Breaking News

ಪೋಕ್ಸೋ ಪ್ರಕರಣದ ಆರೋಪಿಗೆ ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಸಂತ್ರಸ್ತೆ ಕುಟುಂಬಸ್ಥರು

ಬೆಳಗಾವಿ, : ಪೋಕ್ಸೋ (POSCO) ಪ್ರಕರಣದ ಆರೋಪಿಗೆ ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ದೊಡ್ಡವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅನಿಲ್ ಮೂಕನವರ್ ಪೋಕ್ಸೋ ಪ್ರಕರಣ ಆರೋಪಿ. ಅನಿಲ್ ಮೂಕನವರ್ ಪೋಕ್ಸೋ ಪ್ರಕರಣದಲ್ಲಿ ಮೂರು ತಿಂಗಳ ಹಿಂದೆ ಜೈಲಿಗೆ ಹೋಗಿದ್ದನು. ಇದೀಗ ಮೂರು ತಿಂಗಳ ಬಳಿಕ ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ.   ಗ್ರಾಮಕ್ಕೆ ಬಂದ ಆರೋಪಿ ಅನಿಲ್ ಮೂಕನವರ್​ಗೆ ಸಂತ್ರಸ್ತೆ …

Read More »

ಅಗತ್ಯ ಔಷಧಿಗಳ ಬೆಲೆ ಮತ್ತೆ ಹೆಚ್ಚಿಸಿದ ಸರ್ಕಾರ

ನವದೆಹಲಿ: ಅಗತ್ಯ ಔಷಧಿಗಳ ಬೆಲೆ ಹೆಚ್ಚಳವಾಗಿದ್ದು, ಈ ವಾರದ ಆರಂಭದಲ್ಲಿ ಏಪ್ರಿಲ್ 1 ರಿಂದ ಜಾರಿಗೆ ಬಂದಿದೆ. ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರವು(NPPA) 2024-25ರ ಆರ್ಥಿಕ ವರ್ಷದ ಆರಂಭದಿಂದ ಅಗತ್ಯ ಔಷಧಗಳ ಗರಿಷ್ಠ ಚಿಲ್ಲರೆ ಬೆಲೆಯಲ್ಲಿ(MRP) ಈ ವರ್ಷ 0.00551% ಹೆಚ್ಚಳವನ್ನು ಜಾರಿಗೊಳಿಸಿದೆ. ಫಾರ್ಮಾಸ್ಯುಟಿಕಲ್ಸ್ ಇಲಾಖೆಯು 923 ನಿಗದಿತ ಔಷಧಳಿಗೆ ಪರಿಷ್ಕೃತ ಬೆಲೆಗಳ ವಾರ್ಷಿಕ ಪಟ್ಟಿಯನ್ನು ಮತ್ತು 65 ಫಾರ್ಮುಲೇಶನ್‌ಗಳಿಗೆ ಪರಿಷ್ಕೃತ ಚಿಲ್ಲರೆ ಬೆಲೆಗಳನ್ನು ಬಿಡುಗಡೆ ಮಾಡಿದೆ. ಸೀಲಿಂಗ್ ದರಗಳು ಏಪ್ರಿಲ್ …

Read More »

ರೈಲಿನಲ್ಲಿ ಯುವಕನನ್ನು ಬಾತ್​ರೂಮ್​ ಒಳಗಡೆ ಎಳೆದೊಯ್ದು ಲಾಕ್​ ಮಾಡಿಕೊಂಡ ಮಂಗಳಮುಖಿ!

