Breaking News

ಎಚ್ಚರಿಕೆ : ಧೂಮಪಾಯಿಗಳನ್ನು ಮೊದಲು ಕಾಡಲಿದೆ ಕರೋನಾ ವೈರಸ್..!

ಕೊರೋನಾ ಸಾಂಕ್ರಾಮಿಕ ಸೋಂಕಿನ ಶಂಕಿತ ವ್ಯಕ್ತಿಗಳು ಧೂಮಪಾನಿಗಳಾಗಿದ್ದರೆ ಅವರುಗಳ ಮೇಲೆ ಸೋಂಕು ಕ್ಷಿಪ್ರವಾಗಿ ಇನ್ನಷ್ಟು ಪರಿಣಾಮ ಬೀರುತ್ತಿರುವುದಕ್ಕೆ ಸಮಗ್ರ ಪುರಾವೆ ದೊರೆತಿದೆ. ಮಪಾನಿಗಳಿಗೆ ಶ್ವಾಸಕೋಶ ಮತ್ತು ಹೃದಯ ಸೋಂಕಿನ ಅಪಾಯದ ತೀವ್ರತೆಗಳು ಹೆಚ್ಚಿವೆ, ಇದರಿಂದ ಅವರುಗಳು ಉಸಿರಾಟದ ತೊಂದರೆಗಳಿಗೂ ಸಿಲುಕಲಿದ್ದಾರೆ. ಸೋಂಕಿನಿಂದ ಅವರು ಕ್ಷಯರೋಗದಂತಹ ರೋಗಗಳಿಗೂ ತುತ್ತಾಗುತ್ತಿದ್ದಾರೆ. ಇದರರ್ಥ ಧೂಮಪಾನ ಮಾಡದ ವ್ಯಕ್ತಿಗಳಿಗೆ ಹೋಲಿಸಿದರೆ ಧೂಮಪಾನಿಗಳು ಕೋವಿಡ್-19ಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚಿವೆ. ಧೂಮಪಾನಿಗಳಿಗೆ ಮೊದಲೇ ಶ್ವಾಸಕೋಶಗಳು ಹಾನಿಗೊಳಗಾಗಿರುವುದರಿಂದ ಅವರಿಗೆ ಕೊರೋನಾ …

Read More »

ಅಥಣಿ-ಅನಗತ್ಯ ಓಡಾಡುವವರ ಬೈಕ್ ಗಳನ್ನು ವಶಪಡಿಸಿಕೊಂಡು ಲಾಕ್ ಮಾಡಿದ್ದಾರೆ.

ಅಥಣಿ- ಅಥಣಿ ನಗರದಲ್ಲಿ  ಲಾಕ್ ಡೌನ್ ಹಿನ್ನೆಲೆಯಲ್ಲಿ ಮನೆಯಿಂದ ಹೊರಗಡೆ ತಿರುಗಾಡುವವರಿಗೆ ಲಾಠಿ ಬಿಸುವ ಬದಲು ಪೊಲೀಸರು ಹೊಸ ಪಾಠ ಕಲಿಸುತ್ತಿದ್ದಾರೆ. ಅನಗತ್ಯ ಓಡಾಡುವವರ ಬೈಕ್ ಗಳನ್ನು ವಶಪಡಿಸಿಕೊಂಡು ಲಾಕ್ ಮಾಡಿದ್ದಾರೆ. ಸುಮ್ಮನೆ ವ್ಯರ್ಥವಾಗಿ ದ್ವಿಚಕ್ರ ವಾಹನದ ಮೇಲೆ  ತಿರುಗಾಡುವವರಿಗೆ ಪಾಠ ಕಲಿಸಲು ನಗರ ಪೊಲೀಸರು ಅವರ ವಾಹನಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡಿರುವ ಬೈಕ್ ಗಳನ್ನು ಲಾಕ್‌ಡೌನ್ ಮುಗಿಯುವರೆಗೆ ಅವರಿಗೆ ಹಸ್ತಾಂತರಿಸದಿರಲು ನಿರ್ಧರಿಸಿದ್ದಾರೆ. ಈಗಾಗಲೇ ಸುಮಾರು 40ಕ್ಕಿಂತಲೂ ಅಧಿಕ …

