ಬೆಂಗಳೂರು, ಮಾ.14- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್ಐಟಿ ಪೊಲೀಸರು ಇಂದು ಮತ್ತಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಸಿಡಿ ಪ್ರಕರಣ ಕುರಿತಂತೆ ಜಾರಕಿಹೊಳಿ ಅವರು ಪೊಲೀಸರಿಗೆ ದೂರು ನೀಡಿರುವುದು ಹಾಗೂ ಯುವತಿ ಸಾಮಾಜಿಕ ಜಾಲತಾಣದಲ್ಲಿ ತದ್ವಿರುದ್ಧ ಹೇಳಿಕೆ ನೀಡಿರುವುದರಿಂದ ತನಿಖೆಯ ವೇಗವನ್ನು ಎಸ್ಐಟಿ ಚುರುಕುಗೊಳಿಸಿದೆ.ಸಿಡಿಯಲ್ಲಿದ್ದಾರೆ ಎಂಬ ಯುವತಿಯ ಬಾಯ್ಫ್ರೆಂಡ್ ಮತ್ತು ಆತನ ಸ್ನೇಹಿತನನ್ನು ಎಸ್ಐಟಿ ಈಗ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿ …
Read More »“ವಿಡಿಯೋದಲ್ಲಿ ಹೇಳಿದರೆ ಸಾಲದು, ಖುದ್ದು ದೂರು ನೀಡಬೇಕು”
ಬೆಂಗಳೂರು, ಮಾ.14- ಸಾಮಾಜಿಕ ಜಾಲತಾಣಗಳ ವಿಡಿಯೋ ತುಣುಕುಗಳನ್ನಾಧರಿಸಿ ದೂರು ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದರು ಎನ್ನಲಾದ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡು ಜೀವಭಯವಿದೆ, ಭದ್ರತೆ ನೀಡುವಂತೆ ಗೃಹ ಸಚಿವರಿಗೆ ಮನವಿ ಮಾಡಿಕೊಂಡ ಹೇಳಿಕೆ ಆಧರಿಸಿ ದೂರು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಯಾವುದೇ ಒಬ್ಬ ವ್ಯಕ್ತಿ ತಮಗಾದ ಅನ್ಯಾಯದ ವಿರುದ್ಧ ದೂರು ನೀಡಬೇಕಾದರೆ …
Read More »ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ..?
ಬೆಂಗಳೂರು,ಮಾ.14- ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ ಜಾರಿಗೊಳಿಸುವ ಬಗ್ಗೆ ಈವರೆಗೂ ಯಾವುದೇ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆ ಕರೆದಿದ್ದಾರೆ. ಸಭೆಯಲ್ಲಿ ಚರ್ಚಿಸಿದ ಬಳಿಕ ಮುಖ್ಯಮಂತ್ರಿಗಳ ಸೂಚನೆ ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಸದ್ಯಕ್ಕೆ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ …
Read More »ರಮೇಶ ಜಾರಕಿಹೊಳಿ ಅಭಿಮಾನಿಗಳಿಂದ ಗೋಕಾಕದಲ್ಲಿ ಪ್ರತಿಭಟನೆ
ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು ಗೋಕಾಕದಲ್ಲಿ ಪ್ರತಿಭಟನೆ ನಡೆಸಿದರು. ಗೋಕಾಕ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು, ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು. ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಈ ವೇಳೆ ಪ್ರತಿಭಟನೆ ನಿರತ ಮಹಿಳೆ ಮಾತನಾಡಿ, ರಾಜಕೀಯ ಮಾಡಲಿ ಆದರೆ ಹೆಣ್ಣನ್ನು ಮುಂದೆ ಇಟ್ಟುಕೊಂಡು ಶಿಖಂಡಿ ತರಹ …
