Breaking News

ಬಾಲಕಿಯ ಮನವಿಗೆ ತಕ್ಷಣವೇ ಸ್ಪಂದಿಸಿದ ಸಿಎಂ

ಬೆಳಗಾವಿ -: ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಬಾಲಕಿಯೊಬ್ಬಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಚೇರಿಗೆ ದೂರವಾಣಿ ಮೂಲಕ ಸಂಪರ್ಕಿಸಿ,  ನಮ್ಮ ತಾಯಿಗೆ ಮೂತ್ರಕೋಶದ (ಕಸಿ)ಮರುಜೋಡಣೆ  ಶಸ್ತ್ರಚಿಕಿತ್ಸೆಯಾಗಿದೆ. ಅವರು ನಿತ್ಯವೂ ಸೇವಿಸಬೇಕಾದ ಮಾತ್ರೆಗಳು ಮುಗಿದು ಹೋಗಿರುವುದರಿಂದ ದಯವಿಟ್ಟು  ಮಾತ್ರೆಗಳನ್ನು ಪೂರೈಸಿರಿ ಎಂದು ಮುಖ್ಯಮಂತ್ರಿ  ಸಹಾಯವಾಣಿಗೆ ಕರೆ ಮಾಡಿ ಕಣ್ಣೀರಿಟ್ಟಿದ್ದಾರೆ. ಶುಕ್ರವಾರ(ಏ.೧೦) ಸಂಜೆ 6 ಗಂಟೆ ಸುಮಾರಿಗೆ ಸಿಎಂ ಕಚೇರಿಯ ಹಿರಿಯ ಅಧಿಕಾರಿಗಳು, ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಫೋನ್ ಮಾಡಿ, ರಾಮದುರ್ಗ ತಾಲೂಕಿನ …

Read More »

ತಾನು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಾಗದ ಕಾರಣ ಬೇಸತ್ತ ರೈತ ಆತ್ಮಹತ್ಯೆ

ಬೆಂಗಳೂರು: ಕೊರೊನಾ ವೈರಸ್ ನಿಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್​ಡೌನ್​ನಿಂದಾಗಿ ತಾನು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಾಗದ ಕಾರಣ ಬೇಸತ್ತ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಗಂಗಾಧರ್ (60) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರೈತ. ತುಮಕೂರಿನ ಶಿರಾ ತಾಲ್ಲೂಕಿನ ದೇವರಹಳ್ಳಿಯಲ್ಲಿರುವ ತನ್ನ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತ ಬ್ಯಾಂಕ್​ ಮತ್ತು ಸ್ಥಳೀಯ ಸಾಲಗಾರರ ಬಳಿ ಸುಮಾರು 4.4 ಲಕ್ಷ ರೂ ಸಾಲ ಮಾಡಿದ್ದರು. ಬಿಸಿಲಿನ ಪರಿಣಾಮ …

Read More »

ಒಟ್ಟು 18 ಜಿಲ್ಲೆಗಳಲ್ಲಿ ಸೀಲ್‍ಡೌನ್ ಮಾಡಲು ಸಿದ್ಧತೆ ನಡೆಯುತ್ತಿದೆ..

ಬೆಂಗಳೂರು: ಒಂದು ಕಡೆ ಸೀಲ್‍ಡೌನ್ ಮಾದರಿ ನಿರ್ಬಂಧ ಹಾಕುತ್ತಿರುವ ಬೆಂಗಳೂರು ಪೊಲೀಸರು, ಅಡ್ಡಾದಿಡ್ಡಿ ಓಡಾಡುತ್ತಿರುವವರಿಗೆ ಮತ್ತಷ್ಟು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಬೆಂಗಳೂರು ರಸ್ತೆಗಳನ್ನು ಸೀಲ್ ಮಾಡುವುದರ ಜೊತೆಗೆ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಉದ್ದೇಶಿಸಿದ್ದಾರೆ. ಈಗಾಗಲೇ ನೀಡಿರುವ ತುರ್ತು ಕೋವಿಡ್-19 ಪಾಸ್‍ಗಳನ್ನು ಶನಿವಾರದಿಂದ ರದ್ದು ಮಾಡಲು ಬಯಸಿದ್ದಾರೆ. ಬೆಂಗ್ಳೂರು ಪೊಲೀಸರ ಪ್ಲಾನ್: ನಗರದಲ್ಲಿ 70,000 ತುರ್ತು ಕೋವಿಡ್-19 ಪಾಸ್, ಆನ್‍ಲೈನ್ 1.30 ಲಕ್ಷ ಪಾಸ್ ವಿತರಣೆ ಮಾಡಲಾಗಿದೆ. ಆದರೆ ದಿನಕ್ಕೆ …