Read More »

ಸ್ವಗ್ರಾಮಗಳತ್ತ ಕಾರ್ಮಿಕರ ವಲಸೆ : ಬೆಂಗಳೂರಲ್ಲೂ ದೆಹಲಿ ಪರಿಸ್ಥಿತಿ ನಿರ್ಮಾಣವಾಗದಂತೆ ಇಚ್ಛೆತ್ತ ಜಿಲ್ಲಾಡಳಿತ

ಬೆಂಗಳೂರು, ಮಾ.28- ದೆಹಲಿಯಲ್ಲಿ ಕಾರ್ಮಿಕರು ಸಾಮೂಹಿಕವಾಗಿ ವಲಸೆ ಹೋಗುತ್ತಿರುವ ದೃಶ್ಯಗಳು ಕರಳು ಕಿವುಚುತ್ತಿವೆ. ಬೆಂಗಳೂರಿನಲ್ಲೂ ಆ ರೀತಿಯ ಸನ್ನಿವೇಶ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಬೆಂಗಳೂರು ಜಿಲ್ಲಾಡಳಿತ ಕೂಲಿ ಕಾರ್ಮಿಕರಿಗೆ ತಾತ್ಕಾಲಿಕ ವಾಸ್ತವ್ಯದ ವ್ಯವಸ್ಥೆ ಮಾಡುತ್ತಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಮತ್ತವರ ತಂಡ ನಿನ್ನೆಯಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರಥಮ ಹಂತದಲ್ಲಿ ಬೆಂಗಳೂರಿನ ಹೊರ ವಲಯದಲ್ಲಿರುವ ಮೂರು ಅಪಾರ್ಟ್ ಮೆಂಟ್ ಮತ್ತು ಎರಡು ಹಾಸ್ಟೇಲ್ ಗಳನ್ನು ಗುರುತಿಸಿದೆ. ಹೊಸದಾಗಿ ನಿರ್ಮಿಸಲಾದ ಅಪಾರ್ಟ್ …

Read More »

ಜನರ ಮುಂದೆ ಏಕಾಏಕಿ ಇಂತಹ ಸ್ಥಿತಿ ಬಂದಿದೆ ಒಂದು ಸಲ ಬಿಟ್ಟು ಮೂರು ಬಾರಿ ತಿಳಿ ಹೇಳಿ:ಗೋಕಾಕ ಪೊಲೀಸರಿಗೆ ಸತೀಶ ಜಾರಕಿಹೊಳಿ‌ ಸಲಹೆ

ಗೋಕಾಕ: ಒಂದು ಸಲ‌ ಬಿಟ್ಟು ಮೂರು ಬಾರಿ ತಿಳಿಸಿ ಹೇಳಿ. ಹೊಡೆಯುವದರಲ್ಲಿ ಏನೂ ಅರ್ಥವಿಲ್ಲ ಅದರಿಂದ ಪರಿಹಾರವೂ ಇಲ್ಲ. ಜನರಿಗೆ ತಿಳುವಳಿಕೆ ಹೇಳುವುದು ಮೊದಲು ಅಗತ್ಯವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಂದು‌‌ ನಗರದಲ್ಲಿ ಮಾತನಾಡಿ ಜನರು ಕೂಡ ಪದೇ ಪದೇ ನಿಯಮಗಳನ್ನು ‌ಉಲ್ಲಂಘಿಸಿದರೆ ಕ್ರಮ ತೆಗೆದುಕೊಳ್ಳಿ, ಬಡೆಯುವಂತ ಅವಕಶ್ಯಕತೆಯಿಲ್ಲ. ಜನರು ನೀರು ಮತ್ತು ದಿನನಿತ್ಯದ ವಸ್ತುಗಳಿಗಾಗಿ ಪರದಾಡುತ್ತಿದ್ದಾರೆ. ಏಕಾಏಕಿ ಬಂದ ಇಂತಹ ಸ್ಥಿತಿ ಇದೇ ಮೊದಲ …

