Breaking News

ದಾಖಲೆ ತಿದ್ದುಪಡಿ ಮಾಡಿ ರೈತರಿಗೆ ಹಸ್ತಾಂತರಿಸಿದ ನೀರಾವರಿ ನಿಗಮ: ರೈತರ ಹೋರಾಟಕ್ಕೆ ಮಣಿದ ಅಧಿಕಾರಿಗಳು

ಬೆಳಗಾವಿ: ಇಲ್ಲಿನ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಎದುರು ನಾಲ್ಕು ದಿನಗಳಿಂದ ನಡೆಸುತ್ತಿದ್ದ ಹುಕ್ಕೇರಿ ತಾಲೂಕಿನ ಮಾಸ್ತಿಹೊಳಿ ಗ್ರಾಮದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಶುಕ್ರವಾರ ನೀರಾವರಿ ಇಲಾಖೆಯ ಅಧಿಕಾರಿಗಳು ಭರವಸೆ ನೀಡುವುದರೊಂದಿಗೆ ಅಂತ್ಯಕಂಡಿದೆ. ಹಿಡಕಲ್ ಜಲಾಶಯ ಯೋಜನೆಯಿಂದ ಭೂಮಿ ಕಳೆದುಕೊಂಡ 24 ಗ್ರಾಮಗಳ ಸಂತ್ರಸ್ತ ರೈತರು ನ್ಯಾಯಯುತ ಪರಿಹಾರ ಹಾಗೂ ದಾಖಲೆಗಳಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಜಾನುವಾರುಗಳೊಂದಿಗೆ   ಕರ್ನಾಟಕ ನೀರಾವರಿ ನಿಗಮದ …

Read More »

ಬಿ.ವಿ.ವಿ.ಸಂಘದಲ್ಲಿ ಬಿವಿವಿಎಸ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ಮಹಾವಿದ್ಯಾಲಯಕ್ಕೆ ವಿಶ್ವವಿದ್ಯಾಲಯದ ಪರಿಶೀಲನಾ ಸಮಿತಿ ಭೇಟಿ

ಬಾಗಲಕೋಟೆ: ನೂತನವಾಗಿ ಆರಂಭಗೊAಡಿರುವ ಬಿವಿವಿ ಸಂಘದ ಸಂಗೀತ ಮತ್ತು ಪ್ರದರ್ಶಕ ಕಲೆಗಳ ಮಹಾವಿದ್ಯಾಲಯಕ್ಕೆ ವಿವಿಧ ಕೋರ್ಸುಗಳಿಗೆ ಅನುಮೋದನೆ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಪರಿಶೀಲನಾ ಸಮಿತಿಯು ಮಹಾವಿದ್ಯಾಲಯಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪರಿಶೀಲನಾ ಸಮಿತಿಯ ಸದಸ್ಯರು ಪಂ. ಪುಟ್ಟರಾಜ ಗವಾಯಿ ಹಾಗೂ ಹಾನಗಲ್ ಕುಮಾರೇಶ್ವರ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಬಳಿಕ ಮಹಾವಿದ್ಯಾಲಯದ ಮೂಲಸೌಕರ್ಯ, ಗಾಯನ, …

Read More »

ಆಷಾಢ ಮಾಸದ ಮೊದಲ ಶುಕ್ರವಾರ – ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ, ನಾಗಲಕ್ಷ್ಮೀಯಾದ ತಾಯಿ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ  ಸಂಭ್ರಮ ಆವರಿಸಿದೆ. ಇಡೀ ಬೆಟ್ಟವನ್ನು ವಿಶೇಷ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ಚಾಮುಂಡಿ ತಾಯಿಗೆ  ವಿಶೇಷ ಪೂಜೆ ನಡೆಯುತ್ತಿದೆ. ತಾಯಿ ಚಾಮುಂಡಿ ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಉತ್ಸವ ಮೂರ್ತಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ದೇವಿಯ ದರ್ಶನಕ್ಕೆ ಬೆಳಗಿನ ಜಾವದಿಂದಲೇ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ.  ಈ ಬಾರಿ 2 ಸಾವಿರ ರೂ. ಮೌಲ್ಯದ ಟಿಕೆಟ್ ಪಡೆದವರಿಗೆ ನೇರ …

