ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ದೆಹಲಿಗೆ ದೌಡಾಯಿಸಿದ್ದಾರೆ. ಸಿ.ಟಿ. ರವಿ ಅವರಿಗೆ ಇತ್ತೀಚಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಒಲಿದು ಬಂದಿದೆ. ಇದಾದ ಬೆನ್ನಲ್ಲೇ ಅವರು ತಮ್ಮ ನಿಭಾಯಿಸುತ್ತಿದ್ದ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಶನಿವಾರ ಸಂಜೆ ಅವರ ರಾಜೀನಾಮೆ ಅಂಗೀಕಾರವಾಗಿದೆ. ನಂತರ ಅವರು ದೆಹಲಿಗೆ ದೌಡಾಯಿಸಿದ್ದು, ಪಕ್ಷದ …
Read More »ಗೋಕಾಕ ನಗರ ಠಾಣೆ ಗೆ ನೂತನ P.S.I. ಆಗಮನ ಮಾಧ್ಯಮ ಮಿತ್ರ ಹಾಗೂ C.P.I.ಅವರಿಂದ ಸನ್ಮಾನ
ಗೋಕಾಕ ನಗರ ಠಾಣೆಗೆ ನೂತನವಾಗಿ ಆಗಮಿಸಿದP.S.I. K.B. ವಾಲಿಕರ ಅವರನ್ನ ನಗರ ಠಾಣೆಯ C.P.I. ಗೋಪಾಲ ರಾಠೋಡ ಅವರು ಇಂದು ಹೂ ಗುಚ್ಛ ನೀಡಿ ಸ್ವಾಗತ ಕೋರಿದರು. ಅದೇರೀತಿ ಮಾಧ್ಯಮ ಮಿತ್ರರು ಕೂಡ ನೂತನವಾಗಿ ಆಗಮಿಸಿದ ಕೆ. ಬಿ . ವಾಲಿಕರ ಅವರಿಗೆ ಮಾಲಾರ್ಪಣೆ ಮಾಡುವ ಮೂಲಕ ಸನ್ಮಾನಿಸಿ ಅಭಿನಂದಿಸಿದರು. ಗೋಕಾಕ ನಗರದಲ್ಲಿ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ಇವರು ಯಶಸ್ವಿ ಯಾಗಲಿ ಎಂದು ಇವರ …
Read More »ಪಟಾಕಿ ನಿಷೇಧ ವಿರೋಧಿಸಿ ಪಟಾಕಿ ಸುಡುವ ಮೂಲಕ ಪ್ರತಿಭಟಿಸಿದ ವಾಟಾಳ್
ಬೆಂಗಳೂರು, ನ.8- ದೀಪಾವಳಿ ಹಬ್ಬದಲ್ಲಿ ಪಟಾಕಿ ನಿಷೇಧ ಮಾಡಿರುವ ಕ್ರಮ ಸಂಪ್ರದಾಯಕ್ಕೆ ಮಾಡಿರುವ ಅಪಚಾರ ಎಂದು ಆರೋಪಿಸಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಇಂದು ಪಟಾಕಿ ಸುಡುವ ಮೂಲಕ ಸರ್ಕಾರದ ಕ್ರಮ ವಿರೋಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟಾಕಿ ಹಚ್ಚುವುದರಿಂದ ಕೊರೊನಾ ಬರುತ್ತದೆ ಎಂಬ ಸರ್ಕಾರದ ಹೇಳಿಕೆ ಅತ್ಯಂತ ಅವೈಜ್ಞಾನಿಕವಾಗಿದೆ. ಕೊರೊನಾ ಸಾಂಕ್ರಾಮಿಕ ರೋಗ ಪಟಾಕಿಯಿಂದ ಬರುತ್ತದೆ ಎಂದು ಎಲ್ಲೂ …
Read More »ಸುಧಾ ಆಪ್ತೆ ರೇಣುಕಾ ಮನೆಯಲ್ಲಿ ನೂರಾರು ಕೋಟಿ ಮೌಲ್ಯದ ಆಸ್ತಿ,ಚಿನ್ನಾಭರಣ ಪತ್ತೆ..!