Read More »

ಆರೋಗ್ಯಇಲಾಖೆ ಸಿಬ್ಬಂದಿಯ ಮೇಲೆ ಪೋಲೀಸರ ಹಲ್ಲೆ ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ

ಬೆಳಗಾವಿ  ಆರೋಗ್ಯಇಲಾಖೆ  ಸಿಬ್ಬಂದಿಯ ಮೇಲೆ ಪೋಲೀಸರ ಹಲ್ಲೆ ಖಂಡಿಸಿ ಆರೋಗ್ಯ ಮೇಲ್ವಿಚಾರಕರು ಹಾಗೂ ಆರೋಗ್ಯ ಸಹಾಯಕರ ಜಿಲ್ಲಾ ಸಂಘದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಪೋಲೀಸ್ ಆಯುಕ್ತರಿಗೆ, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.         

Read More »

ಕೊರೋನಾ ವೈರಸ್ ತಡೆಗಟ್ಟಲು ಅಧಿಕಾರಿಗಳು , ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ಸಚಿವ ರಮೇಶ ಜಾರಕಿಹೊಳಿ ಸೂಚನೆ

ಗೋಕಾಕ :ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ಅಧಿಕಾರಿಗಳು , ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು ರವಿವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಕೊರೋನಾ ಮುಂಜಾಗೃತ ಕ್ರಮಗಳ ಕುರಿತು ತಾಲೂಕಾ ಅಧಿಕಾರಿಗಳ ಸಭೆ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಆಕಸ್ಮಿಕವಾಗಿ ದೇಶಾದ್ಯಂತ ಭೀಕರ ಕೊರೋನಾ ವೈರಸ ಅಪ್ಪಳಿಸಿ ಜನರ ಜೀವನವನ್ನೇ ಅಸ್ತವ್ಯಸ್ತ ಗೋಳಿಸಿದೆ ಜನತೆ ಅನಾವಶ್ಯಕವಾಗಿ ಹೊರ ಬರದಂತೆ ಮನೆಯಲ್ಲಿಯೇ ಇದ್ದು ವೈರಸ ಹರಡದಂತೆ ಸಹಕರಿಸಬೇಕು ಅಧಿಕಾರಿಗಳು …

Read More »

ಪುಣೆ ನರ್ಸ್‍ಗೆ ಪ್ರಧಾನಿ ಮೋದಿ ಕರೆ…….

ಮುಂಬೈ: ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಪುಣೆಯ ನಾಯ್ಡು ಆಸ್ಪತ್ರೆಯ ದಾದಿಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಆಸ್ಪತ್ರೆಯ ಸಿಬ್ಬಂದಿ ಮಾಡಿದ ಕಾರ್ಯವನ್ನು ಶ್ಲಾಘಿಸಿದ್ದಾರೆ. ಶುಕ್ರವಾರ ಸಂಜೆ ಪ್ರಧಾನಿ ಕಚೇರಿಯಿಂದ ನರ್ಸ್ ಛಾಯ ಜಗ್ತಾಪ್ ಅವರಿಗೆ ಕರೆ ಬಂದಿದೆ ಎಂದು ಪುಣೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಹೇಳಿದ್ದಾರೆ. ಕರೆ ಮಾಡಿ ಮರಾಠಿಯಲ್ಲಿ ಮಾತನಾಡಿದ ಮೋದಿ ಅವರು, ಅವರ ಯೋಗಕ್ಷೇಮದ ಬಗ್ಗೆ ವಿಚಾರಿಸಿದ್ದಾರೆ. …

Read More »

