ಬೆಳಗಾವಿ – ಉದ್ಯೋಗ ಖಾತ್ರಿ ಯೋಜನೆ ಶಾಸಕರು ತಂದಿದ್ದಲ್ಲ, ಕೇಂದ್ರ ಸರಕಾರದ್ದು ಎಂದು ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ನೀಡಿದ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗರಂ ಆಗಿದ್ದಾರೆ. ಈ ದೇಶಕ್ಕೆ ಉದ್ಯೋಗ ಖಾತ್ರಿ ಯೋಜನೆಯ ಕೊಡುಗೆ ನೀಡಿದ್ದು ಕಾಂಗ್ರೆಸ್ ಸರಕಾರ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಆಗ ಇದೇ ಬಿಜೆಪಿಯವರು ವಿರೋಧ ವ್ಯಕ್ತಪಡಿಸಿದ್ದರು. ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಇತಿಹಾಸವನ್ನು ಅರಿತು ಮಾತನಾಡಲಿ …
Read More »ತಮಿಳುನಾಡಿನ ಬಳಿಕ ಕೇರಳದಾದ್ಯಂತ ʼಪೋ ಮೋನೆ ಮೋದಿʼ ಟ್ರೆಂಡಿಂಗ್
ಕೊಚ್ಚಿ: ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದು, ಕಳೆದೆರಡು ದಿನಗಳಿಂದ ಗೋ ಬ್ಯಾಕ್ ಮೋದಿ ಎಂಬ ಹ್ಯಾಶ್ ಟ್ಯಾಗ್ ಟ್ವಿಟರ್ ನಾದ್ಯಂತ ಟ್ರೆಂಡಿಂಗ್ ಆಗಿತ್ತು. ರೈತರ ಪ್ರತಿಭಟನೆಗೆ ಯಾವುದೇ ಸ್ಪಂದನೆ ನೀಡದ ಪ್ರಧಾನಿಯನ್ನು ನಾವು ನಂಬುವುದಿಲ್ಲ ಎಂದು ಹಲವು ಬಳಕೆದಾರರು ಟ್ವೀಟ್ ಮಾಡಿದ್ದರು. ಇದೀಗ ಅದರ ಬೆನ್ನಲ್ಲೇ ‘ಪೋ ಮೋನೆ ಮೋದಿ’ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿದೆ. ತಮಿಳುನಾಡಿನಲ್ಲಿ ಕಾರ್ಯಕ್ರಮ ಮುಗಿದ ಬಳಿಕ ಪ್ರಧಾನಿ ಮೋದಿ ಕೊಚ್ಚಿ …
Read More »ಸಿಂಘು ಗಡಿಯಲ್ಲಿ 72 ವರ್ಷದ ರೈತ ಹೃದಯಾಘಾತದಿಂದ ಸಾವು
ಹೊಸದಿಲ್ಲಿ, : ಮೂರು ಕೃಷಿ ಕಾಯ್ದೆಗಳ ವಿರುದ್ಧ ಸಿಂಘು ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪಂಜಾಬ್ನ 72 ವರ್ಷದ ರೈತರೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತಪಟ್ಟಿರುನ ರೈತ ಮೊಗ ಜಿಲ್ಲೆಯ ನಿವಾಸಿ ಹಂಸ ಸಿಂಗ್ ಎಂದು ಹರ್ಯಾಣದ ಸೋನಿಪತ್ನ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿರುವ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಹಂಸ ಸಿಂಗ್ ಗುರುವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಮರಣೋತ್ತರ ಪರೀಕ್ಷೆ ಶುಕ್ರವಾರ ಪೂರ್ಣಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
Read More »ರೈತರು, ಮನೆ ನಿರ್ಮಿಸುವವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್
ಶಿವಮೊಗ್ಗ: ಈ ಹಣಕಾಸು ಸಾಲಿನಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳು ಮಾರ್ಚ್ ಒಳಗಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದಾರೆ. ಶಿಕಾರಿಪುರದಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ತೋಟಗಾರಿಕಾ ಬೆಳೆಗಳನ್ನು ಹೆಚ್ಚು ಬೆಳೆಯಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಪ್ರತಿ ವರ್ಷ ತೋಟಗಾರಿಕಾ ಬೆಳೆಗಳ ಕ್ಷೇತ್ರ ಹೆಚ್ಚಳವಾಗಬೇಕು. ರೈತರು ಮಿಶ್ರ ಬೆಳೆ ಬೆಳೆಯುವುದರಿಂದ ಹೆಚ್ಚಿನ ಆರ್ಥಿಕ ಲಾಭ ಪಡೆಯಲು ಸಾಧ್ಯವಿದೆ …
Read More »2021ʼರ ಸ್ವಚ್ಛ ಭಾರತ ಅಭಿಯಾನದಡಿ ʼಶೌಚಾಲಯಕ್ಕೆ ಆನ್ಲೈನ್ʼನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ?
