ರಾಮನಗರ (ಜೂನ್ 03); ಕೊರೋನಾ ಪಿಡುಗು ಇಡೀ ರಾಷ್ಟ್ರವನ್ನೇ ಭಯದ ವಾತಾವರಣಕ್ಕೆ ದೂಡಿದೆ. ಲಾಕ್ಡೌನ್ ಘೋಷಿಸಿಯೂ ಈ ಪೆಡಂಭೂತವನ್ನು ನಿಯಂತ್ರಿಸುವುದು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಸರ್ಕಾರ ಜನರಲ್ಲಿ ಸಾಮಾಜಿಕ ಅಂತರದ ಕುರಿತು ಅರಿವು ಮೂಡಿಸುತ್ತಿದೆ. ಅಲ್ಲದೆ, ನಿಯಮವನ್ನೂ ರೂಪಿಸಲಾಗಿದೆ. ಆದರೆ, ಈ ನಿಯಮ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಅವರ ಮಗ ನಿಖಿಲ್ಗೆ ಅನ್ವಯವಾಗಲ್ವ? ಎಂಬ ಪ್ರಶ್ನೆ ಇದೀಗ ಮೂಡಿದೆ. ಚನ್ನಪಟ್ಟಣದಲ್ಲಿ ನಿನ್ನೆ ಮಾಜಿ ಸಿಎಂ ಕುಮಾರಸ್ವಾಮಿ ವಿವಿಧ ಕಾರ್ಯಕ್ರಮಗಳಲ್ಲಿ …
Read More »ಸಿಎಂ ಸಂಧಿಸಿದ ಕತ್ತಿ; ಯಡಿಯೂರಪ್ಪ ಮೇಲಿನ ಮುನಿಸು ಮರೆತರಾ ಕತ್ತಿ?………..
ನಿನ್ನ ತಮ್ಮನಿಗೆ ರಾಜ್ಯಸಭೆಗೆ ಟಿಕೆಟ್ ಕೊಡುವುದು, ಬಿಡುವುದು ಪಕ್ಷದ ಹೈಕಮಾಂಡ್ಗೆ ಬಿಟ್ಟಿದ್ದು. ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಿ ನಿನ್ನನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಉಮೇಶ್ ಕತ್ತಿಗೆ ಸಿಎಂ ಭರವಸೆ ನೀಡಿದ್ದಾರೆ. ಬೆಂಗಳೂರು(ಜೂನ್ 03): ಕಳೆದ ವಾರವಷ್ಟೇ ಶಾಸಕರನ್ನು ಸೇರಿಸಿಕೊಂಡು ಸರ್ಕಾರದ ವಿರುದ್ಧ ಸಭೆ ನಡೆಸಿದ್ದ ಬಿಜೆಪಿ ನಾಯಕ ಉಮೇಶ್ ಕತ್ತಿ ಇಂದು ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಅವರ ಜೊತೆ …
Read More »ಆನ್ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ
ತಿರುವನಂತಪುರಂ: ಕೊರೊನಾ ಲಾಕ್ಡೌನ್ ಹಿನ್ನೆಲೆಯಿಂದ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಹೀಗಾಗಿ ಆನ್ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಆದರೆ ಆನ್ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ವಾಲಂಚೇರಿ ಪಟ್ಟಣದ ನಿವಾಸಿ 14 ವರ್ಷದ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಮೃತ ವಿದ್ಯಾರ್ಥಿನಿ ಕುಟುಂಬದವರು ಬಡವರಾಗಿದ್ದು, ಯಾವುದೇ ಟಿವಿ ಅಥವಾ ಸ್ಮಾರ್ಟ್ ಫೋನ್ …
Read More »BS Y ಭೇಟಿ ಯಾಗಿ ಅಭಿನಂದನೆ ಸಲ್ಲಿಸಿದ ಸಾಹುಕಾರರು ಹಾಗೂ, ಮಹೇಶಕುಮಟಳ್ಳಿ…..
