Breaking News

ಕಿಸ್ಸಿಂಗ್ ಬಾಬಾ’ ಮುತ್ತಿನ ಮಹಿಮೆ; 24 ಮಂದಿಗೆ ಕೊರೊನಾ ಗಿಫ್ಟ್ ಕೊಟ್ಟು ತಾನೂ ಬಲಿಯಾದ

ಭೋಪಾಲ್: ಕೊರೊನಾದಿಂದಾಗಿ ಕೆಲ ಢೋಂಗಿಗಳ ಅಸಲೀಯತ್ತು ಕೂಡಾ ಬಯಲಿಗೆ ಬರ್ತಿದೆ. ಮಧ್ಯಪ್ರದೇಶದ ಕಿಸ್ಸಿಂಗ್ ಬಾಬಾ ಅಲಿಯಾಸ್ ಅಸ್ಲಮ್ ಬಾಬಾ , ಕಳೆದ ವಾರ ಕೊರೊನಾ ಸೋಂಕಿನಿಂದಲೇ ಮೃತಪಟ್ಟಿದ್ದಾರೆ. ದುರಾದೃಷ್ಟವಶಾತ್‌ ತನ್ನಿಂದ ಕಿಸ್​ ಪಡೆದಿದ್ದ 24 ಮಂದಿಗೆ ಕೊರೊನಾ ಹರಡಲು ಕಾರಣನಾಗಿದ್ದಾನೆ. ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿದ್ದ ಅಸ್ಲಮ್ ಬಾಬಾ, ತನ್ನ ಬಳಿ ಕೊರೊನಾ ಗುಣಪಡಿಸಲು ಮದ್ದಿದೆ. ಆ ಮದ್ದೇ ತನ್ನಿಂದ ಕಿಸ್​ ಪಡೆಯುವುದು..! ಹೌದು, ನನ್ನ ಕಿಸ್​ನಲ್ಲಿ ಅಂಥ ಶಕ್ತಿ ಇದೆ.. …

Read More »

ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟಕ್ಕೀಡಾಗಿ ಉಪನ್ಯಾಸಕರಿಬ್ಬರು ಆತ್ಮಹತ್ಯೆ

ಮಂಡ್ಯ: ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟಕ್ಕೀಡಾಗಿ ಉಪನ್ಯಾಸಕರಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಾದ ಸುರೇಶ್ (29), ವಾಣಿಜ್ಯ ವಿಭಾಗದ ಉಪನ್ಯಾಸಕಿ ಕೋಕಿಲ (35) ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಒಂದೇ ಕಾಲೇಜಿನ ಉಪನ್ಯಾಸಕರಾಗಿದ್ದಾರೆ. ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ. ಮೇ 11ರಂದು ಕೋಕಿಲ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನೂ ಜೂನ್ 4 ರಂದು …

Read More »

ಶನಿವಾರ ಬೆಳಗಾವಿಗೆ ಆಗಮಿಸಲಿರುವ ನೂತನ ರಾಜ್ಯಸಭಾ ಸದಸ್ಯ

ಬೆಳಗಾವಿ :ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಈರಣ್ಣ ಕಡಾಡಿ ಶನಿವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು ನಗರದ ಸಂಕಮ್ ಹೊಟೆಲ್ ಬಳಿ ಅವರನ್ನು ಸ್ವಾಗತಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಆಗಮಿಸಲಿರುವ ಅವರು ನಂತರ ಚನ್ನಮ್ಮ ವೃತ್ತದ ಬಳಿ ಗಣೇಶ ಮಂದಿರದಲ್ಲಿ ಪೂಜೆ ನೆರವೇರಿಸುವರು. ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ, ಬಾಬಾಸಾಹೇಬ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಕ್ಷದ ಕಾರ್ಯಾಲಯಕ್ಕೆ ಭೇಟಿ ನೀಡುವರು. ನಂತರ ಬಸವೇಶ್ವರ ಪುತ್ಥಳಿಗೆ, ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ …

Read More »

