ಷೆ ಮುಗಿದ ನಂತರ ಮತ್ತೆ ಲಾಕ್ಡೌನ್ ಜಾರಿ ಮಾಡುವ ಸುಳಿವನ್ನು ಸರ್ಕಾರ ನೀಡಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಕಂದಾಯ ಸಚಿವ ಹಾಗೂ ಕೋವಿಡ್ ಉಸ್ತುವಾರಿ ಆರ್.ಅಶೋಕ್, ಕೊರೊನಾ ವೇಗಕ್ಕೆ ಕಡಿವಾಣ ಹಾಕಬೇಕಾದರೆ ಲಾಕ್ಡೌನ್ ಅನಿವಾರ್ಯ ಎಂದು ಪರೋಕ್ಷವಾಗಿ ಮತ್ತೆ ಲಾಕ್ಡೌನ್ ಮಾಡುವ ಸುಳಿವು ಕೊಟ್ಟರು. ರಸ್ತುತ ಎಸ್ಎಸ್ಲ್ಸಿ ಪರೀಕ್ಷೆ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಾರದೆಂಬ ಏಕೈಕ ಕಾರಣಕ್ಕೆ …
Read More »ಭಾರತದಲ್ಲಿ ಉಗ್ರ ಸ್ವರೂಪದಲ್ಲಿ ಮುಂದುವರಿದಿರುವ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ
ನವದೆಹಲಿ/ಮುಂಬೈ, ಜೂ.30- ಭಾರತದಲ್ಲಿ ಉಗ್ರ ಸ್ವರೂಪದಲ್ಲಿ ಮುಂದುವರಿದಿರುವ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ ನಿಯಂತ್ರಣಕ್ಕೆ ಬರದೇ ಆತಂಕಕಾರಿ ಮಟ್ಟದಲ್ಲೇ ಸಾಗಿದೆ. ಕಳೆದ 24 ತಾಸುಗಳಲ್ಲಿ ಆಘಾತಕಾರಿ ಮಟ್ಟದಲ್ಲಿ ಅಂದರೆ 18,522 ಸೋಂಕು ಪ್ರಕರಣಗಳು ವರದಿಯಾಗಿದೆ. ಇದೇ ಅವಧಿಯಲ್ಲಿ 418 ಹೊಸ ಸಾವುಗಳು ಸಂಭವಿಸಿವೆ. ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಉಲ್ಬಣಗೊಂಡ ನಂತರ 18,000ಕ್ಕೂ ಹೆಚ್ಚು ಪಾಸಿಟಿವ್ ಕೇಸ್ಗಳು ದಾಖಲಾಗಿರುವುದು ಇದು ಸತತ ಮೂರನೇ ದಿನ. ಈವರೆಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ …
Read More »ಮದ್ವೆಯಾದ ಎರಡೇ ದಿನಕ್ಕೆ ಮದುಮಗಳು ತವರಿಗೆ- ಕಾಡಿ ಬೇಡಿ ವಿವಾಹವಾಗಿ ಕೈಕೊಟ್ಟ ಭೂಪ
ಮಂಡ್ಯ: ಲಾಕ್ಡೌನ್ ನಡುವೆ ಲಕ್ಷಾಂತರ ಹಣ ಸಾಲ ಮಾಡಿ ವರದಕ್ಷಿಣೆ ನೀಡಿ ಮದುವೆ ಮಾಡಿಕೊಟ್ಟಿದ್ದರು. ಆದರೆ ಸೋದರತ್ತೆ ಮಗನೇ ಯುವತಿಗೆ ವಂಚಿಸಿದ್ದು, ಮದುವೆಯಾದ ಎರಡೇ ದಿನಕ್ಕೆ ತವರಿಗೆ ಕಳುಹಿಸಿದ್ದಾನೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಹರೀಶ್ ಮದುವೆಯಾದ ಎರಡು ದಿನಕ್ಕೆ ಪತ್ನಿಯನ್ನು ತವರು ಮನೆಗೆ ಕಳುಹಿಸಿದ್ದಾನೆ. ಈತ ಮೈಸೂರು ಜಿಲ್ಲೆಯ ಬೆಳವಾಡಿ ಗ್ರಾಮದವನು. ಜೂನ್ 1ರಂದು ಜಿಲ್ಲೆಯ KRS ಸಮೀಪದ ಹೊಂಗಹಳ್ಳಿ ನಿವಾಸಿಗಳಾದ ತಾಯಮ್ಮ-ಈರಪ್ಪ ಮಗಳ ಜೊತೆ ವಿವಾಹವಾಗಿದ್ದನು. ಹರೀಶ್ ಮದುವೆಯಾದ …
Read More »ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಕುರಿತು ಸಭೆ……..