Read More »2+3+4 ಮುಖ್ಯವಾದರೂ ಅವರ ಹಿಂದೆ ಇನ್ನು ತುಂಬಾ ಹೆಚ್ಚಿನ ಜನರಿದ್ದಾರೆ; ರಮೇಶ್ ಜಾರಕಿಹೊಳಿ
ಬೆಂಗಳೂರು: ನಮ್ಮ ವಕೀಲರು ಮಾಧ್ಯಮದ ಜೊತೆ ಮಾತನಾಡಬೇಡಿ ಅಂದಿದ್ದಾರೆ. ಆದರೆ, ನೀವೂ ಮುಂಜಾನೆಯಿಂದ ಕಾಯ್ತಿದ್ದೀರಿ. ಅದಕ್ಕೆ ಮಾತನಾಡ್ತಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ತಮ್ಮ ನಿವಾಸದಲ್ಲಿ ಇಂದು ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ವಿಚಾರವಾಗಿ ಅಧಿಕೃತವಾಗಿ ನಾನು ದೂರು ನೀಡಿದ್ದೇನೆ. ಎಲ್ಲಾ ರಾಜಕೀಯದವರು ಮಾಡಿರುವ ಷಡ್ಯಂತ್ರ. ಬ್ಲಾಕ್ ಮೇಲ್ ಮಾಡಿದ್ದಾರೆ. ಅದಕ್ಕಾಗಿ ದೂರು ನೀಡಿದ್ದೇನೆ. ದಾರಿ ತಪ್ಪಿಸುವ ರೀತಿ ಮಾಡಬೇಡಿ. ಇವತ್ತು ಎಫ್ ಐಆರ್ ದಾಖಲಾಗಿದೆ ಎಂದರು. ನಾನು ಬೇಕಾದರೂ ವಿಚಾರಣೆಗೆ ಹೋಗ್ತಿನಿ. ನಾವು ನೇರವಾಗಿ ಹೆಸರು ಹೇಳಿದರೆ ಕೇಸ್ …
Read More »ಮೊಮ್ಮಕಳ್ಳನ್ನು ಆಡಿಸುವ ವಯಸ್ಸಿನಲ್ಲಿ ಮತ್ತೊಂದು ಮದುವೆಹುಟ್ಟಿಸಿದ ಮಕ್ಕಳು ಕೊಚ್ಚಿ ಕೊಲೆ ಮಾಡಿದ ಘಟನೆ
ಬೆಳಗಾವಿ: ಮೊಮ್ಮಕಳ್ಳನ್ನು ಆಡಿಸುವ ವಯಸ್ಸಿನಲ್ಲಿ ಮತ್ತೊಂದು ಮದುವೆ ಆಗಿ ಆಸ್ತಿಯಲ್ಲಿ ಎರಡನೆಯ ಹೆಂಡತಿಗೆ ಪಾಲು ಕೊಡಲು ಹೊರಟಿದ್ದ ವ್ಯಕ್ತಿಯನ್ನು ತಾನೇ ಹುಟ್ಟಿಸಿದ ಮಕ್ಕಳು ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ 62 ವರ್ಷದ ಯಲಪ್ಪ ಹರಕಿ ಎಂಬಾತ ಕಳೆದ 35 ವರ್ಷದ ಹಿಂದೆಯೇ ಮದುವೆ ಆಗಿ ಮೂರು ಮಕ್ಕಳ ತಂದೆ ಕೂಡಾ ಆಗಿದ್ದ,ಅದ್ಯಾಕೋ ಮೊದಲೇನೆಯ ಹೆಂಡತಿ ಹಾಗೂ ಮಕ್ಕಳನ್ನು ಬಿಟ್ಟು ಇನ್ನೊಂದು …
Read More »ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಒಲವು ತಮ್ಮದಾಗಿದೆ : ಬಸವರಾಜ ಹೊರಟ್ಟಿ
ಹುಬ್ಬಳ್ಳಿ : ಎರಡು ಕಡೆ ವಿಧಾನಮಂಡಲ ಅಧಿವೇಶನ ನಡೆಸುತ್ತಿರುವ ನಿಟ್ಟಿನಲ್ಲಿ ಈ ಕುರಿತು ಸ್ಪೀಕರ್ ಅವರೊಂದಿಗೆ ಚರ್ಚಿಸುವುದಾಗಿ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಹಾಗೂ ಸ್ಪೀಕರ್ ಅಧಿಕಾರಿಗಳೊಂದಿಗೆ ತೆರಳಿ ಮಾಹಿತಿ ಪಡೆಯುವ ಚಿಂತನೆ ತಮ್ಮದಾಗಿದೆ. ಈ ಕುರಿತು ಸ್ಪೀಕರ್ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಒಲವು ತಮ್ಮದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುವುದಾಗಿ ನುಡಿದರು. ಬೆಳಗಾವಿಗೆ ಕಚೇರಿಗಳ …
