Breaking News

ದೇಶದಲ್ಲಿ ಅತ್ತಿ ಕಲುಷಿತ ಪ್ರದೇಶಗಳ ಪಟ್ಟಿಯಲ್ಲಿ ದೆಹಲಿಗೆ ಮೊದಲ ಸ್ಥಾನ

ನವದೆಹಲಿ : ಪ್ರಪಂಚದಾದ್ಯಂತ ದಿನೇದಿನೇ ಕಲುಷಿತ ಹಾಗೂ ಮಾಲಿನ್ಯಗೊಂಡ ಪರಿಸರ ಹೆಚ್ಚಾಗುತ್ತಿದ್ದು, ಭಾರತದಲ್ಲಿಯೂ ಹಲವಾರು ನಗರಗಳಲ್ಲಿ ಇದು ಕಂಡುಬಂದಿದೆ. ಅಂತಹ ನಗರಗಳ ಪಟ್ಟಿಗೆ ಸೇರುವ ಭಾರತದ ಮೂರು ನಗರಗಳೆಂದರೆ ದೆಹಲಿ, ಯುಪಿ ಹಾಗೂ ಒಡಿಶಾ. ದೇಶದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 112 ಪ್ರದೇಶಗಳನ್ನು ಅತ್ಯಂತ ಕಲುಷಿತ ಪ್ರದೇಶಗಳೆಂದು ಗುರುತಿಸಲಾಗಿದ್ದು, ಅದರಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಮೊದಲ ಸ್ಥಾನ ಪಡೆದಿದ್ದು , ಯುಪಿ , ಒಡಿಶಾ ನಂತರದ ಸ್ಥಾನದಲ್ಲಿವೆ. ಅಂತೆಯೇ, …

Read More »

ವಿದ್ಯಾರ್ಥಿನಿ ಸಾವು; ಗರಗಪಳ್ಳಿಯಲ್ಲಿ ಪ್ರತಿಭಟನೆ

ಚಿಂಚೋಳಿ: ಕಲಬುರಗಿ ನಗರದ ಚಂದ್ರಕಾಂತ ಪಾಟೀಲ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಲ್ಲಿಕಾ ಹಣಮಂತರಾಯ ಹುಲಿ (17) ವಸತಿ ನಿಲಯದ ಮೇಲಿಂದ ಬಿದ್ದು ಮೃತಪಟ್ಟ ಘಟನೆಯನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ ಗರಗಪಳ್ಳಿ ಗ್ರಾಮಸ್ಥರು ಚಿಂಚೋಳಿ-ತಾಂಡೂರ ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಕಳೆದ ಮಾರ್ಚ್‌ 4ರಂದು ವಿದ್ಯಾರ್ಥಿನಿ ವಸತಿ ನಿಲಯದ ಕಟ್ಟಡದ ಮೇಲಿಂದ ಬಿದ್ದಿದ್ದಳು. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಹೆದ್ರಾಬಾದ್‌ಗೆ …

Read More »

“ಲಂಚ ಕೇಳುವ ಅಧಿಕಾರಿಗಳಿಗೆ ಬಿದಿರು ಕೋಲಿನಿಂದ ತಲೆಮೇಲೆ ಬಾರಿಸಿ”

ಬೆಗುಸರಾಯ್, ಮಾ.7- ಲಂಚ ಕೇಳುವ ಅಧಿಕಾರಿಗಳಿಗೆ ಬಿದಿರು ಕೋಲಿನಿಂದ ಅವರ ತಲೆಗೆ ಬಾರಿಸಿ ನಿಮ್ಮ ಕೆಲಸ ಕಾರ್ಯ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಬೆಗುಸರಾಯ್ ಲೋಕಸಭಾ ಕ್ಷೇತ್ರದ ಜನರಿಗೆ ಕರೆ ನೀಡಿದ್ದಾರೆ. ಕೋದವಂಡಪುರ್‍ನಲ್ಲಿ ಆಯೋಜಿಸಲಾಗಿದ್ದ ಕೃಷಿ ಇಲಾಖೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿಯ ಫೈರ್ ಬ್ರಾಂಡ್ ಮಿನಿಸ್ಟರ್ ಎಂದೇ ಹೆಸರಾಗಿರುವ ಗಿರಿರಾಜ್ ಅವರು ನಿಮ್ಮ ಕೆಲಸ ಮಾಡಿಕೊಡಲು ಲಂಚ ಕೇಳುವ ಅಧಿಕಾರಿಗಳಿಗೆ ಯಾವುದೇ ಮುಲಾಜಿಲ್ಲದೆ ಬಿದಿರು …

Read More »