ಬೆಂಗಳೂರು: ಕಂಠೀರವ ಸ್ಟುಡಿಯೋ ಆವರಣದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮತಿ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಕುರಿತು ಸಭೆ ಮಾಡಲಾಗಿದೆ. ಸಭೆಯಲ್ಲಿ ಕಂಠೀರವ ಸ್ಟುಡಿಯೋ ಆವರಣದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣ ಮಾಡಲು ಸಿಎಂ ಅನುಮತಿ ನೀಡಿದ್ದಾರೆ. ಸ್ಮಾರಕಕ್ಕೆ ಕಂಠೀರವ ಸ್ಟುಡಿಯೋ ಆವರಣದಲ್ಲಿ 1 ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ರಾಜ್ಯ ಸರ್ಕಾರವು 5 …
Read More »ವಿಶಾಖಪಟ್ಟಣಂನಲ್ಲಿ ಮತ್ತೆ ವಿಷಾನಿಲ ಸೋರಿಕೆ- ಇಬ್ಬರು ಸಾವು, ನಾಲ್ವರು ಗಂಭೀರ
ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನ ಕಾರ್ಖಾನೆಯೊಂದರಲ್ಲಿ ಮತ್ತೆ ಗ್ಯಾಸ್ ಲೀಕ್ ಆಗಿದ್ದು, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ನಾಲ್ವರು ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೇ ವಿಶಾಖಪಟ್ಟಣಂನ ಆರ್.ಆರ್ ವೆಂಕಟಪುರಂನಲ್ಲಿರುವ ಬಹುರಾಷ್ಟ್ರೀಯ ಕಂಪನಿ ಎಲ್.ಜಿ. ಪಾಲಿಮರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ರಾಸಾಯನಿಕ ಅನಿಲ ಕಾರ್ಖಾನೆಯಲ್ಲಿ ಸೋರಿಕೆಯಾಗಿತ್ತು. ಈಗ ಮತ್ತೆ ಇದೇ ವಿಶಾಖಪಟ್ಟಣಂನ ಸೈನರ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಿಂದ ಬೆಂಜಿಮಿಡಾಜೋಲ್ ಅನಿಲ ಸೋರಿಕೆಯಾಗಿದೆ ಎಂದು ರಾಷ್ಟೀಯ ಮಾಧ್ಯಮಗಳು ವರದಿ …
Read More »ಸುಧಾಕರ್, ಅಶೋಕ್ ಮಧ್ಯೆ ಕೊರೊನಾ ಫೈಟ್?