Read More »

ಕೊರೊನಾ ಲಾಕ್‍ಡೌನ್ ಭೀತಿಯ ನಡುವೆಯೇ ಶಿವಮೊಗ್ಗದಲ್ಲಿ ಸಿನಿಮಾ ಜೋಡಿಯೊಂದು ಸಪ್ತಪದಿ

ಶಿವಮೊಗ್ಗ: ಕೊರೊನಾ ಲಾಕ್‍ಡೌನ್ ಭೀತಿಯ ನಡುವೆಯೇ ಶಿವಮೊಗ್ಗದಲ್ಲಿ ಸಿನಿಮಾ ಜೋಡಿಯೊಂದು ಸಪ್ತಪದಿ ತುಳಿದಿದೆ. ಚಲನಚಿತ್ರ ನಟ ನಟಿಯರಾಗಿರುವ ಅರ್ನವ್ ವಿನ್ಯಾಸ್ ಮತ್ತು ವಿಹಾನಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಮಲೆನಾಡಿನ ತವರೂರು ಎಂದೇ ಕರೆಸಿಕೊಳ್ಳುವ ಶಿವಮೊಗ್ಗದಲ್ಲಿ ಮದುವೆಯಾಗಿ ಸುದ್ದಿಯಾಗಿದ್ದಾರೆ. ಅಂದಹಾಗೆ ಅರ್ನವ್ ವಿನ್ಯಾಸ್ ಹೊಂಬಣ್ಣ ಎಂಬ ಚಿತ್ರದಲ್ಲಿ ಹೀರೋ ಪಾತ್ರದಲ್ಲಿ ಮಿಂಚಿದ್ದು, ಅದೇ ರೀತಿ ಹೀರೋಯಿನ್ ವಿಹಾನಾ ನೆನಪುಗಳು ಎಂಬ ಚಲನಚಿತ್ರದಲ್ಲಿ ನಟಿಸಿ, ಉತ್ತಮ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಮಂಡ್ಯ ಮೂಲದ ನಟ …

Read More »

ನಮ್ಮಲ್ಲಿ ಅಗತ್ಯಕ್ಕಿಂತಲೂ 2.28 ಕೋಟಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳಿವೆ

ನವದೆಹಲಿ: ನಮಗೆ 1 ಕೋಟಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳ ಅವಶ್ಯಕತೆಯಿದೆ. ಆದರೆ ನಮ್ಮಲ್ಲಿ ಈಗ 3.28 ಕೋಟಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳಿವೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ತಿಳಿಸಿದ್ದಾರೆ. ದೆಹಲಿಯಲ್ಲಿ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುರುವಾರ ನಾವು 16,002 ಕೊರೊನಾ ಪರೀಕ್ಷೆಗಳನ್ನು ನಡೆಸಿದ್ದೇವೆ. ಕೇವಲ ಶೇ.0.2 ಪ್ರಕರಣಗಳು ಮಾತ್ರ ಪಾಸಿಟಿವ್ ಬಂದಿವೆ. ಸಂಗ್ರಹಿಸಿದ ಮಾದರಿಗಳ ಆಧಾರದ ಮೇಲೆ ಹೇಳುವುದಾದರೆ ಸೋಂಕಿನ ಪ್ರಮಾಣ ಭಾರೀ ಪ್ರಮಾಣದಲ್ಲಿ …

Read More »

