Breaking News

ಜುಲೈವೊಂದರಲ್ಲೇ 50 ಲಕ್ಷನೌಕರರ ಉದ್ಯೋಗ ನಷ್ಟ!

ಮುಂಬೈ : ಕೊರೋನಾ ವೈರಸ್‌ ಉಪಟಳದಿಂದ ಆರ್ಥಿಕತೆ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿರುವ ಹಿನ್ನೆಲೆಯಲ್ಲಿ ಜುಲೈವೊಂದರಲ್ಲೇ ಬರೋಬ್ಬರಿ 50 ಲಕ್ಷ ಮಂದಿ ಸಂಬಳದಾರ ನೌಕರರು ಕೆಲಸ ಕಳೆದುಕೊಂಡಿರುವ ಸಂಗತಿ ಬೆಳಕಿಗೆ ಬಂದಿದೆ. ಇದರೊಂದಿಗೆ ಕೊರೋನಾ ಆರಂಭವಾದ ಬಳಿಕ ಉದ್ಯೋಗ ನಷ್ಟಅನುಭವಿಸಿದ ವೇತನ ವರ್ಗದವರ ಸಂಖ್ಯೆ 1.89 ಕೋಟಿಗೆ ಹೆಚ್ಚಳವಾಗಿರುವುದು ಕಳವಳಕ್ಕೆ ಕಾರಣವಾಗಿದೆ. ಕಳೆದ ಏಪ್ರಿಲ್‌ನಲ್ಲಿ ವೇತನ ಆದಾಯ ಹೊಂದಿರುವ 1.77 ಕೋಟಿ ನೌಕರರ ಉದ್ಯೋಗ ಹೋಗಿತ್ತು. ಮೇ ತಿಂಗಳಿನಲ್ಲಿ 1 …

Read More »

ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ.

ಚಿಕ್ಕೋಡಿ: ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ. ಕಲ್ಲಪ್ಪ ಪರಗೌಡರ (70 ) ಮೃತ ದುರ್ದೈವಿ. ಜಿಲ್ಲೆಯಾದ್ಯಂತ ಸತತ ಮಳೆಯಾಗುತ್ತಿದ್ದು, ಮನೆ ಗೋಡೆಗಳು ಮಳೆ ನೀರಿನಿಂದ ಶಿಥೀಲಗೊಂಡಿದ್ದವು. ನಿನ್ನೆಯೂ ಭಾರೀ ಮಳೆಯಾದ ಹಿನ್ನೆಲೆ ಗೋಡೆ ಕುಸಿದು, ನಿದ್ದೆಯಲ್ಲಿದ್ದ ಕಲ್ಲಪ್ಪ ಪರಗೌಡರ ಅವರ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Read More »

ಘಟಪ್ರಭಾ ನದಿ ಗೋಕಾಕ್​​ನ ಬಡಾವಣೆಗಳು ಜಲಾವೃತ

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾದ ಹಿನ್ನೆಲೆ ನದಿಗಳು ಉಕ್ಕಿ ಹರಿಯುತ್ತಿವೆ. ಗೋಕಾಕ್ ತಾಲೂಕಿನಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದ್ದು, ನಗರದ ಹಲವು ಬಡಾವಣೆಗಳಿಗೆ ನೀರು‌‌ ನುಗ್ಗಿದೆ. ಹಳೆ ದನಗಳಪೇಟೆ, ಉಪ್ಪಾರ ಓಣಿಗೆ ನೀರು ನುಗ್ಗಿ ಹಾನಿಯಾಗಿದೆ. ಗೋಕಾಕ್ ಪ್ರವಾಹದ ದೃಶ್ಯ ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, 1.95 ಲಕ್ಷ ಕ್ಯೂಸೆಕ್‌ಗೂ ಅಧಿಕ ಒಳಹರಿವು ಇದೆ. ಇದರಿಂದ ಕೃಷ್ಙಾ ನದಿ ತೀರದ ಜನರಲ್ಲಿ ಪ್ರವಾಹದ …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗದಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಇದೇ ಆಗಸ್ಟ್‌ನಲ್ಲಿ15 ಅಂದರೆ ಸ್ವಾತಂತ್ರ್ಯೋತ್ಸವ ಹಾಗೂ ರಾಯಣ್ಣೋತ್ಸವದಂದು ಪ್ರತಿಷ್ಠಾಪಿಸಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಾಗೂ ರಾಷ್ಟ್ರಧ್ವಜವನ್ನು ತೆರವುಗೊಳಿಸಿ ಅವಮಾನಿಸಿದ್ದನ್ನು ಖಂಡಿಸಿ ಹಾಗೂ ಮತ್ತೆ ಅದೇ ಜಾಗದಲ್ಲಿ ಗೌರವಯುತವಾಗಿ ಶೀಗ್ರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗದವರು ತಾಲೂಕಾ ದಂಡಾಧಿಕಾರಿಗಳಾದ ಪ್ರಶಾಂತ ಪಾಟೀಲ್ ಅವರ ಮೂಲಕ ಮಾನ್ಯ ಮುಖ್ಯ …

