Breaking News

ಸಿಗ್ನಲ್ ಜಂಪ್ ಮಾಡಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬರು ಟ್ರಾಫಿಕ್ ಪೊಲೀಸ್ ಕೊರಳ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಗ್ನಲ್ ಜಂಪ್ ಮಾಡಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬರು ಟ್ರಾಫಿಕ್ ಪೊಲೀಸ್ ಕೊರಳ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಸಂಚಾರಿ ಎಸ್ ಎಸ್ ಐ ಬಸವಯ್ಯ ಎಂಬುವವರ ಮೇಲೆ ಉತ್ತರ ಪ್ರದೇಶ ಮೂಲದ ಮಹಿಳೆ ಹಲ್ಲೆ ನಡೆಸಿದ್ದು, ಮಹಿಳೆ ಅಪೂರ್ವಿ ವಿರುದ್ಧ ದೂರು ದಾಖಲಾಗಿದೆ. ಮೈಸೂರು ಬ್ಯಾಂಕ್ ಮಾರ್ಗವಾಗಿ ಆಗಮಿಸಿದ ಅಪೂರ್ವಿ, ಸಿಗ್ನಲ್ ಜಂಪ್ ಮಾಡಿ ಮುಂದೆ …

Read More »

ಪ್ರಸ್ತುತ ನಾವು ಧರ್ಮಸಂಕಟದಲ್ಲಿ ಇದ್ದೇವೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ದಿನೇ ದಿನೇ ಹೆಚ್ಚುತ್ತಲೇ ಇರುವ ತೈಲಗಳ ಬೆಲೆ ಕುರಿತು ದೇಶಾದ್ಯಂತ ಹಲವಾರು ಚರ್ಚೆಗಳು ಹಾಗೂ ವಿರೋಧಗಳು ವ್ಯಕ್ತವಾಗಿದ್ದು, ಇದೀಗ ಈ ಬಗ್ಗೆ ಮಾತನಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ಈ ವಿಷಯದಲ್ಲಿ ನಾವು ಧರ್ಮ ಸಂಕಟಕ್ಕೆ ಸಿಲುಕಿದ್ದೇವೆ’ ಎಂದು ಹೇಳಿದ್ದರು. ತೈಲ ಬೆಲೆ ಇಳಿಕೆ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮತ್ತೆ ಮಾತನಾಡಿರುವ ಸೀತಾರಾಮನ್ ಅವರು, ‘ಬೆಲೆ ಇಳಿಕೆ ವಿಚಾರದಲ್ಲಿ ಕೆಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಮುಕ್ತ ಚರ್ಚೆ …

Read More »

ಖ್ಯಾತ ನಟನ ಸೇರ್ಪಡೆಯಿಂದ ಹೈವೋಲ್ಟೇಜ್ ಬಂಗಾಳದಲ್ಲಿ ಬಿಜೆಪಿಗೆ ಹೆಚ್ಚಿದ ಬಲ

ಕೋಲ್ಕತ್ತಾ : ಇಂದು ಕೊಲ್ಕತ್ತಾದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಯಲ್ಲಿ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ( 70 ) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಬಿಜೆಪಿ ಹಿರಿಯ ನಾಯಕರ ಸಮ್ಮುಖದಲ್ಲಿ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷಕ್ಕೆ ಸೇರಿದ್ದು, ರಾಲಿಯಲ್ಲಿ ಬಿಜೆಪಿ ಪಕ್ಷದ ಧ್ವಜ ಹಾರಿಸುವ ಮೂಲಕ ತಮ್ಮ ಸೇರ್ಪಡೆಯನ್ನು ಸ್ಪಷ್ಟವಾಗಿ ಘೋಷಿಸುತ್ತಾರೆ. ಈ ಹಿಂದೆ ಸಿಪಿಎಂಗೆ ಆಪ್ತರಾಗಿದ್ದ ಮಿಥುನ್ , ಕೆಲಕಾಲ ಟಿಎಂಸಿ ಸಂಸದರಾಗಿ ಶಾರದಾ ಚಿಟ್‌ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ …

Read More »

ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆದ ಕಾರಣ ತಿಳಿದಿಲ್ಲ;: H.D.K.

