ಬಿಗ್-ಬಿ ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ಇನ್ನೂ ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಕಳೆದ ವರ್ಷವಷ್ಟೇ ಪದವಿ ಶಿಕ್ಷಣ ಮುಗಿಸಿರುವ ಅವರು ತಮ್ಮದೇ ಹಾದಿನಲ್ಲಿ ಸಾಗುತ್ತಿದ್ದಾರೆ. ಮಹಿಳೆಯ ಸಮಾನತೆಗಾಗಿ ಕೆಲಸ ಮಾಡುತ್ತಿದ್ದಾರೆ. ಈಗ ಅವರು ಉತ್ತರಾಖಂಡ್ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಅವರನ್ನು ಎದುರು ಹಾಕಿಕೊಂಡಿದ್ದಾರೆ. ಅದು ಕೂಡ ಹರಿದ ಜೀನ್ಸ್ ಪ್ಯಾಂಟ್ ಕಾರಣಕ್ಕೆ! ಅರೆರೆ.. ಮುಖ್ಯಮಂತ್ರಿಗೂ, ಬಚ್ಚನ್ ಮೊಮ್ಮಗಳಿಗೂ, ಹರಿದ ಜೀನ್ಸ್ ಪ್ಯಾಂಟ್ಗೂ ಏನು …
Read More »ಕಲ್ಯಾಣ ಮಂಟಪಗಳಿಗೆ ನಿರ್ಬಂಧ ಹೇರದಿರಲು ಮನವಿ
ಬೆಂಗಳೂರು, ಮಾ.17- ಕಾರ್ಯಕ್ರಮಗಳನ್ನು ಎಂದಿನಂತೆ ನಡೆಸಲು ಅನುಮತಿ ನೀಡುವ ಮೂಲಕ ಕಲ್ಯಾಣ ಮಂಟಪಗಳು ಮತ್ತು ಸಮುದಾಯ ಭವನಗಳನ್ನು ಪುನರಾರಂಭಿಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ಮ್ಯಾರೇಜ್ ಹಾಲ್ಸ್ ವೆಲ್ಫೇರ್ ಅಸೋಸಿಯೇಷನ್ ಸರ್ಕಾರಕ್ಕೆ ಮನವಿ ಮಾಡಿದೆ. ಈಗಾಗಲೇ ಮದುವೆ ಕಾರ್ಯಕ್ರಮಗಳಿಗೆ 50 ಜನ ಸೇರಲು ಅನುಮತಿ ನೀಡಿರುತ್ತೀರಿ. ಆದರೆ, ಕಾರ್ಯಕ್ರಮ ಆಯೋಜಕರು ಇದಕ್ಕೆ ಸ್ಪಂದಿಸುತ್ತಿಲ್ಲ. ಹಾಗಾಗಿ ಕಲ್ಯಾಣ ಮಂಟಪದ ವಿಸ್ತಾರಕ್ಕೆ ಅನುಗುಣವಾಗಿ ಜನ ಸೇರಲು ಹಾಗೂ ಸುರಕ್ಷತಾ ಕ್ರಮದ ಅಂಗವಾಗಿ ಪೀಠೋಪಕರಣಗಳನ್ನು ಒಂದು …
Read More »ಕೇಂದ್ರ ಸರ್ಕಾರದಿಂದ ನೌಕರರಿಗೆ ಸಿಹಿಸುದ್ದಿ : ನಿವೃತ್ತಿಯ ದಿನವೇ ಸಿಗಲಿವೆ ಎಲ್ಲ `ಪಿಂಚಣಿ ಸೌಲಭ್ಯʼಗಳು
ನವದೆಹಲಿ : ಸರ್ಕಾರಿ ನೌಕರರಿಗೆ ಶುಭ ಸುದ್ದಿ ಸಿಕ್ಕಿದ್ದು, ನಿವೃತ್ತಿಯ ನಂತರ ಎಲ್ಲಾ ಪಿಂಚಣಿ ಸೌಲಭ್ಯಗಳನ್ನ ವಿಳಂಬ ಮಾಡದೆ ಸಕಾಲದಲ್ಲಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೌದು, ನಿವೃತ್ತಿಯ ದಿನವೇ ಪಿಂಚಣಿ ಸೌಲಭ್ಯ ನೀಡುವಂತೆ ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದುಕೊರತೆಗಳ ಸಚಿವಾಲಯದ ಡಿಪಾರ್ಟ್ಮೆಂಟ್ ಆಫ್ ಪೆನ್ಶನ್ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ ಎಲ್ಲ ಸಚಿವಾಲಯಗಳಿಗೆ ಪತ್ರ ಬರೆದಿದೆ. ಅಂದ್ಹಾಗೆ, ಈ ಮಾಹಿತಿಯನ್ನ ಅಧಿಕೃತ ಮೂಲಗಳೇ ನೀಡಿವೆ. ಹಲವು ತಿಂಗಳು ಕಳೆದರೂ …
Read More »ರಮೇಶ್ ಜಾರಕಿಹೊಳಿ ಪರ ನಿಂತ ಸರ್ಕಾರ, ?