ಬೆಂಗಳೂರು – ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿಯ ನೂತನ ಅಧ್ಯಕ್ಷ ಮಹೇಶ ಕುಮಟಳ್ಳಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ತಮ್ಮ ನೇಮಕಕ್ಕೆ ಧನ್ಯವಾದ ಸಲ್ಲಿಸಿದರು. ಜಿಲ್ಲೆಯ ಸಮಗ್ರ ವಿಕಾಸಕ್ಕಾಗಿ ಹೆಚ್ಚಿನ ಅನುದಾನ ಸೇರಿದಂತೆ ಎಲ್ಲಾ ರೀತಿಯ ಸಹಕಾರ ಕೊಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು ಎಂದು ನಂತರ ರಮೇಶ ಜಾರಕಿಹೊಳಿ ತಿಳಿಸಿದರು. ಮುಖ್ಯಮಂತ್ರಿಗಳ ರಾಜಕೀಯ …
Read More »ಮನೆಯಿಂದ ಹೊರ ಬರ್ತಿದ್ದಂತೆ ಬಿದ್ದ ಮರ- ವ್ಯಕ್ತಿ ಸಾವು
ಕಲಬುರಗಿ: ಮೈ ಮೇಲೆ ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಲಬುರಗಿ ಹೊರವಲಯದಲ್ಲಿ ನಡೆದಿದೆ. ಕಲಬುರಗಿ ಹೊರವಲಯದ ಸೆಂಟ್ರಲ್ ಜೈಲು ಕ್ವಾರ್ಟರ್ಸ್ನಲ್ಲಿ ಈ ಘಟನೆ ನಡೆದಿದೆ. ಗೋವಿಂದ ಚೌವಾಣ್ (41) ಮೃತ ದುರ್ದೈವಿ. ಮೃತ ಗೋವಿಂದ ಚೌವಾಣ್ ಕಾರಾಗೃಹದ ಡಿ.ಗ್ರೂಪ್ ಮಹಿಳಾ ಸಿಬ್ಬಂದಿ ಪಾರುಬಾಯಿ ಪತಿ ಎಂದು ತಿಳಿದು ಬಂದಿದೆ. ಮೃತ ಗೋವಿಂದ ಚೌವಾಣ್ ಇಂದು ಬೆಳಗ್ಗೆ ಸುಮಾರು 5.30ಕ್ಕೆ ಕಸ ಚೆಲ್ಲಲು ಮನೆ ಹೊರಗೆ ಬಂದಿದ್ದಾರೆ. ಆಗ …
Read More »ಕೊರೊನಾ ಕರ್ತವ್ಯ ಮರೆತು ಇಸ್ಪೀಟ್ ಆಟ- ಶಿಕ್ಷಣ ಇಲಾಖೆಯ 7 ಜನ ಸಿಬ್ಬಂದಿ ಅಮಾನತು
ದಾವಣಗೆರೆ: ಕೊರೊನಾ ಕರ್ತವ್ಯ ಮರೆತು ಇಸ್ಪೀಟ್ ಆಟ ಆಡಿದ್ದ ಉತ್ತರ ವಲಯದ ಬಿಇಒ ಕಚೇರಿಯ 7 ಜನ ಸಿಬ್ಬಂದಿಯನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ಉತ್ತರ ವಲಯದ ಅಧೀಕ್ಷಕ ಎಚ್.ಎಸ್.ಬಸವರಾಜ್, ಪ್ರಥಮ ದರ್ಜೆ ಸಹಾಯಕ ಎಂ.ಸುಧಾಕರ್, ದ್ವಿತೀಯ ದರ್ಜೆ ಸಹಾಯಕ ಕೊಟ್ರೇಶ್, ದ್ವಿತೀಯ ದರ್ಜೆ ಸಹಾಯಕ ಬೆರಳಚ್ಚು ಗಾರ ಮಲ್ಲಿಕಾರ್ಜುನ್ ಮಠದ, ಶಿಕ್ಷಣ ಸಂಯೋಜಕ ಎಸ್.ಸೋಮಶೇಖರಪ್ಪ, ಡಿ.ಗ್ರೂಪ್ ನೌಕರ ಹರ್ಷವರ್ಧನ್, ಗುಮ್ಮನೂರು ಸರ್ಕಾರಿ ಹಿರಿಯ …
Read More »ನಿಮ್ಮ ವಾಹನಗಳ ಆರ್ಸಿ ಹಾಗೂ ಇನ್ಸುರೆನ್ಸ್ ನಕಲಿಯಾಗಿರಬಹುದು ಹುಷಾರ್..!
ಬೆಂಗಳೂರು, ಜೂ.3- ನಿಮ್ಮ ವಾಹನಗಳ ಆರ್ಸಿ ಬುಕ್ ಅಸಲಿಯೇ? ನೀವು ಪಾವತಿಸುವ ವಾಹನ ತೆರಿಗೆ ನಕಲಿಯೇ ಎಂದು ಒಮ್ಮೆ ಪರೀಕ್ಷಿಸಿಕೊಳ್ಳಿ. ಏಕೆಂದರೆ, ನಕಲಿ ಆರ್ಸಿ ಮತ್ತು ಇನ್ಸುರೆನ್ಸ್ ಮಾಡಿಕೊಡುವ ಖದೀಮರಿದ್ದಾರೆ ಎಚ್ಚರ..! ಕೇವಲ 3000ರೂ.ಗಳಿಗೆ ನಕಲಿ ಆರ್ಸಿ ಕಾರ್ಡ್ ಮಾಡಿಕೊಡುವ ಹಾಗೂ 500 ರಿಂದ 1000ರೂ.ಗೆ ನಕಲಿ ಇನ್ಸೂರೆನ್ಸ್ ಮಾಡಿಕೊಡುತ್ತಿದ್ದ ಈ ಖದೀಮರು ಇದೀಗ ಸಿಸಿಬಿ ಪೆÇಲೀಸರ ಬಲೆಗೆ ಬಿದ್ದಿದ್ದಾರೆ. ಆರ್ಟಿಒ ಕಚೇರಿಯಲ್ಲಿ ಬ್ರೋಕರ್ ಆಗಿ ಕೆಲಸ ಮಾಡುತ್ತಿದ್ದ ಕೆಪಿ …
Read More »ಕುವೈತ್ನಿಂದ ಬೆಂಗಳೂರಿಗೆ ಬಂದಿಳಿದ 80 ಪ್ರಯಾಣಿಕರು………….
