Breaking News

ಕಾಂಗ್ರೆಸ್ ನಿಂದ ಮುಂದುವರಿದ ಬಹಿಷ್ಕಾರ: ಸಿಎಂ ಬಂದು ಕಾದರು ಸಭೆಗೆ ಬಾರದ ಸಿದ್ದರಾಮಯ್ಯ!

ಬೆಂಗಳೂರು: ವಿಧಾನಸೌಧದಲ್ಲಿ ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಹಾಜರಾಗದೆ ಬಹಿಷ್ಕರಿಸಿತು. ಸೋಮವಾರ ಬಜೆಟ್ ಮಂಡನೆ ವೇಳೆ ಸದನದಿಂದ ಸಭಾತ್ಯಾಗ ಮಾಡಿದ್ದ ಕಾಂಗ್ರೆಸ್ ಇಂದು ಕೂಡಾ ಬಿಎಸಿ ಸಭೆಗೂ ಹಾಜರಾಗದೆ ಅಸಮಾಧಾನ ತೋರಿತು. ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಹೀಗಾಗಿ ಇಂದು ಸಭೆ ಹಾಜರಾಗಬೇಕಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಗೈರಾದರು. …

Read More »

ಅನೈತಿಕ ಸರ್ಕಾರವಾಗಿದ್ದರೆ ಸದನದಲ್ಲಿ ಚರ್ಚಿಸಿ: ಕಾಂಗ್ರೆಸ್ ಗೆ ಜಗದೀಶ್ ಶೆಟ್ಟರ್ ಸವಾಲು

ಬೆಂಗಳೂರು: ಕಲಾಪ ಸಲಹಾ ಸಮಿತಿ ಸಭೆಯನ್ನು ಕಾಂಗ್ರೆಸ್ ಪಾರ್ಟಿ ಸಭೆಗೆ ಬಹಿಷ್ಕರಿಸಿದೆ. ಬಜೆಟ್ ಕಲಾಪವನ್ನೂ ಬಹಿಷ್ಕರಿಸಿತ್ತು. ಇಂತಹ ನಡವಳಿಕೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸರಿಯಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೈತಿಕ ಸರ್ಕಾರವಾಗಿದ್ದರೆ ನೀವು ಸದನದಲ್ಲಿ ಚರ್ಚಿಸಿ. ಬಹಿಷ್ಕರಸಿ ಏನು ಪ್ರಯೋಜನ? ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು. ನಾನು ಪ್ರತಿಪಕ್ಷ ನಾಯಕನಾಗಿದ್ದಾಗ ಸಭಾತ್ಯಾಗ ಎಂದು ಮಾಡಬಾರದುಅವರೇ ಹೇಳುತ್ತಿದ್ದರು. ಸದನದೊಳಗೆ ಏನೇ ಇದ್ದರೂ ಚರ್ಚೆ ಮಾಡಿ ಎನ್ನುತ್ತಿದ್ದರು. …

Read More »

ಬೆಳ್ಳಂಬೆಳಗ್ಗೆ ರಾಜ್ಯದ 11 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಎಸಿಬಿ ದಾಳಿ..!

ಬೆಂಗಳೂರು: ವಿವಿಧ ಇಲಾಖೆಯ 9 ಅಧಿಕಾರಿಗಳ ಮನೆ ಮತ್ತು ಕಚೇರಿ ಸೇರಿ 11 ಜಿಲ್ಲೆಯ 28 ಕಡೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಮಂಗಳವಾರ ಬೆಳಿಗ್ಗೆ ಏಕ ಕಾಲದಲ್ಲಿ ದಾಳಿ ನಡೆಸಿದೆ. ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಕೃಷ್ಣೇಗೌಡ ಅವರಿಗೆ ಸೇರಿದ ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿನ ಮನೆ, ಸಹೋದರನ ಮನೆ ಮೇಲೂ ದಾಳಿ ನಡೆಸಲಾಗಿದೆ. ಬೆಳಗಾವಿ ವೃತ್ತದ ಉಪ ಮುಖ್ಯ ಎಲೆಕ್ಟ್ರಿಕಲ್ ಎಂಜಿನಿಯರ್ ಹನುಮಂತ ಶಿವಪ್ಪ ಚಿಕ್ಕಣ್ಣನವರ ಅವರಿಗೆ ಸೇರಿದ …

Read More »

