ಬೆಳಗಾವಿ: ಬೆಳಗಾವಿಯ ಅಯೋಧ್ಯಾನಗರದ ಯು.ಕೆ. 27 ಹೋಟೆಲನ ಪಕ್ಕದಲ್ಲಿ ದೇಶದಲ್ಲೇ ಪ್ರಸಿದ್ಧ ಮತ್ತು ಗ್ರಾಹಕರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾದ ಡ್ರೈಫ್ರೂಟ್ ಹೌಸ್ ತನ್ನ ಸೇವೆಯನ್ನು ಆರಂಭಿಸಿದೆ. ದೇಶ್ಯಾದ್ಯಂತ ಈಗಾಗಲೇ 193 ಬ್ರ್ಯಾಂಚ್ ಹೊಂದಿರುವ ದೇಶ ವಿದೇಶದ ಗುಣಮಟ್ಟದ ಡ್ರೈಫ್ರೂಟ್ಸಗಳನ್ನು ಬೆಳಗಾವಿಗರಿಗೆ ನೀಡಲು ಡ್ರೈಫ್ರೂಟ್ ಹೌಸ್. ತನ್ನ 194ನೇ ಶಾಖೆಯನ್ನು ಕುಂದಾನಗರಿಯಲ್ಲಿ ಆರಂಭಿಸಿದೆ. ಇಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್, ಅವರ ಪುತ್ರ ಅಮನ್ ಸೇಠ್, ಮುಖ್ಯ ಅತಿಥಿ ಭರತ್ …
Read More »ಸರ್ಕಾರಕ್ಕೆ ಬೀಸಿ ಮುಟ್ಟಿಸಲು ಮುಂದಾದ ಆಶಾ ಕಾರ್ಯಕರ್ತೆಯರು…
ಬೆಳಗಾವಿ: ಅಧಿವೇಶನದಲ್ಲಿ ಸಮಯ ನೀಡದ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಆಶಾ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ. ವಿವಿಧ ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಜನವರಿ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಪ್ರತಿಭಟನೆ ನಡೆಸಿ ಅನಿರ್ದಿಷ್ಟಾವಧಿಯ ಮುಷ್ಕರ ಕೈಗೊಳ್ಳುವ ನಿರ್ಣಯ ಕೈಗೊಂಡಿದ್ದಾರೆ. ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸದ್ಯ ನೀಡುತ್ತಿರುವ 5 ಸಾವಿರ ರೂಪಾಯಿ ವೇತನವನ್ನು 15 ಸಾವಿರ ರೂಪಾಯಿಗೆ ಹೆಚ್ಚಳ ಮಾಡಬೇಕು. ಆರೋಗ್ಯ ಸಮಸ್ಯೆಯಿದ್ದಾಗ ರಜೆ ನೀಡಬೇಕು. ಸೇವಾ ಭದ್ರತೆಯನ್ನ ನೀಡಬೇಕು ಸೇರಿದಂತೆ …
Read More »ಬೆಳಗಾವಿ ರವಿವಾರ ಪೇಠನಲ್ಲಿಲ್ಲ ಪೊಲೀಸರು…? ಟ್ರಾಫಿಕ್ ಕಿರಿಕಿರಿಗೆ ಬೇಸತ್ತ ಜನ
ಬೆಳಗಾವಿ: ವಾರದ ಸಂತೆಯ ದಿನವೇ ಪೊಲೀಸರಿಲ್ಲದೇ ಸಂಚಾರದಟ್ಟಣೆ ಹಿನ್ನೆಲೆ ಕಿರಿಕಿರಿ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಳಗಾವಿಗರಿಂದ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ. ಈ ದೃಶ್ಯಗಳನ್ನು ನೋಡಿ ನೀವು ಇದು ಪಾರ್ಕಿಂಗ್ ಲೇಔಟ್ ಇರಬೇಕು ಅಂದುಕೊಂಡಿರಾ? ಅಲ್ಲ . ಇದು ಬೆಳಗಾವಿಯ ಪ್ರಮುಖ ಮಾರುಕಟ್ಟೆಯಲ್ಲಿ ಒಂದಾದ ರವಿವಾರಪೇಠನ ದೃಶ್ಯಗಳಿವು. ಇಲ್ಲಿ ಅನೇಕ ಸಗಟು ವ್ಯಾಪಾಸ್ಥರ ಅಂಗಡಿಗಳಿವೆ. ಅಲ್ಲದೇ ಇನ್ನುಳಿದ ವಸ್ತುಗಳನ್ನು ಖರೀದಿಸಲು ಜನ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಪ್ರತಿದಿನವು ಭಾರಿ ವಾಹನಗಳು ಇಲ್ಲಿ …
Read More »ಬೆಂಗಳೂರಲ್ಲಿ ರೂಮ್ಮೇಟ್ನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯ ಬಂಧನ
ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ರೂಮ್ಮೇಟ್ನನ್ನು ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಟಿ. ನರಸೀಪುರ ಮೂಲದ ನಾಗರಾಜ್ (36) ಬಂಧಿತ ಆರೋಪಿ. ಡಿಸೆಂಬರ್ 26 ರಂದು ತನ್ನ ರೂಮ್ಮೇಟ್ ಶ್ರೀನಿವಾಸ್ (45) ಎಂಬಾತನಿಗೆ ವಾಟರ್ ಹೀಟರ್ ಕಾಯಿಲ್ನಿಂದ ಹೊಡೆದು ಹತ್ಯೆಗೈದು ನಾಗರಾಜ್ ಪರಾರಿಯಾಗಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಟಿ. ನರಸೀಪುರ ಮೂಲದವರಾದ ಇಬ್ಬರೂ ಸಹ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರು. ಚೆನ್ನಮ್ಮನ ಕೆರೆ ಅಚ್ಚುಕಟ್ಟು …
