Breaking News

: 14 ವರ್ಷದ ಬಾಲಕಿಯನ್ನು ತಂದೆಯೇ ಗರ್ಭಿಣಿ ಮಾಡಿರುವ ವಿಕೃತ ಘಟನೆ…….

ಕೊಪ್ಪಳ: 14 ವರ್ಷದ ಬಾಲಕಿಯನ್ನು ಆಕೆಯ ತಂದೆಯೇ ಗರ್ಭಿಣಿ ಮಾಡಿರುವ ವಿಕೃತ ಘಟನೆ ನಡೆದಿದ್ದು, ಅಪ್ಪಂದಿರ ದಿನವೇ ಇಂತಹದ್ದೊಂದು ನೀಚ ಕೃತ್ಯ ಬಯಲಿಗೆ ಬಂದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಕೊಪ್ಪಳದ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಖಾಸಗಿ ಆಸ್ಪತ್ರೆಯಲ್ಲಿ 14 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿ ಮಗುವಿಗೆ ಜನ್ಮ ನೀಡಲು ಅವಳ ತಂದೆಯೇ ಕಾರಣ ಎಂದು ತಿಳಿದು ಬಂದಿದೆ. ಕುಡಿದ ಆಮಲಿನಲ್ಲಿ …

Read More »

ಕೊರೊನಾ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇತ್ತ ಕೊರೊನಾ ವಾರಿಯರ್ಸ್ ಪೊಲೀಸರಿಗೂ ಸೋಂಕು ತಗುಲುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ. ಈ ಮೂಲಕ ಕೊರೊನಾ ವೈರಸ್‍ಗೆ ಇಲಾಖೆ ಮತ್ತಷ್ಟು ಸಿಬ್ಬಂದಿ ಒಳಗಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಏನು ಸೂಚನೆ?: 1. ಏನೇ ಸಮಸ್ಯೆ ಬಂದರೂ ಧೈರ್ಯವಾಗಿ ಎದುರಿಸಬೇಕು. ಗಾಬರಿಯಾಗಬೇಡಿ, …

Read More »

ಗಡಿಯಲ್ಲಿ ಪುಂಡಾಟಿಕೆ ಮಾಡುವ ಚೀನಾಕ್ಕೆ ಸೂಕ್ತ ಉತ್ತರ ನೀಡಲು ಭಾರತೀಯ ಸೇನಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ

ನವದೆಹಲಿ: ಗಡಿಯಲ್ಲಿ ಪುಂಡಾಟಿಕೆ ಮಾಡುವ ಚೀನಾಕ್ಕೆ ಸೂಕ್ತ ಉತ್ತರ ನೀಡಲು ಭಾರತೀಯ ಸೇನಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ಪೂರ್ವ ಲಡಾಕ್‍ನಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡೆಸಿದ ಮಹತ್ವದ ಸಭೆಯಲ್ಲಿ ಈ ಮಹತ್ವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚೀನಾ ಗಡಿಯಲ್ಲಿ ಹೆಚ್ಚುವರಿ ಸೇನೆ ನಿಯೋಜನೆ ಮಾಡಿಕೊಳ್ಳುತ್ತಿದ್ದು, ಮತ್ತೆ ಆಕ್ರಮಣ ಮಾಡುವ ಸಾಧ್ಯತೆಗಳಿದೆ. ಚೀನಾ ಗಡಿಯುದ್ಧಕ್ಕೂ …

Read More »

International Yoga Day: ಬಿಜೆಪಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ………

ಬೆಂಗಳೂರು(ಜೂ.21): ನಗರದ ಮಲ್ಲೇಶ್ವರಂನಲ್ಲಿರುವ ರಾಜ್ಯ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಾಡಲಾಯ್ತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಿಡಕ್ಕೆ ನೀರು ಹಾಕುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಯೋಗ ಭಾರತೀಯ ಸಂಸ್ಕೃತಿಯಲ್ಲಿ ಅಮೂಲ್ಯವಾದ ಪದ್ಧತಿ. ಜಗತ್ತಿಗೆ ಮಹತ್ತರ ಕೊಡುಗೆಯನ್ನು ದೇಶ ಕೊಟ್ಟಿದೆ. ವಿಜ್ಞಾನ, ತಂತ್ರಜ್ಞಾನ, ಗಣಿತದಿಂದ ಹಿಡಿದು ಹಲವು ವಲಯಗಳಲ್ಲಿ ಕೊಡುಗೆಯನ್ನು ಕೊಟ್ಟಿದೆ. …

Read More »