ಬೆಂಗಳೂರು, ಜೂ.3- ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಕುವೈತ್ ನಿಂದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 25ನೇ ಏರ್ ಇಂಡಿಯಾ ವಿಮಾನದಲ್ಲಿ 80 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ನಿನ್ನೆ ಸಂಜೆ 5 ಗಂಟೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 80 ಮಂದಿ ಪ್ರಯಾಣಿಕರಲ್ಲಿ 64 ಪುರುಷರು ಮತ್ತು 16 ಮಹಿಳೆಯರು ಇದ್ದಾರೆ. ಈ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾರಲ್ಲೂ ಕೊರೋನಾ …
Read More »ಗೋವಾದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ತಗ್ಗು ಪ್ರದೇಶಗಳು ಜಲಾವೃತ..!
ಪಣಜಿ, ಜೂ.3-ಅರಬ್ಬೀ ಸಮುದ್ರದಲ್ಲಿ ನಿಸರ್ಗ ಚಂಡಮಾರುತದ ಆರ್ಭಟದಿಂದ ವಾಯುಭಾರ ಕುಸಿತವಾಗಿದ್ದು, ಗೋವಾದಲ್ಲಿ ಇಂದು ಮುಂಜಾನೆಯಿಂದಲೇ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಸಹಸ್ರಾರು ಮಂದಿ ಸಂತ್ರಸ್ತರಾಗಿದ್ದಾರೆ. ಗೋವಾ ಕರಾವಳಿ ಪ್ರದೇಶದ ಸಮುದ್ರ ಭಾಗವು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರರು ಸಾಗರಕ್ಕೆ ತೆರಳದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸ್ಪಷ್ಟ ಸೂಚನೆ ನೀಡಿದೆ.ಪ್ರಬಲ ಗಾಳಿಯಿಂದ ಕೂಡಿದ ಧಾರಾಕಾರ ಮಳೆಯಿಂದಾಗಿ ಗೋವಾದ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ತೀವ್ರ ತೊಂದರೆಗೆ …
Read More »ಜೂ.8ರಿಂದ ಬಿಬಿಎಂಪಿ ವ್ಯಾಪ್ತಿಯ ಮಳಿಗೆಗಳು ಓಪನ್………….
ಬೆಂಗಳೂರು, ಜೂ.2- ನಗರದಲ್ಲಿ ಮಾರುಕಟ್ಟೆಗಳನ್ನು ತೆರೆಯಲು ಬಿಬಿಎಂಪಿಯು ಜೂ.8ರಿಂದ ಅನುಮತಿ ನೀಡಿದೆ. ಆದರೆ ಯಾವುದೇ ಕಾರಣಕ್ಕೂ ಬೀದಿ ಬದಿ ವ್ಯಾಪಾರಕ್ಕೆ ಅನುಮತಿ ನೀಡುವುದಿಲ್ಲ ಎಂದು ಮೇಯರ್ ಗೌತಮ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾರುಕಟ್ಟೆ ಪ್ರಾರಂಭಿಸುವ ಕುರಿತು ಇಂದು ಮಾರುಕಟ್ಟೆ ಅಸೋಸಿಯೇಷನ್ ಪದಾಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಮಾತನಾಡಿದ ಮೇಯರ್, ಈ ವಿಷಯ ಸ್ಪಷ್ಟಪಡಿಸಿದರು. ಕೆ.ಆರ್.ಮಾರುಕಟ್ಟೆಯಲ್ಲಿರುವ 2,000ಕ್ಕೂ ಹೆಚ್ಚು ಮಳಿಗೆಗಳು, ಫ್ರೇಜರ್ ಟೌನ್ನಲ್ಲಿರುವ 400 ಮಳಿಗೆಗಳನ್ನು ತೆರೆಯಲು ಅನುಮತಿ …
Read More »