ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನ ಕಾರ್ಖಾನೆಯೊಂದರಲ್ಲಿ ಮತ್ತೆ ಗ್ಯಾಸ್ ಲೀಕ್ ಆಗಿದ್ದು, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ನಾಲ್ವರು ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೇ ವಿಶಾಖಪಟ್ಟಣಂನ ಆರ್.ಆರ್ ವೆಂಕಟಪುರಂನಲ್ಲಿರುವ ಬಹುರಾಷ್ಟ್ರೀಯ ಕಂಪನಿ ಎಲ್.ಜಿ. ಪಾಲಿಮರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ರಾಸಾಯನಿಕ ಅನಿಲ ಕಾರ್ಖಾನೆಯಲ್ಲಿ ಸೋರಿಕೆಯಾಗಿತ್ತು. ಈಗ ಮತ್ತೆ ಇದೇ ವಿಶಾಖಪಟ್ಟಣಂನ ಸೈನರ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಿಂದ ಬೆಂಜಿಮಿಡಾಜೋಲ್ ಅನಿಲ ಸೋರಿಕೆಯಾಗಿದೆ ಎಂದು ರಾಷ್ಟೀಯ ಮಾಧ್ಯಮಗಳು ವರದಿ …
Read More »ಸುಧಾಕರ್, ಅಶೋಕ್ ಮಧ್ಯೆ ಕೊರೊನಾ ಫೈಟ್?
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಹಾವಳಿ ಮಧ್ಯೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ತಲೆನೋವು ಶುರುವಾಗಿದೆ. ಇಂದಿನಿಂದ ಬೆಂಗಳೂರು ಕೊರೊನಾ ನಿರ್ವಹಣೆ ಪಾತ್ರ ಯಾರಿಗೆ ಸಿಗಲಿದೆ ಎಂಬ ಪ್ರಶ್ನೆ ಎದ್ದಿದೆ. ಸಚಿವ ಡಾ.ಕೆ.ಸುಧಾಕರ್ ಕ್ವಾರಂಟೈನ್ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಅಶೋಕ್ಗೆ ಸಿಕ್ಕಿತ್ತು. ಮುಖ್ಯಮಂತ್ರಿಗಳು ಆರ್ ಅಶೋಕ್ಗೆ ಮೌಖಿಕವಾಗಿ ತಾತ್ಕಾಲಿಕ ಹೊಣೆ ಹೊರಿಸಿದ್ದರು. ಆದರೆ ಇದೀಗ ಸುಧಾಕರ್ ಹೋಂ ಕ್ವಾರಂಟೈನ್ ಅವಧಿ ಮುಗಿಸಿ ರೀ ಎಂಟ್ರಿ ಕೊಟ್ಟಿದ್ದಾರೆ. ಕೊರೊನಾ ಹೊಣೆ ಯಾರಿಗೆ..? …
Read More »ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಎಚ್ಚರಿಕೆ …….