ಭಾರತ ಸರ್ಕಾರವು ಸ್ವಚ್ಛ ಭಾರತ್ ಅಭಿಯಾನದ ಅಡಿಯಲ್ಲಿ ಹಳ್ಳಿಗಳು ಮತ್ತು ನಗರಗಳಲ್ಲಿ ಶೌಚಾಲಯಗಳನ್ನ ನಿರ್ಮಿಸುತ್ತಿದೆ. ಈ ಯೋಜನೆಯಡಿ ಹೆಚ್ಚಿನ ಮನೆಗಳಲ್ಲಿ ಶೌಚಾಲಯಗಳನ್ನ ನಿರ್ಮಿಸಲಾಗಿದೆ. ಆದ್ರೆ, ನಿಮ್ಮ ಮನೆ ತಪ್ಪಿದಲ್ಲಿ ನೀವು ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳಬಹುದು. ಶೌಚಾಲಯಗಳನ್ನ ನಿರ್ಮಿಸಲು ಸಾಧ್ಯವಾಗದ ಅನೇಕ ಬಡ ಕುಟುಂಬಗಳು ದೇಶದಲ್ಲಿದ್ದು, ಸರ್ಕಾರವು ಆ ಕುಟುಂಬಗಳಿಗೆ 12000 ರೂ. ಮೊತ್ತವನ್ನ ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಯಾರು ಈ ಯೋಜನೆಯ ಫಲಾನುಭವ ಪಡೆಯಬೋದು..! * ಅರ್ಜಿದಾರನು ಭಾರತದ …
Read More »ಡಿಜಿಟಲ್ ರೂಪದಲ್ಲಿ ವಿಮಾ ದಾಖಲೆ: ಐಆರ್ಡಿಎಐ
ನವದೆಹಲಿ: ವಿಮಾ ಪಾಲಿಸಿ ಹೊಂದಿರುವವರಿಗೆ ಪಾಲಿಸಿಯ ದಾಖಲೆಗಳನ್ನು ಡಿಜಿಟಲ್ ಸ್ವರೂಪದಲ್ಲಿ ನೀಡಬೇಕು ಎಂದು ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು (ಐಆರ್ಡಿಎಐ) ಕಂಪನಿಗಳಿಗೆ ಸೂಚನೆ ನೀಡಿದೆ. ಈ ದಾಖಲೆ ಬಳಸಿಕೊಳ್ಳುವುದು ಹೇಗೆ ಎಂಬುದನ್ನು ಪಾಲಿಸಿದಾರರಿಗೆ ತಿಳಿಸಿಕೊಡಬೇಕು ಎಂದು ಕೂಡ ಅದು ಸೂಚಿಸಿದೆ. ಈ ಕ್ರಮಗಳನ್ನು ಕೈಗೊಳ್ಳುವುದರಿಂದ ವಿಮಾ ಕ್ಲೇಮ್ ಪ್ರಕ್ರಿಯೆಗೆ ವೇಗ ಸಿಗುತ್ತದೆ ಎಂದು ಪ್ರಾಧಿಕಾರ ಹೇಳಿದೆ. ಪಾಲಿಸಿ ದಾಖಲೆಗಳನ್ನು ಡಿಜಿಟಲ್ ಸ್ವರೂಪದಲ್ಲಿ ನೀಡುವುದರಿಂದ ವೆಚ್ಚ ಕಡಿಮೆ ಆಗುತ್ತದೆ, ದಾಖಲೆಗಳು …
Read More »ಒಂದು ವರ್ಷದೊಳಗೆ ರಾಜ್ಯದ ಎಲ್ಲಾ ಬಂಜಾರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಲಾಗುವುದು: BSY
ದಾವಣಗೆರೆ: ಮುಂದಿನ ಒಂದು ವರ್ಷದೊಳಗೆ ರಾಜ್ಯದ ಎಲ್ಲಾ ಬಂಜಾರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕಂದಾಯ ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಶ್ರೀ ಸಂತ ಸೇವಾಲಾಲ್ ಮಹಾರಾಜರ 282ನೇ ಜಯಂತ್ಯೋತ್ಸವ ಉದ್ಘಾಟಿಸಿ, ಮಾತನಾಡಿದ ಅವರು, ಮುಂದಿನ ಸೇವಾಲಾಲ್ ಜಯಂತಿ ವೇಳೆಗೆ ಸರ್ವೆ ಮುಗಿಸಿ ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದರು. ಸೂರಗೊಂಡನಕೊಪ್ಪಕ್ಕೆ ಮಂಜೂರಾಗಿರುವ ರೇಲ್ವೆ ಸ್ಟೇಷನ್ ಗೆ ಸಂತ …
Read More »ಕಾಂಗ್ರೆಸ್ನ ಪ್ರಮುಖರನ್ನೇ ಬಿಜೆಪಿಗೆ ಸೇರಿಸುವೆ