ಬೆಂಗಳೂರು, ನ.8- ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿ ಸುಧಾ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಅವರ ಆಪ್ತರ ನಿವಾಸಗಳಲ್ಲೂ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿರುವುದು ಅಧಿಕಾರಿಗಳನ್ನು ಬೆಚ್ಚಿ ಬೀಳಿಸಿದೆ. ನಿವೃತ್ತ ಡಿವೈಎಸ್ಪಿ ಚಂದ್ರಶೇಖರ್ ಅವರ ಪತ್ನಿ ರೇಣುಕಾ ಅವರು ಸುಧಾ ಅವರ ಆಪ್ತರಾಗಿದ್ದು, ಇವರ ನಿವಾಸದ ಮೇಲೆ ನಡೆದ ದಾಳಿ ಸಂದರ್ಭದಲ್ಲಿ ಒಟ್ಟು 3.5 ಕೆಜಿ ಚಿನ್ನ, 7 ಕೆಜಿ ಬೆಳ್ಳಿ ವಸ್ತುಗಳು, …
Read More »ಚಿರು-ಮೇಘನಾ ದಂಪತಿ ಮಗುವಿಗೆ ಕಲಘಟಗಿ ತೊಟ್ಟಿಲು ಗಿಫ್ಟ್.ಸ್ತ್ರೀ ಶಕ್ತಿ ಸೇವಾ ಸಂಸ್ಥೆ ಅಧ್ಯಕ್ಷೆ ವನಿತಾ
ಹುಬ್ಬಳ್ಳಿ, ನ.8- ಕಲಘಟಗಿ ಬಣ್ಣದ ತೊಟ್ಟಿಲು ಅಂದ್ರೆ ಎಲ್ಲರಿಗೂ ಅಚ್ಚುಮೆಚ್ಚು. ರಾಜಕಾರಣಿ, ಜನಪ್ರತಿನಿಗಳ ಮಕ್ಕಳು, ಮೊಮ್ಮಕ್ಕಳಿಗೆ ಕಲಘಟಗಿ ತೊಟ್ಟಿಲು ಉಡುಗೊರೆಯಾಗಿ ನೀಡುವುದು ಹೊಸ ಟ್ರೆಂಡ್ ಆಗಿದೆ. ಚಿರು-ಮೇಘನಾ ದಂಪತಿ ಮಗುವಿಗೆ ಕಲಘಟಗಿ ತೊಟ್ಟಿಲು ಗಿಫ್ಟ್. ದಿವಂಗತ ಚಿರಂಜೀವಿ ಸರ್ಜಾ ಮಗುವಿಗೂ ಕೂಡ ಕಲಘಟಗಿಯ ತೊಟ್ಟಿಲನ್ನು ನೀಡಲಾಗಿದ್ದು, ಚಿರಂಜೀವಿ ಸರ್ಜಾ ಅವರ ಮನೆಗೆ ತೊಟ್ಟಿಲು ತಲುಪಿದೆ. ನಟಿ ಮೇಘನಾ ರಾಜ್ ಅಕ್ಟೋಬರ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆ ಮಗುವಿಗಾಗಿ ಕಲಘಟಗಿಯ …
Read More »ಸಿದ್ದರಾಮಯ್ಯನಾಯಕತ್ವಕ್ಕೆ ಕಾಂಗ್ರೆಸ್ಸಿನಲ್ಲಿಬೆಲೆಯಿಲ್ಲ: ನಳಿನ್ ಕುಮಾರ್
ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕಾಂಗ್ರೆಸ್ಸಿನಲ್ಲಿ ಕಳೆದುಹೋಗುವ ಭಯವಿದೆ. ಕಾಂಗ್ರೆಸ್ಸಿನಲ್ಲಿ ಅವರ ನಾಯಕತ್ವಕ್ಕೆ ಬೆಲೆಯಿಲ್ಲ ಅನ್ನಿಸಿದೆ. ಹೀಗಾಗಿ ಮೂಲೆ ಗುಂಪಾಗುವ ಭಯವಿದೆ. ಅದಕ್ಕೋಸ್ಕರ ಸಿಎಂ ಮೇಲೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನಲ್ಲಿ 10 ಜಿಲ್ಲೆಗಳ ಮೂರು ವಿಭಾಗದ ತರಬೇತಿ ಶಿಬಿರ ನಡೆಯುತ್ತಿದೆ. ಶಿರಾ ಹಾಗೂ ಆರ್ಆರ್ನಗರ, ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳು ಬಿಜೆಪಿ …
Read More »ಅತ್ಯಾಚಾರ ಎಸಗಿ, ಕೊಲೆದೇಹವನ್ನು ಕಾಡಿನಲ್ಲಿ ಎಸೆದು ಪರಾರಿ
ಹಾವೇರಿ: ಮಹಿಳೆಯನ್ನು ಬೈಕ್ನಲ್ಲಿ ಕರೆ ತಂದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿ, ಕಾಡಿನಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹಾನಗಲ್ ತಾಲೂಕಿನ ಮಕರವಳ್ಳಿ ಅರಣ್ಯ ಪ್ರದೇಶದಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. …
Read More »ಬಿಜಗುಪ್ಪಿ ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರರ ಮೂರ್ತಿ ಭಗ್ನವಾಗಿದೆ.