ಉಡುಪಿ ಪೇಜಾವರ ಮಠದಲ್ಲಿ ಬೆಂಕಿ ಅವಘಡ

ಉಡುಪಿ : ಉಡುಪಿಯ ಪೇಜಾವರ ಮಠದಲ್ಲಿ ಎಸಿಯ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಈ ಸಂದರ್ಭದಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ. ಈ ಅಗ್ನಿ ಅನಾಹುತ ವೇಳೆ ಪೇಜಾವರ ಶ್ರೀಗಳು ಮಠದಲ್ಲಿರಲಿಲ್ಲ . ಅಷ್ಟೇ ಅಲ್ಲದೆ, ಅವಘಡದಿಂದ ಮಠದ ಪೀಠೋಪಕರಣಗಳಿಗೆ ಹಾನಿಯಾಗಿಲ್ಲ ಎಂದೂ ತಿಳಿದುಬಂದಿದೆ . ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಉಡುಪಿ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More »

ದ್ವಾರಕೀಶ್ ಮನೆ 10 ಕೋಟಿಗೆ ಮಾರಾಟ: ಖರೀದಿಸಿದ ನಟ ಯಾರು ಗೊತ್ತಾ?

ಮತ್ತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನಟ, ನಿರ್ಮಾಪಕ ದ್ವಾರಕೀಶ್ ಬೆಂಗಳೂರಿನಲ್ಲಿನ ತಮ್ಮ ಮನೆಯನ್ನು ಮಾರಾಟ ಮಾಡಿದ್ದು, ನಟ, ನಿರ್ದೇಶಕ ರಿಷಭ್ ಶೆಟ್ಟಿ ಈ ಮನೆಯನ್ನು 10 ಕೋಟಿ ರೂ.ಗೆ ಖರೀದಿಸಿದ್ದಾರೆ. ಎಚ್ ಎಸ್ ಆರ್ ಲೇಔಟ್ ನ ತಮ್ಮ ಮನೆಯನ್ನು ದ್ವಾರಕೀಶ್ 10.5 ಕೋಟಿ ರೂ.ಗೆ ಮಾರಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ದ್ವಾರಕೀಶ್‌ ನಿರ್ಮಾಣದಲ್ಲಿ ಬಿಡುಗಡೆ ಆದ ಆಯುಷ್ಮಾನ್‌ಭವ ಚಿತ್ರ ದೊಡ್ಡ ಯಶಸ್ಸು ಕಾಣದ ಹಿನ್ನೆಲೆಯಲ್ಲಿ ದ್ವಾರಕೀಶ್‌ ಪುತ್ರ ಯೋಗಿ ಸಾಲದ …

Read More »

ಟೇಪ್ ನಲ್ಲಿರುವ ಮಹಿಳೆ ಆರ್ ಟಿ ನಗರದಲ್ಲಿರುವ ಮಹಿಳೆಯರ ವಸತಿ ಗೃಹದಲ್ಲಿದ್ದಳು: ಆದರೆ ಆಕೆ ಈಗ ಎಲ್ಲಿದ್ದಾಳೆ..?

ಬೆಂಗಳೂರು: ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ ಮಹಿಳೆ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸರು ಶೋಧ ನಡೆಸಿದ್ದಾರೆ. ಆದರೆ ಆ ಮಹಿಳೆಯ ಬಗ್ಗೆ ವಿವರಣೆ ಕೇಳಲು ಪೊಲೀಸರು ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ, ಆದರೆ ಅವರು ಯಾವುದೇ ಮಾಹಿತಿ ನೀಡಲಿಲ್ಲ. ಇದು ಯಾಕೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಇವರ ನಾಯಕನ ಜೊತೆಗಿನ ದೂರವಾಣಿ ಕರೆಗಳು, ಕಾಲ್ ರೆಕಾರ್ಡ್ ಮುಂತಾದವುಗಳ ಆಧಾರದ ಮೇಲೆ, ಸೆಕ್ಸ್ ಟೇಪ್ ನಲ್ಲಿರುವ ಮಹಿಳೆ …

Read More »

ಧ್ರುವ ಸರ್ಜಾ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ

ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದ್ಯ ಪೊಗರು ಸಿನಿಮಾದ ಸಕ್ಸಸ್ ನ ಸಂಭ್ರಮದಲ್ಲಿದ್ದಾರೆ. ಇತ್ತೀಚಿಗಷ್ಟೆ ಪೊಗರು ಸಿನಿಮಾ ರಿಲೀಸ್ ಆಗಿದ್ದು ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು ಮೂರ್ನಾಲ್ಕು ವರ್ಷಗಳಿಂದ ಪೊಗರು ಸಿನಿಮಾದಲ್ಲಿ ಬ್ಯುಸಿಯಾಗಿದ್ದ ಧ್ರುವ ಉದ್ದ ಕೂದಲು ಮತ್ತು ಗಡ್ಡ ಬಿಟ್ಟ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಚಿತ್ರೀಕರಣ ಮುಗಿಯುತ್ತಿದ್ದಂತೆ ಧ್ರುವ ಕೂದಲಿಗೆ ಕತ್ತರಿ ಹಾಕುವ ಮೂಲಕ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಧ್ರುವ …

Read More »

