Breaking News

ಸರ್ಕಾರ ವಿದೇಶೀಯರ ಆಗಮನಕ್ಕೆ ಬ್ರೇಕ್ ಹಾಕಿದೆ. ಆದ್ದರಿಂದಲೇ ವರ್ಕಿಂಗ್​​ ವೀಸಾಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ.

ವಾಷಿಂಗ್ಟನ್: ತೀವ್ರ ಕೋವಿಡ್​​-19 ಸೋಂಕಿನಿಂದ ತತ್ತರಿಸಿರುವ ಅಮೆರಿಕದಲ್ಲಿ ಈಗ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಹೀಗಾಗಿ ಅಮೆರಿಕ ಸರ್ಕಾರ ವಿದೇಶೀಯರ ಆಗಮನಕ್ಕೆ ಬ್ರೇಕ್ ಹಾಕಿದೆ. ಆದ್ದರಿಂದಲೇ ವರ್ಕಿಂಗ್​​ ವೀಸಾಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ. ಈ ವರ್ಷದ ಕೊನೆವರೆಗೂ ವರ್ಕಿಂಗ್​​ ವೀಸಾಗಳ ಮೇಲೆ ನಿರ್ಬಂಧ ಹೇರಿದ್ದಾರೆ. ತಮ್ಮ ದೇಶಕ್ಕೆ ಬರದಂತೆ ವಿದೇಶೀಯರಿಗೆ ಎಚ್- 1ಬಿ ವೀಸಾ ಸೇರಿದಂತೆ ತಾತ್ಕಾಲಿಕ ಉದ್ಯೋಗ ವೀಸಾಗಳ ಮೇಲೆ ಈ ವರ್ಷಾಂತ್ಯದವರೆಗೂ ನಿರ್ಬಂಧ ಹೇರಿ …

Read More »

ಇಎಂಐ ಪಾವತಿಯಿಂದ ವಿನಾಯಿತಿ ಪಡೆದವರಿಗೆ ಸಾಲ ಸೌಲಭ್ಯ?

ಲಾಕ್​ಡೌನ್​ ಘೋಷಣೆ ಆದ ನಂತರ ಅನೇಕರು ಆರ್ಥಿಕ ಬಿಕ್ಕಟ್ಟು ಎದುರುಸಿದ್ದರು. ಈ ವೇಳೆ ಸಾಮಾನ್ಯರಿಗೆ ಸಹಕಾರಿಯಾಗಲಿ ಎನ್ನುವ ಕಾರಣಕ್ಕೆ ಆರ್​ಬಿಐ ಇಎಂಐ ಪಾವತಿ ಮಾಡುವುದರ ಮೇಲೆ ವಿನಾಯಿತಿ ನೀಡಿತ್ತು. ಶಾಂಕಿಂಗ್​ ವಿಚಾರ ಏನೆಂದರೆ, ಇಎಂಐ ಪಾವತಿ ಮಾಡದೆ ಇರುವವರಿಗೆ ಈಗ ಸಾಲ ಸೀಗೋದು ಕಷ್ಟವಾಗುತ್ತದೆ ಎನ್ನುವ ಮಾತು ಕೇಳಿ ಬಂದಿದೆ. ಅದು ಹೇಗೆ ಅಂತೀರಾ? ಇಲ್ಲಿದೆ ನೋಡಿ ಮಾಹಿತಿ. ಸಾಲ ನೀಡುವುದಕ್ಕೂ ಮೊದಲು ಬ್ಯಾಂಕ್​ನವರು ಸಿಬಿಲ್​ ಸ್ಕೋರ್​ ನೋಡುತ್ತಾರೆ. ಸರಿಯಾದ …

Read More »