Read More »

ರಾಜ್ಯದಲ್ಲಿ ಮಳೆ ಕೊರತೆ – ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ ನೀರು, ವಿದ್ಯುತ್ ಮಿತ ಬಳಕೆಗೆ ಸಿಎಸ್‌ ಆದೇಶ

ಬೆಂಗಳೂರು: ನಿರಂತರ ಮಳೆ ಕೊರತೆ ಹಿನ್ನೆಲೆ ರಾಜ್ಯದಲ್ಲಿರುವ ಎಲ್ಲಾ ಸಚಿವಾಲಯದ ಕಚೇರಿಗಳಲ್ಲಿ ನೀರು ಹಾಗೂ ವಿದ್ಯುತ್‌  ಅನ್ನು ಮಿತವಾಗಿ ಬಳಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ಪ್ರಸ್ತುತ ಸಂಭವಿಸುತ್ತಿರುವ ಎಲ್‌ನೊ ಹವಾಮಾನ ವೈಪರೀತ್ಯದ ಪರಿಣಾಮದಿಂದ ವಿಶ್ವದಾದ್ಯಂತ ಸಾಮಾನ್ಯ ಹವಾಮಾನ ಮಾದರಿಗಳನ್ನ ವ್ಯತ್ಯಯಗೊಳಿಸುತ್ತಿದ್ದು, ದೇಶದಲ್ಲಿ ಅತಿವೃಷ್ಟಿ, ಪ್ರವಾಹ ಮತ್ತು …

Read More »

ಜು.17 ರಂದು ಪ್ರಧಾನಿ ಮೋದಿಯಿಂದ ಕರ್ನಾಟಕದ 4 ‘ಅಮೃತ ಭಾರತ್ʼ ನಿಲ್ದಾಣಗಳ ಉದ್ಘಾಟನೆ

ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯು ನಿಲ್ದಾಣಗಳು, ರೈಲುಗಳು, ಹಳಿಗಳು ಹಾಗೂ ಸಿಗ್ನಲಿಂಗ್ ವ್ಯವಸ್ಥೆಗಳನ್ನು ಜಾಗತಿಕ ಮಾನದಂಡಗಳಿಗೆ ತಕ್ಕಂತೆ ಆಧುನೀಕರಿಸುವ ದಿಸೆಯಲ್ಲಿ ಮಹತ್ವದ ಪರಿವರ್ತನೆಯಲ್ಲಿ ಸಾಗುತ್ತಿದೆ. ಇದರ ಮೂಲಕ ಪ್ರಯಾಣಿಕರ ಅನುಭವ ಮತ್ತು ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸುವತ್ತ ಗಮನ ಹರಿಸಲಾಗುತ್ತಿದೆ. ಇದರ ಭಾಗವಾಗಿ ಕರ್ನಾಟಕದ 4 ʻಅಮೃತ ಭಾರತ್‌ʼ ನಿಲ್ದಾಣಗಳನ್ನು ಪ್ರಧಾನಿ ಮೋದಿ ಉದ್ಘಾಟಿಸುತ್ತಿದ್ದಾರೆ. ‘ಅಮೃತ ಭಾರತ್ ನಿಲ್ದಾಣ ಯೋಜನೆ’ (ABSS)ಯಡಿ, ಪ್ರಧಾನಿ ನರೇಂದ್ರ ಮೋದಿ ಅವರು, ಶುಕ್ರವಾರ (ಜು.17) ದೇಶಾದ್ಯಂತ ನವೀಕರಿಸಲಾದ …

Read More »