ಕೋಲಾರ: ದಿನೇಶ್ ಕಲ್ಲಹಳ್ಳಿ ಯಾವ ಕಾರಣಕ್ಕಾಗಿ ದೂರು ಹಿಂಪಡೆದಿದ್ದಾರೆ ಎಂಬ ವಿಚಾರ ತಿಳಿದಿಲ್ಲ ಎಂದು ಕೋಲಾರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಬಗ್ಗೆ ಸರ್ಕಾರಕ್ಕೆ ಜವಾಬ್ದಾರಿ ಇದೆ. ಸರ್ಕಾರವೇ ಈ ಪ್ರಕರಣದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬಹುದು. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಸಹ್ಯಕರ ಘಟನೆಗಳು‌ ನಡೆಯುತ್ತಿವೆ. ಸರ್ಕಾರವು ಗೌರವ‌ ಉಳಿಸಿಕೊಳ್ಳುವ‌ ನಿಟ್ಟಿನಲ್ಲಿ ಜನತೆಗೆ ವಿಶ್ವಾಸ ಮೂಡಿಸುವ‌ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. …

Read More »

ಮನೆಯಲ್ಲಿ ಕೂರದೇ ರಮೇಶ ಜಾರಕಿಹೊಳಿ ಹೊರ ಬರಬೇಕು.: ಬಾಲಚಂದ್ರ ಜಾರಕಿಹೊಳಿ

ಮನೆಯಲ್ಲಿ ಕೂರದೇ ರಮೇಶ ಜಾರಕಿಹೊಳಿ ಹೊರ ಬರಬೇಕು. ಮಾಧ್ಯಮದವರ ಎದುರು ಬಂದು ಹೇಳಿಕೆ ನೀಡಬೇಕು ಎಂದು ವಿನಂತಿ ಮಾಡುತ್ತೇನೆ. ರಮೇಶ್ ಜಾರಕಿಹೊಳಿ ದೂರು ನೀಡದಿದ್ದರೆ ನಾವೇ ದೂರು ನೀಡುತ್ತೇವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ನಾಳೆಯಿಂದ ಇದು ಯಾವ ಟರ್ನ್ ಪಡೆಯುತ್ತದೆಯೋ ಗೊತ್ತಿಲ್ಲ. ಫೇಕ್ ವಿಡಿಯೋ ಇದೆ. ಲ್ಯಾಬ್ ಟೆಸ್ಟ್ ನಡೆದರೆ ಅದರ ಸತ್ಯಾಸತ್ಯತೆ ಹೊರ ಬರಲಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ತನಿಖೆಗೆ …

Read More »

ಅಶ್ಲೀಲ ಸಿಡಿ ಪ್ರಕರಣ: ಕೊಟ್ಟ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ!

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ಹೊಸ ತಿರುವು ಮೂಡಿದೆ. ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ, ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಪೊಲೀಸರಿಗೆ ನೀಡಿದ್ದ ದೂರನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ಹೌದು, ತಮ್ಮ ವಕೀಲರ ಸಲಹೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ದೂರು ಹಿಂಪಡೆಯುತ್ತಿರುವುದಾಗಿ ವಕೀಲ ಕುಮಾರ್ ಪಾಟೀಲ್ ಅವರಿಗೆ ಪತ್ರ ರವಾನಿಸಿದ್ದಾರೆ. ಕಬ್ಬನ್ ಪಾರ್ಕ್​ ಪೊಲೀಸ್​ ಠಾಣೆಗೆ ತೆರಳಿ ದಿನೇಶ್ ಪರ ವಕೀಲರು ದೂರು …

Read More »

ನಟೋರಿಯಸ್ ರೌಡಿ ಚಡ್ಡಿ ಕಿರಣ್‌ಗೆ ಪೊಲೀಸರ ಗುಂಡೇಟು..!

