Breaking News

ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಿಷೇಧ………..

ಬೆಳಗಾವಿ : ಕೊರೊನಾ ಎರಡನೇ ಅಲೆ ಅಪ್ಪಳಿಸುವ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಆಚರಿಸುವುದನ್ನು ನಿಷೇಧಿಸಲು ಸರ್ಕಾರ ನಿರ್ಧರಿಸಿದೆ ಎಂದು  ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ. ಇಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆಯನ್ನು ನಿಷೇಧ ಮಾಡಲು ಈಗಾಗಲೇ  ಸಿಎಂ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಾನು ಈ ಕುರಿತು ಚರ್ಚೆ ಮಾಡಿದ್ದೇವೆ. ಇದಕ್ಕೆ ಸಿಎಂ ಕೂಡಾ ಸಮ್ಮತಿ ನೀಡಿದ್ದಾರೆ. ಆದ ಕಾರಣ ಶೀಘ್ರದಲ್ಲಿ ಸರ್ಕಾರ …

Read More »

ಕಾಂಗ್ರೆಸ್ ಜೊತೆ ಕೈ ಜೋಡಿಸೋದು ಬೇಡ ಅಂತಾ ನಾವು ಹೆಚ್‍ಡಿಕೆಗೆ ಮೊದಲೇ ಹೇಳಿದ್ದೆವು.: ಹೊರಟ್ಟಿ

ಧಾರವಾಡ: ಕಾಂಗ್ರೆಸ್ ಜೊತೆ ಕೈ ಜೋಡಿಸೋದು ಬೇಡ ಅಂತಾ ನಾವು ಹೆಚ್‍ಡಿಕೆಗೆ ಮೊದಲೇ ಹೇಳಿದ್ದೆವು. ಕೊಂಚ ತಡೆದುಕೊಳ್ಳಿ ಅಂದಿದ್ದೆವು ಎಂದು ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಹೊರಟ್ಟಿ, ದೋಸ್ತಿ ಸರ್ಕಾರದಲ್ಲಿ ಸಿದ್ದರಾಮಯ್ಯ ಜೆಡಿಎಸ್ ಮುಗಿಸೋದು ನನ್ನ ಕೆಲಸ ಅಂದಿದ್ದರು. ಸಿದ್ದರಾಮಯ್ಯ ಹೆಚ್‍ಡಿಕೆ ಜೊತೆಯಾಗಿ ಕೂತು ಮಾತಾಡೋ ಸ್ಥಿತಿ ನಿರ್ಮಾಣವಾಗಲಿಲ್ಲ. ಇಬ್ಬರೂ ಕುಳಿತು ಮಾತನಾಡಬಹುದಿತ್ತು. ಸಮನ್ವಯತೆಯಿಂದ ಹೋಗಬೇಕಿತ್ತು ಆದರೆ ಇದು ಒತ್ತಾಯದ ಮದುವೆ ಆದಂತಾಯಿತು ಎಂದು ಹೇಳಿದರು. …

Read More »

ಬೆಳಗಾವಿಯಿಂದ ಬೆಂಗ್ಳೂರಿಗೆ ಒಂದೇ ವಿಮಾನದಲ್ಲಿ ಉಭಯ ನಾಯಕರ ಪ್ರಯಾಣ

ಬೆಳಗಾವಿ: ಕುಂದಾ ನಗರಿಯಿಂದ ಬೆಂಗಳೂರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ, ಡಿಸಿಎಂಗಳಾದ ಅಶ್ವಥ್ ನಾರಾಯಣ್, ಗೋವಿಂದ ಕಾರಜೋಳ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಪ್ರಯಾಣ ಬೆಳೆಸಿದ್ದಾರೆ.ಬೆಳಗಾವಿಯಿಂದ 7.40ಕ್ಕೆ ಹೊರಟ ಏರ್ ಇಂಡಿಯಾ ವಿಮಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಜೊತೆಯಾಗಿ ಫ್ಲೈಟ್ ಏರಿದ್ದಾರೆ. ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆ ಸಿಎಂ ಸೇರಿದಂತೆ ಬಹುತೇಕ ಎಲ್ಲ ಕಮಲ ನಾಯಕರು ಬೆಳಗಾವಿಗೆ ಆಗಮಿಸಿದ್ದರು. ಇತ್ತ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ …

Read More »