ಕರ್ನಾಟಕದ ನಾಲ್ವರು ಅಭ್ಯರ್ಥಿಗಳೂ ಅವಿರೋಧ ಆಯ್ಕೆ

ರಾಜ್ಯಸಭೆ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, ಕರ್ನಾಟಕದ ನಾಲ್ವರು ಅಭ್ಯರ್ಥಿಗಳಾದ ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಹಾಗೂ ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ನಿಂದ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯಸಭಾ ಚುನಾವಣೆ-2020ರಲ್ಲಿ ಕರ್ನಾಟಕದಲ್ಲಿ ನಾಲ್ಕೂ ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಅವಿರೋಧವಾಗಿ ಆಯ್ಕೆಯಾದ ಅಧಿಕೃತ ಘೋಷಣಾ ಪತ್ರವನ್ನು ಕಾಂಗ್ರೆಸ್‍ನ ಮಲ್ಲಿಕಾರ್ಜುನ …

Read More »

ರಾಜ್ಯದಲ್ಲಿ ಶುಕ್ರವಾರ ಒಂದೇ ದಿನಕ್ಕೆ 271 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಒಂದೇ ದಿನಕ್ಕೆ 271 ಜನರಿಗೆ ಕೊರೊನಾ  ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 6,516ಕ್ಕೆ ಏರಿಕೆಯಾಗಿದೆ. 7 ಜನರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಕಡುನಾಡಲ್ಲಿ ಕೊರೊನಾ ರಣಕೇಕೆ ಮುಂದುವರೆಸಿದೆ. ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ 24 ಗಂಟೆಯಲ್ಲಿ 271 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಲ್ಲಿಯವರೆಗೆ 6516 ಸೋಂಕಿತರ ಪೈಕಿ 3,440 ಜನರು ಸಂಪೂರ್ಣ ಗುಣಮುಖರಾಗಿ, ಬಿಡುಗಡೆಯಾಗಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ 79 ಜನರು ಮೃತಪಟ್ಟಿದ್ದಾರೆ. ಜಿಲ್ಲಾವಾರು …

Read More »

ಹುಚ್ಚ ವೆಂಕಟ್‌ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಂಡ್ಯ: ಹುಚ್ಚ ವೆಂಕಟ್‌ಗೆ ನಡು ಬೀದಿಯಲ್ಲಿ ಯುವಕರು ಥಳಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು. ಇದೀಗ ಹುಚ್ಚ ವೆಂಕಟ್‌ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವೆಂಕಟ್‌ ಮೇಲೆ ಹಲ್ಲೆ ಮಾಡಿದ್ದ ಕಿಡಿಗೇಡಿಗಳು ಜೂ 10 ರಂದು ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗೇಟ್‌ ಬಳಿ ಹುಚ್ಚ ವೆಂಕಟ್‌ ಟೀ ಕುಡಿಯಲು ಹೋಗಿದ್ದರು. ಟೀ ಕುಡಿಯುವ ವೇಳೆ ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ವೆಂಕಟ್‌ರನ್ನು ಯುವಕರ ಗುಂಪೊಂದು …

Read More »

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪ್ರಯುಕ್ತ ಜಾಗೃತಿ ರಥಕ್ಕೆ ಚಾಲನೆ

ಬೆಳಗಾವಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪ್ರಯುಕ್ತ ಜಾಗೃತಿ ರಥಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಜೆ.ಸತೀಶ ಸಿಂಗ್ ಹಾಗೂ ಜಿಲ್ಲಾಧಿಕಾರಿ ಡಾ. ಎಸ್.ಬಿ ಬೊಮ್ಮನಹಳ್ಳಿ ಅವರು ಹಸಿರು ನಿಶಾನೆ ತೋರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ, ವಿವಿಧ ಇಲಾಖೆಗಳು, ಕಾರ್ಮಿಕ ಸಂಘಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ (ಜೂನ್ 12) ಜಿಲ್ಲಾಧಿಕಾರಿಗಳ ಕಚೇರಿ …

Read More »

ಲಾಕ್ ಡೌನ್ ಸಂದರ್ಭದಲ್ಲಿ ನಷ್ಟ ಅನುಭವಿಸಿದ ತಾಲೂಕಿನ ರೈತರ ತರಕಾರಿ ಹಾಗೂ ಹಣ್ಣು ಬೆಳೆಗಳ ಕುರಿತು ಮರು ಸಮೀಕ್ಷೆ ಮಾಡಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕಾ ಘಟಕದ ರೈತರು ಒತ್ತಾಯಿಸಿದ್ದಾರೆ.