Read More »

ರಾಜ್ಯದಲ್ಲಿ ಒಂದೇದಿನ ಕೊರೋನಾಕ್ಕೆ 139 ಬಲಿ: 7665 ಕೇಸ್!

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 7,665 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ದಾಖಲೆಯ 139 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 4,201ಕ್ಕೆ ಏರಿಕೆಯಾಗಿದೆ. ಮಂಗಳವಾರ ರಾಜ್ಯದಲ್ಲಿ ಒಂದು ದಿನದ ಗರಿಷ್ಠ ಸಾವು ವರದಿಯಾಗಿದ್ದು, ಕಳೆದ ಭಾನುವಾರ ಒಂದೇ ದಿನ 124 ಮಂದಿ ಸಾವನ್ನಪ್ಪಿದ್ದು ಈವರೆಗಿನ ದಾಖಲೆಯಾಗಿತ್ತು. ಮಂಗಳವಾರ 7,665 ಸೋಂಕು ದೃಢಪಡುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2.41 ಲಕ್ಷಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರ …

Read More »

ಕಾರಿನ ಚಕ್ರದ ಗಾಳಿ ಬಿಟ್ಟ ತಹಶೀಲ್ದಾರ್‌: ರಸ್ತೆಯಲ್ಲೇ ಕಾನ್‌ಸ್ಟೆಬಲ್‌ ಧರಣಿ.

ಸಕಲೇಶಪುರ: ತಹಶೀಲ್ದಾರ್‌ ಅವರು ತನ್ನ ಕಾರಿನ ನಾಲ್ಕೂ ಚಕ್ರಗಳ ಗಾಳಿ ಬಿಟ್ಟು ಅನ್ಯಾಯ ಮಾಡಿದ್ದು, ನ್ಯಾಯಬೇಕು ಎಂದು ಆಗ್ರಹಿಸಿ ಪೊಲೀಸ್‌ ಹೆಡ್‌ ಕಾನ್‌ಸ್ಟೆಬಲ್‌ ಒಬ್ಬರು ಸಮವಸ್ತ್ರದಲ್ಲಿಯೇ ಗಾಂಧಿ ಫೋಟೊ ಹಿಡಿದು ರಸ್ತೆಯಲ್ಲಿಯೇ ಧರಣಿ ನಡೆಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ‘ಮೆಡಿಕಲ್‌ ಶಾಪ್‌ ಒಂದರ ಮುಂದೆ ಕಾರು ನಿಲ್ಲಿಸಿ ಔಷಧಿ ಖರೀದಿ ಮಾಡಿಕೊಂಡು ಬರುವಷ್ಟರಲ್ಲಿ ತಹಶೀಲ್ದಾರ್‌ ಕಾರಿನ ಚಕ್ರಗಳಿಂದ ಗಾಳಿ ತೆಗೆದಿದ್ದಾರೆ. ಹೇಳಿದ್ದರೆ ತಾನೇ ಕಾರನ್ನು ಅಲ್ಲಿಂದ ತೆಗೆಯುತ್ತಿದ್ದೆ. ಇಲ್ಲವೇ ಕಾನೂನು …

Read More »

