ನವದೆಹಲಿ, ಡಿ.23- ಮುಂದಿನ ವರ್ಷದಿಂದ ಪ್ರತಿವಾರ ಗ್ಯಾಸ್ ಸಿಲಿಂಡರ್ ದರ ಪರಿಷ್ಕರಣೆ ಮಾಡಲು ತೈಲ ಕಂಪೆನಿಗಳು ನಿರ್ಧರಿಸಿವೆ. ಪೆಟ್ರೋಲ್, ಡಿಸೇಲ್ ಬೆಲೆಯನ್ನು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪರಿಷ್ಕರಣೆ ಮಾಡಲಾಗುತ್ತದೆ. ಆಯಾ ದಿನದ ಆರು ಗಂಟೆ ಬಳಿಕ ಪರಿಷ್ಕರಣೆಯಾಗುವ ದರವನ್ನು ಗ್ರಾಹಕರು ನೀಡಬೇಕಿದೆ. ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ಪ್ರತಿ ತಿಂಗಳಿಗೊಮ್ಮೆ ಪರಿಷ್ಕರಣೆ ಮಾಡುವ ಪದ್ಧತಿ ಜಾರಿಯಲ್ಲಿದೆ. ಒಂದು ವೇಳೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದರೆ ಅದರಿಂದಾಗುವ ನಷ್ಟವನ್ನು ತೈಲ …
Read More »ಜೆಡಿಎಸ್ – ಬಿಜೆಪಿ ಹೊಂದಾಣಿಕೆ ವಿಚಾರ ಅದು ಅವರವರ ಪಕ್ಷಗಳಿಗೆ ಬಿಟ್ಟ ವಿಚಾರ, ಯಾರು ಯಾರ ಜೊತೆಯಾದರೂ ಹೋಗಬಹುದು:ಡಿಕೆಶಿ
ರಾಮನಗರ(ಡಿಸೆಂಬರ್. 22): ಜೆಡಿಎಸ್ – ಬಿಜೆಪಿ ಹೊಂದಾಣಿಕೆ ವಿಚಾರ ಅದು ಅವರವರ ಪಕ್ಷಗಳಿಗೆ ಬಿಟ್ಟ ವಿಚಾರ, ಯಾರು ಯಾರ ಜೊತೆಯಾದರೂ ಹೋಗಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಹೆಂಡತಿ ಉಷಾ ಜೊತೆಗೆ ಗ್ರಾ.ಪಂ ಚುನಾವಣೆ ಹಿನ್ನೆಲೆ ಮತದಾನ ಮಾಡಲು ಕನಕಪುರದ ಹುಟ್ಟೂರು ದೊಡ್ಡಾಲಹಳ್ಳಿಗೆ ಆಗಮಿಸಿದ್ದ ಡಿಕೆಶಿ ಮತಗಟ್ಟೆ ಸಂಖ್ಯೆ 3 ರಲ್ಲಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜಕೀಯ ಅಂದ್ರೆ ಸಾಧ್ಯತೆಗಳ ಕಲೆ, …
Read More »ಬಾಲಕಿಗೆ ಪ್ರೀತಿಸುವಂತೆ ಕಿರುಕುಳ : ಮೆಸ್ಕಾಂ ಸಿಬ್ಬಂದಿ ಪೊಲೀಸರ ವಶಕ್ಕೆ
ಪುತ್ತೂರು(ಡಿಸೆಂಬರ್. 22): ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಸವಣೂರು ಸಮೀಪದ ನಿವಾಸಿಯಾಗಿರುವ ಪಿಯುಸಿ ಓದುತ್ತಿರುವ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ ಆರೋಪದ ಮೇರೆಗೆ ಸವಣೂರಿನ ಮೆಸ್ಕಾಂ ಸಿಬ್ಬಂದಿಯೊಬ್ಬನನ್ನು ಪೋಕ್ಸೋ ಕಾಯ್ದೆಯಡಿ ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಪೋಷಕರ ದೂರಿನ ಹಿನ್ನಲೆಯಲ್ಲಿ ಪೊಲೀಸರು ಮೆಸ್ಕಾಂ ಉದ್ಯೋಗಿಯಾಗಿರುವ ಸೊಯೂಬ್ ಕೊತ್ವಾಲ್ ಎಂಬಾತನನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಪ್ರೀತಿಸುವಂತೆ ಕಿರುಕುಳ ಕೊಡುತ್ತಿರುವುದಲ್ಲದೆ, ಬಾಲಕಿಗೆ ಅಸಭ್ಯವಾಗಿ ಸಂದೇಶ …