ಬೆಂಗಳೂರು,ಜೂ.29- ನಾಳೆಯೊಳಗೆ ಖಾಸಗಿ ಆಸ್ಪತ್ರೆಯವರು ಸೋಂಕಿತರಿಗೆ ಕೊರೊನಾ ಚಿಕಿತ್ಸೆ ನೀಡಲು ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಕ್ಕೆ ನೀಡಲೇಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಖಾಸಗಿ ಆಸ್ಪತ್ರೆ ವೈದ್ಯರಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಇಂದು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದ ಅವರು, ಏನು ಮಾಡುತ್ತೀರೋ ಬಿಡುತ್ತೀರೋ ಗೊತ್ತಿಲ್ಲ.ನಾಳೆಯೊಳಗೆ ಕನಿಷ್ಠ ಪಕ್ಷ ಎರಡುವರೆ ಸಾವಿರ ಹಾಸಿಗೆಗಳನ್ನು ಸರ್ಕಾರಕ್ಕೆ ನೀಡಲೇಬೇಕೆಂದು ತಾಕೀತು ಮಾಡಿದರು. ಒಂದು ಹಂತದಲ್ಲಿ ಖಾಸಗಿ ಆಸ್ಪತ್ರೆ ಇಷ್ಟು ಪ್ರಮಾಣದ ಹಾಸಿಗೆಗಳನ್ನು ನೀಡಲುಸಾಧ್ಯವಿಲ್ಲ ಎಂದು …
Read More »ಕೋವಿಡ್-19 ಪ್ರಕರಣಗಳು ಮತ್ತಷ್ಟು ಏರಿಕೆಯಾಗುವ ಸಂಭವವಿದೆಮುಂದಿನ ಆರು ತಿಂಗಳು ಮಾನಸಿಕವಾಗಿ ಸಿದ್ಧರಾಗಿ ಎಂದು ಮನವಿ
ಬೆಂಗಳೂರು : ಪ್ರಸಕ್ತ ಸಾಲಿನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕೋವಿಡ್-19 ಪ್ರಕರಣಗಳು ಮತ್ತಷ್ಟು ಏರಿಕೆಯಾಗುವ ಸಂಭವವಿದೆ ಎಂಬ ತಜ್ಞರ ಅಭಿಪ್ರಾಯವನ್ನು ಆಧರಿಸಿ ಕೊರೊನಾ ಮಹಾಮಾರಿಯನ್ನು ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ ಎಂದು ಇಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಕಂದಾಯ ಸಚಿವ ಆರ್ ಅಶೋಕ್ ಅವರು ಭಾನುವಾರ ತಾವು ಕೋವಿಡ್ ಆಸ್ಪತ್ರೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಹಾಗೂ ಶುಶ್ರೂಷೆ ನೀಡಲು ಮುಂದಿನ ಆರು ತಿಂಗಳು ಮಾನಸಿಕವಾಗಿ …
Read More »ರಾಜಧಾನಿ ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್……
ನವದೆಹಲಿ,ಜೂ.29-ಕರೋನವೈರಸ್ ರೋಗಿಗಳ ಚಿಕಿತ್ಸೆಗಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್ ತೆರೆದಿದ್ದು, ಇನ್ನೆರಡು ದಿನಗಳಲ್ಲಿ ಕಾರ್ಯಾಚರಣೆ ನಡೆಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಇಂದು ತಿಳಿಸಿದರು. ಕೋವಿಡ್ ಚಿಕಿತ್ಸೆಗಾಗಿ ಪ್ಲಾಸ್ಮಾ ಕೊರತೆಯಿದ್ದು, ಇದನ್ನು ಮನಗಂಡು ಸರ್ಕಾರ ಪ್ಲಾಸ್ಮ ಬ್ಯಾಂಕ್ ತೆರೆಯುತ್ತಿದೆ.ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ (ಐಎಲ್ಬಿಎಸ್) ನಲ್ಲಿ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸುತ್ತಿದ್ದು, ಕೊರೊನಾ ವಿರುದ್ದ ಹೋರಾಡಿ ರೋಗಮುಕ್ತರಾದ ವ್ಯಕ್ತಿಗಳು ಮುಂದೆ ಬಂದು ಇತರ ಕೊರೊನಾ ಸೋಂಕಿತರಿಗೆ …