ಕೆಲವು ಮಂಗಳಮುಖಿಯರು ರೈಲಿನಲ್ಲಿ ಬಂದು ಪ್ರಯಾಣಿಕರಿಂದ ಹಣ ಕೇಳುವುದು ಸಾಮಾನ್ಯವಾಗಿದೆ. ಯಾರೂ ಕೆಲಸ ಕೊಡುವುದಿಲ್ಲ ಅಂತಾ ಬದುಕಲು ಬೇರೆ ದಾರಿ ಇಲ್ಲದೆ ಹಣ ಕೇಳುತ್ತಾರೆ. ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುವ ಮೂಲಕ ಟೀಕೆಗು ಗುರಿಯಾಗುತ್ತಾರೆ. ರೈಲುಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿವೆ. ಆದರೆ, ಇಂತಹ ಘಟನೆ ನಗೆಪಾಟಲಿಗೀಡಾದರೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಇದನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆಯೂ ಇದೆ. ವಿಡಿಯೋದಲ್ಲಿ ಏನಿದೆ? ವಿಡಿಯೋದಲ್ಲಿ ರೈಲಿನ ಒಳಗೆ ಕೆಲವು ಯುವಕರು ಬಾತ್​ರೂಮ್​ ಬಾಗಿಲಿನ …

Read More »

ಡಿಕೆಶಿ ನೋಟು, ಡಾಕ್ಟರ್‌ಗೆ ವೋಟು; ಬಾವನ ಗೆಲ್ಲಿಸಲು ಎಚ್‌ಡಿಕೆ ಪ್ಲಾನ್!

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮುಗಿದ ಬೆನ್ನಲ್ಲೇ ಪ್ರಚಾರದ ಅಬ್ಬರ ಜೋರಾಗಿದೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳಂತೂ ಇನ್ನಿಲ್ಲದ ರಣತಂತ್ರ ರೂಪಿಸುತ್ತಿವೆ.ಇದರ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಬಾವ ಡಾ.ಸಿ.ಎನ್‌.ಮಂಜುನಾಥ್‌ (Dr C N Manjunath) ಅವರನ್ನು ಗೆಲ್ಲಿಸಲು ಮಾಸ್ಟರ್‌ ಪ್ಲಾನ್‌ ರೂಪಿಸಿದ್ದಾರೆ. “ಡಿ.ಕೆ.ಶಿವಕುಮಾರ್‌ ಅವರ ನೋಟು ಪಡೆದು, ಡಾಕ್ಟರ್‌ಗೆ ಮತ ನೀಡಿ ಎಂಬುದಾಗಿ …

Read More »

ಅಣ್ಣ-ತಮ್ಮ ದುಡ್ಡು ಕೊಟ್ಟು ಕಾಲಿಗೆ ಬಿಳ್ತಿದ್ದಾರೆ : ಕುಮಾರಸ್ವಾಮಿ

ಬೆಂಗಳೂರು : ನಮ್ಮದು ಸ್ಟ್ರಾಟರ್ಜಿ ಏನಿಲ್ಲ. ಚುನಾವಣೆ ಗೆಲ್ಲಬೇಕು ಅಷ್ಟೆ. ಡಿಕೆಶಿ ನೋಟು ಡಾಕ್ಟ್ರಿಗೆ ವೋಟು ಅಷ್ಟೇ. ಡಿ.ಕೆ. ಶಿವಕುಮಾರ್‌ ಅವರ ನೋಟು ಪಡೆದು, ಡಾಕ್ಟರ್‌ಗೆ ಮತ ನೀಡಿ ಎಂದು ಮತದಾರರಿಗೆ ಮನವಿ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕುಟುಕಿದರು.   ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ಡಾ. ಮಂಜುನಾಥ್ ಅವರು ಒಂದು ವಿದ್ಯುತ್ ಸಂಚಲನ ಮಾಡಿದ್ದಾರೆ. ಜನರಲ್ಲೂ ಸಹ ಸ್ವಯಂ ಪ್ರೇರಣೆಯಿಂದ ಒಲವಿದೆ. ನರೇಂದ್ರ …

Read More »