ಯುವರತ್ನ ಕ್ರೇಜ್: ‘ಇದು ಜಸ್ಟ್ ಬಿಗಿನಿಂಗ್, ಮುಂದೆ ನೀವೇ ನೋಡ್ತಿರಲ್ಲ’

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ಏಪ್ರಿಲ್ 1 ರಂದು ಬಿಡುಗಡೆಯಾಗುತ್ತಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ರಿಲೀಸ್ ಆಗುತ್ತಿದೆ. ಯುವರತ್ನನ ಎಂಟ್ರಿಗೆ ನಾಲ್ಕು ವಾರ ಮಾತ್ರ ಬಾಕಿಯಿದ್ದು, ಅಪ್ಪು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ಯುವರತ್ನ ಸದ್ಯದಲ್ಲೇ ಪ್ರಿ-ರಿಲೀಸ್ ಕಾರ್ಯಕ್ರಮ ಆಯೋಜನೆಯಾಗುತ್ತಿದೆ.   ರಿಲೀಸ್‌ಗೆ ಒಂದು ತಿಂಗಳ ಮುಂಚೆಯೇ ಅಭಿಮಾನಿಗಳು ಜಾತ್ರೆ …

Read More »

ಅಕ್ರಮ‌ ಚೀಟಿ ವ್ಯವಹಾರ ನಡೆಸಿ ಒಂದೂವರೆ ಕೋಟಿ ರೂ. ಗುಳುಂ ಮಾಡಿದ ಖತರ್ನಾಕ್ ದಂಪತಿ ಅರೆಸ್ಟ್

ನೆಲಮಂಗಲ(ಮಾ.07): ಬದುಕು ಕಟ್ಟಿಕೊಳ್ಳಲು ದೂರದೂರುಗಳಿಂದ ಬೆಂಗಳೂರಿಗೆ ಬಂದಿದ್ದವರು, ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿ ತಿಂಗಳಾದ್ರೆ ಮನೆ ಬಾಡಿಗೆ, ರೇಷನ್, ಮಕ್ಕಳ‌ ಸ್ಕೂಲ್​ ಫೀಸ್ ಎಲ್ಲಾ ಖರ್ಚು ಕಳೆದು ಉಳಿತಾಯಕ್ಕಾಗಿ ಚಾಚೂ ತಪ್ಪದೆ ಚೀಟಿ ಕಟ್ಟುತ್ತಿದ್ದರು. ಚೀಟಿ ಹಣ ಸಿಗುತ್ತೆ, ಇನ್ನೇನು ನಮ್ಮ ಬದುಕು ಹಸನಾಗುತ್ತೆ ಅಂತ ನಿಟ್ಟುಸಿರು ಬಿಡುವಷ್ಟರಲ್ಲಿ ಬದುಕು ಬೀದಿಗೆ ಬಂದು ನಿಂತಿದೆ. ಚೀಟಿಂಗ್ ದಂಪತಿ ಅರೆಸ್ಟ್: ದಿನಪೂರ್ತಿ ಗಾರ್ಮೆಂಟ್ಸ್‌ನಲ್ಲಿ‌ ಕೆಲಸ ಮಾಡುವ ಮಹಿಳೆಯರು ಸಂಜೆಯಾದ್ರೆ ಚೀಟಿ ವ್ಯವಹಾರ ಮಾಡುತ್ತಿದ್ದವರ …

Read More »

ಪಡೆದ ಸಾಲ ತೀರಿಸಲು ಆಗದ ಹಿನ್ನೆಲೆಯಲ್ಲಿ ಹೆತ್ತವರು ಹೆತ್ತ ಮಗುವನ್ನು ವೈದ್ಯ ದಂಪತಿಗೆ ಮಾರಾಟ

ಪಡೆದ ಸಾಲ ತೀರಿಸಲು ಆಗದ ಹಿನ್ನೆಲೆಯಲ್ಲಿ ಹೆತ್ತವರು ಹೆತ್ತ ಮಗುವನ್ನು ವೈದ್ಯ ದಂಪತಿಗೆ ಮಾರಾಟ ಮಾಡಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ರೂಪಾ ಮತ್ತು ಮೈನುದ್ದೀನ ದಂಪತಿ ತಮ್ಮ ಗಂಡು ಮಗುವನ್ನು ಸಾಲದ ಬದಲಾಗಿ ಭಾರತಿ ವಾಲ್ಮೀಕಿ ಅವರಿಗೆ ಮಾರಾಟ ಮಾಡಿದ್ದಾರೆ. ಆದರೆ ಇವರು ಉಡುಪಿ ಮೂಲದ ವೈದ್ಯ ದಂಪತಿಗೆ ಮಗು ಮಾರಾಟ ಮಾಡಿದ್ದು, ಈ ಘಟನೆಯ ಹಿಂದೆ ಮಗು ಮಾರಾಟ ಜಾಲದ ಕೈವಾಡ ಇರುವ ಶಂಕೆ ಇದೆ. ಭಾರತಿ …

Read More »