Read More »ಅಗಸರು- ಕ್ಷೌರಿಕರಿಗೆ 5000ರೂ. ಕೋವಿಡ್ ಪರಿಹಾರಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ರಾಮನಗರ ಜೂ.30-ಅಗಸರು ಹಾಗೂ ಕ್ಷೌರಿಕರಿಗೆ ಕೋವಿಡ್-19ರ ಲಾಕ್ಡೌನ್ ಕಾರಣ 5000 ರೂ.ಗಳ ಪರಿಹಾರ ನೆರವು ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಗಡುವನ್ನು ಜುಲೈ 10ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವನ್ನಾಗಿ ನಿಗದಿಪಡಿಸಲಾಗಿತ್ತು. ಆದರೆ, ಈ ಸಂಬಂಧ ರಾಮನಗರ ಜಿಲ್ಲೆಯ 04 ತಾಲ್ಲೂಕುಗಳಿಂದ ಇಲ್ಲಿಯವರೆಗೂ 1041 ಅರ್ಜಿಗಳು ಮಾತ್ರ ಆನ್ಲೈನ್ ಅಲ್ಲಿ ಸ್ವೀಕೃತಗೊಂಡಿವೆ.ಈ ವೃತ್ತಿಯಲ್ಲಿ ಯಾವುದೇ ಅಗಸ, ಕ್ಷೌರಿಕ ವೃತ್ತಿ ನಿರ್ವಹಿಸುತ್ತಿರುವ ಕಾರ್ಮಿಕರು …
Read More »ರಶ್ಮಿಕಾ ಮಾವಿನಕಾಯಿ, ಮಾವಿನಕಾಯಿ ಉಪ್ಪಿನಕಾಯಿ ಸೇರಿದಂತೆ ಆರ್ಗಾನಿಕ್ ಫುಡ್ಗಳನ್ನು ಉಡುಗೊರೆಯಾಗಿ ಮಹೇಶ್ ಬಾಬು ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಹೈದರಾಬಾದ್: ಸ್ಯಾಂಡಲ್ವುಡ್ ನಟಿ ರಶ್ಮಿಕಾ ಮಂದಣ್ಣ ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಕೊಡಗಿನ ಕೂರ್ಗ್ನಲ್ಲಿ ಕುಟುಂಬದವರ ಜೊತೆ ಕಾಲಕಳೆಯುತ್ತಿದ್ದಾರೆ. ಇದೀಗ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಕುಟುಂಬಕ್ಕೆ ಕೊಡಗಿನಿಂದ ವಿಶೇಷವಾದ ಉಡುಗೊರೆಯನ್ನು ಕಳುಹಿಸಿಕೊಟ್ಟಿದ್ದಾರೆ. ನಟಿ ರಶ್ಮಿಕಾ ಮಾವಿನಕಾಯಿ, ಮಾವಿನಕಾಯಿ ಉಪ್ಪಿನಕಾಯಿ ಸೇರಿದಂತೆ ಆರ್ಗಾನಿಕ್ ಫುಡ್ಗಳನ್ನು ಉಡುಗೊರೆಯಾಗಿ ಮಹೇಶ್ ಬಾಬು ಮನೆಗೆ ಕಳುಹಿಸಿಕೊಟ್ಟಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಕೊಡಗಿನಿಂದ ಅದರಲ್ಲೂ ಮಳೆಗಾಲದಲ್ಲಿ ಉಡುಗೊರೆ ಕಳುಹಿಸಿಕೊಟ್ಟಿದ್ದಕ್ಕೆ ನಟ ಮಹೇಶ್ ಬಾಬು ಪತ್ನಿ ನಮ್ರತಾ ಅವರು ರಶ್ಮಿಕಾಗೆ …
Read More »ಧಾರಾಕಾರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥ……
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಬಿಡುವ ನೀಡಿದ್ದ ವರುಣದೇವ ಜಿಲ್ಲೆಯಲ್ಲಿ ಇಂದು ಮತ್ತೆ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಚಿಕ್ಕಮಗಳೂರು ನಗರದಲ್ಲಿ ಸಂಜೆ ಸುಮಾರು ಅರ್ಧ ಗಂಟೆಗಳ ಕಾಲ ಧಾರಾಕಾರ ಮಳೆ ಆಗಿದೆ. ಸಂಜೆಯ ದಿಢೀರ್ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿತು. ಚಿಕ್ಕಮಗಳೂರು ನಗರದಲ್ಲಿ ಅರ್ಧ ಗಂಟೆಗೂ ಹೆಚ್ಚು ಹೊತ್ತು ಸುರಿದ ವರ್ಷದ ಮೊದಲ ಮಳೆ ಇದಾಗಿದೆ. ಚಿಕ್ಕಮಗಳೂರು ನಗರದಲ್ಲಷ್ಟೇ ಅಲ್ಲದೆ ಜಿಲ್ಲೆಯ ಮಲೆನಾಡು ಭಾಗದಲ್ಲೂ ಅಲ್ಲಲ್ಲಿ ಮಳೆ ಸುರಿದಿದೆ. ಕೊಪ್ಪ, ಬಾಳೆಹೊನ್ನೂರು, …
Read More »ಕಾಫಿನಾಡಿನ ಪ್ರವಾಸ ಮುಂದೂಡಿ- ಜಿಲ್ಲಾಡಳಿತ ಮನವಿ………..