ಬೆಳಗಾವಿ: ನಾನು ಮನಸ್ಸು ಮಾಡಿದರೆ 24 ಗಂಟೆಯಲ್ಲಿ ಯಾರೂ ನಂಬಲು ಆಗದಂಥ ಕಾಂಗ್ರೆಸ್ನ ಪ್ರಮುಖ ಐವರು ಶಾಸಕರನ್ನು ಬಿಜೆಪಿಗೆ ತರುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಬಿಜೆಪಿ ಗ್ರಾಮೀಣ ಕ್ಷೇತ್ರದ ನೂತನ ಗ್ರಾ.ಪಂ. ಸದಸ್ಯರ ಸಮ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಟಾಪ್ 5 ಆ ಶಾಸಕರ ಹೆಸರು ಕೇಳಿದರೆ ಎಲ್ಲರೂ ಬೆರಗಾಗುತ್ತಾರೆ ಎಂದರು. ಬಿಜೆಪಿಯಲ್ಲಿ ತೃಪ್ತಿ : ಬಿಜೆಪಿಯಲ್ಲಿ ಖುಷಿ ಹಾಗೂ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದೇನೆ. …
Read More »ಕೇಂದ್ರ ಆರೋಗ್ಯ ಇಲಾಖೆʼಯಿಂದ ʼಕಚೇರಿʼಗಳಿಗೆ ಹೊಸ ʼಗೈಡ್ ಲೈನ್ಸ್ʼ ಜಾರಿ: ಉದ್ಯೋಗಿಗಳೇ ನೀವು ಇವುಗಳನ್ನ ಪಾಲಿಸ್ಲೇಬೇಕು
ಬೆಂಗಳೂರು: ಕೇಂದ್ರ ಆರೋಗ್ಯ ಇಲಾಖೆ ಕಚೇರಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದ್ದು, ಉದ್ಯೋಗಿಗಳು ಕಡ್ಡಾಯವಾಗಿ ಇವುಗಳನ್ನ ಪಾಲಿಸಿಲೇ ಬೇಕು ಎಂದು ತಾಕೀತು ಮಾಡಿದೆ. ಕೇಂದ್ರ ಆರೋಗ್ಯ ಇಲಾಖೆ ಉದ್ಯೋಗಿಗಳಿಗೆ ನೀಡಿದ ಸಾಮಾನ್ಯ ಹಾಗೂ ನಿರ್ಧಿಷ್ಟ ಮಾರ್ಗಸೂಚಿಗಳು ಈ ಕೆಳಗಿನಂತಿವೆ. ಸಾಮಾನ್ಯ ಮಾರ್ಗಸೂಚಿಗಳು ಇಂತಿವೆ..! * ವ್ಯಕ್ತಿಯಿಂದ ವ್ಯಕ್ತಿಗೆ 6 ಅಡಿ ಅಂತರ ಕಾಯ್ದುಕೊಳ್ಳಬೇಕು. * ಕಚೇರಿಯಲ್ಲಿ ಇರುವಷ್ಟು ಸಮಯ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. * ಸ್ಯಾನಿಟೈಸರ್ ಬಳಸಬೇಕು ಅಥವಾ ಸೋಪ್ ಬಳಸಿ …
Read More »ಫಾಸ್ಟ್ ಟ್ಯಾಗ್ ಕಡ್ಡಾಯ
ಹೊಸದಿಲ್ಲಿ/ನಾಗ್ಪುರ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಫೆ. 16ರಿಂದ ಫಾಸ್ಟ್ಯಾಗ್ ಮೂಲಕ ಟೋಲ್ ಪಾವತಿ ಕಡ್ಡಾಯ. ಫಾಸ್ಟಾಗ್ ಅಳವಡಿಸಿ ಕೊಳ್ಳದಿದ್ದರೆ 2 ಪಟ್ಟು ಟೋಲ್ ಪಾವ ತಿಸಬೇಕು ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವಾಲಯ ರವಿವಾರ ಆದೇಶ ಹೊರಡಿಸಿದೆ. ಸೋಮವಾರ ಮಧ್ಯರಾತ್ರಿ ಯಿಂದಲೇ ಇದು ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ಉಲ್ಲೇಖೀಸಲಾಗಿದೆ. ಗಡುವು ವಿಸ್ತರಣೆ ಇಲ್ಲ : ಈಗಾಗಲೇ 3-4 ಬಾರಿ ಗಡುವು ವಿಸ್ತರಿಸಲಾಗಿದೆ. ಇನ್ನು ವಿಸ್ತರಣೆ ಇಲ್ಲ ಎಂದು …
Read More »
Laxmi News 24×7