ಕೊಟ್ಟ ಮಾತು ಉಳಿಸಿಕೊಂಡ B.S.Y. – ಮದಲೂರು ಕೆರೆಗೆ ತಲುಪಿದ ಹೇಮಾವತಿ ನೀರು

ತುಮಕೂರು: ಇಂದು ಹೇಮಾವತಿ ನಾಲೆಯಿಂದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಕೆರೆಗೆ ನೀರು ಹರಿದು ಬಂದಿದ್ದು, ಸಿಎಂ ಯಡಿಯೂರಪ್ಪ ಉಪಚುನಾವಣೆ ವೇಳೆ ಶಿರಾ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.ಳೆದ ತಿಂಗಳು ನಡೆದ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಮದಲೂರು ಕೆರೆಗೆ ನೀರನ್ನು ಹರಿಸುತ್ತೇವೆ ಎಂಬ ಪ್ರಮುಖ ಅಜೆಂಡಾವನ್ನು ಇಟ್ಟುಕೊಂಡಿತ್ತು. ಅದರಂತೆ ಇಂದು ಮದಲೂರು ಕೆರೆಗೆ ನೀರು ಬಂದು ತಲುಪಿದೆ. ನವೆಂಬರ್ 30ರಂದು ಕಳ್ಳಂಬೆಳ್ಳ ಕೆರೆಯಿಂದ ನೀರು ಬಿಡಲಾಗಿತ್ತು. ಸತತ …

Read More »

ಡಿ.7ರ ವಾಟಾಳ್ ಸಭೆಯಲ್ಲಿ ಮುಂದಿನ ಹೋರಾಟದ ನಿರ್ಧಾರ: ಪ್ರವೀಣ್ ಶೆಟ್ಟಿ

ಬೆಂಗಳೂರು: ಮರಾಠಾ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯುವ ಹೋರಾಟಕ್ಕೆ ಸಂಬಂಧಪಟ್ಟಂತೆ ಸೋಮವಾರ ವಾಟಾಳ್ ನಾಗರಾಜ್ ಅವರು ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮುಂದಿನ ಹೋರಾಟದ ಹಾದಿಯ ಬಗ್ಗೆ ಚರ್ಚಿಸಿ ನಿರ್ಧರಿಸೋದಾಗಿ ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂದು ಬಂಧಿಸಿರುವ ಹೋರಾಟಗಾರರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯುವಂತೆ ಸರ್ಕಾರವನ್ನ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಇಂದು …

Read More »

ಮುಂಬೈ ನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರಇದೆ. ಮಹಾರಾಷ್ಟ್ರದ ಸರ್ಕಾರ ಹತ್ತು ಕೋಟಿ ಹಣ ನೀಡುತ್ತಿದೆ:ಮರಾಠಿ ದ್ವೇಷ ಬಿಡಿ – ಯತ್ನಾಳ್‌

ಬೆಂಗಳೂರು: ಮುಂಬೈ ಬೊರಿವಿಲಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇದೆ. ಅದಕ್ಕೆ ಮಹಾರಾಷ್ಟ್ರದ ಸರ್ಕಾರ ಹತ್ತು ಕೋಟಿ ಹಣ ನೀಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಿ ಹಾಗೂ ಮರಾಠರ ಮೇಲೆ ಇರುವ ದ್ವೇಷ ಬಿಡಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.ಈ ಸಂಬಂಧ ಫೇಸ್‌ಬುಕ್‌ನಲ್ಲಿ ದೀರ್ಘವಾದ ಪೋಸ್ಟ್‌ ಪ್ರಕಟಿಸಿ ಮರಾಠರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನನ್ನ ಬೆಂಬಲ ಇದೆ ಎಂದು ಹೇಳಿದ್ದಾರೆ. ಪೋಸ್ಟ್‌ನಲ್ಲಿ ಏನಿದೆ? ಮರಾಠರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ …

Read More »

ಗೋಹತ್ಯೆ ನಿಷೇಧ, ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಕಾರ್ಯಕಾರಿಣಿ ಸಭೆಯಲ್ಲಿ  ನಿರ್ಣಯ ತಗೆದುಕೊಳ್ಳಲಾಗಿದೆ:ಕಟೀಲ್