Read More »ಜನವರಿ 1ರಿಂದ ಶಾಲೆಗಳು ಪುನರಾರಂಭವಾಗಲಿದೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರ ಆತಂಕದ ಬೆನ್ನಲ್ಲೇ ನೈಟ್ ಕರ್ಫ್ಯೂ ಕೂಡ ಜಾರಿಯಾಗಿದೆ. ಈ ನಡುವೆಯೇ ನಿಗದಿಯಂತೆ ಜನವರಿ 1ರಿಂದ ಶಾಲೆಗಳು ಪುನರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಇಂದು ಸಿಇಒ, ಡಿಡಿಪಿಐ, ಡಿಡಿಪಿಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದಲ್ಲಿ ಜನವರಿ 1ರಿಂದ ಶಾಲೆಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿದೆ. ಕೊರೊನಾ ರೂಪಾಂತರ ವೈರಸ್ ಇದ್ದರೂ ಆತಂಕಪಡುವ ಅಗತ್ಯವಿಲ್ಲ ಎಂದು …
Read More »ಕೊರೋನದ ಹೊಸ ಪ್ರಭೇದ ಪತ್ತೆ; ಜನರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು: ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ: ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಕೋವಿಡ್ 19 ಸೋಂಕು ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹ ವ್ಯವಸ್ಥಿತವಾಗಿ ಜನರಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. ಅಲ್ಲಿಯವರೆಗೂ ಜನರು ಮೈಮರೆಯದೇ ಸರ್ಕಾರದ ಮಾರ್ಗಸೂಚಿಗಳನ್ನು …
Read More »ಶಾಲೆ ಆರಂಭದ ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್
ಬೆಂಗಳೂರು : ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ದತೆಗಳನ್ನು ಕೈಗೊಳ್ಳುತ್ತಿದೆ. ಜನವರಿಯಿಂದಲೇ ಶಾಲೆ ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮ ಅಂತಿಮಗೊಳಿಸಲಾಗುತ್ತದೆ. ಕನಿಷ್ಠ ಕಲಿಕೆಗೆ ಒತ್ತು ನೀಡಲಾಗುತ್ತದೆಯಲ್ಲದೇ, ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ …
Read More »ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ
ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಇಂದಿನಿಂದ 9 ದಿನಗಳವರೆಗೆ ಅಂದರೆ ಜನೆವರಿ 2 ವರೆಗೆ ಈ ಆದೇಶ ಅನ್ವಯವಾಗಲಿದೆ. ಇನ್ನು ಹೊರ ದೇಶದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಗೆ ಒಳಪಡಬೇಕು. ರಾತ್ರಿ ಹೊತ್ತು …
Read More »ರಾಜ್ಯದಲ್ಲಿ ಹೆಚ್ಚಿನ ಚಳಿಯಿದೆ. ಜಾಕೆಟ್, ಸ್ವೆಟರ್ ಹಾಕಿದರೂ ಚಳಿ ಕಡಿಮೆಯಾಗುತ್ತಿಲ್ಲ.