ಬಿಜೆಪಿ ಸೇರುವಾಗ ಜಾಮೂನು ಕೊಡ್ತಾರೆ, ಸೇರಿದ ಮೇಲೆ ವಿಷ ಹಾಕ್ತಾರೆ : ಸೋಮಶೇಖರ್

ಕೆಂಗೇರಿ,- ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸಂದರ್ಭದಲ್ಲಿ ಜಾಮೂನು, ಮೈಸೂರುಪಾಕು, ಜಿಲೇಬಿ ಕೊಡುತ್ತಾರೆ. ಅವರ ಕೆಲಸ ಆದ್ಮೇಲೆ ವಿಷ ಕೊಡುತ್ತಾರೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಭಾವುಕರಾಗಿ ನುಡಿದರು. ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಕದ್ದುಮುಚ್ಚಿ ರಾತ್ರಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಅವರ ಭೇಟಿಯಾಗುತ್ತಾರೆ.ಆದರೆ ನಾನು ಕ್ಷೇತ್ರದ ಅಭಿವೃದ್ಧಿಗಾಗಿ ರಾಜಾರೋಷವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭೇಟಿ ಮಾಡಿದರೆ ಅದನ್ನೇ ದೊಡ್ಡದು ಮಾಡುತ್ತಾರೆ ಎಂದು …

Read More »

ಭೂಮಿ ತಾಪ ಇಳಿಸಲು ಸೂರ್ಯನಿಗೇ ಟಾರ್ಚ್‌!

ಭೂಮಿಯ ತಾಪಮಾನ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇದೆ. ಬೇಸಗೆಯಲ್ಲಂತೂ ಸೂರ್ಯನ ಶಾಖಕ್ಕೆ, ಬಿಸಿ ಗಾಳಿಗೆ ಮನುಷ್ಯರು ಮಾತ್ರವಲ್ಲದೇ ಪ್ರಾಣಿಗಳು ಕೂಡ ಪರಿತಪಿಸುವಂತಾಗಿದೆ. ಭೂಮಿ ಯ ತಾಪವನ್ನು ತಾತ್ಕಾಲಿಕವಾಗಿ ಇಳಿಸಲು ಅಮೆರಿಕದ ವಿಜ್ಞಾನಿಗಳು ವಿನೂತನ ಪ್ರಯೋಗ ನಡೆಸಿದ್ದಾರೆ. ಭೂಮಿಯ ವಾತಾವರಣ ತಂಪಾಗಿ ಸುವ ನಿಟ್ಟಿನಲ್ಲಿ “ಕ್ಲೌಡ್‌ ಬ್ರೈಟನಿಂಗ್‌’ ಎಂಬ ತಂತ್ರವನ್ನು ಬಳಸಿದ್ದಾರೆ. “ಕ್ಲೌಡ್‌ ಬ್ರೈಟನಿಂಗ್‌’ ತಂತ್ರವು ಮೋಡಗಳನ್ನು ಪ್ರಕಾಶಮಾನವಾಗುವಂತೆ ಮಾಡುತ್ತದೆ. ಇದರಿಂದ ಮೋಡಗಳು ಒಳಬರುವ ಸೂರ್ಯನ ಕಿರಣಗಳ ಸಣ್ಣ ಭಾಗವನ್ನು ಪ್ರತಿಫ‌ಲನಗೊಳಿಸುತ್ತದೆ. …

Read More »

ಎನ್‍ಸಿಡಿಎಫ್‍ಆಯ್ ನಿರ್ದೇಶಕರಾಗಿ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಪುನರಾಯ್ಕೆ

ಎನ್‍ಸಿಡಿಎಫ್‍ಆಯ್ ನಿರ್ದೇಶಕರಾಗಿ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಪುನರಾಯ್ಕೆ ಅಧ್ಯಕ್ಷರಾಗಿ ಮೀನೇಶ್ ಷಾ ಅಧಿಕಾರ ಸ್ವೀಕಾರ ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿಯ ಚುನಾವಣೆ ಬೆಂಗಳೂರು: ಕಹಾಮ ನಿರ್ದೇಶಕ, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರಾಷ್ಟ್ರೀಯ ಸಹಕಾರಿ ಡೈರಿ ಮಹಾ ಮಂಡಲ (ಎನ್‍ಸಿಡಿಎಫ್‍ಆಯ್)ದ ನಿರ್ದೇಶಕರಾಗಿ ಪುನ:ರಾಯ್ಕೆಯಾಗಿದ್ದಾರೆ. ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ಏ-4 ರಂದು …