ಮಹಾನ್ ನಾಯಕನಿಂದ ಈ ಷಡ್ಯಂತ್ರ ನಡೆದಿದೆ: ರಮೇಶ್ ಜಾರಕಿಹೊಳಿ

ಬೆಂಗಳೂರು, ಮಾರ್ಚ್ 9: ಒಬ್ಬ ಮಹಾನ್ ನಾಯಕನಿಂದ ಈ ಷಡ್ಯಂತ್ರ ನಡೆದಿದೆ. ಅವರ ಬಗ್ಗೆ ಈಗ ಹೇಳಲು ಆಗುವುದಿಲ್ಲ. ಸಿಡಿ ಬಿಡುಗಡೆ ಬಗ್ಗೆ ಹೈಕಮಾಂಡ್ ಮೊದಲೇ ನನಗೆ ಮಾಹಿತಿ ನೀಡಿತ್ತು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಸಿಡಿ ಪ್ರಕರಣದಲ್ಲಿ ರಾಜೀನಾಮೆ ನೀಡಿದ ಬಳಿಕ ಮಂಗಳವಾರ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ರಮೇಶ್ ಜಾರಕಿಹೊಳಿ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ ಎಂದು ಭಾವುಕರಾದರು. ಈ ಸಿಡಿಯನ್ನು ನಾಲ್ಕು …

Read More »

ಸಿ.ಡಿ ಪ್ರಕರಣ ಎಲ್ಲ ಆಯಾಮಗಳಲ್ಲೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.: ಬಸವರಾಜ್ ಬೊಮ್ಮಾಯಿ

ಬೆಂಗಳೂರು,ಮಾ.9- ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿಬಂದಿರುವ ಸಿ.ಡಿ ಪ್ರಕರಣದ ಕುರಿತಾಗಿ  ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿ.ಡಿ ವಿವಾದ ಬೆಳಕಿಗೆ ಬಂದ ನಂತರ ಎಲ್ಲ ಆಯಾಮಗಳಲ್ಲೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವುದು ನಮ್ಮ ಉದ್ದೇಶ ಎಂದರು. ಇದರಲ್ಲಿ 2+3+4 ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ನನಗೆ ಯಾವ ಮಾಹಿತಿ ಇಲ್ಲ. ಜಾರಕಿಹೊಳಿ ಕುಟುಂಬದವರು ಅವರದೇ ಆದ …

Read More »

ಹೆಚ್‌ಡಿ ಕುಮಾರಸ್ವಾಮಿಗೆ ರಮೇಶ್ ಜಾರಕಿಹೊಳಿ ಧನ್ಯವಾದ ಹೇಳಿದ್ದೇಕೆ?

ಮೈಸೂರು: ಸಿಡಿ ಕೇಸ್ ಸಂಬಂಧ ಸ್ಪಷ್ಟನೆ ನೀಡಲು ಮಾರ್ಚ್ 09ರಂದು ತಮ್ಮ ಸದಾಶಿವನಗರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ ಅವರು ಹೆಚ್.ಡಿ ಕುಮಾರಸ್ವಾಮಿ ಮತ್ತು ಹೆಚ್.ಡಿ ರೇವಣ್ಣನವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಆದ್ರೆ ಈ ರೀತಿ ಹೆಚ್​ಡಿಕೆಗೆ ಧನ್ಯವಾದ ಯಾಕೆ ಹೇಳಿದರು? ಸಿಡಿ ನಕಲಿ‌ ಎಂದ ಮೇಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ಯಾಕೆ ಕೊಟ್ರಿ? ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ರಮೇಶ್ ಜಾರಕಿಹೊಳಿಗೆ ಪ್ರಶ್ನಿಸಿದ್ದಾರೆ. ಸಿಡಿ …

Read More »

ಯುವತಿಗೆ ₹ 5 ಕೋಟಿ, ವಿದೇಶದಲ್ಲಿ ಫ್ಲ್ಯಾಟ್ ಆಮಿಷ: ಗದ್ಗದಿತ ಜಾರಕಿಹೊಳಿ ಆರೋಪ

ಬೆಂಗಳೂರು: ಇದು ಶೇ. 100ರಷ್ಟು ನಕಲಿ ಸಿಡಿ. ನಾನು ಅಪರಾಧಿಯಲ್ಲ, ನಿರಪರಾಧಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿಯಲ್ಲಿ ಗದ್ಗದಿತರಾಗಿದ್ದಾರೆ. ರಮೇಶ್ ಜಾರಕಿಹೊಳಿಯವರು ಮಹಿಳೆಯನ್ನು ಕೆಲಸದ ಆಮಿಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಿ.ಡಿ ಜೊತೆ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಇತ್ತೀಚೆಗೆ ಕೇಸ್ ವಾಪಸ್ ಪಡೆದಿದ್ದರು. ಇದರ ಬೆನ್ನಲ್ಲೇ, ಸುದ್ದಿಗೋಷ್ಠಿ ನಡೆಸಿರುವ ರಮೇಶ್ ಜಾರಕಿಹೊಳಿ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. …