(ಡಿಸೆಂಬರ್ 23): ಸಿಲಿಕಾನ್ ಸಿಟಿಯಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಚಳಿಯಿದೆ. ಕಳೆದ ಹದಿನೈದು ದಿನಗಳ ಹಿಂದೆ ಚಂಡಮಾರುತ ಕಾರಣದಿಂದ ಚಳಿ ಹೆಚ್ಚಿತ್ತು. ಇದೀಗ ಚಂಡಮಾರುತದಿಂದಲ್ಲದೇ ಹೋದರೂ ಚಳಿಗಾಲಕ್ಕೆ ಚಳಿಯಿದೆ ಎಂದುಕೊಳ್ಳುವವರಿದ್ದಾರೆ. ಆದರೆ, ಕಳೆದ ವರುಷಕ್ಕೆ ಹೋಲಿಸಿದರಲ್ಲಿ ಈ ಬಾರಿ ರಾಜ್ಯದಲ್ಲಿ ಹೆಚ್ಚಿನ ಚಳಿಯಿದೆ. ಜಾಕೆಟ್, ಸ್ವೆಟರ್ ಹಾಕಿದರೂ ಚಳಿ ಕಡಿಮೆಯಾಗುತ್ತಿಲ್ಲ. ಕಳೆದೊಂದು ವಾರದಿಂದ ಅತಿಯಾದ ಚಳಿಯಿದ್ದು, ಬೆಳಗ್ಗೆ ಹಾಗೂ ರಾತ್ರಿ ವೇಳೆ ಇನ್ನಷ್ಟು ಹೆಚ್ಚಿದೆ. ನಿಮ್ಮೆ ಮಂಗಳವಾರ ಬೆಂಗಳೂರಿನ ಹೆಚ್ಎಎಲ್ ಬಳಿ ಕನಿಷ್ಠ …
Read More »ಗ್ರಾಹಕರ ವಿಶ್ವಾಸರ್ಹತೆ ಗಳಿಸಿದ ಸಂತೃಪ್ತಿ ವಿಜಯ ಸೌಹಾರ್ಧ ಸಹಕಾರಿಗಿದೆ : ಮುರುಗೇಶ ನಿರಾಣಿ
ಮುಧೋಳ – ನಿರಾಣಿ ಉದ್ಯಮ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಲಿಮಿಟೆಡ್ ಸೌಹಾರ್ದ ಸಹಕಾರಿ ಕ್ಷೇತ್ರದಲ್ಲಿ ಅಲ್ಪಾವಧಿಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸರಿ ಸಮವಾಗಿ ಸೇವೆ ನೀಡುವಷ್ಟು ಸದೃಢವಾಗಿ ಬೆಳೆದು ನಿಂತಿದೆ. ವಿನೂತನ ಯೋಜನೆಗಳೊಂದಿಗೆ ಮಹತ್ತರ ಹೆಜ್ಜೆ ಗುರುತುಗಳನ್ನು ಮೂಡಿಸುವ ಮೂಲಕ ಗ್ರಾಹಕರ ವಿಶ್ವಾಸಾರ್ಹ ಸಂಸ್ಥೆಯಾಗಿ ಹೊರಹೊಮ್ಮಿದ್ದು ಹೆಮ್ಮೆಯ ಸಂಗತಿ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ಬೀಳಗಿ ಶಾಸಕ ಮುರುಗೇಶ ನಿರಾಣಿ ತಿಳಿಸಿದರು. ಮುಧೋಳದ ಸಹಕಾರಿಯ ಪ್ರಧಾನ ಕಚೇರಿ …
Read More »ಮಾಸ್ಕ್ ಹಾಕದ್ದಕ್ಕೆ ಯುವಕನಿಗೆ ಲಾಠಿ ಏಟು- ಸಾರ್ವಜನಿಕರಿಂದ ಠಾಣೆಗೆ ಮುತ್ತಿಗೆ
ಚಿಕ್ಕಮಗಳೂರು: ಮಾಸ್ಕ್ ಹಾಕದ್ದಕ್ಕೆ ಯುವಕನಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದು, ಈ ಮೂಲಕ ಮಾಸ್ಕ್ ಹಾಕುವಂತೆ ಜಾಗೃತಿ ಮೂಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ಘಟನೆ ನಡೆದಿದ್ದು, ಯುವಕ ಲಕ್ಷ್ಮಣಗೆ ಪಿಎಸ್ಐ ಶಂಭುಲಿಂಗಯ್ಯರಿಂದ ಲಾಠಿ ಏಟು ನೀಡಿದ್ದಾರೆ. ಲಾಠಿ ಏಟಿನಿಂದ ಯುವಕನ ಮೂಗು, ಕಣ್ಣಿಗೆ ಗಾಯವಾಗಿದ್ದು, ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪಿಎಸ್ಐ ಶಂಭುಲಿಂಗಯ್ಯ ಅವರನ್ನು ಜನ ತರಾಟೆಗೆ ತೆಗೆದುಕೊಂಡಿದ್ದು, ಆಲ್ದೂರು ಪೊಲೀಸ್ ಠಾಣೆಗೆ ಸಾರ್ವಜನಿಕರು ಮುತ್ತಿಗೆ …
Read More »
Laxmi News 24×7