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಜತೆ ನಾನು ಯಾವುದೇ ಪೈಪೋಟಿ ನಡೆಸುವುದಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.21- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಜತೆ ನಾನು ಯಾವುದೇ ಪೈಪೋಟಿ ನಡೆಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷವೇ ಒಂದು ಶಕ್ತಿ. ನಾನು ಅಧ್ಯಕ್ಷ ಹುದ್ದೆಯಲ್ಲಿದ್ದರೆ ಸಿದ್ದರಾಮಯ್ಯನವರು ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿದ್ದಾರೆ. ಅವರ ಹಿರಿತನ ಹಾಗೂ ಅನುಭವವನ್ನು ನಾನು ಸಂಪೂರ್ಣವಾಗಿ ಗೌರವಿಸುತ್ತೇನೆ. ಅವರ ಜತೆ ನಾನು ಪೈಪೋಟಿಗಿಳಿಯುವುದಿಲ್ಲ ಎಂದು ಹೇಳಿದ್ದಾರೆ   ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ ಅವರ ಈ …

Read More »

ಯಡಿಯೂರಿನಲ್ಲಿ ಸಿಎಂ ಕುಟುಂಬದವರಿಂದ ವಿಶೇಷ ಪೂಜೆ …………

ಕುಣಿಗಲ್,ಜೂ.21-ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮನೆದೇವರಾದ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಜಾನೆಯಿಂದಲೇ ವಿಶೇಷ ಪೂಜೆಯಲ್ಲಿ ತೊಡಗಿದರು. ನಿನ್ನೆಯೇ ಯಡಿಯೂರಿಗೆ ಭೇಟಿ ನೀಡಿ ದೇವಸ್ಥಾನದಲ್ಲಿ ತಂಗಿದ್ದ ಕುಟುಂಬ ಸದಸ್ಯರು ಹಲವು ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದ ವೃಶ್ಚಿಕ ರಾಶಿಗೆ ಅಶುಭ ಫಲವೆಂದು ಶಾಂತಿಗಾಗಿ ಜೋತಿಷ್ಯರ ಸಲಹೆಯಂತೆ ಸಿಎಂ ಕಿರಿಯ ಪುತ್ರ ವಿಜಯೇಂದ್ರ ದಂಪತಿ ಹೋಮ ಹನವನದಂತಹ ವಿಶೇಷ ಪೂಜೆಗಳನ್ನು ನಡೆಸಿದರು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಂಗಳೂರಿನಲ್ಲೇ ಇದ್ದು, …

Read More »

ಗಡಿಯಲ್ಲಿ ಕದನ ಕಾರ್ಮೋಡ, ರಕ್ಷಣಾ ಸಚಿವರ ಮಹತ್ವದ ಮೀಟಿಂಗ್..!

ಗಡಿಯಲ್ಲಿ ಕದನ ಕಾರ್ಮೋಡ, ರಕ್ಷಣಾ ಸಚಿವರ ಮಹತ್ವದ ಮೀಟಿಂಗ್..! ನವದೆಹಲಿ,ಜೂ.21-ಪೂರ್ವ ಲಡಾಕ್‍ನಲ್ಲಿ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಯೋಧರ ಹಿಂಸಾತ್ಮಕ ಸಂಘರ್ಷದ ನಂತರ ಗಡಿಭಾಗದಲ್ಲಿ ಯುದ್ಧದ ಕಾರ್ಮೋಡಗಳು ದಟ್ಟವಾಗಿ ಕವಿದಿದ್ದು, ಉಭಯ ದೇಶಗಳ ಸೇನಾಪಡೆಗಳು ಭಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡಿವೆ. ಇದೇ ವೇಳೆ ಚೀನಾದಿಂದ ಎದುರಾಗಬಹುದಾದ ಯಾವುದೇ ದುಸ್ಸಾಹಸದ ಸನ್ನಿವೇಶ ಎದುರಿಸಲು ಭಾರತ ಸಂಪೂರ್ಣ ರೀತಿಯಲ್ಲಿ ಸಜ್ಜಾಗಿದೆ. ಈ ಮಧ್ಯೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯಲ್ಲಿಂದು ಉನ್ನತ ಮಟ್ಟದ ಸಭೆ ನಡೆಸಿ …

Read More »

ಅಮಾವಾಸ್ಯೆ ದಿನ ಭೀಕರ ಅಪಘಾತದಲ್ಲಿ ಮೂವರು ಸಾವು- ವ್ಹೀಲಿಂಗ್ ವೇಳೆ ಡಿಕ್ಕಿ ಶಂಕೆ….