Read More »

ಸಿಂದಗಿ ಪುರಸಭೆ ಸದಸ್ಯೆ ವಾಸಿಸಲು ಮನೆಯಿಲ್ಲ, ಉಪಜೀವನಕ್ಕೆ ಕೂಲಿ ಕೆಲಸ.

ಸಿಂದಗಿ (ವಿಜಯಪುರ ಜಿಲ್ಲೆ): ವಾಸಿಸಲು ಮನೆಯಿಲ್ಲ, ಉಪಜೀವನಕ್ಕೆ ಕೂಲಿ ಕೆಲಸ. ನಿತ್ಯ ಬೆಳಿಗ್ಗೆ ಸಿಕ್ಕರೆ ಕೂಲಿಗೆಲಸಕ್ಕೆ ಹೋಗುವುದು, ಇಲ್ಲದಿದ್ದರೆ ಗುಡಿಸಲಲ್ಲೇ ವಾಸ. ನೈವೇದ್ಯದ ಪ್ರಸಾದ ಅಥವಾ ಯಾರಾದರೂ ಆಹಾರ ಕೊಟ್ಟರೆ ಅದೇ ಊಟ. ಇಲ್ಲದಿದ್ದರೆ, ಉಪವಾಸ. ವೃದ್ಧಾಪ್ಯವೇತನ ಕೂಡ ಇತ್ತೀಚೆಗೆ ಅವರ ಕೈಸೇರಿಲ್ಲ…   ಇದು ವಿಜಯಪುರ ಜಿಲ್ಲೆ ಸಿಂದಗಿಯಲ್ಲಿರುವ 23ನೇ ವಾರ್ಡ್‌ನ ಪುರಸಭೆ ಕಾಂಗ್ರೆಸ್‌ ಸದಸ್ಯೆ ಮಹಾದೇವಿ ಭೀಮಶ್ಯಾ ನಾಯ್ಕೋಡಿ (80) ಅವರ ಸ್ಥಿತಿ. ಮಹಾದೇವಿ ನಾಯ್ಕೋಡಿ ಅವರನ್ನು …

Read More »

ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: KSRTCಯಿಂದ 2000 ಹೆಚ್ಚುವರಿ ಬಸ್

ಬೆಂಗಳೂರು: ಕೆಎಸ್‌ಆರ್‌ಟಿಸಿಯಿಂದ ಯುಗಾದಿ ಹಬ್ಬಕ್ಕೆ ಹೆಚ್ಚುವರಿ ಬಸ್ ಸೇವೆ ಒದಗಿಸಲಾಗುವುದು. ಸಾಲು ಸಾಲು ರಜೆ ಹಿನ್ನೆಲೆ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ 2000ಕ್ಕೂ ಅಧಿಕ ಬಸ್ ಗಳನ್ನು ರಸ್ತೆಗಿಳಿಸಲು ನಾಲ್ಕು ನಿಗಮಗಳು ನಿರ್ಧರಿಸಿವೆ. ಕೆಎಸ್‌ಆರ್ಟಿಸಿಯಿಂದ 1750 ಬಸ್, ವಾಯುವ್ಯ ಕರ್ನಾಟಕ 145, ಕಲ್ಯಾಣ ಕರ್ನಾಟಕ 200, ಬಿಎಂಟಿಸಿ 180 ವಿಶೇಷ ಬಸ್ ಗಳನ್ನು ಓಡಿಸಲಿದೆ. ನಾಲ್ಕು ನಿಗಮಗಳಿಂದ 2275 ಬಸ್ ಗಳನ್ನು ಓಡಿಸಲಾಗುವುದು. ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ, ಹೊರ …

Read More »