ಕೊರೊನಾವನ್ನೇ ಅಸ್ತ್ರ ಮಾಡಿಕೊಂಡು ದುಡ್ಡು ಮಾಡ್ತಿದ್ದಾರೆ. ಅಧಿಕಾರಿಗಳು

ತುಮಕೂರು: ಕೊರೊನಾ ಅದೆಷ್ಟು ಜನರ ಉದ್ಯೋಗ ಕಿತ್ತುಕೊಂಡಿದೆ. ಆದರೆ ಕೆಲ ಅಧಿಕಾರಿಗಳು ಮಾತ್ರ ಕೊರೊನಾವನ್ನೇ ಅಸ್ತ್ರ ಮಾಡಿಕೊಂಡು ದುಡ್ಡು ಮಾಡ್ತಿದ್ದಾರೆ. ಲಾಕ್‍ಡೌನ್‍ನಿಂದಾಗಿ ಸ್ಯಾಲರಿ ಆಗಿಲ್ಲ ಅಂತ ಫಲಾನುಭವಿಗಳ ಬಳಿ ಅಧಿಕಾರಿಗಳು ವಸೂಲಿಗೆ ಇಳಿದಿದ್ದಾರೆ. ಹೌದು. ಕೊರಟಗೆರೆ ತಾಲೂಕಿನ ಶಿವಪುರದ ನಿವಾಸಿ ರಮೇಶ್, ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ. ಮಂಜೂರಾತಿಗೆ ಅರ್ಜಿ ಹಾಕಿದ್ದರು. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅರ್ಜಿ ಪುರಸ್ಕೃತಗೊಂಡಿತ್ತು. ಆದರೆ ದೇವರು ವರ ಕೊಟ್ಟರೂ ಪೂಜಾರಿ ಕೊಡಲ್ಲ ಅಂತಾರಲ್ಲ ಅದೇ …

Read More »

ನಂಜನಗೂಡು ಠಾಣೆ, ಡಿವೈಎಸ್‍ಪಿ ಕಚೇರಿ ಸೀಲ್‍ಡೌನ್!

ಮೈಸೂರು: ಕೊರೊನಾ ಮುಕ್ತ ಆಯ್ತು ಅಂತ ನಿಟ್ಟುಸಿರು ಬಿಡುವ ಸಮಯದಲ್ಲಿ ಮತ್ತೆ ಮೈಸೂರಿನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಸದ್ಯ ಡೆಡ್ಲಿ ವೈರಸ್ ಮೈಸೂರು ಪೊಲೀಸರ ಬೆನ್ನತ್ತಿದೆ. ಬೆಂಗಳೂರು ಪೊಲೀಸರಷ್ಟೇ ಅಲ್ಲ. ಮೈಸೂರು ಪೊಲೀಸರಿಗೂ ಕೊರೊನಾ ಸೋಂಕು ಬಂದಿದೆ. ಇಲ್ಲಿವರೆಗೂ ಮೈಸೂರು ಜಿಲ್ಲೆಯೊಂದರಲ್ಲೇ 23 ಮಂದಿ ಪೊಲೀಸರು ಸೋಂಕು ಬಾಧಿತರಾಗಿದ್ದಾರೆ. ಜ್ಯುಬಿಲಿಯಂಟ್ ಕೊರೊನಾ ಮುಕ್ತವಾದ ಬಳಿಕ ಇಡೀ ಮೈಸೂರು ನೆಮ್ಮದಿ ನಿಟ್ಟುಸಿರು ಬಿಟ್ಟಿತ್ತು. ಅಷ್ಟರಲ್ಲೆ ಕಿಲ್ಲರ್ ಕೊರೊನಾ ಪೊಲೀಸರ ಹೆಗಲೇರಿ ಕುಳಿತುಬಿಟ್ಟಿದೆ. ನಂಜನಗೂಡು …

Read More »

ಭಾರತೀಯ ವ್ಯವಹಾರಗಳ ಮೇಲೆ ಚೀನಾ ಹ್ಯಾಕರ್ಸ್ ಗುರಿ!,ಮುಂದಿನ ಹತ್ತು ದಿನಗಳು ಹುಷಾರ್!

