ಬೆಳಗಾವಿ- ಜಿಲ್ಲಾಡಳಿದ ರಾಜಿ ಸಂಧಾನದ ಒಪ್ಪಂದದಂತೆ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಇಂದು ಪೀರನವಾಡಿ ಜಂಕ್ಷನ್ ನಲ್ಲಿ ಛತ್ರಪತಿ ಶಿವಾಜಿ ಸರ್ಕಲ್ ಎಂದು ಕನ್ನಡ,ಮರಾಠಿ ಎರಡೂ ಭಾಷೆಯಲ್ಲಿರುವ ಫಲಕವನ್ನು ಅನಾವರಣಗೊಳಿಸಿದರು. ಇಂದು ಬೆಳಿಗ್ಗೆಯೇ ಜಮಾಯಿಸಿದ ನೂರಾರು ಶಿವಾಜಿ ಅಭಿಮಾನಿಗಳು,ಪಟಾಕಿ ಸಿಡಿಸಿ,ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ,ಹಾಗೂ ಶಿವಾಜಿ ಮಹಾರಾಜರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಫಲಕವನ್ನು ಅನಾವರಣ ಮಾಡಿದ್ರು ಪೀರನವಾಡಿ ನಾಕಾ ಬಳಿ ‘ಶಿವಾಜಿ ಚೌಕ್’ ಅಂತಾ ನಾಮಫಲಕ ಅನಾವರಣ ಮಾಡಲಾಯಿತು,9 X …
Read More »ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಪೊಲೀಸ್ ವಿರುದ್ಧ ದೂರು
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿಯಾಗಿರುವ ಪೊಲೀಸ್ ವಿರುದ್ಧ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಮೇ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ. ಜೂನ್ 12 ರಂದು ಮಂಗಳೂರಿನ ವಸತಿಗೃಹಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಿದ್ದಾರೆ. …
Read More »‘ಸೌರಶಕ್ತಿ’ ಬಳಸಿ 3 ಕೋಟಿ ಉಳಿಸಿದ ಭಾರತೀಯ ರೈಲ್ವೆ
ನವದೆಹಲಿ : ವೆಸ್ಟರ್ನ್ ರೈಲ್ವೆ (Western Railway) ತನ್ನ ನೆಟ್ವರ್ಕ್ನ 75 ನಿಲ್ದಾಣಗಳಲ್ಲಿ ಸೌರ ವಿದ್ಯುತ್ ಅಳವಡಿಸುವ ಮೂಲಕ ಸುಮಾರು 3 ಕೋಟಿ ರೂ.ಗಳ ವಿದ್ಯುತ್ ಬಿಲ್ ಉಳಿತಾಯ ಮಾಡಿದೆ ಎಂದು ಹೇಳಿದೆ. ರೈಲ್ವೆ ಈಗ ಹೆಚ್ಚಿನ ನಿಲ್ದಾಣಗಳಲ್ಲಿ ಈ ಸೌಲಭ್ಯವನ್ನು ಪ್ರಾರಂಭಿಸುವ ಯೋಜನೆಯನ್ನು ಸಿದ್ಧಪಡಿಸುತ್ತಿದೆ. ಪಶ್ಚಿಮ ರೈಲ್ವೆ ಮುಖ್ಯ ವಕ್ತಾರ ಸುಮಿತ್ ಠಾಕೂರ್ ಮಾತನಾಡಿ, ಮೇಲ್ಛಾವಣಿಯ ಸೌರ ಸ್ಥಾವರಗಳು 8.67 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತವೆ, ಇದರಿಂದಾಗಿ ಈ ವರ್ಷ ಗಮನಾರ್ಹ …
Read More »ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್: ಬೆಂಗಳೂರು ಬಿಟ್ಟು ಹೊರ ಹೋದ 10-15 ನಟ ನಟಿಯರು!