120 ಸ್ಥಾನ ಪಡೆಯೋ ಕಾಲವೂ ಬರುತ್ತೆ, ಅಲ್ಲಿವರೆಗೂ ‌ನಾನೇನು ಸಾಯಲ್ಲ: ಹೆಚ್‌ಡಿಕೆ ತಿರುಗೇಟು

ಬೆಂಗಳೂರು: ಜೆಡಿಎಸ್‌ 120 ಸ್ಥಾನ ಪಡೆಯುವ ಕಾಲವೂ ಬರುತ್ತದೆ ಅಂತ ಕೇಂದ್ರ ಸಚಿವ ಕುಮಾರಸ್ವಾಮಿ  ಅವರು, ಮಾಜಿ ಸಚಿವ ಚೆಲುವರಾಯಸ್ವಾಮಿ ಅವರಿಗೆ ತಿರುಗೇಟು ಕೊಟ್ಟರು. ಕುಮಾರಸ್ವಾಮಿ 120 ಸ್ಥಾನ ಗೆದ್ದು ತೋರಿಸಲಿ ಎಂಬ ಚೆಲುವರಾಯಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 20 ವರ್ಷಗಳಿಂದ ಟೀಕೆ ‌ಮಾಡ್ತಾನೇ ಇದ್ದಾರೆ. ನನ್ಮ ವಿರುದ್ಧ ವಿಷ ಕಾರುತ್ತಾರೆ. ನೋಡೋಣ 120 ಸೀಟು ಗೆದ್ದು ತೋರಿಸೋ ದಿನ ಬರುತ್ತದೆ. ಅಲ್ಲಿವರೆಗೂ ‌ನಾನೇನು ಸಾಯಲ್ಲ ಎಂದರು. …

Read More »

ಕುಮಾರಸ್ವಾಮಿ ಆಪರೇಷನ್ ಕಮಲದಿಂದ ಆದ ಸಿಎಂ, ಮೈತ್ರಿಯಿಂದ ಹೊರಗೆ ಬಂದು ತೊಡೆ ತಟ್ಟಲಿ: ಚಲುವರಾಯಸ್ವಾಮಿ ಸವಾಲ್‌

ಬೆಂಗಳೂರು: 28-30 ಶಾಸಕರನ್ನು ಗೆಲ್ಲಿಸಿಕೊಂಡು ಆಕಸ್ಮಿಕವಾಗಿ ಸಿಎಂ ಆದ ಇತಿಹಾಸ ಹೊಂದಿರುವ ಹೆಚ್.ಡಿ ಕುಮಾರಸ್ವಾಮಿ  ಅವರು, 136 ಸ್ಥಾನಗಳ ಸ್ಪಷ್ಟ ಬಹುಮತದೊಂದಿಗೆ 7 ಕೋಟಿ ಜನರ ಪ್ರತಿನಿಧಿಯಾಗಿ ಅಧಿಕಾರಕ್ಕೆ ಬಂದಿರುವ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಒಪ್ಪುವುದಿಲ್ಲ ಎನ್ನುತ್ತಿರುವುದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಹಾಗೂ ನಮ್ಮ ಸಂವಿಧಾನಕ್ಕೆ ಮಾಡುತ್ತಿರುವ ದ್ರೋಹವಾಗಿದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ  ಕಿಡಿಕಾರಿದ್ದಾರೆ. ‘ಮಿಸ್ಟರ್ ಕುಮಾರಸ್ವಾಮಿ’ ಅಂತ ಕರೆಯೋಕೆ ನಮಗೂ ಬರುತ್ತದೆ. ಇನ್ನು ಮುಂದೆಯಾದರೂ ಅವರು ನಾಲಿಗೆ …

Read More »

ಮೈಸೂರು ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ, ಈಗಾಗಲೇ 182 ಕೋಣಗಳು ರಿಜಿಸ್ಟರ್ ಆಗಿದೆ: ಅಶೋಕ್ ರೈ