ನವದೆಹಲಿ: ಲಡಾಕ್ ಗಡಿಯಲ್ಲಿನ ಉದ್ವಿಗ್ನತೆ ಕಡಿಮೆಯಾಗ್ತಿಲ್ಲ. ಮಾತುಕತೆ ನಡುವೆ ಯುದ್ಧ ಸಿದ್ದತೆಗಳು ನಡೆದಿದ್ದು ಗಾಲ್ವಾನ್ ಗಡಿಯಲ್ಲಿ ಕದನ ಕಾರ್ಮೋಡ ಕವಿದಿದೆ. ಡ್ರ್ಯಾಗನ್ ದೇಶ ದಾಳಿಯ ಆತಂಕ ನಡುವೆ ಈಗ ಭಾರತದಲ್ಲಿ ಚೀನಾ ಮತ್ತೊಂದು ಕೃತ್ಯ ಎಸೆಸಲು ಪ್ಲ್ಯಾನ್ ನಡೆಯುತ್ತಿದೆ ಎನ್ನಲಾಗುತ್ತಿದೆ. ಜೂನ್ 15ರಂದು ಗಾಲ್ವಾನ್ ಗಡಿ ಪ್ರದೇಶದಲ್ಲಿ ಚೀನಾ ಮತ್ತು ಭಾರತೀಯ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟ ಮೇಲೆ ಚೀನಾ ವಿರುದ್ಧ ಆಕ್ರೋಶ ಹೆಚ್ಚಾಗಿದೆ. ಎಲ್ಲೆಡೆ ಚೀನಾ ವಸ್ತುಗಳು ಮತ್ತು …

Read More »

ಕೆಎಸ್‌ಆರ್‌ಪಿ ಕಾನ್ಸ್‌ಸ್ಟೇಬಲ್ ಬಸ್ಸಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಇತ್ತೀಚೆಗೆ ಪೊಲೀಸರಿಗೆ ಕೊರೊನಾ ವಕ್ಕರಿಸುತ್ತಿದೆ. ಇದೀಗ ಕೊರೊನಾಗೆ ಹೆದರಿ ಪೊಲೀಸ್ ಕಾನ್ಸ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಕೆಎಸ್‌ಆರ್‌ಪಿ ಕಾನ್ಸ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷದ ಕೆಎಸ್‌ಆರ್‌ಪಿ ಹೆಡ್ ಕಾನ್ಸ್‌ಸ್ಟೇಬಲ್ ಎಂದು ತಿಳಿದುಬಂದಿದೆ. ಸೋಮವಾರ ಸಂಜೆಯಷ್ಟೇ ಕೊರೊನಾ ಪಾಸಿಟಿವ್ ಬಂದಿತ್ತು. ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬಸ್ಸಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಕೆಎಸ್‌ಆರ್‌ಪಿ ಕಾನ್ಸ್‌ಸ್ಟೇಬಲ್ ಬಸ್ಸಿನಲ್ಲಿಯೇ …

Read More »

ವಿದ್ಯಾರ್ಥಿಗಳು ಕಂಟೈನ್ಮೆಂಟ್ ಝೋನ್‍ಗೆ ಹೋಗಬಹುದು, ಪರೀಕ್ಷೆ ನಡೆಸಬೇಡಿ: ಎನ್‍ಎಸ್‍ಯುಐ ಆಗ್ರಹ

ನವದೆಹಲಿ: ಸಿಬಿಎಸ್‍ಇ ಮತ್ತು ಯುಜಿಸಿ ನಡೆಸುತ್ತಿರುವ ಎಲ್ಲ ಪರೀಕ್ಷೆಗಳನ್ನು ಮುಂದೂಡವಂತೆ ಆಗ್ರಹಿಸಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ ಪೋಖ್ರಿಯಾಲ್ ನಿವಾಸದೆದರು ಎನ್‍ಎಸ್‍ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎನ್‍ಎಸ್‍ಯುಐನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಗೇಶ ಕರಿಯಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಲಾಯಿತು. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಸಿಬಿಎಸ್‍ಇ ಬೋರ್ಡ್ 12ನೇ ತರಗತಿ ಪರೀಕ್ಷೆಗಳನ್ನು ನಡೆಸಲು ತಯಾರಿ ಮಾಡಿಕೊಳ್ಳುತ್ತಿದೆ ಜೊತೆಗೆ ಜೆಇಇ ಮುಖ್ಯ ಪರೀಕ್ಷೆ, …

Read More »

ಧಾರವಾಡದಲ್ಲಿ ದ್ವಿಶತಕ ಬಾರಿಸಿದ ಕೊರೊನಾ ಸಂಖ್ಯೆ…………..