Read More »ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 9 ಜನ ಅಯ್ಯಪ್ಪ ಮಾಲಾಧಾರಿಗಳಲ್ಲಿ ಐವರು ಸಾವನ್ನಪ್ಪಿದ್ದು, ಉಳಿದ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಇಂದು ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿ ಶಂಕರ ಚವ್ಹಾಣ್ (29) ಮೃತ ಮಾಲಾಧಾರಿ. ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ದೊಡ್ಡಮ್ಮನ ಮನೆಯಲ್ಲಿ ಬೆಳೆದಿದ್ದ ಇವರು ಅಯ್ಯಪ್ಪನ ವೃತ ಮಾಡಲು ಮೊದಲ ಬಾರಿಗೆ ಮಾಲೆ ಹಾಕಿದ್ದರು. ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ಏಳು ದಿನಗಳಿಂದ ಕೆಎಂಸಿಆಎರ್ಐನ …
Read More »ಗುತ್ತಿಗೆದಾರ ಸಚಿನ್ ಸಾವಿನ ಕುರಿತು ನ್ಯಾಯಾಂಗ ತನಿಖೆ ಆಗಬೇಕು. ಇದಕ್ಕೂ ಮೊದಲು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಬೇಕು ಎಂದು ಎಂಎಲ್ಸಿ ಎನ್. ರವಿಕುಮಾರ್ ಆಗ್ರಹಿಸಿದರು.
ಬೆಂಗಳೂರು: “ಗುತ್ತಿಗೆದಾರ ಸಚಿನ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಆಗಬೇಕು. ಸಚಿವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಡಬೇಕು” ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,” ಹೆಣ್ಣುಮಕ್ಕಳ ದುರ್ಬಳಕೆಯ ಸಂಚು ಸೇರಿದಂತೆ ಅನೇಕ ವಿಷಯಗಳು ಸಚಿನ್ ಡೆತ್ನೋಟಿನಲ್ಲಿವೆ” ಎಂದು ತಿಳಿಸಿದರು. “ತನಿಖೆ ನಡೆಯಲೆಂದು ಮುಂಚಿತವಾಗಿ ತಿಳಿಸಿದರೆ ಬಚಾವ್ ಆಗಬಹುದೆಂದು ಪ್ರಿಯಾಂಕ್ ಅವರು ಪತ್ರಿಕಾಗೋಷ್ಠಿ ಮಾಡಿದ್ದಾರೆ. ಈಶ್ವರಪ್ಪನವರ ರಾಜೀನಾಮೆ …
Read More »ಇಂದು ಕೆಎಎಸ್ ಪೂರ್ವಭಾವಿ ಪರೀಕ್ಷೆ
ಬೆಂಗಳೂರು: 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ (ಕೆಎಎಸ್) ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯು ಇಂದು ನಡೆಯಲಿದ್ದು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ವು ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕಟ್ಟು ನಿಟ್ಟಿನ ಸೂಚನೆಗಳನ್ನು ಪಾಲಿಸುವಂತೆ ಕೂಡ ಕೆಪಿಎಸ್ಸಿ ಸೂಚಿಸಿದೆ. ಅಭ್ಯರ್ಥಿಗಳಿಗೆ ಮಾರ್ಗಸೂಚಿ: ಕೆಪಿಎಸ್ಸಿಯಿಂದ ಡೌನ್ಲೋಡ್ ಮಾಡಿದ ಮರು ಪರೀಕ್ಷೆಯ ಪ್ರವೇಶ ಪತ್ರದ ಜೊತೆಗೆ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಹಾಜರುಪಡಿಸಬೇಕು. ಎಲೆಕ್ಟ್ರಾನಿಕ್ ಗ್ಯಾಜೆಟ್ಗಳಾದ ಮೊಬೈಲ್, ಕ್ಯಾಲ್ಕುಲೇಟರ್, …
Read More »ಡಿಸೆಂಬರ್ 31 ರಿಂದ ನಡೆಯಲಿರುವ ರಾಜ್ಯ ಸಾರಿಗೆ ಇಲಾಖೆಯ ನೌಕರರ ಅನಿರ್ದಿಷ್ಟಾವಧಿಯ ಮುಷ್ಕರ?