ಬೆಳಗಾವಿ: ಗೋಹತ್ಯೆ ನಿಷೇಧ, ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಕಾರ್ಯಕಾರಿಣಿ ಸಭೆಯಲ್ಲಿ  ನಿರ್ಣಯ ತಗೆದುಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಖಾಸಗಿ  ಹೋಟೆಲ್ ನಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಗ್ರಾಮ ಪಂಚಾಯಿತಿ  ಚುನಾವಣೆ ದೃಷ್ಠಿಯಿಂದ  ಗ್ರಾಮಗಳನ್ನು ಅಭಿವೃದಿಗೊಳಿಸುವ ನಿಟ್ಟಿನಲ್ಲಿ  ಗ್ರಾಮ ಸ್ವರಾಜ್ಯ  ಪರಿಕಲ್ಪನೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ.  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ  ಸ್ಪರ್ಧಿಸಲು  ಅಪೇಕ್ಷಿಸುವ ಕಾರ್ಯಕರ್ತರಿಗೆ ಬೆಂಬಲ ನೀಡಲಾಗುವುದು ಎಂದು ಹೇಳಿದರು.  …

Read More »

ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್ .ಡಿ .ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಬೆಳಗಾವಿ : ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್ .ಡಿ .ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನವರ ಸಹವಾಸ ಮಾಡಿ ನಾವಿಂದು ಸರ್ವನಾಶವಾಗಿದ್ದೇವೆ. ಸಿದ್ದರಾಮಯ್ಯ ಅವರ ಪ್ರೀ ಪ್ಲ್ಯಾನ್ ಟ್ರ್ಯಾಪ್ ನಲ್ಲಿ ಸಿಲುಕಿ ಅಧಿಕಾರ ಕಳೆದುಕೊಂಡೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದರು. ಈ ವಿಚಾರವಾಗಿ ಮಾತನಾಡಿ, ಈ ವಿಚಾರದ ಬಗ್ಗೆ ಅವರನ್ನೇ ಕೇಳಬೇಕು. ಅದೆಲ್ಲ ಮುಗಿದ ಹೋದ …

Read More »

ಉತ್ತರ ಕರ್ನಾಟಕ   ಜನರ ಬಗ್ಗೆ ಬಿಜೆಪಿ ಸರ್ಕಾರಕ್ಕೆ ಕಾಳಜಿಯೇ ಇಲ್ಲ :ಡಿ.ಕೆ. ಶಿ

ಬೆಳಗಾವಿ:  ಉತ್ತರ ಕರ್ನಾಟಕ   ಜನರ ಬಗ್ಗೆ ಬಿಜೆಪಿ ಸರ್ಕಾರಕ್ಕೆ ಕಾಳಜಿಯೇ ಇಲ್ಲ  ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭೀಕರ ಪ್ರವಾಹದಿಂದ ಈ ಭಾಗದ ಜನ  ಮನೆ, ಆಸ್ತಿ ಪಾಸ್ತಿ ಕಳೆದುಕೊಂಡು ಬೀದಿ ಪಾಲಾಗಿದ್ದಾರೆ.  ಪರಿಹಾರ, ಮನೆ ಕೊಡಲು ಸಾಧ್ಯವಾಗಲಿಲ್ಲ.  ಜನರ ಸಮಸ್ಯೆ ಆಲಿಸಲು ಸುವರ್ಣಸೌಧ ನಿರ್ಮಿಸಲಾಗಿದೆ.  ಆದ್ರೆ  ಅಧಿವೇಶನದಲ್ಲಿ ಕರೆಯದೇ ಬಿಜೆಪಿ ಕಾರ್ಯ ಕಾರಣಿ ಸಭೆ ಬೆಳಗಾವಿಯಲ್ಲಿ …

Read More »

ಸರ್ಕಾರ ಬೀಳಿಸುವ ಶಕ್ತಿ ಇರುವವರಿಗೆ ಜಿಲ್ಲೆ ಗೋಕಾಕ ಮಾಡುವುದು ಯಾವ ದೊಡ್ಡ ವಿಷಯ…:ಅಶೋಕ್ ಪೂಜಾರಿ

ಚಿಕ್ಕೋಡಿ : ಗೋಕಾಕ ಜಿಲ್ಲೆಯನ್ನಾಗಿಸಲು ಕಳೆದ 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಗೋಕಾಕ ಜಿಲ್ಲೆಗಾಗಿ ಪ್ರಾಣ ನೀಡಲು ಸಿದ್ದ ಅಂತಾ ಗೋಕಾಕ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ  ಮಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಾತನಾಡಿ, ಗೋಕಾಕ ಜಿಲ್ಲೆಗಾಗಿ ಬ್ರಿಟಿಷ್ ಸರ್ಕಾರದ ಅವಧಿಯಿಂದಲೂ ಹೋರಾಟ, ಜಿಲ್ಲೆಯ ಕೂಗು ಇದೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ನಂಬಿಕೆ ಇಟ್ಟಿದ್ದೇವೆ.   ಗೋಕಾಕ ಮತ್ತು ಚಿಕ್ಕೋಡಿ …

Read More »