ರಾಮದುರ್ಗ– ಬಿಜಗುಪ್ಪಿ ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರರ ಮೂರ್ತಿ ಮೂರ್ತಿ ಭಗ್ನವಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಬಸವಣ್ಣನವರ ಮೂರ್ತಿಯ ಕೈಯನ್ನು ಕಿಡಿಗೇಡಿಗಳು ಮುರಿದಿದ್ದಾರೆ. ಸುದ್ದಿ ತಿಳಿದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲಿಸಿದರು. ಒಂದು ವಾರದ ಒಳಗಾಗಿ ಆರೋಪಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಒಂದು …
Read More »ಜಾಮೀನು ಅರ್ಜಿ ತೀರ್ಪನ್ನು ಬಾಂಬೆ ಹೈಕೋರ್ಟ್ ಕಾಯ್ದಿರಿಸಿದ್ದು, ಅರ್ನಾಬ್ ಗೆ ಇನ್ನಷ್ಟು ದಿನಗಳ ಕಾಲ ಜೈಲುವಾಸ ಫಿಕ್ಸ್
ಮುಂಬೈ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ಮಧ್ಯಂತರ ಜಾಮೀನು ಅರ್ಜಿ ತೀರ್ಪನ್ನು ಬಾಂಬೆ ಹೈಕೋರ್ಟ್ ಕಾಯ್ದಿರಿಸಿದ್ದು, ಅರ್ನಾಬ್ ಗೆ ಇನ್ನಷ್ಟು ದಿನಗಳ ಕಾಲ ಜೈಲುವಾಸ ಫಿಕ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಅರ್ನಾಬ್ ರನ್ನು ನವಿ ಮುಂಬೈ ಬಳಿ ಇರುವ ತಲೋಜಾ ಜೈಲಿಗೆ ಕರೆದೊಯ್ಯಲಾಗಿದೆ. ಅಲಿಭಾಗ್ ನ್ಯಾಯಾಲಯ ಅರ್ನಾಬ್ ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಕೊರೊನಾ ಕಾರಣದಿಂದಾಗಿ ಅಲಿಭಾಗ್ ನಲ್ಲಿರುವ …
Read More »ಅಣ್ಣಾಮಲೈ ಬಳಿಕ ಇದೀಗ ಮತ್ತೊಬ್ಬ ಮಾಜಿ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ
ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಳಿಕ ಇದೀಗ ಮತ್ತೊಬ್ಬ ಮಾಜಿ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದು, ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. ಸೆಂಥಿಲ್ ಮೂಲತ: ತಮಿಳುನಾಡಿನವರಾಗಿದ್ದು, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳ ವಿರುದ್ಧ ಸಿಡಿದೆದ್ದು ಸೆಂಥಿಲ್ 2019ರ ಸೆಪ್ಟೆಂಬರ್ ನಲ್ಲಿ ರಾಜೀನಾಮೆ ನೀಡಿದ್ದರು. ಸಿಎಎ ಹಾಗೂ …
Read More »
Laxmi News 24×7