Read More »

‘ನಾನು ನಿರಪರಾಧಿ, ಅಪರಾಧಿಯಲ್ಲ’ ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಹೊರಬಂದ ದಿನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಬಳಿಕ ನಾಪತ್ತೆಯಾಗಿದ್ದ ರಮೇಶ್ ಜಾರಕಿಹೊಳಿ ಇಂದು ಬೆಂಗಳೂರಿನ ತಮ್ಮ ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಮೇಶ್ ಜಾರಕಿಹೊಳಿ ನಡೆಸುತ್ತಿರುವ ಮೊದಲ ಸುದ್ದಿಗೋಷ್ಠಿ ಇದಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ‘ನನ್ನ ಪರವಾಗಿ ನಿಂತ ಎಲ್ಲರಿಗೂ ಹೃದಯಪೂರ್ವಕ ವಂದನೆ. ನನಗೆ ಮಾನಸಿಕವಾಗಿ ಧೈರ್ಯ ತುಂಬಿದ ಸಿಎಂ ಬಿಎಸ್‌ ಯಡಿಯೂರಪ್ಪ, ಮಾಜಿ …

Read More »

32 ವರ್ಷ ಕಲ್ಲು ತಿಂದೇ ಬದುಕುತ್ತಿದ್ದಾನೀತ, ವರ್ಷಗಳ ಹೊಟ್ಟೆನೋವಿಗಿದು ಔಷಧವಾಯ್ತಂತೆ!

ಮುಂಬೈ: ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಎಂಬ ಗಾದೆಮಾತಿದೆ. ಚಿಕ್ಕಚಿಕ್ಕ ವಿಷಯಕ್ಕೂ ಕಿರಿಕ್‌ ಮಾಡುತ್ತಿದ್ದರೆ, ಪತ್ನಿ ಮಾಡಿದ ಎಲ್ಲದರಲ್ಲಿಯೂ ತಪ್ಪು ಹುಡುಕುತ್ತಿದ್ದರೆ ಅಂಥ ಗಂಡನಿಗೆ ಹೀಗೆ ಹೇಳುವುದುಂಟು. ಅಂದರೆ ಕಲ್ಲು ಇಲ್ಲಿ ನೆಗೆಟಿವ್‌ ಚಿಹ್ನೆ ತೋರಿಸುತ್ತದೆ. ಆದರೆ ಇಲ್ಲೊಬ್ಬ ಭೂಪ ನಿಜವಾಗಿಯೂ ಕಲ್ಲನ್ನು ತಿಂದೇ ಜೀವಿಸುತ್ತಿದ್ದಾನೆ. ಅದೂ ಒಂದೆರಡು ತಿಂಗಳೋ, ವರ್ಷವೋ ಅಲ್ಲ… ಬರೋಬ್ಬರಿ 32 ವರ್ಷ! ಆಹಾರದ ಬದಲಿಗೆ ಪ್ರತಿ ದಿನ 250 ಗ್ರಾಂ ಕಲ್ಲನ್ನು ಆಹಾರವಾಗಿ ತಿಂದು …

Read More »

ಅಂಬಾನಿ ಮನೆ ಬಳಿ ಸ್ಕಾರ್ಪಿಯೊ ಪತ್ತೆ ಪ್ರಕರಣ ಎನ್‌ಐಎಗೆ: ಏನೋ ಅಡಗಿದೆ ಎಂದ ಠಾಕ್ರೆ

ಮುಂಬೈ: ಉದ್ಯಮಿ ಮುಕೇಶ್‌ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಪೋಟಕಗಳನ್ನು ತುಂಬಿದ ವಾಹನವನ್ನು ಜಪ್ತಿ ಮಾಡಿರುವ ಪ್ರಕರಣದ ತನಿಖೆಯನ್ನು ಸೋಮವಾರ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕೈಗೆತ್ತಿಕೊಂಡಿದೆ. ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ ಎನ್‌ಐಎ ಈ ಪ್ರಕರಣ ವನ್ನು ಕೈಗೆತ್ತಿಕೊಳ್ಳುತ್ತಿರುವುದಾಗಿ ತನಿಖಾ ಸಂಸ್ಥೆಯ ವಕ್ತಾರರು ಸೋಮವಾರ ತಿಳಿಸಿದರು. ಈ ಬೆಳವಣಿಗೆಯು ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಸರ್ಕಾರದ ಹುಬ್ಬೇರುವಂತೆ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ‘ಈ ಪ್ರಕರಣದಲ್ಲಿ ಏನೋ …

Read More »