Breaking News

ಪ್ರಶಾಂತ್ ದತ್ತರಗಿ ಇವನು ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದ ವ್ಯಕ್ತಿ

  ಗೋಕಾಕ ಮನಸಾಕ್ಷಿ ಫೌಂಡೇಶನ್ ಸದಸ್ಯರಿಂದ ಕಾಣೆಯಾದ ವ್ಯಕ್ತಿ ಸಂರಕ್ಷಣೆ ಕಾಣೆಯಾದ ವ್ಯಕ್ತಿಯ ಹೆಸರು ಪ್ರಶಾಂತ್ ದತ್ತರಗಿ ಇವನು ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದ ವ್ಯಕ್ತಿ ಈತನು ಒಂದು ತಿಂಗಳಿನಿಂದ ಗೋಕಾಕದಲ್ಲಿ ಅಲೆದಾಡುತ್ತಾ ಅವರಿವರಲ್ಲಿ ಕೂಳಿಗಾಗಿ ಭಿಕ್ಷೆ ಬೇಡುತ್ತ ತಿನ್ನುತ್ತ ತಿರುಗಾಡುತ್ತಿದ್ದ ಇವನು ಮನೆಯಲ್ಲಿ ಯಾವುದೇ ಒಂದು ಕಾರಣಕ್ಕಾಗಿ ಮನೆಯಲ್ಲಿ ಜಗಳವಾಡಿ ಊರು ಬಿಟ್ಟು ಬಂದಿರುತ್ತಾನೆ ಇವನು ಗೋಕಾಕದಲ್ಲಿ ಅಲೆದಾಡುವುದನ್ನು ಕಂಡು ನಮ್ಮ ಮನಸಾಕ್ಷಿ ಫೌಂಡೇಶನ್ ಸದಸ್ಯರಾದ ಮಲ್ಲಿಕಾರ್ಜುನ್ ಕರ್ಜಗಿ …

Read More »

ಬಳ್ಳಾರಿ:ಒಂದೂವರೆ ಎಕ್ರೆಯಲ್ಲಿ ಬೆಳೆದ ಈರುಳ್ಳಿಯನ್ನೇ ರಾತ್ರೋರಾತ್ರಿ ಕಟಾವು

ಬಳ್ಳಾರಿ: ಲಾಕ್‍ಡೌನ್ ಆಗಿದ್ದನ್ನೇ ಬಂಡವಾಳ ಮಡಿಕೊಂಡು ಗಣಿನಾಡು ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಯರ್ರಂಗಳಿಯ ಹೊರವಲಯದ ಒಂದೂವರೆ ಎಕ್ರೆಯಲ್ಲಿ ಬೆಳೆದ ಈರುಳ್ಳಿಯನ್ನೇ ರಾತ್ರೋರಾತ್ರಿ ಕಟಾವು ಮಾಡಿಕೊಂಡು ಕದ್ದೊಯ್ದ ಘಟನೆಯೊಂದು ಬೆಳಕಿಗೆ ಬಂದಿದೆ. ಯರ್ರಂಗಳಿ ಗ್ರಾಮದ ರೈತ ಸುನೀಲ್ ಕುಮಾರ್ ಅವರಿಗೆ ಈ ಹೊಲ ಸೇರಿದ್ದು, ಶನಿವಾರ ಹೊಲಕ್ಕೆ ಹೋಗಿ ಈರುಳ್ಳಿ ಬೆಳೆಯನ್ನು ವೀಕ್ಷಣೆ ಮಾಡಿದ್ದರು. ಭಾನುವಾರ ರಾತ್ರಿಯೊಳಗೆ ಈ ಬೆಳೆಯನ್ನು ಯಾರೋ ದುಷ್ಕರ್ಮಿಗಳು ಬಂದು ಕಟಾವು ಮಾಡಿಕೊಂಡು ಹೋಗಿದ್ದಾರೆ. ಈ …

Read More »

ಹಿರೇಬಾಗೇವಾಡಿ ಈರುಳ್ಳಿ ವ್ಯಾಪಾರಿ ಬಳಿ ಈರುಳ್ಳಿ ಖರೀದಿಸಿದ ಗ್ರಾಹಕರಿಗೆ ಕೊರೊನಾ ಆತಂಕ”.