ಸಂಪಾದಕೀಯ: ವಿಶ್ವದ ಅತ್ಯಂತ ಶಕ್ತ ನ್ಯಾಯಾಂಗ ಇನ್ನಷ್ಟು ಉದಾರವಾದಿ ಆಗಲಿ

ನ್ಯಾಯಾಂಗ ನಿಂದನೆಯ ಪ್ರಕರಣಗಳು ಸಾರ್ವಜನಿಕ ಜೀವನದಲ್ಲಿ ಪ್ರಮುಖವಾಗಿ ಚರ್ಚೆಯಾದಾಗಲೆಲ್ಲ, ನ್ಯಾಯಶಾಸ್ತ್ರಜ್ಞ, ನ್ಯಾಯಮೂರ್ತಿ ಲಾರ್ಡ್‌ ಡೆನಿಂಗ್ ಅವರ ಮಾತೊಂದು ಉಲ್ಲೇಖವಾಗುವುದಿದೆ. ನ್ಯಾಯಾಂಗ ನಿಂದನೆಯ ಕಾನೂನು ನ್ಯಾಯಾಲಯದ ಘನತೆಯನ್ನು ಎತ್ತಿಹಿಡಿಯಲು ಬಳಕೆಯಾಗಬೇಕಿಲ್ಲ. ಈ ಕಾನೂನನ್ನು ಅಪರೂಪಕ್ಕೆ ಬಳಸಿಕೊಳ್ಳಬೇಕು. ವಾಕ್ ಸ್ವಾತಂತ್ರ್ಯವನ್ನು ರಕ್ಷಿಸಬೇಕಿರುವುದು ಬಹುಮುಖ್ಯವಾದುದು ಎನ್ನುವುದು ಲಾರ್ಡ್ ಡೆನಿಂಗ್ ಅವರು ಆಡಿದ್ದ ಮಾತುಗಳು. ನ್ಯಾಯದಾನ ಮಾಡುವ ಸ್ಥಾನದಲ್ಲಿ ಕುಳಿತಿರುವ ವ್ಯಕ್ತಿಗಳ ಬಗ್ಗೆ ಟೀಕೆ ಮಾಡುವಾಗ, ‘ನ್ಯಾಯಸಮ್ಮತವಾದ ಟೀಕೆಗಳು ಬರಲಿ; ಏಕೆಂದರೆ, ನ್ಯಾಯಮೂರ್ತಿಗಳಿಗೆ ಅವರು ಹೊಂದಿರುವ …

Read More »

ಕ್ಲೇಮ್‌ ಕಮಿಷನರ್‌: ಸರ್ಕಾರದ ಪರ ಎಸಿಎಸ್‌ ಅರ್ಜಿ

ಬೆಂಗಳೂರು: ಗಲಭೆ ವೇಳೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡಲು ‘ಕ್ಲೇಮ್‌ ಕಮಿಷನರ್’ ನೇಮಿಸುವಂತೆ ರಾಜ್ಯ ಸರ್ಕಾರದ ಪರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಜವಾಬ್ದಾರಿಯನ್ನು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ (ಎಸಿಎಸ್‌) ನೀಡಲಾಗಿದೆ. ಈ ಸಂಬಂಧ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ. ಹೈಕೋರ್ಟ್ ನೇಮಿಸುವ ‘ಕ್ಲೇಮ್‌ ಕಮಿಷನರ್‌’ ಗಲಭೆ ವೇಳೆ ನಷ್ಟವಾದ ಆಸ್ತಿಯ ಮೌಲ್ಯ ಲೆಕ್ಕ ಹಾಕಿ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಬಗ್ಗೆ ನಿರ್ಧರಿಸಲಿದ್ದಾರೆ. …

Read More »

ಸಾಂಬ್ರಾ ವಿಮಾನ ನಿಲ್ದಾಣದಲ್ಲಿಲಕ್ಷ್ಮಣ ಸವದಿ ಹೇಳಿದ್ದೇನು

ಬೆಳಗಾವಿ: ಸಚಿವ ರಮೇಶ ಜಾರಕಿಹೊಳಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ವಿಚಾರವಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಅಭಿವೃದ್ದಿ ಹಾಗೂ ನೀರಾವರಿ ವಿಷಯವಾಗಿ ಚರ್ಚೆ ನಡೆಸಲು ಹೋಗಿರಬಹುದು ಎಂದು ಹೇಳಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು  ನಮ್ಮ ಪಕ್ಷದ ಅಧ್ಯಕ್ಷರನ್ನು ಭೇಟಿಯಾಗುವುದರಲ್ಲಿ ಯಾವ ತಪ್ಪಿಲ್ಲ. ನಮ್ಮ ಪಕ್ಷದ ಯಾರು ಬೇಕಾದವರು ಅಧ್ಯಕ್ಷರನ್ನು ಭೇಟಿ ಮಾಡಬಹುದು. ಸಚಿವ ರಮೇಶ ಜಾರಕಿಹೊಳಿ  ಅವರು ನಡ್ಡಾ …

Read More »

ಶಾಸಕ ಜಮೀರ ಅಹ್ಮದ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢ

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ ಅಹ್ಮದ ಖಾನ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ ಮೂಲಕ ಸ್ವತಃ ಮಾಹಿತಿ ನೀಡಿರುವ ಶಾಸಕರು “ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದು …

Read More »