ಧಾರವಾಡ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರಿಗೆ ಕೊರೊನಾ ಧೃಡಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 200ಕ್ಕೆ ತಲುಪಿದೆ. ನವಲಗುಂದ ತಾಲೂಕಿನ ಮೊರಬ ಗ್ರಾಮದ ಮೂವರಿಗೆ ಸೋಂಕು ತಗುಲಿದ್ದು, ಇದೇ ಗ್ರಾಮದಲ್ಲಿ ಈಗಾಗಲೇ 31 ಜನರಿಗೆ ಸೋಂಕು ತಗುಲಿದೆ. ಕಳೆದ ಜೂನ್ 14 ರಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾದ ದಿನವೇ ಮೃತಪಟ್ಟಿದ್ದ 65 ವರ್ಷದ ವೃದ್ಧ ರೋಗಿ ನಂ.7060 ಯಿಂದ ಇಂದು ಮೂವರಿಗೆ ಕೊರೊನಾ ಧೃಡಪಟ್ಟದೆ. ರೋಗಿ ನಂ.9158, 72 …

Read More »

ನಾನಿ ಸಿನಿಮಾಗೆ ರಶ್ಮಿಕಾ ಬದಲಿಗೆ ಸಾಯಿ ಪಲ್ಲವಿ ಆಯ್ಕೆ?

ಹೈದರಾಬಾದ್: ದಕ್ಷಿಣ ಭಾರತ ಖ್ಯಾತ ನಟಿ ಹಾಗೂ ಸೆನ್ಸೇಶನ್ ಕ್ವೀನ್ ಸಾಯಿ ಪಲ್ಲವಿ ತೆಲುಗು, ತಮಿಳು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದು, ಸಾಲು ಸಾಲು ಸಿನಿಮಾಗಳಿಗೆ ಸಹಿ ಹಾಕಿರುವ ನಟಿ ಇದೀಗ ತೆಲುಗಿನ ಚಿತ್ರವೊಂದರಲ್ಲಿ ನಟಿಸಲು ಸಹ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ನಾಗಚೈತನ್ಯ ಜೊತೆ ನಟಿಸಿರುವ ಲವ್ ಸ್ಟೋರಿ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದು, ಇದೇ ಗ್ಯಾಪ್‍ನಲ್ಲಿ ತೆಲುಗು ನಟ ನಾನಿ ಅಭಿನಯದ ಶ್ಯಾಮ್ ಸಿಂಗ ರಾಯ್ ಸಿನಿಮಾದಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ …

Read More »

ಡಿ.ಕೆ.ಶಿವಕುಮಾರ್ ಆದೇಶಕ್ಕೆ ಕನಕಪುರ ಕ್ಷೇತ್ರ ಸಂಪೂರ್ಣ ಸ್ತಬ್ಧ; ಜುಲೈ 1ರವರೆಗೆ ಲಾಕ್​ಡೌನ್ ಮುಂದುವರಿಕೆ

ರಾಮನಗರ (ಕನಕಪುರ): ಕನಕಪುರ ಕ್ಷೇತ್ರದಲ್ಲಿ ವೈದ್ಯ ದಂಪತಿಗಳಲ್ಲಿ ಕಾಣಿಸಿದ್ದ ಕೊರೋನಾ ಪಾಸಿಟಿವ್ ಕೇಸ್ ಪ್ರಕರಣ ಇಡೀ ಕನಕಪುರವನ್ನೇ ಬೆಚ್ಚಿಬೀಳಿಸಿತ್ತು. ಕಳೆದ ಒಂದು ವಾರದಲ್ಲಿ ಕ್ಷೇತ್ರದಲ್ಲಿ 36 ಪ್ರಕರಣಗಳು ಪತ್ತೆಯಾಗಿದ್ದು, ಇನ್ನು ಹತ್ತುಹಲವು ಕೇಸ್‌ಗಳ ವರದಿ ಬರಬೇಕಿದೆ. ಈ ಕಾರಣಕ್ಕಾಗಿ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್ ಮಾಸ್ಟರ್ ಪ್ಲ್ಯಾನ್ ಮಾಡಿ ಜುಲೈ 1ರವರೆಗೆ ಕನಕಪುರವನ್ನು ಲಾಕ್‌ಡೌನ್ ಮಾಡಲು ಸೂಚನೆ ನೀಡಿದ್ದಾರೆ. ಹೌದು, ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರವನ್ನು ಇಂದಿನಿಂದ ಮುಂದಿನ ಜುಲೈ 1 …

Read More »