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಹಾವಳಿ ಮಧ್ಯೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ತಲೆನೋವು ಶುರುವಾಗಿದೆ. ಇಂದಿನಿಂದ ಬೆಂಗಳೂರು ಕೊರೊನಾ ನಿರ್ವಹಣೆ ಪಾತ್ರ ಯಾರಿಗೆ ಸಿಗಲಿದೆ ಎಂಬ ಪ್ರಶ್ನೆ ಎದ್ದಿದೆ. ಸಚಿವ ಡಾ.ಕೆ.ಸುಧಾಕರ್ ಕ್ವಾರಂಟೈನ್ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಅಶೋಕ್ಗೆ ಸಿಕ್ಕಿತ್ತು. ಮುಖ್ಯಮಂತ್ರಿಗಳು ಆರ್ ಅಶೋಕ್ಗೆ ಮೌಖಿಕವಾಗಿ ತಾತ್ಕಾಲಿಕ ಹೊಣೆ ಹೊರಿಸಿದ್ದರು. ಆದರೆ ಇದೀಗ ಸುಧಾಕರ್ ಹೋಂ ಕ್ವಾರಂಟೈನ್ ಅವಧಿ ಮುಗಿಸಿ ರೀ ಎಂಟ್ರಿ ಕೊಟ್ಟಿದ್ದಾರೆ. ಕೊರೊನಾ ಹೊಣೆ ಯಾರಿಗೆ..? …
Read More »ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಎಚ್ಚರಿಕೆ …….
ಬೆಂಗಳೂರು,ಜೂ.29- ನಾಳೆಯೊಳಗೆ ಖಾಸಗಿ ಆಸ್ಪತ್ರೆಯವರು ಸೋಂಕಿತರಿಗೆ ಕೊರೊನಾ ಚಿಕಿತ್ಸೆ ನೀಡಲು ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಕ್ಕೆ ನೀಡಲೇಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಖಾಸಗಿ ಆಸ್ಪತ್ರೆ ವೈದ್ಯರಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಇಂದು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದ ಅವರು, ಏನು ಮಾಡುತ್ತೀರೋ ಬಿಡುತ್ತೀರೋ ಗೊತ್ತಿಲ್ಲ.ನಾಳೆಯೊಳಗೆ ಕನಿಷ್ಠ ಪಕ್ಷ ಎರಡುವರೆ ಸಾವಿರ ಹಾಸಿಗೆಗಳನ್ನು ಸರ್ಕಾರಕ್ಕೆ ನೀಡಲೇಬೇಕೆಂದು ತಾಕೀತು ಮಾಡಿದರು. ಒಂದು ಹಂತದಲ್ಲಿ ಖಾಸಗಿ ಆಸ್ಪತ್ರೆ ಇಷ್ಟು ಪ್ರಮಾಣದ ಹಾಸಿಗೆಗಳನ್ನು ನೀಡಲುಸಾಧ್ಯವಿಲ್ಲ ಎಂದು …
Read More »ಕೋವಿಡ್-19 ಪ್ರಕರಣಗಳು ಮತ್ತಷ್ಟು ಏರಿಕೆಯಾಗುವ ಸಂಭವವಿದೆಮುಂದಿನ ಆರು ತಿಂಗಳು ಮಾನಸಿಕವಾಗಿ ಸಿದ್ಧರಾಗಿ ಎಂದು ಮನವಿ
ಬೆಂಗಳೂರು : ಪ್ರಸಕ್ತ ಸಾಲಿನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕೋವಿಡ್-19 ಪ್ರಕರಣಗಳು ಮತ್ತಷ್ಟು ಏರಿಕೆಯಾಗುವ ಸಂಭವವಿದೆ ಎಂಬ ತಜ್ಞರ ಅಭಿಪ್ರಾಯವನ್ನು ಆಧರಿಸಿ ಕೊರೊನಾ ಮಹಾಮಾರಿಯನ್ನು ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ ಎಂದು ಇಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಕಂದಾಯ ಸಚಿವ ಆರ್ ಅಶೋಕ್ ಅವರು ಭಾನುವಾರ ತಾವು ಕೋವಿಡ್ ಆಸ್ಪತ್ರೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಹಾಗೂ ಶುಶ್ರೂಷೆ ನೀಡಲು ಮುಂದಿನ ಆರು ತಿಂಗಳು ಮಾನಸಿಕವಾಗಿ …
Read More »