ಹಿರೇಬಾಗೇವಾಡಿ ಈರುಳ್ಳಿ ವ್ಯಾಪಾರಿ ಬಳಿ ಈರುಳ್ಳಿ ಖರೀದಿಸಿದ ಗ್ರಾಹಕರಿಗೆ ಕೊರೊನಾ ಆತಂಕ ಪಾರಿಶ್ವಾಡ, ಹಿರೇಬಾಗೇವಾಡಿ, ಬಡಾಲ್ ಅಂಕಲಗಿ ಸಂತೆ ಸೇರಿದಂತೆ ವಿವಿಧೆಡೆ ವ್ಯಾಪಾರದಲ್ಲಿ ಭಾಗಿ ಈರುಳ್ಳಿ ವ್ಯಾಪಾರಿದೆಹಲಿಯ ನಿಜಾಮುದ್ದೀನ್‍ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಬೆಳಗಾವಿ: ಈರುಳ್ಳಿ ವ್ಯಾಪಾರಿ ಸೇರಿದಂತೆ ಆತನ ಕುಟುಂಬದ ನಾಲ್ವರು ಸದಸ್ಯರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, ಆತನ ಬಳಿ ಈರುಳ್ಳಿ ಖರೀದಿಸಿದ ಗ್ರಾಹಕರಿಗೆ ಕೊರೊನಾ ಆತಂಕ ಇದೀಗ ಎದುರಾಗಿದೆ. ಬೆಳಗಾವಿಯ ಹಿರೇಬಾಗೇವಾಡಿ ಗ್ರಾಮ ಹಾಗೂ ಜಿಲ್ಲೆಯಾದ್ಯಂತ …

Read More »

ಮಗನನ್ನು ಕರೆತರಲು 1,400 ಕಿಮೀ ದೂರ ಒಬ್ಬರೇ ಸ್ಕೂಟಿಯಲ್ಲಿ ಹೋದ ತಾಯಿ

ಹೈದರಾಬಾದ್: ಲಾಕ್‍ಡೌನ್ ಮಧ್ಯೆ ಮನೆಗೆ ಬರಲಾಗದೇ ಪರದಾಡುತ್ತಿದ್ದ ಮಗನಿಗಾಗಿ ತೆಲಂಗಾಣದಲ್ಲಿ ತಾಯಿ ಒಬ್ಬರೇ ಸ್ಕೂಟಿಯಲ್ಲಿ ಬರೋಬ್ಬರಿ 1,400 ಕಿಮೀ ಪ್ರಯಾಣಿಸಿ ಆತನನ್ನು ಕರೆತಂದಿದ್ದಾರೆ. ಈ ಮೂಲಕ ತಾಯಿ ಮಕ್ಕಳಿಗಾಗಿ ಯಾವುದೇ ಸಂಕಷ್ಟವನ್ನು ಎದುರಿಸಲು ಅಂಜಲ್ಲ ಎನ್ನೋದಕ್ಕೆ ಉದಾಹರಣೆ ಆಗಿದ್ದಾರೆ. ತೆಲಂಗಾಣದ ನಿಜಾಮಾಬಾದ್‍ನಲ್ಲಿರುವ ಬೋಧಾನ್ ಶಾಲೆಯೊಂದರಲ್ಲಿ ಮುಖ್ಯೋಪಾಧ್ಯಾಯಿನಿ ಆಗಿ ಕಾರ್ಯನಿರ್ವಹಿಸುತ್ತಿರುವ ರಜಿಯಾ ಬೇಗಮ್ ಮಗನಿಗಾಗಿ ಸಾವಿರಾರು ಕಿ.ಮೀ ಪ್ರಯಾಣಿಸಿದ್ದಾರೆ. ಮಗ ಮೊಹ್ಮದ್ ನಿಜಾಮುದ್ದೀನ್(19) ಹೈದರಾಬಾದಿನ ನಾರಾಯಣ ವೈದ್ಯಕೀಯ ಅಕಾಡೆಮಿ ಅಲ್ಲಿ ವ್ಯಾಸಂಗ …

Read More »

ಬೆಂಗ್ಳೂರಿನ 2 ವಾರ್ಡ್‍ಗಳು ಸೀಲ್‍ಡೌನ್ – ಬಿಬಿಎಂಪಿಯಿಂದಲೇ ಆಹಾರ ವಿತರಣೆ

ಬೆಂಗಳೂರು: ಇಂದು ಮಧ್ಯರಾತ್ರಿಯಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸಂಪೂರ್ಣವಾಗಿ ಸೀಲ್ ಮಾಡಲಾಗುತ್ತದೆ ಎನ್ನುವ ಸುದ್ದಿಗಳ ಮಧ್ಯೆ ನಗರದ ಮಧ್ಯೆ ಬಾಪೂಜಿನಗರ ಮತ್ತು ಪಾದರಾಯನಪುರ ವಾರ್ಡ್ ಅನ್ನು ಸಂಪೂರ್ಣ ಸೀಲ್ ಮಾಡಲು ಬಿಬಿಎಂಪಿ ಮುಂದಾಗಿದೆ. ಈ ಸಂಬಂಧ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು, ಬಾಪೂಜಿ ನಗರ ವಾರ್ಡ್ 134 & ಪಾದರಾಯನಪುರ ವಾರ್ಡ್ 135ರಲ್ಲಿ ಕೋವಿಡ್ -19  ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಪರಿಸ್ಥಿತಿಯನ್ನು ನಿಯಂತ್ರಣ …