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಜೋರಾಗಿರುವ ಬೆನ್ನಲ್ಲೇ 10-15 ನಟ ನಟಿಯರು ಬೆಂಗಳೂರು ಬಿಟ್ಟು ಹೊರ ಹೋಗಿದ್ದಾರೆ! ಅದರಲ್ಲೂ ರಾಗಿಣಿ ದ್ವಿವೇದಿಗೆ ನಿನ್ನೆ ಸಿಸಿಬಿ ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ನಟ ನಟಿಯರು ಆತಂಕಕ್ಕೀಡಾಗಿದ್ದಾರೆ. ರಾಗಿಣಿಗೆ ಸಿಸಿಬಿ ನೋಟಿಸ್ ವಿಚಾರ ಹಲವು ನಟ ನಟಿಯರಿಗೆ ನಡುಕ ರಾಗಿಣಿ ಬಳಿಕ ತಮ್ಮ ಹೆಸರೂ ಹೊರಬರುವ ಆತಂಕ ಇವರನ್ನು ಕಾಡತೊಡಗಿದೆ. ತಮಗೂ ನೋಟಿಸ್ ಬರಬಹುದೆಂಬ ಆತಂಕದಲ್ಲಿರುವ 10ಕ್ಕೂ ಹೆಚ್ಚು ಕಲಾವಿದರು ಈಗಾಗಲೇ …
Read More »ಕಾನೂನು ಶಾಲೆಯಲ್ಲಿ ಸ್ಥಳೀಯ ಪ್ರಾತಿನಿಧ್ಯ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಪ್ರಾತಿನಿಧ್ಯ ವಿಷಯದ ಕುರಿತು ಹೈಕೋರ್ಟ್ ತನ್ನ ಆದೇಶ ಕಾಯ್ದಿರಿಸಿದೆ. ಶೇ 25ರಷ್ಟು ಮೀಸಲಾತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೂರು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ‘ಈ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಇತರ ರಾಜ್ಯದ ವಿದ್ಯಾರ್ಥಿಗಳಲ್ಲಿ ಬಹುತೇಕರು ಕರ್ನಾಟಕದಲ್ಲಿ ವೃತ್ತಿ ಮುಂದುವರಿಸುವುದಿಲ್ಲ. ಕಾನೂನು ವಿಶ್ವವಿದ್ಯಾಲಯ ಕಾಯ್ದೆಯನ್ನು ರಾಜ್ಯದ ಶಾಸಕಾಂಗ ಅಂಗೀಕರಿಸಿದೆ. ಭೂಮಿ ಒದಗಿಸುವ ಜತೆಗೆ ಆರ್ಥಿಕವಾಗಿಯೂ ಸಂಸ್ಥೆಗೆ ಸಹಾಯ ಮಾಡಲಾಗುತ್ತಿದೆ’ ಎಂದು …
Read More »ಯುಜಿಸಿಇಟಿ ದಾಖಲೆ ಅಪ್ಲೋಡ್ ಪ್ರಕ್ರಿಯೆ ಮುಂದೂಡಿಕೆ
ಬೆಂಗಳೂರು: ಈಗ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ನಡೆಯುತ್ತಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ) ದಾಖಲೆಗಳನ್ನು ಅಪ್ಲೋಡ್ ಮಾಡುವ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು, ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಪರಿಷ್ಕೃತ ವೇಳಾಪಟ್ಟಿಯನ್ನು ಇದೇ 5ರಂದು ಪ್ರಕಟಿಸಲಾಗುವುದು ಎಂದು ಅವರು ಸೂಚಿಸಿದ್ದಾರೆ. http://kea.kar.nic.in ಇಲ್ಲಿ ಮಾಹಿತಿ ನೀಡುವ ಮೂಲಕ ವಿದ್ಯಾರ್ಥಿಗಳ ಗಮನಕ್ಕೆ …
Read More »ನವೆಂಬರ್ 1 ರೊಳಗೆ ಕೊರೋನಾ ವೈರಸ್ ಲಸಿಕೆ ವಿತರಿಸಲು ಸಿದ್ಧವಾಗುವಂತೆ ರಾಜ್ಯಗಳಿಗೆ ತಿಳಿಸಿದೆ.