ಬೆಂಗಳೂರು: ಅಮಾವಾಸ್ಯೆ ದಿನ ಭೀಕರ ಸಂಭವಿಸಿ ಮೂವರು ಯುವಕರು ಧಾರುಣ ಸಾವು ಕಂಡ ಘಟನೆ ಯಲಹಂಕದ ಜೆಕೆವಿಕೆ ಬಳಿ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನ ನಿವಾಸಿಗಳಾದ ಮಹಮ್ಮದ್ ಆದಿ ಆಯಾನ್ (16), ಮಾಜ್ ಅಹಮ್ಮದ್ ಖಾನ್(17) ಹಾಗೂ ಸಯ್ಯದ್ ರಿಯಾಜ್ (22) ಮೃತ ದುರ್ದೈವಿಗಳು. ವ್ಹೀಲಿಂಗ್ ಮಾಡುವ ವೇಳೆ ಬೈಕ್ ಮುಖಾ ಮುಖಿ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಯುವಕರು ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದರು. ಈ ವೇಳೆ ವೇಗವಾಗಿದ್ದ …

Read More »

ಕೊರೊನಾಕ್ಕಿಂತ ದೊಡ್ಡ ಗ್ರಹಣ ಹಿಡಿಯೋದಿಲ್ಲ: ಸಚಿವ ಬಿ.ಸಿ.ಪಾಟೀಲ್…………

ಹಾವೇರಿ: ಕೊರೊನಾಕ್ಕಿಂತ ದೊಡ್ಡ ಗ್ರಹಣ ಹಿಡಿಯೋದಿಲ್ಲ. ಗ್ರಹಣ ಎಂದು ಯಾರೂ ಉಸಿರಾಡೋದು ನಿಲ್ಲಿಸಿಲ್ಲ. ಗ್ರಹಣ ಎಂಬುದು ಪ್ರಕೃತಿಯಲ್ಲಿ ನಡೆಯೋ ಚಟುವಟಿಕೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ. ಜಿಲ್ಲೆಯ ಹಿರೇಕೆರೂರು ಪಟ್ಟಣದ ನಿವಾಸದಲ್ಲಿ ಮಾತನಾಡಿದ ಅವರು, ಗ್ರಹಣಕ್ಕೆ ಅಷ್ಟೊಂದು ಮಹತ್ವ ಕೊಟ್ಟು ಮೂಢನಂಬಿಕೆ ಬಿತ್ತೋದು ಸರಿಯಲ್ಲ. ಗ್ರಹಣ ಹಿಡಿದಿದೆ ಅಂತಾ ಎಲ್ಲರೂ ಒಂದು ಕ್ಷಣ ಉಸಿರು ನಿಲ್ಲಿಸಲಿ ನೋಡೋಣ. ಗ್ರಹಣಕ್ಕೆ ಅಷ್ಟು ಮಹತ್ವ ಕೊಡೋ ಅಗತ್ಯವಿಲ್ಲ. ನಮ್ಮ ಕೆಲಸವನ್ನ ನಾವು …

Read More »

ರಾಯಚೂರಿನಲ್ಲಿ ಸೂರ್ಯಗ್ರಹಣ ವೀಕ್ಷಣೆ: ಬಿಸ್ಕೆಟ್ ತಿಂದು ಮೌಢ್ಯಕ್ಕೆ ಬ್ರೇಕ್……..

ರಾಯಚೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಸಾರ್ವಜನಿಕರಿಗಾಗಿ ಚೂಡಾಮಣಿ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಭಾರತ ಜ್ಞಾನ ವಿಜ್ಞಾನ ಸಮಿತಿ, ಶಿಕ್ಷಣ ಕಿರಣ ಸಂಸ್ಥೆ, ಸೂರ್ಯ ಕಿರಣ ಸಂಸ್ಥೆಯಿಂದ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಜೊತೆಗೆ ಸೂರ್ಯಗ್ರಹಣ ವೇಳೆ ಮೂಢನಂಬಿಕೆ ಹಾಗೂ ಮೂಢ ಆಚರಣೆಗಳ ಬಗ್ಗೆ ಅರಿವು ಮೂಡಿಸಲು ಸಾರ್ವಜನಿಕರಿಗೆ ಬಿಸ್ಕೆಟ್ ನೀಡಲಾಗಿದೆ. ಗ್ರಹಣ ಕುರಿತ ವೈಜ್ಞಾನಿಕ ವಿಚಾರಗಳ ಮಾಹಿತಿ ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ನೀಡುವ ಮೂಲಕ ಸೂರ್ಯಗ್ರಹಣ …

Read More »