Read More »

ದೂರದಿಂದಲೇ ಒಂದಾದ ಪ್ರೇಮಿಗಳು – ಬೆಂಗ್ಳೂರಿನ ಗಿರಿನಗರ ಠಾಣೆಯಲ್ಲೊಂದು ಅಪರೂಪದ ದೃಶ್ಯ

ಬೆಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಇದರಿಂದ ಅನೇಕ ಮದುವೆ ಸಮಾರಂಭಗಳಿಗೆ ಬ್ರೇಕ್ ಬಿದ್ದಿದೆ. ಆದರೂ ಕೆಲವು ಜೋಡಿಗಳು ಲಾಕ್‍ಡೌನ್ ನಿಯಮವನ್ನು ಪಾಲಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೀಗ ಕೊರೊನಾ ಲಾಕ್‍ಡೌನ್ ನಡುವೆಯೇ ಪ್ರೇಮಿಗಳಿಬ್ಬರು ಮದುವೆಯಾಗಿದ್ದಾರೆ. ಮುರುಗನ್ ಮತ್ತು ಮೇಘಶ್ರೀ ಮದುವೆಯಾದ ಪ್ರೇಮಿಗಳು. ಇವರಿಬ್ಬರು ಅನೇಕ ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಮನೆಯಲ್ಲಿ ಇವರ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮರುಗನ್ ಮತ್ತು ಮೇಘಶ್ರೀ ಮನೆಯಿಂದ ಓಡಿ …

Read More »

ಕೊರೊನಾದಿಂದ ಕಂಗೆಟ್ಟಿರುವ ರೈತರಿಗೆ ಆಸರೆ- ವೈದ್ಯ, ಗುತ್ತಿಗೆದಾರನಿಂದ ನೂತನ ಪ್ರಯತ್

ಯಾದಗಿರಿ: ಕೊರೊನಾದಿಂದಾಗಿ ದೇಶವೇ ಲಾಕ್‍ಡೌನ್ ಆಗಿದ್ದು, ಬೆಳೆದ ಹಣ್ಣುಗಳನ್ನು ಕೊಳ್ಳುವವರೇ ಇಲ್ಲದಂತಾಗಿದೆ. ಅದೇ ರೀತಿ ಯಾದಗಿರಿ ಜಿಲ್ಲೆಯ ರೈತರಿಗೂ ಸಂಕಷ್ಟ ಎದುರಗಿದ್ದು,  ಜಿಲ್ಲೆಯ ಖಾಸಗಿ ವೈದ್ಯ ಮತ್ತು ಗುತ್ತಿಗೆದಾರ ಸ್ಪಂದಿಸುವ ಮೂಲಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ ಸಂಕಷ್ಟದಲ್ಲಿರುವ ಜಿಲ್ಲೆಯ ಹಣ್ಣು ಮತ್ತು ತರಕಾರಿ ಬೆಳೆದ ರೈತರಿಗೆ ನೆರವಾಗಲು ರಾಜ್ಯದಲ್ಲಿಯೇ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಲಾಕ್‍ಡೌನ್ ಗೆ ಸಿಲುಕಿ, ಸಾರಿಗೆ ಮತ್ತು ಸರಿಯಾದ ಮಾರುಕಟ್ಟೆ ಇಲ್ಲದೆ ಬೆಳೆದ …

Read More »