ವಾಷಿಂಗ್ಟನ್ : ಯುಎಸ್ ಫೆಡರಲ್ ಸರ್ಕಾರವು ನವೆಂಬರ್ 1 ರೊಳಗೆ ಕೊರೋನಾ ವೈರಸ್ ಲಸಿಕೆ ವಿತರಿಸಲು ಸಿದ್ಧವಾಗುವಂತೆ ರಾಜ್ಯಗಳಿಗೆ ತಿಳಿಸಿದೆ. “ಅಕ್ಟೋಬರ್ ಸರ್ಪ್ರೈಸ್” ಬಗ್ಗೆ ಸಾರ್ವಜನಿಕ ಆರೋಗ್ಯ ತಜ್ಞರಲ್ಲಿ ಕಳವಳ ವ್ಯಕ್ತವಾಗಿದೆ. ಲಸಿಕೆ ಅನುಮೋದನೆಯು ವಿಜ್ಞಾನಕ್ಕಿಂತ ಹೆಚ್ಚಾಗಿ ಅಧ್ಯಕ್ಷೀಯ ಚುನಾವಣೆಗೆ ಮುಂಚಿತವಾಗಿ ರಾಜಕೀಯ ಪರಿಗಣನೆಗಳಿಂದ ಬಳಕೆಯಾಗಲಿದೆಯೇ ಎಂಬುದು ಆತಂಕಕ್ಕೆ ಕಾರಣವಾಗಿದೆ. ಆಗಸ್ಟ್ 27 ರ ಗವರ್ನರ್ಗಳಿಗೆ ಬರೆದ ಪತ್ರದಲ್ಲಿ, ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ನ ನಿರ್ದೇಶಕ …
Read More »ಕೋವಿಡ್ ಗಿಂತ ಸೆಂಟರ್ ಅವ್ಯವಸ್ಥೆ ಭಯವೇ ಹೆಚ್ಚು : ಒಂದೇ ಕೊಠಡಿಯಲ್ಲಿ ಪುರುಷ, ಮಹಿಳೆಯರು
ಚಿಕ್ಕನಾಯಕನಹಳ್ಳಿ: ಕೋವಿಡ್ ವೈರಸ್ ಭಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಕೋವಿಡ್ 19 ಕೇರ್ನಲ್ಲಿನ ಅವ್ಯವಸ್ಥೆಯ ಭಯ ಕೋವಿಡ್ ರೋಗಿಗಳಿಗೆ ನರಕಯಾ ತನೆ ನೀಡುತ್ತಿದೆ. ಕಣ್ಣು ಮುಚ್ಚದೆ ರಾತ್ರಿ ಕಳೆಯುವಂತಾಗಿದ್ದು, ಕೋವಿಡ್ ವೈರಸ್ ಜೊತೆ ಇತರ ಕಾಯಿಲೆ ಬಳುವಳಿಯಾಗಿ ಬರುವ ಲಕ್ಷಣವಿದೆ ಎಂದು ರೋಗಿಗಳು ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿನ ಕೋವಿಡ್ 19 ಕೇರ್ನಲ್ಲಿ ಸೌಕರ್ಯವೇ ಸರಿಯಿಲ್ಲ, ವೈದ್ಯಾಧಿಕಾರಿಗಳು ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಕ್ವಾರಂಟೈನ್ನಲ್ಲಿರುವ ಕೋವಿಡ್ ಪಾಸಿಟಿವ್ ರೋಗಿಗಳು ವಿಡಿಯೋ ಮಾಡಿ …
Read More »ಐಪಿಎಲ್ 2020: ಮುಂಬೈ ಇಂಡಿಯನ್ಸ್ ಟೀಂ ನಲ್ಲಿ ಲಸಿತ್ ಮಲಿಂಗ ಆಡುವುದಿಲ್ಲ, ಇವರ ರೀಪ್ಲೇಸ್ಮೆಂಟ್ ಯಾರು?
ಐಪಿಎಲ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮುಂಬೈ ಇಂಡಿಯನ್ಸ್ ವೇಗದ ಬೌಲರ್ ಲಸಿತ್ ಮಾಲಿಂಗ ವೈಯಕ್ತಿಕ ಕಾರಣಗಳಿಂದಾಗಿ ಐಪಿಎಲ್ 2020 ರ ಸೀಸನ್ ನಿಂದ ಹೊರಬಂದಿದ್ದಾರೆ. ಐಪಿಎಲ್ ಪಂದ್ಯವನ್ನು ಇನ್ನೂ ಆಡದಿರುವ ಆಸ್ಟ್ರೇಲಿಯಾದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ಅವರ ಸ್ಥಾನಕ್ಕೆ ರೀಪ್ಲೇಸ್ಮೆಂಟ್ ಆಗಿದ್ದಾರೆ. ಮಲಿಂಗ ಅವರ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು ಎಂದು ತಿಳಿದುಬಂದಿದೆ. ಮಲಿಂಗ ತನ್ನ ತಂದೆಯೊಂದಿಗೆ ಶ್ರೀಲಂಕಾದ ಮನೆಯಲ್ಲಿ ಇರಬೇಕೆಂದು …
Read More »ಸಿಎಂ ಅಧ್ಯಕ್ಷತೆಯಲ್ಲಿಂದು ಸಂಪುಟ ಸಭೆ: ಮಹತ್ವದ ಎರಡು ತೀರ್ಮಾನಗಳ ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕ ಕೃಷಿ ಬೆಲೆ ಆಯೋಗವನ್ನು 2020-23ರವರೆಗೆ ಮುಂದುವರಿಕೆ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ-2020ಕ್ಕೆ ಅನುಮೋದನೆ ಪಡೆಯುವುದು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಗುರುವಾರ ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಈ ಸಭೆಯಲ್ಲಿ ಖಾಸಗಿ ವೈದ್ಯಕಿಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ಮಂಡನೆಗೆ ನಿರ್ಧರಿಸಲಾಗಿದೆ. ಕೊರೋನಾ ಸಂದರ್ಭದಲ್ಲಿ …
Read More »