ಚಿಕ್ಕಮಗಳೂರು: ದಿನೇ ದಿನೇ ಕೊರೊನಾ ಆತಂಕ ಹೆಚ್ಚುತ್ತಿದ್ದರೂ, ಇದಾವುದನ್ನೂ ಲೆಕ್ಕಿಸದ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಚಿಕ್ಕಮಗಳೂರಿಗೆ ಭೇಟಿ ನೀಡುತ್ತಿದ್ದು, ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆ ಪ್ರವಾಸಿಗರು ಚಿಕ್ಕಮಗಳೂರು ಪ್ರವಾಸವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಎಂದು ಜಿಲ್ಲಾಡಳಿತ ಪ್ರವಾಸಿಗರಲ್ಲಿ ಮನವಿ ಮಾಡಿದೆ. ಕೊರೊನಾ ಆರಂಭದ ಮೊದಲ 55 ದಿನಗಳ ಕಾಲ ಒಂದೂ ಕೊರೊನಾ ಪಾಸಿಟಿವ್ ಪ್ರಕರಣವಿಲ್ಲದ ಚಿಕ್ಕಮಗಳೂರಿನಲ್ಲಿ ಇಂದು ಸೋಂಕಿತರ ಸಂಖ್ಯೆ 70ರ ಗಡಿ ಮುಟ್ಟಿದೆ. ಬೆಂಗಳೂರಿಗೆ ಹೋಗಿ …
Read More »ನಿಮಗೆ ಕೈ ಮುಗಿದು ಕೇಳಿಕೊಳ್ಳತ್ತೆನೆ ದಯವಿಟ್ಟು ನಮ್ಮ ಅಳಲು ಕೇಳಿ ಮುಖ್ಯಮಂತ್ರಿಗಳೇ
ಯಾದಗಿರಿ: ನಮ್ಮ ಕೈ ಬಿಡಬೇಡಿ ಮುಖ್ಯಮಂತ್ರಿಗಳೇ, ನಿಮಗೆ ಕೈ ಮುಗಿದು ಕೇಳಿಕೊಳ್ಳತ್ತೆನೆ ದಯವಿಟ್ಟು ನಮ್ಮ ಅಳಲು ಕೇಳಿ ಅಂತ ಯಾದಗಿರಿ ಜಿಲ್ಲೆಯ ರೈತರೊಬ್ಬರು ತನ್ನ ಅಳಲನ್ನು ತೊಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದೆ. ಇದರಿಂದ ಹಳ್ಳ-ಕೊಳ್ಳಗಳು ತುಂಬಿ ಹೊಲ ಗದ್ದೆಗಳು ಸೇರಿದಂತೆ ತಗ್ಗು ಪ್ರದೇಶದ ಮನೆಗಳಿ ಮಳೆ ನುಗ್ಗುತ್ತಿವೆ. ಮಳೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬಿತ್ತಿದ ಬೆಳೆ ನಾಶವಾಗಿದೆ. ಇದರಿಂದ ಕಂಗಾಲಾಗಿರುವ ಜಿಲ್ಲೆಯ …
Read More »