ಬೆಂಗಳೂರು, ಮಾ.7- ನಗರದಲ್ಲಿ ಮತ್ತೆ ಪೊಲೀಸರ ಪಿಸ್ತೂಲು ಸದ್ದು ಮಾಡಿದೆ. ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರಾಜಗೋಪಾಲ ನಗರದ ನಟೋರಿಯಸ್ ರೌಡಿ ಕಿರಣ್ ಅಲಿಯಾಸ್ ಚಡ್ಡಿ ಕಿರಣ್ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿಯುವಲ್ಲಿ ನಂದಿನಿ ಲೇಔಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ರೌಡಿ ಕಿರಣ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ನಂದಿನಿ ಲೇಔಟ್ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ …

Read More »

ರಾಸಲೀಲೆ ಪ್ರಕರಣ : ಸಂತ್ರಸ್ತ ಯುವತಿಗಾಗಿ ಪೊಲೀಸರ ಹುಡುಕಾಟ

ಬೆಂಗಳೂರು, ಮಾ.7- ರಾಸಲೀಲೆ ಸಿಡಿಗಳು ಬಹಿರಂಗಗೊಳ್ಳುತ್ತಿದ್ದಂತೆ ತಲೆಮರೆಸಿಕೊಂಡಿರುವ ಸಂತ್ರಸ್ತ ಯುವತಿಯ ಪತ್ತೆಗಾಗಿ ಕಬ್ಬನ್‍ಪಾರ್ಕ್ ಠಾಣೆ ಹಾಗೂ ಸಿಸಿಬಿ ಪೊಲೀಸರು ಜಂಟಿಯಾಗಿ ಶೋಧ ನಡೆಸುತ್ತಿದ್ದಾರೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಆಕೆ ಮತ್ತು ಕುಟುಂಬದ ಸದಸ್ಯರಿಗಾಗಿ ಬೆಂಗಳೂರು ನಗರ ಪೊಲೀಸರು ಹುಡುಕಾಡುತ್ತಿದ್ದಾರೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ಅವರು ಈ ಬಗ್ಗೆ ದೂರು ನೀಡಿದ ನಂತರದಿಂದಲೂ ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು ಸಂತ್ರಸ್ತ ಯುವತಿಯ ಪತ್ತೆಗಾಗಿ ವ್ಯಾಪಕ ಶೋಧ ನಡೆಸುತ್ತಿದ್ದಾರೆ.ಈಗಾಗಲೇ ಬೆಂಗಳೂರಿನ ಆರ್‍ಟಿ …

Read More »

ಸಿಡಿಗೆ 15 ಕೋಟಿ ಖರ್ಚು; ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕೊಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದ ಮಾನವ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ಕೇಸ್ ವಾಪಸ್ ಪಡೆಯಲು ಮುಂದಾದ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ಮಾಧ್ಯಮದವರಿಗೆ ಒಂದು ವಿನಂತಿ ಮಾಡಿಕೊಳ್ಳುತ್ತೇನೆ ಸಿಡಿಯಲ್ಲಿರುವ ಮಹಿಳೆ ಸಂತ್ರಸ್ತ ಮಹಿಳೆ ಎಂದು ದಯವಿಟ್ಟು ಹೇಳಬೇಡಿ. ಯಾಕೆಂದರೆ ಇದರಲ್ಲಿ …

Read More »

ದಿನೇಶ್ ಕಲ್ಲಹಳ್ಳಿ ದೂರು ವಾಪಸ್: ತುರ್ತು ಸುದ್ದಿಗೋಷ್ಠಿ ಕರೆದ ಬಾಲಚಂದ್ರ ಜಾರಕಿಹೊಳಿ !!

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ದೂರು ವಾಪಸ್ ಪಡೆದುಕೊಳ್ಳಲು ಮುಂದಾಗಿದ್ದು, ಈ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ಆಹ್ವಾನಿಸಿದ್ದಾರೆ.   ಸಂಜೆ 5 ಗಂಟೆಗೆ ಕುಮಾರ ಕೃಪಾ ಹೋಟೆಲ್ ನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.

Read More »