ಶಾಸಕರ ವೇತನ ಕಡಿತ ಮಾಡುವ ತೀರ್ಮಾನವನ್ನು ಸ್ವಾಗತಿಸುತ್ತೇನೆ : ಹೆಚ್.ಕೆ.ಕುಮಾರಸ್ವಾಮಿ

ಬೆಂಗಳೂರು, ಏ. 10- ಆರ್ಥಿಕ ಬಿಕ್ಕಟ್ಟು ಹಾಗೂ ಕೊವಿಡ್-19 ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಶಾಸಕರ ಶೇ. 30ರಷ್ಟು ವೇತನ ಹಾಗೂ ಭತ್ಯೆ ಕಡಿತ ಮಾಡುವ ತೀರ್ಮಾನವನ್ನು ಸ್ವಾಗತಿಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ತಿಳಿಸಿದರು. ನಮ್ಮ ಪಕ್ಷದ ಶಾಸಕರು, ಸಂಸದರು ಸರ್ಕಾರದ ತೀರ್ಮಾನಕ್ಕೆ ಬದ್ಧವಾಗಿದ್ದೇವೆ. ನಾವೇ ತೀರ್ಮಾನ ಮಾಡಿ ಸರ್ಕಾರಕ್ಕೆ ನೀಡಬೇಕೆಂದು ಇದ್ದೆವು. ಅಷ್ಟರಲ್ಲಿ ಸರ್ಕಾರ ಈ ನಿರ್ಧಾರವನ್ನು ಪ್ರಕಟಿಸಿದೆ ಎಂದು ಅವರು ಈ ಸಂಜೆಗೆ …

Read More »

ದೆಹಲಿಯಲ್ಲಿ ಕೊರೊನಾ ವಿರುದ್ಧ OPERATION SHIELD

ನವದೆಹಲಿ: ಕೊರೊನಾ ರುದ್ರ ಕುಣಿತಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಬೆದರಿ ಹೋಗಿದೆ. ನಿಜಾಮುದ್ದಿನ್ ಮರ್ಕಜ್ ಪ್ರಕರಣ ಬಳಿಕ ನೋಡ ನೋಡುತ್ತಿದ್ದಂತೆ ಅಂಕಿ ಆಕಾಶಕ್ಕೆ ಏರುತ್ತಿದೆ. ಈ ಮಿಂಚಿನ ಓಟಕ್ಕೊಂದು ಬ್ರೇಕ್ ಹಾಕಲು ಮುಂದಾಗಿರುವ ಕೇಜ್ರಿವಾಲ್ ಸರ್ಕಾರ ಆಪರೇಷನ್ ಶೀಲ್ಡ್ ಔಟ್ ಆರಂಭಿಸಿದ್ದು, ಆರು ಸೂತ್ರಗಳನ್ನು ಜಾರಿ ತರಲು ಮುಂದಾಗಿದೆ. ಅಲ್ಲೊಂದು, ಇಲ್ಲೊಂದು ಪ್ರಕರಣ ಎಂದುಕೊಂಡು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿಡಿತದಲ್ಲಿದ್ದ ಕೊರೊನಾ ಸೋಂಕು ನಿಜಾಮುದ್ದೀನ್ ಮರ್ಕಜ್ ಪ್ರಕರಣ ಬಳಿಕ ನೋಡ …

Read More »

ಕರ್ನಾಟಕ ನೆಲದಲ್ಲಿ ತಮಿಳುನಾಡು ಖಾಕಿ ಚೆಕ್‍ಪೋಸ್ಟ್ – ಬಸವರಾಜ್ ಬೊಮ್ಮಾಯಿ ಫುಲ್ ಗರಂ

ಬೆಂಗಳೂರು: ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಕೂಡ ಲಾಕ್‍ಡೌನ್ ಅನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎನ್ನುವ ಬಗ್ಗೆ ಸ್ವತಃ ಗೃಹಮಂತ್ರಿಗಳು ಹಾಗೂ ಬೆಂಗಳೂರು ಕಮಿಷನರ್ ಖುದ್ದು ಚೆಕ್ ಪೋಸ್ಟ್ ಹಾಗೂ ಬಾರ್ಡರ್‌ಗಳಿಗೆ ಭೇಟಿ ನೀಡಿ ರಿಯಾಲಿಟಿ ಚೆಕ್ ನಡೆಸಿದ್ದಾರೆ. ನಕಲಿ ಪಾಸ್‍ಗಳನ್ನು ಬಳಸಿ ಹಾಗೂ ಅನವಶ್ಯಕವಾಗಿ ಓಡಾಟ ಮಾಡುತ್ತಿದ್ದವರ ಪಾಸ್‍ಗಳನ್ನು ವಶಕ್ಕೆ ಪಡೆದು ವಾಹನಗಳನ್ನು ಸೀಜ್ ಮಾಡಿದ್ದಾರೆ. ದೇಶಾದ್ಯಂತ ಲಾಕ್‍ಡೌನ್ ಹೇರಿದರೂ ಮಹಾಮಾರಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ …

Read More »