ಅತ್ಯಂತ ಕಷ್ಟದ ಸಮಯದಲ್ಲೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ಹಾಪ್‍ಕಾಮ್ಸಗಳು ರೈತರ ನೆರವಿಗೆ ಬರುತ್ತಿಲ್ಲ: ಸಿದಗೌಡ ಮೋದಗಿ

ಬೆಳಗಾವಿ: ಅತ್ಯಂತ ಕಷ್ಟದ ಸಮಯದಲ್ಲೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ಹಾಪ್‍ಕಾಮ್ಸಗಳು ರೈತರ ನೆರವಿಗೆ ಬರುತ್ತಿಲ್ಲ ಎಂದು ಭಾರತೀಯ ಕೃಷಿಕ ಸಮಾಜ (ಸಂ) ದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಕಳವಳ ವ್ಯಕ್ತ ಪಡಿಸಿದ್ದಾರೆ. ರೈತರ ತರಕಾರಿಗಳಿಗೆ ಎಪಿಎಂಸಿ ಮಾರುಕಟ್ಟೆಗಳಲ್ಲಿ ಸಿಗುತ್ತಿರುವ ಬೆಲೆಗೂ, ಚಿಲ್ಲರೆ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬೆಲೆಗಳಲ್ಲಿ ಹಿಂದೆಂದಿಗಿಂತಲೂ ಇಂದು ಅಜಗಜಾಂತರ ವ್ಯತ್ಯಾಸ ಇದೆ. ಎಪಿಎಂಸಿ ಸಗಟು ಮಾರಾಟದಲ್ಲಿ ಪ್ರತಿ ಕಿಲೋ ಟೊಮೆಟೋಗೆ 2 ರೂ. ಸಿಗುತ್ತಿದ್ದರೆ, ಚಿಲ್ಲರೆ …

Read More »

ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮದಿನ ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸಬೇಕಿದೆ:ಡಿ.ಕೆ.ಶಿವಕುಮಾರ್

ಬೆಂಗಳೂರು: ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜನಿಸಿ 129 ವರ್ಷವಾಗಿದೆ. ಜನ್ಮದಿನ ಆಚರಿಸಲು ಇಡೀ ದೇಶ ಬಹಳ ಉತ್ಸುಕವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ಅಂಬೇಡ್ಕರ್ ಅವರು ನಮಗೆ ನೀಡಿರುವ ಸಂವಿಧಾನದ ಪ್ರಸ್ತಾವನೆಯನ್ನು ನೀವುಗಳು ಇರುವ ಸ್ಥಳದಿಂದಲೇ ಅಂದು ಬೆಳಿಗ್ಗೆ 10 ಗಂಟೆಗೆ ಸಂವಿಧಾನ ಪಿಠೀಕೆ ಓದುವ ಮೂಲಕ ನಮ್ಮ ಐಕ್ಯತೆ, ಸಮಗ್ರತೆ, ಬ್ರಾತೃತ್ವವನ್ನು ಎತ್ತಿ ಹಿಡಿದು ಈ ದಿನವನ್ನು ವಿಶೇಷವಾಗಿ ಆಚರಿಸಬೇಕು ಎಂದು ರಾಜ್ಯ ಹಾಗೂ …

Read More »

ಮೂವರು ಸೋಂಕಿತರಿಗೆ   ಶೀತ, ಕೆಮ್ಮು ಜ್ವರದಂತಹ ಲಕ್ಷಣ ಇಲ್ಲದಿದ್ರು ಸಹ ವರದಿ ಪಾಸಿಟಿವ್:

ಬೆಳಗಾವಿ:  ಬೆಳಗಾವಿಯಲ್ಲಿ ನಿನ್ನೆ ಮೂವರಿಗೆ  ಕೊರೊನಾ ಸೋಂಕು ತಗಲಿರುವುದು ದೃಢವಾಗಿದ್ದು, ಆ ಮೂಲಕ ಸೋಂಕಿತರ  ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.  ನಿನ್ನೆ ಕಂಡು ಬಂದ ಮೂವರು ಸೋಂಕಿತರಿಗೆ   ಶೀತ, ಕೆಮ್ಮು ಜ್ವರದಂತಹ ಲಕ್ಷಣ ಇಲ್ಲದಿದ್ರು ಸಹ ವರದಿ ಪಾಸಿಟಿವ್ ಬಂದಿದ್ದು,  ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಗೆ ತಲೆ ಬಿಸಿಯಾಗಿದೆ. ಕೇಸ್ ನಂಬರ್ 128ಕ್ಕೆ ಮಾತ್ರ ಕೊರೊನಾ ಸೋಂಕಿನ ಲಕ್ಷಣ ಇತ್ತು. ಆದ್ರೆ ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ ಯಾವುದೇ ಸೋಂಕಿನ …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ತೆಗೆದುಕೊಳ್ಳಲು ಬೆಳಗಾವಿ ಜಿಲ್ಲೆಯ ರಾಜಕಾರಣಿಗಳಿಗೆ ಧಮ್ಮಯಿಲ್ಲ: ಬಿ.ಆರ್.ಸಂಗಪ್ಪಗೋಳ

ಚಿಕ್ಕೋಡಿ: ಬೆಳಗಾವಿ ಜಿಲ್ಲಾ ರಾಜಕಾರಣಿಗಳಿಗೆ ಸರ್ಕಾರ ಉರಳಿಸುವ ತಾಕತ್ತುಯಿದೆ. ಜಿಲ್ಲಾ ಉಸ್ತುವಾರಿ  ಸ್ಥಾನ ಪಡೆಯುವ ಧಮ್  ಬೆಳಗಾವಿ ನಾಲ್ವರು ಸಚಿವರಿಗೆ  ಇಲ್ಲವೆ ಎಂದು ಹಿರಿಯ ರಾಜಕಾರಣಿ ಮತ್ತು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ತಾಲೂಕಿನ ಮಜಲಟ್ಟಿ ಗ್ರಾಮದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ಉಸ್ತುವಾರಿ ತೆಗೆದುಕೊಳ್ಳಲು ಬೆಳಗಾವಿ ಜಿಲ್ಲೆಯ ರಾಜಕಾರಣಿಗಳಿಗೆ ಧಮ್ಮಯಿಲ್ಲ ಎಂದು ಜನರು ಮಾತನಾಡುತ್ತಿದ್ದಾರೆ. ಅದಕ್ಕಾಗಿ ಹೊರ …

Read More »

ಕೊರೋನಾ ಸಂಕಷ್ಟ:ಮುಂದುವರೆದ “ಹಸಿದವರತ್ತ ನಮ್ಮ ಚಿತ್ತ” ಅಭಿಯಾನ: ಅಶೋಕ ಚಂದರಗಿ

ಕೊರೋನಾ ಸಂಕಷ್ಟ:ಮುಂದುವರೆದ “ಹಸಿದವರತ್ತ ನಮ್ಮ ಚಿತ್ತ” ಅಭಿಯಾನ! ಎಚ್.ಐ.ವಿ.ಯುವತಿಯರ ” ಆಶ್ರಯ” ಕ್ಕೂ ಆಹಾರ ಧಾನ್ಯ ವಿತರಣೆ ಕೊರೋನಾ ಸಂಕಷ್ಟದ ಸಮಯದಲ್ಲಿ ದಾನಿಗಳ ಬೆಂಬಲದಿಂದ ಕಳೆದ ಮಾರ್ಚ 20 ರಿಂದ ಬೆಳಗಾವಿ ಮಹಾನಗರದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಆರಂಭಿಸಿರುವ ” ಹಸಿದವರತ್ತ ನಮ್ಮ ಚಿತ್ತ” ಅಭಿಯಾನವು ಮುಂದುವರೆದಿದ್ದು ಗುರುವಾರ ಎಪ್ರೀಲ್ 9 ರಂದು ಮಹಾಂತೇಶ ನಗರದಲ್ಲಿರುವ ಎಚ್.ಐ.ವಿ.ಪೀಡಿತ ಯುವತಿಯರ ” ಆಶ್ರಯ” ಕ್ಕೂ ಆಹಾರ ಧಾನ್ಯವನ್ನು …

Read More »