ಭಾರತವೇ ಲಾಕ್ ಡೌನ್ ಆಗಿದೆ. 24 ದಿನದ ಮಗು ಶವಸಂಸ್ಕಾರ ಮಾಡಲು ಸಾಧ್ಯವಾಗದೆ ಪರದಾಡಿದ ಘಟನೆ

ಯಾದಗಿರಿ: ಕೊರೊನಾ ವೈರಸ್ ಭೀತಿಯಿಂದ ಇಡೀ ಭಾರತವೇ ಲಾಕ್ ಡೌನ್ ಆಗಿದೆ. ಈ ಮಧ್ಯೆ  ಬಡ ದಂಪತಿ ತಮ್ಮ 24 ದಿನದ ಮಗುವನ್ನು ಕಳೆದುಕೊಂಡು ಶವಸಂಸ್ಕಾರ ಮಾಡಲು ಸಾಧ್ಯವಾಗದೆ ಪರದಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ಶಹಾಪೂರ ಪಟ್ಟಣದಲ್ಲಿ 25 ದಿನದ ಕಂದನನ್ನು ಕಳೆದುಕೊಂಡ ಪೋಷಕರು ಶವ ಸಂಸ್ಕಾರ ಪರದಾಡುತ್ತಿರುವಾಗ ಪೌರ ಕಾರ್ಮಿಕರು ನೆರವಿಗೆ ನಿಂತಿದ್ದಾರೆ. ಮಗುವಿನ ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.ಉತ್ತರ ಪ್ರದೇಶ ಮೂಲದ ಕಲ್ಯಾಣಸಿಂಗ್ ಎಂಬ ವ್ಯಕ್ತಿಯ …

Read More »

ಐಸೋಲೇಷನ್ ವಾರ್ಡಿಗೆ ಮಾಸ್ಕ್ ಧರಿಸದೇ ಶ್ರೀರಾಮುಲು ಭೇಟಿ:

ರಾಮನಗರ: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗ್ತಿದ್ದರೆ, ಜನರಲ್ಲಿ ಅರಿವು ಮೂಡಿಸಬೇಕಾದ ಆರೋಗ್ಯ ಸಚಿವರೇ ಕೇರ್‍ಲೆಸ್ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದಲ್ಲಿ ಇಂದು ಜಿಲ್ಲಾಡಳಿತದಿಂದ ತೆಗೆದುಕೊಂಡಿರುವ ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ್ರು. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ಮೂಲಕ ಕೊರೊನಾ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾದ ಆರೋಗ್ಯ …

Read More »

ಚೆನ್ನೈ:ಕ್ವಾರಂಟೈನ್‍ನಲ್ಲಿದ್ದು ಹುಚ್ಚನಾದ – ಮನೆಯಿಂದ ಬೆತ್ತಲಾಗಿ ಓಡಿ ವೃದ್ಧೆಯ ಕತ್ತು ಕಚ್ಚಿ ಕೊಂದ

ಚೆನ್ನೈ: ವಿದೇಶದಿಂದ ಭಾರತಕ್ಕೆ ಬಂದು ಹೋಂ ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿಯೋರ್ವ ಮನೆಯಲ್ಲಿಯಿದ್ದು ಹುಚ್ಚನಾಗಿ, ರಾತ್ರಿ ಮನೆಯಿಂದ ಬೆತ್ತಲಾಗಿ ಓಡಿ ಹೋಗಿ ವೃದ್ಧೆಯೊಬ್ಬರ ಕತ್ತು ಕಚ್ಚಿ ಕೊಲೆಮಾಡಿದ ಭಯಾನಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಥೇನಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಥೇನಿ ನಿವಾಸಿ ನಾಟ್ಚಿಯಮ್ಮಾಲ್(90) ಮೃತ ದುರ್ಧೈವಿ. ಕೆಲವು ದಿನಗಳ ಹಿಂದೆ ಶ್ರೀಲಂಕಾದಿಂದ ಭಾರತಕ್ಕೆ ವಾಪಾಸ್ ಬಂದಿದ್ದ ವ್ಯಕ್ತಿಯನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಮನೆಯಲ್ಲೇ ಇದ್ದು ಇದ್ದು ಆತ ಮಾನಸಿಕವಾಗಿ …

Read More »