ಸವಣೂರ: ಲಾಕ್ ಡೌನ್ ಸಂದರ್ಭದಲ್ಲಿ ನಷ್ಟ ಅನುಭವಿಸಿದ ತಾಲೂಕಿನ ರೈತರ ತರಕಾರಿ ಹಾಗೂ ಹಣ್ಣು ಬೆಳೆಗಳ ಕುರಿತು ಮರು ಸಮೀಕ್ಷೆ ಮಾಡಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕಾ ಘಟಕದ ರೈತರು ಒತ್ತಾಯಿಸಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಸಮಯದಲ್ಲಿ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲಾಗದೇ ರೈತರು ಸಾಕಷ್ಟು ನಷ್ಟಕ್ಕೊಳಗಾಗಿದ್ದಾರೆ. ಕಂದಾಯ ಇಲಾಖೆಯ ವತಿಯಿಂದ …

Read More »

ರಾಜ್ಯಸಭಾ ಸದಸ್ಯರಾಗಿ ಈರಣ್ಣ ಕಡಾಡಿ ಅವರು ಅವಿರೋಧವಾಗಿ ಆಯ್ಕೆ, ಚುನಾವಣಾ ಅಧಿಕಾರಿಯಿಂದ ಪ್ರಮಾಣಪತ್ರ ಸ್ವೀಕರಿಸಿದರು.

ಬೆಂಗಳೂರು : ರಾಜ್ಯಸಭಾ ಸದಸ್ಯರಾಗಿ ಈರಣ್ಣ ಕಡಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಶುಕ್ರವಾರ ಬೆಂಗಳೂರಿನಲ್ಲಿ ಚುನಾವಣಾ ಅಧಿಕಾರಿಯಿಂದ ಪ್ರಮಾಣಪತ್ರ ಚುನಾವಣಾ ಅಧಿಕಾರಿಯಿಂದ ಪ್ರಮಾಣಪತ್ರ ಸ್ವೀಕರಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ, ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಮಾಜಿ ಸಚಿವ ಶಶಿಕಾಂತ ನಾಯಕ ಸೇರಿದಂತೆ ಇತರರು ಇದ್ದರು. ಈರಣ್ಣಾ ಕಡಾಡಿ ಅವರು ಶನಿವಾರ ಬೆಳಗಾವಿಗೆ ಬೆಳಿಗ್ಗೆ 10 ಗಂಟೆಗೆ ಆಮಿಸಿ, ನೇರ ಚನ್ನಮ್ಮ ವೃತ್ತದಲ್ಲಿರುವ ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.

Read More »

ಕೊರೊನಾದಿಂದ ಸಂಕಷ್ಟದಲ್ಲಿರುವ ಗೋವಿನ ಜೋಳ ಬೆಳೆದಿರುವ ಬೆಳೆಗಾರರಿಗೆ ಸರಕಾರ 5000ರೂ.ಗಳ ಪರಿಹಾರದ ನೆರವು ಘೋಷಣೆ:ಸಚೇತಕ ಮಹಾಂತೇಶ ಕವಟಗಿಮಠ

ಚಿಕ್ಕೋಡಿ : ಕೊರೊನಾದಿಂದ ಸಂಕಷ್ಟದಲ್ಲಿರುವ ಗೋವಿನ ಜೋಳ ಬೆಳೆದಿರುವ ಬೆಳೆಗಾರರಿಗೆ ಸರಕಾರ 5000ರೂ.ಗಳ ಪರಿಹಾರದ ನೆರವು ಘೋಷಣೆ ಮಾಡಲಾಗಿದೆ ಎಂದು ವಿಧಾನ ಪರಿಷತ್‍ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ  ಹೇಳಿದರು. ಪಟ್ಟಣದಲ್ಲಿರುವ ಲೋಕೋಪಯೋಗಿ ಇಲಾಖೆ ಸಭಾಭವನದಲ್ಲಿ ಶುಕ್ರವಾರ ನಡೆದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ನಂತರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ 17000 ಗೋವಿನ ಜೋಳ ಬೆಳೆದ್ದಿದ್ದಾರೆ. ಕೃಷಿ ಇಲಾಖೆ ಗೋವಿನ ಜೋಳ ಬೆಳೆಗಾರರ ಯಾದಿ ತಯಾರಿಸಿದೆ. ಆ …

Read More »