ಬೆಂಗಳೂರು: ಡಿಸೆಂಬರ್ 31 ರಿಂದ ನಡೆಯಲಿರುವ ರಾಜ್ಯ ಸಾರಿಗೆ ಇಲಾಖೆಯ ನೌಕರರ ಅನಿರ್ದಿಷ್ಟಾವಧಿಯ ಮುಷ್ಕರದ ಹಿನ್ನೆಲೆ ಕಾರ್ಮಿಕ ಇಲಾಖೆ ಆಯುಕ್ತರ ನೇತೃತ್ವದಲ್ಲಿ ನಡೆಯಬೇಕಾಗಿದ್ದ ಸಭೆಯನ್ನು ಸೋಮವಾರ ಡಿಸೆಂಬರ್ 30ಕ್ಕೆೆ ಮುಂದೂಡಲಾಗಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ಕೆಕೆಆರ್ಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಸದಸ್ಯರನ್ನೊಳಗೊಂಡ ಜಂಟಿ ಕ್ರಿಯಾ ಸಮಿತಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘದ ಮುಖಂಡ ಹೆಚ್.ವಿ. ಅನಂತ ಸುಬ್ಬರಾವ್ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯೊಂದಿಗೆ ನಡೆಸಲಿರುವ ಸಭೆಯನ್ನು ಡಿಸೆಂಬರ್ 30ಕ್ಕೆೆ ಮುಂದೂಡಲಾಗಿದೆ. “ಸರ್ಕಾರ …
Read More »ನಮ್ಮ ಅತ್ತೆ ಬೇಗ ಸಾಯಬೇಕು” ಎಂದು ಬರೆದು ಭಾಗ್ಯವಂತಿ ದೇವಿಗೆ ಹರಕೆ!
ಕಲಬುರಗಿ, ಡಿಸೆಂಬರ್ 28: ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಘತ್ತರಗಿ ಗ್ರಾಮದ ಭಾಗ್ಯವಂತಿ ದೇವಿಯ (Bhagyavanti Devi) ಹುಂಡಿ ಎಣಿಕೆ ಕಾರ್ಯ ನಡೆಯಿತು. ಹುಂಡಿ ಎಣಿಕೆ ಮಾಡುವ ವೇಳೆ ವಿಚಿತ್ರ ಹರಕೆಯ ನೋಟ್ ಪತ್ತೆಯಾಗಿದೆ. ಅತ್ತೆ ಸಾಯಬೇಕೆಂದು ಬರೆದಿರುವ 20 ರೂ. ಮುಖಬೆಲೆಯ ನೋಟ್ ಪತ್ತೆಯಾಗಿದೆ. “ತಾಯಿ, ನಮ್ಮ ಅತ್ತೆ ಬೇಗ ಸಾಯಬೇಕು” ಅಂತ 20 ರೂ. ಮುಖಬೆಲೆಯ ನೋಟ್ ಮೇಲೆ ಬರೆದು ಹುಂಡಿಯಲ್ಲಿ ಹಾಕಲಾಗಿದೆ.ಹುಂಡಿ ಎಣಿಕೆ ಕಾರ್ಯ …
Read More »ಹಾಪುರದ ಗರ್ಮುಕ್ತೇಶ್ವರದಲ್ಲಿ 27 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಗಂಗಾ ನದಿಗೆ ಹಾರಿದ್ದಾಳೆ
ಹಾಪುರ: ಹಾಪುರದ ಗರ್ಮುಕ್ತೇಶ್ವರದಲ್ಲಿ 27 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಗಂಗಾ ನದಿಗೆ ಹಾರಿದ್ದಾಳೆ . ಆಕೆ 70 ಅಡಿ ಎತ್ತರದಿಂದ ಮೇಲ್ಸೇತುವೆಯಿಂದ ನದಿಗೆ ಹಾರುತ್ತಿದ್ದಾಗ, ಡೈವರ್ಸ್ ಆಕೆಯನ್ನು ಗಮನಿಸಿದ್ದಾರೆ. ಸಮಯ ವ್ಯರ್ಥ ಮಾಡದೆ ತಕ್ಷಣ ಡೈವರ್ಗಳು ದೋಣಿಯಲ್ಲಿ ಆಕೆ ಬಿದ್ದ ಸ್ಥಳವನ್ನು ತಲುಪಿ ಆಕೆಯನ್ನು ರಕ್ಷಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಯುವತಿ ಹೇಳಿದ್ದಾಳೆ. ಜನವರಿ 16ರಂದು ಆಕೆ ಮದುವೆಯಾಗಬೇಕಿತ್ತು. ಆದರೆ, ಕೌಟುಂಬಿಕ ಭಿನ್ನಾಭಿಪ್ರಾಯದಿಂದಾಗಿ …
Read More »