Read More »ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಸುದ್ದಿ ಸುಳ್ಳು : ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಬೆಂಗಳೂರು : ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕಲಿಯುತ್ತಿರುವ ಒಂದರಿಂದ ಆರನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ಬೇಸಿಗೆ ರಜೆ ಘೋಷಣೆ, ಪರೀಕ್ಷೆ ಇಲ್ಲದೇ ಮುಂದಿನ ತರಗತಿಗೆ ಪಾಸ್ ಎಂಬ ಸುದ್ದಿ ದೃಶ್ಯಮಾಧ್ಯಮದ ಚಾನೆಲ್ ಒಂದರಲ್ಲಿ ಬಿತ್ತರವಾಗಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪರ್ಯಾಯ ಕಲಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಬಗ್ಗೆ ಮುಕ್ತ ನಿಲುವನ್ನು ಹೊಂದಿದೆ. …
Read More »ಕಾರಿನಲ್ಲಿ ಸ್ಪೋಟಕ ಪತ್ತೆ ಪ್ರಕರಣ : ತಿಹಾರ್ ಜೈಲಿಗೆ ಮುಂಬಯಿ ಪೊಲೀಸ್ ಭೇಟಿ
ಮುಂಬಯಿ: ಅಂಬಾನಿ ನಿವಾಸದ ಬಳಿ ಸ್ಫೋಟಕವಿದ್ದ ಕಾರನ್ನು ತಾವೇ ನಿಲ್ಲಿಸಿದ್ದು ಎಂದು “ಜೈಶ್-ಉಲ್-ಹಿಂದ್’ ಸಂಘಟನೆಯ ಹೆಸರಿನಲ್ಲಿ ಟೆಲಿಗ್ರಾಂ ಆಯಪ್ ಸಂದೇಶದ ಹಿನ್ನೆಲೆಯಲ್ಲಿ ಮುಂಬಯಿ ಪೊಲೀಸರು, ಶನಿವಾರ ತಿಹಾರ್ ಜೈಲಿಗೆ ಭೇಟಿ ನೀಡಿ, ಅಲ್ಲಿ ಸೆಂಟ್ರಲ್ ಜೈಲ್ ಸಂಖ್ಯೆ 8ರಲ್ಲಿ ಬಂಧಿತನಾಗಿರುವ ತಹ್ಸಿನ್ ಅಖ್ತರ್ ಎಂಬಾತನನ್ನು ವಿಚಾರಣೆ ಗೊಳಪಡಿಸಿದರು. ಭಾರತದಲ್ಲಿ ಇಂಡಿಯನ್ ಮುಜಾಹಿದ್ದೀನ್ ಗುಂಪುಗಳನ್ನು ನಿರ್ವಹಿಸುತ್ತಿದ್ದ ಆರೋಪದಡಿ 2014ರಲ್ಲಿ ಈತ ಬಂಧನಕ್ಕೊಳಗಾಗಿದ್ದ. ವೇಝ್ ಅರ್ಜಿ ವಜಾ: ಇದೇ ಪ್ರಕರಣದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದ ಮನ್ಸುಖ್ …
Read More »ಚಿತ್ರದುರ್ಗ: ‘ಶರಣ ಸೇನೆ’ ಉದ್ಘಾಟನೆ ಇಂದು
ಚಿತ್ರದುರ್ಗ: ‘ಶರಣ ಸೇನೆ ಹೆಸರಿನಲ್ಲಿ ಧರ್ಮಾತೀತ, ಜಾತ್ಯತೀತ ಹಾಗೂ ಪಕ್ಷಾತೀತ ಸಂಘಟನೆ ಸ್ಥಾಪಿಸಲಾಗಿದೆ’ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು. ‘ಮುರುಘಾ ಮಠದಲ್ಲಿ ಮಾರ್ಚ್ 14ರಂದು ಬೆಳಿಗ್ಗೆ 11ಕ್ಕೆ ಶರಣ ಸೇನೆ ಉದ್ಘಾಟನೆಯಾಗಲಿದೆ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ನೇತೃತ್ವ ವಹಿಸುವರು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇನೆಗೆ ಚಾಲನೆ ನೀಡುವರು. ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಟಿ.ರಘುಮೂರ್ತಿ ಸೇನೆಯ ಲೋಗೊ …
Read More »
Laxmi News 24×7