ಬೆಂಗಳೂರು: ಸಿ.ಡಿ ಪ್ರಕರಣದಲ್ಲಿ ಸರ್ಕಾರವು ರಮೇಶ್ ಜಾರಕಿಹೊಳಿ ಅವರಿಗೆ ನೀಡುತ್ತಿರುವ ಮನ್ನಣೆಯನ್ನು ಸಂತ್ರಸ್ತೆಗೆ ನೀಡುತ್ತಿಲ್ಲ ಎಂದು ವಕೀಲ ಜಗದೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿ.ಡಿ ಪ್ರಕರಣದಿಂದಾಗಿ ಸಂತ್ರಸ್ತೆಗೆ ಅನ್ಯಾಯವಾಗಿದೆ. ಈವರೆಗೂ ಆಕೆಗೆ ರಕ್ಷಣೆ ನೀಡಿಲ್ಲ. ಆದರೆ, ಸರ್ಕಾರವೇ ರಮೇಶ್ ಜಾರಕಿಹೊಳಿ ಪರವಾಗಿ ನಿಂತಿದೆ. ನಿರ್ಭಯ ಮಾರ್ಗಸೂಚಿ ಪ್ರಕಾರ ಯಾವುದೇ ಮಹಿಳೆಗೆ ಲೈಂಗಿಕ ಕಿರುಕುಳ ಆಗಿದ್ದರೆ ಆಕೆಗೆ ರಕ್ಷಣೆ ನೀಡಿ 24 ಗಂಟೆಯೊಳಗೆ ಎಫ್ಐಆರ್ ದಾಖಲಿಸಿಕೊಳ್ಳಬೇಕು ಎಂದು ದೂರಿನಲ್ಲಿ ಹೇಳಿದ್ದಾರೆ. ಅಧಿಕಾರ ದುರುಪಯೋಗ …
Read More »3 ಕೋಟಿ ಪಡಿತರ ಚೀಟಿ ರದ್ದು; ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ಸೂಚನೆ
ನವದೆಹಲಿ, ಮಾರ್ಚ್ 17: ಆಧಾರ್ ಸಂಖ್ಯೆ ಜೋಡಣೆಯಾಗದ ಕಾರಣ ಸುಮಾರು ಮೂರು ಕೋಟಿ ಪಡಿತರ ಚೀಟಿಗಳನ್ನು ಕೇಂದ್ರ ರದ್ದುಗೊಳಿಸಿರುವುದು “ಅತಿ ಗಂಭೀರ ವಿಷಯ” ಎಂದು ಉಲ್ಲೇಖಿಸಿರುವ ಸುಪ್ರೀಂ ಕೋರ್ಟ್, ಈ ಕುರಿತು ಕೇಂದ್ರ ಹಾಗೂ ಎಲ್ಲಾ ರಾಜ್ಯಗಳಿಂದ ಪ್ರತಿಕ್ರಿಯೆ ಕೇಳಿದೆ. ಎಸ್.ಎ.ಬೊಬ್ಡೆ, ಎ.ಎಸ್. ಬೋಪಣ್ಣ ಹಾಗೂ ವಿ. ರಾಮಸುಬ್ರಹ್ಮಣಿಯನ್ ಅವರನ್ನೊಳಗೊಂಡ ಪೀಠ ಈ ಸಂಬಂಧ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದು, “ಈ ವಿಷಯವನ್ನು ದುರದೃಷ್ಟ ಎಂದು ಹೇಳಿ ಸುಮ್ಮನಾಗುವಂತಿಲ್ಲ. ಪಡಿತರ ಚೀಟಿ …
Read More »ಯೋಗೇಶ್ ಗೌಡ ಹತ್ಯೆ ಕೇಸ್ : ಮಾಜಿ ಶಾಸಕ ‘ವಿನಯ್ ಕುಲಕರ್ಣಿ’ ಜಾಮೀನು ಅರ್ಜಿ ವಜಾ
ಬೆಂಗಳೂರು : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. ಪ್ರಕರಣ ಸಂಬಂಧ ವಿನಯ್ ಜಿಲ್ಲಾ ಸಿಬಿಐ ವಿಶೇಷ ನ್ಯಾಯಾಲಯ ಸೇರಿದಂತೆ ಹೈಕೋರ್ಟ್ ನಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಎಲ್ಲಾದರಲ್ಲೂ ಅರ್ಜಿ ವಜಾ ಆಗಿದೆ. ಹಾಗಾಗಿ ಮಾಜಿ ಸಚಿವರು ಜನಪ್ರತಿನಿಧಿಗಳ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ಸಂಬಂಧ ವಾದ ಪ್ರತಿವಾದ …
Read More »ಸಿಡಿಯಲ್ಲಿದ್ದ ಯುವತಿಯ ರೂಮ್ ನಲ್ಲಿ ಬರೋಬ್ಬರಿ 23 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ…!
ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಸಿಡಿಯಲ್ಲಿದ್ದ ಯುವತಿಯ ರೂಮ್ ನಲ್ಲಿ ಬರೋಬ್ಬರಿ 23 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ನಿನ್ನೆ ಸಂಜೆ ಎಸ್ಐಟಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ 23 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಇಷ್ಟೊಂದು ನಗದು ಹೇಗೆ ಬಂತು ಎನ್ನುವುದು ಅನುಮಾನಕ್ಕೆ ಕಾರಣವಾಗಿದೆ. ನರೇಶ್ ಮನೆಯಲ್ಲಿ ಶೋಧಿಸಿದಾಗ 18.5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿಸಿದ …
Read More »ಸಚಿವರಿಗೆ ಸ್ವಪಕ್ಷೀಯರಿಂದಲೇ ಮುಜುಗರ
ಬೆಂಗಳೂರು: ನೇಕಾರರ ಸಮಸ್ಯೆ ಕುರಿತು ಆಡಳಿತ ಪಕ್ಷದ ಸದಸ್ಯರೇ ಪದೇ ಪದೇ ಪ್ರಶ್ನೆಗಳನ್ನು ಕೇಳುವ ಮೂಲಕ ಜವಳಿ ಸಚಿವ ಶ್ರೀಮಂತ ಪಾಟೀಲ ಅವರಿಗೆ ಮುಜುಗರ ತಂದ ವಿದ್ಯಮಾನ ವಿಧಾನಸಭೆಯಲ್ಲಿ ಬುಧವಾರ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸಿದ್ದು ಸವದಿ, ನೇಕಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಶ್ನೆ ಕೇಳಿದರು. ‘ನೇಕಾರ ಸಮ್ಮಾನ್ ಯೋಜನೆಯಡಿ ನೀಡಿದ ₹2 ಸಾವಿರ ಯಾವುದಕ್ಕೂ ಸಾಲದು. ಲಾಕ್ಡೌನ್ ಅವಧಿಯಲ್ಲಿ ನೇಕಾರರು ತಯಾರಿಸಿದ ಸೀರೆಗಳನ್ನು ಇಲಾಖೆ ಖರೀದಿ ಮಾಡಿಲ್ಲ. …
Read More »ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ ಕೂಗಿದರೇ ಅಗತ್ಯ ವಸ್ತುಗಳ ಬೆಲೆ ಇಳಿಯುತ್ತದೆಯೇ?’
ಬೆಂಗಳೂರು: ಜೈ ಶ್ರೀರಾಮ್, ಜೈ ಹನುಮಾನ್ ಎಂದು ಘೋಷಣೆ ಕೂಗಿದರೇ ಅಗತ್ಯ ವಸ್ತುಗಳ ಬೆಲೆ ಇಳಿಯಿತ್ತದೆಯೇ ಎಂದು ವಿಧಾನ ಪರಿಷತ್ನಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಬುಧವಾರ ಪ್ರಶ್ನಿಸಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯಲ್ಲಿ ಗಣನೀಯ ಏರಿಕೆ ಉಂಟಾಗಿರುವ ಹೆಚ್ಚಳದ ಕುರಿತು ಪ್ರಸ್ತಾಪಿಸುತ್ತಾ ಅವರು ಈ ಪ್ರಶ್ನೆ ಹಾಕಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. …
Read More »ಲಾಕ್ ಡೌನ್ ಜಾರಿಗೊಳಿಸುವ ಸಾಧ್ಯತೆ ಇಲ್ಲ: B.S.Y.
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಜತೆಗಿನ ವಿಡಿಯೋ ಸಂವಾದದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಕೊರೋನಾ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಮುಂದಿನ ನಿಲುವುಗಳ ಬಗ್ಗೆ ಸ್ಪಷ್ಟನೆ ನೀಡಿದ್ದು, ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಜಾರಿಗೊಳಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ . ಲಾಕ್ ಡೌನ್ ಮತ್ತು ನೈಟ್ ಕರ್ಪ್ಯೂ ಜಾರಿಗೊಳಿಸುವ ಯಾವುದೇ ಸಾಧ್ಯತೆ ಇಲ್ಲ. ರಾಜ್ಯದಲ್ಲಿ ಆರ್ ಟಿಪಿಎಸ್ ಪರೀಕ್ಷೆ ಪ್ರಮಾಣಕ್ಕೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೋನಾ …
Read More »
Laxmi News 24×7