ಬೆಂಗಳೂರು: ಮೈಸೂರಿನ ದಸರಾದಲ್ಲಿ  ಕಂಬಳ  ನಡೆದೇ ನಡೆಯುತ್ತೆ. ಮೈಸೂರಿಗೆ ಈಗಾಗಲೇ 182 ಕೋಣಗಳು ರಿಜಿಸ್ಟರ್ ಆಗಿದೆ ಎಂದು ಶಾಸಕ ಅಶೋಕ್ ರೈ  ಹೇಳಿದ್ದಾರೆ. ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನಿಂದ ಕೋಣಗಳನ್ನ ಓಡಿಸುವವರು ಯಾರಿದ್ದರೋ ಅವರನ್ನ ಸಮಿತಿಗೆ ಸೇರಿಸಲಾಗಿದೆ. ಅವರ ಅಭಿಪ್ರಾಯ ಪಡೆದು ದಸರಾದಲ್ಲಿ ಭಾಗಿಯಾಗುವ ಬಗ್ಗೆ ಒಪ್ಪಿಗೆ ಸೂಚಿಸಿದ್ದೇವೆ. ಬೆಂಗಳೂರಿನಲ್ಲೂ ಕಂಬಳಕ್ಕೆ ವಿರೋಧ ಇತ್ತು. ಆಮೇಲೆ ಕಂಟ್ರೋಲ್ ಮಾಡಲಾಗದಷ್ಟು ಕೋಣಗಳು ಬಂದವು. ಬೆಂಗಳೂರಿನಲ್ಲಿ …

Read More »

ನಾಯಿ ಬೆಲ್ಟ್‌ನಿಂದ 4 ತಿಂಗಳ ಗರ್ಭಿಣಿ ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಬೆಂಗಳೂರು: ನಾಯಿ ಕಟ್ಟಿಹಾಕುವ ಬೆಲ್ಟ್‌ನಿಂದ  4 ತಿಂಗಳ ಗರ್ಭಿಣಿ ಪತ್ನಿಯನ್ನು  ಕೊಂದು ಬಳಿಕ ಪತಿಯೂ (Husband) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿಕೆ ಅಚ್ಚುಕಟ್ಟಿನಲ್ಲಿ  ನಡೆದಿದೆ. ಸ್ವಪ್ನ ಗಂಡನಿಂದ ಕೊಲೆಯಾದ ಪತ್ನಿ. ಮನೋಜ್ ತನ್ನ ಪತ್ನಿಯನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಂಪತಿ ಮೂಲತಃ ಉತ್ತರ ಪ್ರದೇಶ ಮೂಲದವರಾಗಿದ್ದು, ಮನೋಜ್ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ. 4 ತಿಂಗಳ ಗರ್ಭಿಣಿಯಾಗಿದ್ದ ಪತ್ನಿ ಸ್ವಪ್ನಾಳನ್ನು ನಾಯಿ ಕಟ್ಟಿಹಾಕುವ ಬೆಲ್ಟ್‌ನಿಂದ ಕತ್ತು ಹಿಸುಕಿ …

Read More »

HMT ಜಮೀನು ಇಂದಿನ ಸಿಎಂ ಅವರೇ ಮಾರಾಟ ಮಾಡಿರೋದು: ಹೆಚ್‌ಡಿಕೆ ಆರೋಪ

ಬೆಂಗಳೂರು: HMT ಭೂಮಿಯನ್ನ ಇಂದಿನ ಸಿಎಂ 2004 ರಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದಾಗಲೇ ಮಾರಾಟ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  ಹೆಸರು ಹೇಳದೇ‌ ಸಿಎಂ ಡಿ.ಕೆ ಶಿವಕುಮಾರ್ ಮೇಲೆ ನೇರ ಆರೋಪ ಮಾಡಿದ್ದಾರೆ. HMT ಜಮೀನು ಅರಣ್ಯ ಇಲಾಖೆಗೆ ಸೇರಿದ್ದು ಎಂಬ ಸಚಿವ ಈಶ್ವರ್ ಖಂಡ್ರೆ ಆರೋಪ ಹಿನ್ನಲೆಯಲ್ಲಿ ಇಂದು ಜಾಲಹಳ್ಳಿಯ HMT ಕ್ಯಾಂಪಸ್ ವೀಕ್ಷಣೆ ಮಾಡಿದ ಕುಮಾರಸ್ವಾಮಿ, ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡಿದ್ರು. HMTಗೆ ಹೊಸ ಕಾಯಕಲ್ಪ …

Read More »